Homeಮುಖಪುಟಪ್ರಕರಣವನ್ನು ದೆಹಲಿ ಅಥವಾ ಮುಂಬೈಗೆ ವರ್ಗಾಹಿಸಲು ಹತ್ರಾಸ್ ಸಂತ್ರಸ್ತ ಕುಟುಂಬದ ಒತ್ತಾಯ

ಪ್ರಕರಣವನ್ನು ದೆಹಲಿ ಅಥವಾ ಮುಂಬೈಗೆ ವರ್ಗಾಹಿಸಲು ಹತ್ರಾಸ್ ಸಂತ್ರಸ್ತ ಕುಟುಂಬದ ಒತ್ತಾಯ

ಹತ್ರಾಸ್‌ನಲ್ಲಿ ಕೆಲವೇ ದಲಿತ ಕುಟುಂಬಗಳಿದ್ದು, ಪ್ರಕರಣ ನಡೆದಾಗಿನಿಂದ ಮೇಲ್ಜಾತಿ ಠಾಕೂರರಿಂದ ಬೆದರಿಕೆಗಳು ಬರುತ್ತಿರುವುದರಿಂದ ಇನ್ನು ಹೆಚ್ಚಿನ ರಕ್ಷಣೆ ನೀಡಬೇಕೆಂದು ಕೋರ್ಟ್ ಸರ್ಕಾರಕ್ಕೆ ಆದೇಶಿಸಿದೆ.

- Advertisement -
- Advertisement -

ಸಾಮೂಹಿಕ ಅತ್ಯಾಚಾರಕ್ಕೊಳಗಾಗಿ ಕೊಲೆಗೀಡಾದ ಹತ್ರಾಸ್ ಯುವತಿಯ ಕುಟುಂಬವು ಪ್ರಕರಣವನ್ನು ಉತ್ತರ ಪ್ರದೇಶದಿಂದ ಬೇರೆಡೆಗೆ ವರ್ಗಾಯಿಸಲು ಒತ್ತಾಯಿಸಿದೆ. ಪ್ರಕರಣವನ್ನು ದೆಹಲಿ ಅಥವಾ ಮುಂಬೈಗೆ ವರ್ಗಾಹಿಸಲು ಹತ್ರಾಸ್ ಸಂತ್ರಸ್ತ ಕುಟುಂಬ ಅಲಹಾಬಾದ್ ಹೈಕೋರ್ಟ್‌ನಲ್ಲಿ ಒತ್ತಾಯಿಸಿದೆ ಎಂದು ಅವರ ಪರ ವಕೀಲೆ ಸೀಮಾ ಕುಶ್ವಾಹ ತಿಳಿಸಿದ್ದಾರೆ.

ಪ್ರಕರಣದ ತನಿಖೆ ನಡೆಯುತ್ತಿರುವಾಗ ಅದನ್ನು ಸಾರ್ವಜನಿಕವಾಗಿ ವರದಿ ಮಾಡಬಾರದು, ಪ್ರಕರಣವನ್ನು ರಾಜ್ಯದಿಂದ ಬೇರೆಡೆಗೆ ವರ್ಗಾಹಿಸಬೇಕು ಮತ್ತು ತಮ್ಮ ಮಗಳಿಗೆ ನ್ಯಾಯ ಸಿಗುವವರೆಗೂ ಚಿತಾಭಸ್ಮ ಬಿಡುವುದಿಲ್ಲ ಎಂದು ಕುಟುಂಬ ನಿರ್ಧರಿಸಿದೆ.

ಅಲಹಾಬಾದ್ ಹೈಕೋರ್ಟ್ ನಿನ್ನೆ ಪ್ರಕರಣ ವಿಚಾರಣೆ ನಡೆಸಿ ಉತ್ತರ ಪ್ರದೇಶದ ಆಡಳಿತ ಮತ್ತು ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದೆ. ಸೆಪ್ಟಂಬರ್ 14 ರಂದು ನಾಲ್ವರು ಮೇಲ್ಜಾತಿ ಯುವಕರಿಂದ ಸಾಮೂಹಿಕ ಅತ್ಯಾಚಾರ ಮತ್ತು ಹಲ್ಲೆಗೊಳಗಾಗಿದ್ದ ದಲಿತ ಯುವತಿ ಮೃತಪಟ್ಟಾಗ ಕುಟುಂಬದವರಿಗೆ ಆಕೆಯ ಮುಖ ನೋಡಲು ಸಹ ಅವಕಾಶ ಕೊಡದೇ, ಪೊಲೀಸರೇ ಸುಟ್ಟು ಹಾಕಿದ್ದು ಏಕೆ? ಒಂದು ವೇಳೆ ನಿಮ್ಮ ಮಗಳು ಮೃತಪಟ್ಟರೆ ಆಕೆಯನ್ನು ಇದೇ ರೀತಿ ಅಂತ್ಯಕ್ರಿಯೆ ಮಾಡುತ್ತೀರಾ? ಎಂದು ಕೋರ್ಟ್ ಪ್ರಶ್ನಿಸಿದೆ.

ಹತ್ರಾಸ್‌ನಲ್ಲಿ ಕೆಲವೇ ದಲಿತ ಕುಟುಂಬಗಳಿದ್ದು, ಪ್ರಕರಣ ನಡೆದಾಗಿನಿಂದ ಮೇಲ್ಜಾತಿ ಠಾಕೂರರಿಂದ ಬೆದರಿಕೆಗಳು ಬರುತ್ತಿರುವುದರಿಂದ ಇನ್ನು ಹೆಚ್ಚಿನ ರಕ್ಷಣೆ ನೀಡಬೇಕೆಂದು ಕೋರ್ಟ್ ಸರ್ಕಾರಕ್ಕೆ ಆದೇಶಿಸಿದೆ.

ಜಿಲ್ಲಾ ಆಡಳಿತವು ಮಧ್ಯರಾತ್ರಿಯಲ್ಲಿ ಕುಟುಂಬದ ಅನುಪಸ್ಥಿತಿಯಲ್ಲಿ ಶವ ಸುಟ್ಟ ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದೆ. ಆ ಸಂದರ್ಭದಲ್ಲಿ ಸಂತ್ರಸ್ತ ಯುವತಿಯ ಸಹೋದರ ಮತ್ತು ಪೋಷಕರನ್ನು ಕೂಡಿಹಾಕಲಾಗಿತ್ತು. ಅವರು ತಮ್ಮ ಮಗಳ ದೇಹವನ್ನು ತಮಗೆ ನೀಡಬೇಕೆಂದು ಪರಿಪರಿಯಾಗಿ ಬೇಡಿಕೊಂಡರೂ ಪೊಲೀಸರು ಶವ ನೀಡದೇ, ಮಧ್ಯರಾತ್ರಿಯಲ್ಲಿ ಪೆಟ್ರೋಲ್ ಹಾಕಿ ಸುಟ್ಟು ಹಾಕಲಾಯಿತು ಎಂದು ಮಾಧ್ಯಮಗಳು ವರದಿ ಮಾಡಿವೆ.

ಇದಕ್ಕೆ ವಿರುದ್ಧವಾಗಿ “ಮಧ್ಯರಾತ್ರಿಯಲ್ಲಿ ಅಂತ್ಯಸಂಸ್ಕಾರ ಮಾಡಲು ನಮಗೆ ರಾಜ್ಯ ಸರ್ಕಾರದಿಂದ ಯಾವುದೇ ಒತ್ತಡ ಬಂದಿರಲಿಲ್ಲ. ಕಾನೂನು ಸುವ್ಯವಸ್ಥೆ ಕಾಪಾಡಲು ನಾವು ಆ ಕ್ರಮ ತೆಗೆದುಕೊಳ್ಳಬೇಕಾಯಿತು” ಎಂದು ಹತ್ರಾಸ್ ಜಿಲ್ಲಾಧಿಕಾರಿ ಪ್ರವೀಣ್ ಕುಮಾರ್ ಲಕ್ಸರ್ ವಾದಿಸಿದ್ದಾರೆ.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಕೋರ್ಟ್, “ಸಂತ್ರಸ್ತ ಯುವತಿ ಬಡವರಾಗಿರುವ ಬದಲು ಶ್ರೀಮಂತ ಕುಟುಂಬಕ್ಕೆ ಸೇರಿದ್ದರೆ ನೀವು ಇದೇ ರೀತಿ ಅಂತ್ಯಕ್ರಿಯೆ ಮಾಡುತ್ತಿದ್ದೀರಾ?” ಎಂದು ಪ್ರಶ್ನಿಸಿದೆ.

ಪ್ರಕರಣದ ವಿಚಾರಣೆಯಲ್ಲಿ ನ್ಯಾಯಾಲಯವು ನವೆಂಬರ್ 02ಕ್ಕೆ ಮುಂದೂಡಿದೆ. ನಿನ್ನೆಯ ವಿಚಾರಣೆಗೆ ಸಂತ್ರಸ್ತ ಕುಟುಂಬವನ್ನು ಭಾರೀ ಭದ್ರತೆಯಲ್ಲಿ ಲಖನೌಗೆ ಕರೆತರಲಾಗಿತ್ತು.


ಇದನ್ನೂ ಓದಿ: ಹತ್ರಾಸ್: ಶವ ಸುಟ್ಟಿದ್ದನ್ನು ಸುಪ್ರೀಂ‌ನಲ್ಲಿ ಸಮರ್ಥಿಸಿಕೊಂಡ ಯುಪಿ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...