Homeಮುಖಪುಟಪ್ರಕರಣವನ್ನು ದೆಹಲಿ ಅಥವಾ ಮುಂಬೈಗೆ ವರ್ಗಾಹಿಸಲು ಹತ್ರಾಸ್ ಸಂತ್ರಸ್ತ ಕುಟುಂಬದ ಒತ್ತಾಯ

ಪ್ರಕರಣವನ್ನು ದೆಹಲಿ ಅಥವಾ ಮುಂಬೈಗೆ ವರ್ಗಾಹಿಸಲು ಹತ್ರಾಸ್ ಸಂತ್ರಸ್ತ ಕುಟುಂಬದ ಒತ್ತಾಯ

ಹತ್ರಾಸ್‌ನಲ್ಲಿ ಕೆಲವೇ ದಲಿತ ಕುಟುಂಬಗಳಿದ್ದು, ಪ್ರಕರಣ ನಡೆದಾಗಿನಿಂದ ಮೇಲ್ಜಾತಿ ಠಾಕೂರರಿಂದ ಬೆದರಿಕೆಗಳು ಬರುತ್ತಿರುವುದರಿಂದ ಇನ್ನು ಹೆಚ್ಚಿನ ರಕ್ಷಣೆ ನೀಡಬೇಕೆಂದು ಕೋರ್ಟ್ ಸರ್ಕಾರಕ್ಕೆ ಆದೇಶಿಸಿದೆ.

- Advertisement -
- Advertisement -

ಸಾಮೂಹಿಕ ಅತ್ಯಾಚಾರಕ್ಕೊಳಗಾಗಿ ಕೊಲೆಗೀಡಾದ ಹತ್ರಾಸ್ ಯುವತಿಯ ಕುಟುಂಬವು ಪ್ರಕರಣವನ್ನು ಉತ್ತರ ಪ್ರದೇಶದಿಂದ ಬೇರೆಡೆಗೆ ವರ್ಗಾಯಿಸಲು ಒತ್ತಾಯಿಸಿದೆ. ಪ್ರಕರಣವನ್ನು ದೆಹಲಿ ಅಥವಾ ಮುಂಬೈಗೆ ವರ್ಗಾಹಿಸಲು ಹತ್ರಾಸ್ ಸಂತ್ರಸ್ತ ಕುಟುಂಬ ಅಲಹಾಬಾದ್ ಹೈಕೋರ್ಟ್‌ನಲ್ಲಿ ಒತ್ತಾಯಿಸಿದೆ ಎಂದು ಅವರ ಪರ ವಕೀಲೆ ಸೀಮಾ ಕುಶ್ವಾಹ ತಿಳಿಸಿದ್ದಾರೆ.

ಪ್ರಕರಣದ ತನಿಖೆ ನಡೆಯುತ್ತಿರುವಾಗ ಅದನ್ನು ಸಾರ್ವಜನಿಕವಾಗಿ ವರದಿ ಮಾಡಬಾರದು, ಪ್ರಕರಣವನ್ನು ರಾಜ್ಯದಿಂದ ಬೇರೆಡೆಗೆ ವರ್ಗಾಹಿಸಬೇಕು ಮತ್ತು ತಮ್ಮ ಮಗಳಿಗೆ ನ್ಯಾಯ ಸಿಗುವವರೆಗೂ ಚಿತಾಭಸ್ಮ ಬಿಡುವುದಿಲ್ಲ ಎಂದು ಕುಟುಂಬ ನಿರ್ಧರಿಸಿದೆ.

ಅಲಹಾಬಾದ್ ಹೈಕೋರ್ಟ್ ನಿನ್ನೆ ಪ್ರಕರಣ ವಿಚಾರಣೆ ನಡೆಸಿ ಉತ್ತರ ಪ್ರದೇಶದ ಆಡಳಿತ ಮತ್ತು ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದೆ. ಸೆಪ್ಟಂಬರ್ 14 ರಂದು ನಾಲ್ವರು ಮೇಲ್ಜಾತಿ ಯುವಕರಿಂದ ಸಾಮೂಹಿಕ ಅತ್ಯಾಚಾರ ಮತ್ತು ಹಲ್ಲೆಗೊಳಗಾಗಿದ್ದ ದಲಿತ ಯುವತಿ ಮೃತಪಟ್ಟಾಗ ಕುಟುಂಬದವರಿಗೆ ಆಕೆಯ ಮುಖ ನೋಡಲು ಸಹ ಅವಕಾಶ ಕೊಡದೇ, ಪೊಲೀಸರೇ ಸುಟ್ಟು ಹಾಕಿದ್ದು ಏಕೆ? ಒಂದು ವೇಳೆ ನಿಮ್ಮ ಮಗಳು ಮೃತಪಟ್ಟರೆ ಆಕೆಯನ್ನು ಇದೇ ರೀತಿ ಅಂತ್ಯಕ್ರಿಯೆ ಮಾಡುತ್ತೀರಾ? ಎಂದು ಕೋರ್ಟ್ ಪ್ರಶ್ನಿಸಿದೆ.

ಹತ್ರಾಸ್‌ನಲ್ಲಿ ಕೆಲವೇ ದಲಿತ ಕುಟುಂಬಗಳಿದ್ದು, ಪ್ರಕರಣ ನಡೆದಾಗಿನಿಂದ ಮೇಲ್ಜಾತಿ ಠಾಕೂರರಿಂದ ಬೆದರಿಕೆಗಳು ಬರುತ್ತಿರುವುದರಿಂದ ಇನ್ನು ಹೆಚ್ಚಿನ ರಕ್ಷಣೆ ನೀಡಬೇಕೆಂದು ಕೋರ್ಟ್ ಸರ್ಕಾರಕ್ಕೆ ಆದೇಶಿಸಿದೆ.

ಜಿಲ್ಲಾ ಆಡಳಿತವು ಮಧ್ಯರಾತ್ರಿಯಲ್ಲಿ ಕುಟುಂಬದ ಅನುಪಸ್ಥಿತಿಯಲ್ಲಿ ಶವ ಸುಟ್ಟ ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದೆ. ಆ ಸಂದರ್ಭದಲ್ಲಿ ಸಂತ್ರಸ್ತ ಯುವತಿಯ ಸಹೋದರ ಮತ್ತು ಪೋಷಕರನ್ನು ಕೂಡಿಹಾಕಲಾಗಿತ್ತು. ಅವರು ತಮ್ಮ ಮಗಳ ದೇಹವನ್ನು ತಮಗೆ ನೀಡಬೇಕೆಂದು ಪರಿಪರಿಯಾಗಿ ಬೇಡಿಕೊಂಡರೂ ಪೊಲೀಸರು ಶವ ನೀಡದೇ, ಮಧ್ಯರಾತ್ರಿಯಲ್ಲಿ ಪೆಟ್ರೋಲ್ ಹಾಕಿ ಸುಟ್ಟು ಹಾಕಲಾಯಿತು ಎಂದು ಮಾಧ್ಯಮಗಳು ವರದಿ ಮಾಡಿವೆ.

ಇದಕ್ಕೆ ವಿರುದ್ಧವಾಗಿ “ಮಧ್ಯರಾತ್ರಿಯಲ್ಲಿ ಅಂತ್ಯಸಂಸ್ಕಾರ ಮಾಡಲು ನಮಗೆ ರಾಜ್ಯ ಸರ್ಕಾರದಿಂದ ಯಾವುದೇ ಒತ್ತಡ ಬಂದಿರಲಿಲ್ಲ. ಕಾನೂನು ಸುವ್ಯವಸ್ಥೆ ಕಾಪಾಡಲು ನಾವು ಆ ಕ್ರಮ ತೆಗೆದುಕೊಳ್ಳಬೇಕಾಯಿತು” ಎಂದು ಹತ್ರಾಸ್ ಜಿಲ್ಲಾಧಿಕಾರಿ ಪ್ರವೀಣ್ ಕುಮಾರ್ ಲಕ್ಸರ್ ವಾದಿಸಿದ್ದಾರೆ.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಕೋರ್ಟ್, “ಸಂತ್ರಸ್ತ ಯುವತಿ ಬಡವರಾಗಿರುವ ಬದಲು ಶ್ರೀಮಂತ ಕುಟುಂಬಕ್ಕೆ ಸೇರಿದ್ದರೆ ನೀವು ಇದೇ ರೀತಿ ಅಂತ್ಯಕ್ರಿಯೆ ಮಾಡುತ್ತಿದ್ದೀರಾ?” ಎಂದು ಪ್ರಶ್ನಿಸಿದೆ.

ಪ್ರಕರಣದ ವಿಚಾರಣೆಯಲ್ಲಿ ನ್ಯಾಯಾಲಯವು ನವೆಂಬರ್ 02ಕ್ಕೆ ಮುಂದೂಡಿದೆ. ನಿನ್ನೆಯ ವಿಚಾರಣೆಗೆ ಸಂತ್ರಸ್ತ ಕುಟುಂಬವನ್ನು ಭಾರೀ ಭದ್ರತೆಯಲ್ಲಿ ಲಖನೌಗೆ ಕರೆತರಲಾಗಿತ್ತು.


ಇದನ್ನೂ ಓದಿ: ಹತ್ರಾಸ್: ಶವ ಸುಟ್ಟಿದ್ದನ್ನು ಸುಪ್ರೀಂ‌ನಲ್ಲಿ ಸಮರ್ಥಿಸಿಕೊಂಡ ಯುಪಿ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...