Homeಮುಖಪುಟಹತ್ರಾಸ್ ಅತ್ಯಾಚಾರ ಸುಳ್ಳು, ಇದು ಕಾಂಗ್ರೆಸ್ ಪಿತೂರಿ: ಬಿಜೆಪಿ ಸಂಸದನ ವಿವಾದಾತ್ಮಕ ಹೇಳಿಕೆ!

ಹತ್ರಾಸ್ ಅತ್ಯಾಚಾರ ಸುಳ್ಳು, ಇದು ಕಾಂಗ್ರೆಸ್ ಪಿತೂರಿ: ಬಿಜೆಪಿ ಸಂಸದನ ವಿವಾದಾತ್ಮಕ ಹೇಳಿಕೆ!

ಸಂಸದರ ಹೇಳಿಕೆಗಳು ಹತ್ರಾಸ್ ಘಟನೆಯ ಬಗ್ಗೆ ಬಿಜೆಪಿಯ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ. ಬಿಜೆಪಿಯ ಹಿರಿಯ ಮುಖಂಡರು ತಾವು ಮತ ಪಡೆದ ಪ್ರದೇಶಗಳ ಸಮಸ್ಯೆಗಳ ಬಗ್ಗೆ ಮಾತ್ರ ಮಾತನಾಡುತ್ತಾರೆ. - ಕಾಂಗ್ರೆಸ್

- Advertisement -
- Advertisement -

ಛತ್ತೀಸ್‌ಗಡದ ಬಿಜೆಪಿ ಸಂಸದರೊಬ್ಬರು ಹತ್ರಾಸ್ ಅತ್ಯಾಚಾರದ ಘಟನೆಯನ್ನು “ಸುಳ್ಳು” ಎಂದು ಕರೆದಿದ್ದು, ಇದನ್ನು ಕಾಂಗ್ರೆಸ್‌ನವರ ಪಿತೂರಿ ಎಂಬ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ.

ಧನೋರಾದಲ್ಲಿ ಬುಡಕಟ್ಟು ಮಹಿಳೆಯ ಮೇಲೆ ನಡೆದಿದ್ದ ಅತ್ಯಾಚಾರ ಮತ್ತು ಆತ್ಮಹತ್ಯೆಯನ್ನು ಖಂಡಿಸಿ ಕಳೆದ ವಾರ ಪಕ್ಷದ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಖಾಂಕೆರ್ ಕ್ಷೇತ್ರವನ್ನು ಪ್ರತಿನಿಧಿಸುವ ಮೋಹನ್ ಮಾಂಡವಿ ಈ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ ಎಂದು ಡೆಕ್ಕನ್‌ ಹೆರಾಲ್ಡ್‌ ವರದಿ ಮಾಡಿದೆ.

ಇದನ್ನೂ ಓದಿ: ನಿಮ್ಮ ಸ್ವಂತ ಮಗಳ ಅಂತ್ಯಕ್ರಿಯೆ ಹೀಗೆ ಮಾಡುತ್ತೀರಾ..? ಹತ್ರಾಸ್‌ ಡಿಸಿಗೆ ಲಕ್ನೋ ಪೀಠ ಪ್ರಶ್ನೆ

“ಈ ಪ್ರಕರಣಕ್ಕೆ ಸಂಬಂಧಿಸಿದಂತೆ (ಧನೋರಾ) ಸಿಬಿಐ ತನಿಖೆ ನಡೆದರೆ, ಪ್ರತಿ ಹಳ್ಳಿಯಲ್ಲಿಯೂ (ಛತ್ತೀಸ್‌ಗಡದ ಬಸ್ತಾರ್) ಇಂತಹ 4-5 ಪ್ರಕರಣಗಳು ಪತ್ತೆಯಾಗುತ್ತವೆ. ಹತ್ರಾಸ್‌ನಲ್ಲಿ ಕಟ್ಟುಕಥೆಯನ್ನು ರೂಪಿಸಲಾಗಿದೆ. ಅಲ್ಲಿ ಯಾವುದೇ ದೌರ್ಜನ್ಯ ನಡೆದಿಲ್ಲ. ಆದರೂ ಕಾಂಗ್ರೆಸ್‌ನ ನಾಯಕರು ಅಲ್ಲಿಗೆ ಭೇಟಿ ನಿಡುತ್ತಿದ್ದಾರೆ” ಎಂದು ಮೋಹನ್ ಮಾಂಡೋವಿ ಸಭೆಯನ್ನುದ್ದೇಶಿಸಿ ಮಾತನಾಡಿದರು.

“ಕಾಂಗ್ರೆಸ್ ನಾಯಕರು ಇಲ್ಲಿಗೆ ಏಕೆ ಬರುವುದಿಲ್ಲ. ಬುಡಕಟ್ಟು ಜನಾಂಗದ ಹಿತೈಷಿಗಳು ಎಂದು ಕರೆಯಲ್ಪಡುವವರು ಈಗ ಎಲ್ಲಿಗೆ ಹೋಗಿದ್ದಾರೆ. ಇಲ್ಲಿನ ಪರಿಸ್ಥಿತಿಯನ್ನು ಸರಿಯಾಗಿ ನಿಭಾಯಿಸಿಲ್ಲವಾದ್ದರಿಂದ ಮುಖ್ಯಮಂತ್ರಿ ಭೂಪೇಶ್ ಬಾಘೆಲ್ ಈ ಕೂಡಲೇ ಮುಖ್ಯಮಂತ್ರಿ ಸ್ಥಾನ ತ್ಯಜಿಸಬೇಕು” ಎಂದು ಹೇಳಿದರು.

ಇದನ್ನೂ ಓದಿ: ಪ್ರಕರಣವನ್ನು ದೆಹಲಿ ಅಥವಾ ಮುಂಬೈಗೆ ವರ್ಗಾಹಿಸಲು ಹತ್ರಾಸ್ ಸಂತ್ರಸ್ತ ಕುಟುಂಬದ ಒತ್ತಾಯ

ನಂತರ ಸ್ಥಳೀಯ ಪತ್ರಕರ್ತರೊಂದಿಗೆ ಮಾತನಾಡಿದ ಸಂಸದರು, “ಹತ್ರಾಸ್ ಘಟನೆಯನ್ನು ಸುಳ್ಳು ಎಂದು ಪತ್ರಿಕೆಗಳೇ ವರದಿ ಮಾಡಿವೆ. ಆದರೆ ನಿಜವಾದ ಘಟನೆ ಧನೋರಾದಲ್ಲಿ ನಡೆದಿದೆ. ಹಾಗಾಗಿಯೇ ನಾವು ಇಲ್ಲಿ ಪ್ರತಿಭಟಿಸುತ್ತಿದ್ದೇವೆ. ಆದರೆ, ರೂಪಿತವಾದ ಪ್ರಕರಣವೊಂದನ್ನು ಖಂಡಿಸಿ ಕಾಂಗ್ರೆಸ್ ಪ್ರತಿಭಟಿಸುತ್ತಿದೆ. ಹತ್ರಾಸ್ ಇಲ್ಲಿಂದ ಕೆಲವು ಮೈಲಿಗಳ ದೂರವಿದೆ ಅಷ್ಟೆ. ಅಲ್ಲಿ ಯಾರೂ ನಮಗೆ ಮತ ನೀಡಿಲ್ಲ ಆದರೂ ಕಾಂಗ್ರೆಸ್ ಅಲ್ಲಿ ಧರಣಿ ನಡೆಸುತ್ತಿದೆ” ಎಂದು ಹೇಳಿದರು.

ಇದಕ್ಕೆ ತೀವ್ರವಾಗಿ ಪ್ರತಿಕ್ರಿಯಿಸಿದ ಕಾಂಗ್ರೆಸ್, ಸಂಸದರ ಹೇಳಿಕೆಗಳು ಹತ್ರಾಸ್ ಘಟನೆಯ ಬಗ್ಗೆ ಬಿಜೆಪಿಯ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ. ಬಿಜೆಪಿಯ ಹಿರಿಯ ಮುಖಂಡರು ತಾವು ಮತ ಪಡೆದ ಪ್ರದೇಶಗಳ ಸಮಸ್ಯೆಗಳ ಬಗ್ಗೆ ಮಾತ್ರ ಮಾತನಾಡುತ್ತಾರೆ ಎಂದು ಹೇಳಿದೆ.


ಇದನ್ನೂ ಓದಿ: ಹತ್ರಾಸ್ ದಲಿತ ಹೆಣ್ಣು ಮಗಳ ನ್ಯಾಯಕ್ಕಾಗಿ ಹೋರಾಡೋಣ- ಡಿ.ಕೆ ಶಿವಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...