Homeಕರ್ನಾಟಕಸಾಮಾಜಿಕ ಮಾಧ್ಯಮದಲ್ಲಿ '#AmulGoback, #SaveKMF' ಹ್ಯಾಶ್‌ಟ್ಯಾಗ್‌ ಟ್ರೆಂಡ್

ಸಾಮಾಜಿಕ ಮಾಧ್ಯಮದಲ್ಲಿ ‘#AmulGoback, #SaveKMF’ ಹ್ಯಾಶ್‌ಟ್ಯಾಗ್‌ ಟ್ರೆಂಡ್

- Advertisement -
- Advertisement -

ನಂದಿನಿ ಹಾಲು ಉತ್ಪನ್ನಗಳ ಜೊತೆ ಕರ್ನಾಟಕದ ಜನರು ಭಾವನಾತ್ಮಕ ಸಂಬಂಧ ಹೊಂದಿದ್ದಾರೆ. ಇತ್ತಿಚೆಗೆ ಬೆಂಗಳೂರಿನಲ್ಲಿ ನಂದಿನಿ ಹಾಲು ಮತ್ತು ಮೊಸರು ಬದಲಿಗೆ ಅಮುಲ್ ಹಾಲು ಮೊಸರು ಮಾರಾಟ ಮಾಡಲಾಗುತ್ತಿದೆ. ಕರ್ನಾಟಕ ಹಾಲು ಒಕ್ಕೂಟವನ್ನು (ಕೆಎಂಎಫ್) ದುರ್ಬಲಗೊಳಿಸಲು ಅಮುಲ್‌ ಉತ್ಪನ್ನಗಳನ್ನು ಮಾರುಕಟ್ಟೆಗೆ ಹೇರಳವಾಗಿ ಬಿಡಲಾಗುತ್ತಿದೆ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ನಿವಾಸಿಗಳು ಸ್ಥಳೀಯ ಸಹಕಾರಕ್ಕೆ ಬೆಂಬಲ ವ್ಯಕ್ತಪಡಿಸಲು ”#AmulGoback” ಮತ್ತು ”#SaveKMF” ನಂತಹ ಹ್ಯಾಶ್‌ಟ್ಯಾಗ್‌ಗಳನ್ನು ಬಳಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ಗಳನ್ನು ಮಾಡುತ್ತಿದ್ದಾರೆ.

”ಕೆಎಂಎಫ್ ಅಧಿಕಾರಿಗಳು ಮತ್ತು ರಾಜಕಾರಣಿಗಳು ಅಮುಲ್ ಸಹಕಾರ ಸಂಘಗಳ ಅಲಿಖಿತ ನಿಯಮಗಳನ್ನು ಉಲ್ಲಂಘಿಸಿ “ಹಳಸಿದ ಹಾಲು” ಮಾರಾಟ ಮಾಡುವ ಮೂಲಕ ಪರಭಕ್ಷಕ ಚಟುವಟಿಕೆಗಳಲ್ಲಿ ತೊಡಗಿದ್ದಾರೆ” ಎಂದು ಜನರು ಆರೋಪಿಸಿದ್ದಾರೆ.

ದೇಶದಲ್ಲೇ ಎರಡನೇ ಅತಿ ದೊಡ್ಡ ಹಾಲು ಸಂಗ್ರಾಹಕ ಸಂಸ್ಥೆಯಾಗಿರುವ ಕೆಎಂಎಫ್ ನಂದಿನಿ ಟೋನ್ಡ್ ಹಾಲನ್ನು ಲೀಟರ್‌ಗೆ 40 ರೂ.ಗೆ ಮಾರಾಟ ಮಾಡುತ್ತಿದ್ದರೆ, ಅಮುಲ್ ತನ್ನ ಟೋನ್ಡ್ ಹಾಲನ್ನು ಲೀಟರ್‌ಗೆ 54 ರೂ. ಮಾರಾಟ ಮಾಡಲಾಗುತ್ತಿದೆ ಇದು ಜನರಿಗೂ ಹೊರೆಯಾಗಿದೆ ಎಂದು ಜನರು ಕಿಡಿಕಾರುತ್ತಿದ್ದಾರೆ.

ಈ ಬಗ್ಗೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು ಸರಣಿ ಟ್ವೀಟ್ ಮಾಡಿದ್ದು, ”ಕರ್ನಾಟಕದಲ್ಲಿ ನಮ್ಮ ಹಿರಿಯರು ಕಟ್ಟಿ ಬೆಳೆಸಿದ್ದ ಬ್ಯಾಂಕುಗಳನ್ನು ತಿಂದು ಮುಕ್ಕಿದ್ದಾಯಿತು. ಈಗ ರೈತರ ಪಾಲಿನ ಸಂಜೀವಿನಿಯಾಗಿರುವ ನಂದಿನಿಯನ್ನು ಆಪೋಶನ ತೆಗೆದುಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಸಂಚು ಹೂಡಿದ್ದಾರೆ ಕನ್ನಡಿಗರೇ ಎಚ್ಚರ…!!” ಎಂದಿದ್ದಾರೆ.

”ಕೆಎಂಎಫ್ ಮತ್ತು ಅಮುಲ್ ಸಂಸ್ಥೆಗಳ ವಿಲೀನದ ಬಗ್ಗೆ ಕೇಂದ್ರ ಸಹಕಾರ ಸಚಿವರೂ ಆಗಿರುವ ಅಮಿತ್ ಶಾ ಪ್ರಸ್ತಾಪ ಮಾಡಿದ ದಿನದಿಂದ ರಾಜ್ಯದ ಹೈನು ಉದ್ಯಮಕ್ಕೆ ಗರ ಬಡಿದಿದೆ. ವಿಲೀನದ ಪ್ರಸ್ತಾವಕ್ಕೆ ಕನ್ನಡಿಗರ ತೀವ್ರ ವಿರೋಧದ ಹಿನ್ನೆಲೆಯಲ್ಲಿ ಹಿಂಬಾಗಿಲಿನಿಂದ ಅಮುಲ್ ಪ್ರವೇಶಿಸುತ್ತಿದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ದೇಶ-ವಿದೇಶದಲ್ಲೂ ನಂದಿನಿ ಹಾಲು ಲಭ್ಯ, ಬೆಂಗಳೂರಿನಲ್ಲಿ ಮಾತ್ರ ಲಭ್ಯವಿಲ್ಲ!: ಇದು ಕೃತಕ ಅಭಾವದ ಸೃಷ್ಟಿನಾ?

”ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ನಂದಿನಿ ಹಾಲು ಮತ್ತು ಮೊಸರು ಮಾರುಕಟ್ಟೆಯಲ್ಲಿ ಮಾಯವಾಗುತ್ತಿದೆ. ಇದೇ ವೇಳೆ ಅಮುಲ್ ಉತ್ಪನ್ನಗಳ ಮಾರಾಟ ಭರದಿಂದ ಪ್ರಾರಂಭವಾಗಿದೆ. ಸಚಿವ ಅಮಿತ್ ಶಾ ನೇರ ಉಸ್ತುವಾರಿಯಲ್ಲಿಯೇ ಇವೆಲ್ಲ ನಡೆಯುತ್ತಿದೆ ಎನ್ನುವುದು ನಿಸ್ಸಂಶಯ” ಎಂದು ಆರೋಪ ಮಾಡಿದ್ದಾರೆ.

”ಗುಜರಾತ್ ಮೂಲದ ಅಮುಲ್ ಹಾಲು ಮತ್ತು ಮೊಸರು ಮಾರಾಟದ ಮೂಲಕ ಕರ್ನಾಟಕದ ಮಾರುಕಟ್ಟೆ ಪ್ರವೇಶಿಸಲು ಹಿಂದೆಯೂ ಪ್ರಯತ್ನಿಸಿತ್ತು. ಅದಕ್ಕೆ ನಾವು ಅವಕಾಶ ಕೊಡಲಿಲ್ಲ. ಈಗ ರಾಜ್ಯ ಬಿಜೆಪಿ ಕೆಂಪುಕಂಬಳಿ ಹಾಸಿ ಸ್ವಾಗತಿಸಿದೆ” ಎಂದು ಟೀಕಿಸಿದ್ದಾರೆ.

”ಬಿಜೆಪಿ ಆಡಳಿತಾವಧಿಯಲ್ಲಿ ಕೆಎಂಎಫ್ ನಲ್ಲಿ ಹಾಲಿನ ಸಂಗ್ರಹ ಕಡಿಮೆಯಾಗುತ್ತಿದೆ. ದಿನಕ್ಕೆ 99 ಲಕ್ಷ ಲೀಟರ್ ಹಾಲು ಸಂಗ್ರಹವಾಗಬೇಕಾಗಿದ್ದ ಕಡೆ ಕೇವಲ 71 ಲಕ್ಷ ಲೀಟರ್ ಹಾಲು ಸಂಗ್ರಹವಾಗುತ್ತಿದೆ. ಇದು ಕೆಎಂಎಫ್ ವಿರುದ್ಧದ ಷಡ್ಯಂತ್ರವೇ?” ಎಂದು ಬಿಜೆಪಿಯನ್ನು ಪ್ರಶ್ನಿಸಿದ್ದಾರೆ.

”ಕರ್ನಾಟಕದ ಬಿಜೆಪಿ ನಾಯಕತ್ವ ಎಷ್ಟೊಂದು ದುರ್ಬಲವಾಗಿದೆಯೆಂದರೆ ಒಂದೆಡೆ ಬೆಳಗಾವಿ ಗಡಿಪ್ರದೇಶದಲ್ಲಿ ಮಹಾರಾಷ್ಟ್ರ ಸರ್ಕಾರ ನೇರವಾಗಿ ತನ್ನ ಆಡಳಿತವನ್ನು ಸ್ಥಾಪಿಸಲು ಪ್ರಯತ್ನಿಸುತ್ತಿದೆ. ಇನ್ನೊಂದೆಡೆ ಗುಜರಾತ್ ರಾಜ್ಯ ಅಮುಲ್ ಮೂಲಕ ಇಲ್ಲಿನ ರೈತರನ್ನು ಬೀದಿಗೆ ತಳ್ಳುವ ಪ್ರಯತ್ನ ಮಾಡುತ್ತಿದೆ” ಎಂದು ಹೇಳಿದ್ದಾರೆ.

”ಹಿಂದಿ ಹೇರಿಕೆಯ ಮೂಲಕ ನಡೆಸುತ್ತಿರುವ ಭಾಷಾದ್ರೋಹ ಮತ್ತು ರಾಜ್ಯದ ಗಡಿಯೊಳಗೆ ಅತಿಕ್ರಮಿಸುವ ಮೂಲಕ ನಡೆಸುತ್ತಿರುವ ನೆಲದ್ರೋಹದ ಜೊತೆಗೆ ಈಗ ಕೆಎಂಎಫ್ ಅನ್ನು ಮುಚ್ಚಿಸುವ ಮೂಲಕ ರೈತದ್ರೋಹ ಮಾಡಲು ರಾಜ್ಯ ಬಿಜೆಪಿ ಸರ್ಕಾರ ಹೊರಟಿದೆ” ಎಂದು ಕಿಡಿಕಾರಿದ್ದಾರೆ.

ಜನತಾ ದಳ (ಜಾತ್ಯತೀತ) ಕೂಡ ಕೆಎಂಎಫ್ ಬೆಂಬಲ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದು, ”ರಾಜ್ಯದೆಲ್ಲೆಡೆ ಕೆಎಂಎಫ್ ನಂದಿನಿಯ ಹಾಲು, ತುಪ್ಪ, ಬೆಣ್ಣೆ ಸಮರ್ಪಕವಾಗಿ ಸಿಗದೇ ಇರುವ ಸನ್ನಿವೇಶದಲ್ಲಿ ಗುಜರಾತ್ ನ ಅಮುಲ್ ಸಂಸ್ಥೆಯು ಆನ್ ಲೈನ್ ಮಾರುಕಟ್ಟೆಗೆ ಮುಂದಾಗಿರುವ ಈ ಬೆಳವಣಿಗೆ ಏನನ್ನು ಸೂಚಿಸುತ್ತಿದೆ? ನಂದಿನಿ ಹಾಲು ನಂಬಿ ಬದುಕುತ್ತಿರುವ ಅಸಂಖ್ಯ ಕನ್ನಡಿಗರ ಕೆಲಸದ ಮೇಲೆ ಇದು ಕರಿನೆರಳಿನಂತೆ ಭಾಸವಾಗುವುದಿಲ್ಲವೆ?” ಎಂದು ಪ್ರಶ್ನಿಸಿದೆ.

”ಕೆಎಂಎಫ್ ನಂದಿನಿ ಎಂಬ ನಮ್ಮ ನಾಡಿನ ಹೆಮ್ಮೆಯ ಸಂಸ್ಥೆಯನ್ನು ಹಂತ ಹಂತವಾಗಿ ಮುಗಿಸುವ ದುಷ್ಟ ಯೋಜನೆಯ ಭಾಗವಾಗಿ ಈ ಬೆಳವಣಿಗೆ ಕಾಣುತ್ತಿದೆ. ನೇರವಾಗಿ ವಿಲೀನ ಮಾಡಲು ಸಾಧ್ಯವಿಲ್ಲದಾಗ, ಈ ರೀತಿಯ ಕುತಂತ್ರಗಳು ಶುರುವಾಗುತ್ತವೆ. ದೈತ್ಯ ಸಂಸ್ಥೆ ಜತೆ ಸ್ಪರ್ಧೆ ಇದು ಎಂದು ಸುಮ್ಮನೆ ಕುಳಿತರೆ, ಭವಿಷ್ಯ ಅಯೋಮಯವಾಗಲಿದೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ದೇಶದ ಮೊದಲ ಸಹಕಾರ ಸಚಿವರಾಗಿರುವ ಅಮಿತ್ ಶಾ ಅವರು ಡಿಸೆಂಬರ್ 30, 2022 ರಂದು ”ಅಮುಲ್ ಮತ್ತು ಕೆಎಂಎಫ್ ಒಟ್ಟಾಗಿ ಕರ್ನಾಟಕದ ಪ್ರತಿ ಹಳ್ಳಿಯಲ್ಲಿ ಕೆಲಸ ಮಾಡುತ್ತವೆ” ಎಂದು ಘೋಷಿಸಿದರು.

ಅಮಿತ್ ಶಾ ಅವರ ಈ ಹೇಳಿಕೆಗೆ ವಿರೋಧ ಪಕ್ಷಗಳು ಮತ್ತು ರೈತರ ಗುಂಪುಗಳು ಮಾತ್ರವಲ್ಲದೆ ಕರ್ನಾಟಕದ ಸಾಮಾನ್ಯ ಜನರಿಂದಲೂ ವಿರೋಧ ವ್ಯಕ್ತವಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...