Homeಮುಖಪುಟಹತ್ರಾಸ್ ಅತ್ಯಾಚಾರ ಸುಳ್ಳು, ಇದು ಕಾಂಗ್ರೆಸ್ ಪಿತೂರಿ: ಬಿಜೆಪಿ ಸಂಸದನ ವಿವಾದಾತ್ಮಕ ಹೇಳಿಕೆ!

ಹತ್ರಾಸ್ ಅತ್ಯಾಚಾರ ಸುಳ್ಳು, ಇದು ಕಾಂಗ್ರೆಸ್ ಪಿತೂರಿ: ಬಿಜೆಪಿ ಸಂಸದನ ವಿವಾದಾತ್ಮಕ ಹೇಳಿಕೆ!

ಸಂಸದರ ಹೇಳಿಕೆಗಳು ಹತ್ರಾಸ್ ಘಟನೆಯ ಬಗ್ಗೆ ಬಿಜೆಪಿಯ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ. ಬಿಜೆಪಿಯ ಹಿರಿಯ ಮುಖಂಡರು ತಾವು ಮತ ಪಡೆದ ಪ್ರದೇಶಗಳ ಸಮಸ್ಯೆಗಳ ಬಗ್ಗೆ ಮಾತ್ರ ಮಾತನಾಡುತ್ತಾರೆ. - ಕಾಂಗ್ರೆಸ್

- Advertisement -
- Advertisement -

ಛತ್ತೀಸ್‌ಗಡದ ಬಿಜೆಪಿ ಸಂಸದರೊಬ್ಬರು ಹತ್ರಾಸ್ ಅತ್ಯಾಚಾರದ ಘಟನೆಯನ್ನು “ಸುಳ್ಳು” ಎಂದು ಕರೆದಿದ್ದು, ಇದನ್ನು ಕಾಂಗ್ರೆಸ್‌ನವರ ಪಿತೂರಿ ಎಂಬ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ.

ಧನೋರಾದಲ್ಲಿ ಬುಡಕಟ್ಟು ಮಹಿಳೆಯ ಮೇಲೆ ನಡೆದಿದ್ದ ಅತ್ಯಾಚಾರ ಮತ್ತು ಆತ್ಮಹತ್ಯೆಯನ್ನು ಖಂಡಿಸಿ ಕಳೆದ ವಾರ ಪಕ್ಷದ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಖಾಂಕೆರ್ ಕ್ಷೇತ್ರವನ್ನು ಪ್ರತಿನಿಧಿಸುವ ಮೋಹನ್ ಮಾಂಡವಿ ಈ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ ಎಂದು ಡೆಕ್ಕನ್‌ ಹೆರಾಲ್ಡ್‌ ವರದಿ ಮಾಡಿದೆ.

ಇದನ್ನೂ ಓದಿ: ನಿಮ್ಮ ಸ್ವಂತ ಮಗಳ ಅಂತ್ಯಕ್ರಿಯೆ ಹೀಗೆ ಮಾಡುತ್ತೀರಾ..? ಹತ್ರಾಸ್‌ ಡಿಸಿಗೆ ಲಕ್ನೋ ಪೀಠ ಪ್ರಶ್ನೆ

“ಈ ಪ್ರಕರಣಕ್ಕೆ ಸಂಬಂಧಿಸಿದಂತೆ (ಧನೋರಾ) ಸಿಬಿಐ ತನಿಖೆ ನಡೆದರೆ, ಪ್ರತಿ ಹಳ್ಳಿಯಲ್ಲಿಯೂ (ಛತ್ತೀಸ್‌ಗಡದ ಬಸ್ತಾರ್) ಇಂತಹ 4-5 ಪ್ರಕರಣಗಳು ಪತ್ತೆಯಾಗುತ್ತವೆ. ಹತ್ರಾಸ್‌ನಲ್ಲಿ ಕಟ್ಟುಕಥೆಯನ್ನು ರೂಪಿಸಲಾಗಿದೆ. ಅಲ್ಲಿ ಯಾವುದೇ ದೌರ್ಜನ್ಯ ನಡೆದಿಲ್ಲ. ಆದರೂ ಕಾಂಗ್ರೆಸ್‌ನ ನಾಯಕರು ಅಲ್ಲಿಗೆ ಭೇಟಿ ನಿಡುತ್ತಿದ್ದಾರೆ” ಎಂದು ಮೋಹನ್ ಮಾಂಡೋವಿ ಸಭೆಯನ್ನುದ್ದೇಶಿಸಿ ಮಾತನಾಡಿದರು.

“ಕಾಂಗ್ರೆಸ್ ನಾಯಕರು ಇಲ್ಲಿಗೆ ಏಕೆ ಬರುವುದಿಲ್ಲ. ಬುಡಕಟ್ಟು ಜನಾಂಗದ ಹಿತೈಷಿಗಳು ಎಂದು ಕರೆಯಲ್ಪಡುವವರು ಈಗ ಎಲ್ಲಿಗೆ ಹೋಗಿದ್ದಾರೆ. ಇಲ್ಲಿನ ಪರಿಸ್ಥಿತಿಯನ್ನು ಸರಿಯಾಗಿ ನಿಭಾಯಿಸಿಲ್ಲವಾದ್ದರಿಂದ ಮುಖ್ಯಮಂತ್ರಿ ಭೂಪೇಶ್ ಬಾಘೆಲ್ ಈ ಕೂಡಲೇ ಮುಖ್ಯಮಂತ್ರಿ ಸ್ಥಾನ ತ್ಯಜಿಸಬೇಕು” ಎಂದು ಹೇಳಿದರು.

ಇದನ್ನೂ ಓದಿ: ಪ್ರಕರಣವನ್ನು ದೆಹಲಿ ಅಥವಾ ಮುಂಬೈಗೆ ವರ್ಗಾಹಿಸಲು ಹತ್ರಾಸ್ ಸಂತ್ರಸ್ತ ಕುಟುಂಬದ ಒತ್ತಾಯ

ನಂತರ ಸ್ಥಳೀಯ ಪತ್ರಕರ್ತರೊಂದಿಗೆ ಮಾತನಾಡಿದ ಸಂಸದರು, “ಹತ್ರಾಸ್ ಘಟನೆಯನ್ನು ಸುಳ್ಳು ಎಂದು ಪತ್ರಿಕೆಗಳೇ ವರದಿ ಮಾಡಿವೆ. ಆದರೆ ನಿಜವಾದ ಘಟನೆ ಧನೋರಾದಲ್ಲಿ ನಡೆದಿದೆ. ಹಾಗಾಗಿಯೇ ನಾವು ಇಲ್ಲಿ ಪ್ರತಿಭಟಿಸುತ್ತಿದ್ದೇವೆ. ಆದರೆ, ರೂಪಿತವಾದ ಪ್ರಕರಣವೊಂದನ್ನು ಖಂಡಿಸಿ ಕಾಂಗ್ರೆಸ್ ಪ್ರತಿಭಟಿಸುತ್ತಿದೆ. ಹತ್ರಾಸ್ ಇಲ್ಲಿಂದ ಕೆಲವು ಮೈಲಿಗಳ ದೂರವಿದೆ ಅಷ್ಟೆ. ಅಲ್ಲಿ ಯಾರೂ ನಮಗೆ ಮತ ನೀಡಿಲ್ಲ ಆದರೂ ಕಾಂಗ್ರೆಸ್ ಅಲ್ಲಿ ಧರಣಿ ನಡೆಸುತ್ತಿದೆ” ಎಂದು ಹೇಳಿದರು.

ಇದಕ್ಕೆ ತೀವ್ರವಾಗಿ ಪ್ರತಿಕ್ರಿಯಿಸಿದ ಕಾಂಗ್ರೆಸ್, ಸಂಸದರ ಹೇಳಿಕೆಗಳು ಹತ್ರಾಸ್ ಘಟನೆಯ ಬಗ್ಗೆ ಬಿಜೆಪಿಯ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ. ಬಿಜೆಪಿಯ ಹಿರಿಯ ಮುಖಂಡರು ತಾವು ಮತ ಪಡೆದ ಪ್ರದೇಶಗಳ ಸಮಸ್ಯೆಗಳ ಬಗ್ಗೆ ಮಾತ್ರ ಮಾತನಾಡುತ್ತಾರೆ ಎಂದು ಹೇಳಿದೆ.


ಇದನ್ನೂ ಓದಿ: ಹತ್ರಾಸ್ ದಲಿತ ಹೆಣ್ಣು ಮಗಳ ನ್ಯಾಯಕ್ಕಾಗಿ ಹೋರಾಡೋಣ- ಡಿ.ಕೆ ಶಿವಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...