Homeಮುಖಪುಟಪ್ರಕರಣವನ್ನು ದೆಹಲಿ ಅಥವಾ ಮುಂಬೈಗೆ ವರ್ಗಾಹಿಸಲು ಹತ್ರಾಸ್ ಸಂತ್ರಸ್ತ ಕುಟುಂಬದ ಒತ್ತಾಯ

ಪ್ರಕರಣವನ್ನು ದೆಹಲಿ ಅಥವಾ ಮುಂಬೈಗೆ ವರ್ಗಾಹಿಸಲು ಹತ್ರಾಸ್ ಸಂತ್ರಸ್ತ ಕುಟುಂಬದ ಒತ್ತಾಯ

ಹತ್ರಾಸ್‌ನಲ್ಲಿ ಕೆಲವೇ ದಲಿತ ಕುಟುಂಬಗಳಿದ್ದು, ಪ್ರಕರಣ ನಡೆದಾಗಿನಿಂದ ಮೇಲ್ಜಾತಿ ಠಾಕೂರರಿಂದ ಬೆದರಿಕೆಗಳು ಬರುತ್ತಿರುವುದರಿಂದ ಇನ್ನು ಹೆಚ್ಚಿನ ರಕ್ಷಣೆ ನೀಡಬೇಕೆಂದು ಕೋರ್ಟ್ ಸರ್ಕಾರಕ್ಕೆ ಆದೇಶಿಸಿದೆ.

- Advertisement -
- Advertisement -

ಸಾಮೂಹಿಕ ಅತ್ಯಾಚಾರಕ್ಕೊಳಗಾಗಿ ಕೊಲೆಗೀಡಾದ ಹತ್ರಾಸ್ ಯುವತಿಯ ಕುಟುಂಬವು ಪ್ರಕರಣವನ್ನು ಉತ್ತರ ಪ್ರದೇಶದಿಂದ ಬೇರೆಡೆಗೆ ವರ್ಗಾಯಿಸಲು ಒತ್ತಾಯಿಸಿದೆ. ಪ್ರಕರಣವನ್ನು ದೆಹಲಿ ಅಥವಾ ಮುಂಬೈಗೆ ವರ್ಗಾಹಿಸಲು ಹತ್ರಾಸ್ ಸಂತ್ರಸ್ತ ಕುಟುಂಬ ಅಲಹಾಬಾದ್ ಹೈಕೋರ್ಟ್‌ನಲ್ಲಿ ಒತ್ತಾಯಿಸಿದೆ ಎಂದು ಅವರ ಪರ ವಕೀಲೆ ಸೀಮಾ ಕುಶ್ವಾಹ ತಿಳಿಸಿದ್ದಾರೆ.

ಪ್ರಕರಣದ ತನಿಖೆ ನಡೆಯುತ್ತಿರುವಾಗ ಅದನ್ನು ಸಾರ್ವಜನಿಕವಾಗಿ ವರದಿ ಮಾಡಬಾರದು, ಪ್ರಕರಣವನ್ನು ರಾಜ್ಯದಿಂದ ಬೇರೆಡೆಗೆ ವರ್ಗಾಹಿಸಬೇಕು ಮತ್ತು ತಮ್ಮ ಮಗಳಿಗೆ ನ್ಯಾಯ ಸಿಗುವವರೆಗೂ ಚಿತಾಭಸ್ಮ ಬಿಡುವುದಿಲ್ಲ ಎಂದು ಕುಟುಂಬ ನಿರ್ಧರಿಸಿದೆ.

ಅಲಹಾಬಾದ್ ಹೈಕೋರ್ಟ್ ನಿನ್ನೆ ಪ್ರಕರಣ ವಿಚಾರಣೆ ನಡೆಸಿ ಉತ್ತರ ಪ್ರದೇಶದ ಆಡಳಿತ ಮತ್ತು ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದೆ. ಸೆಪ್ಟಂಬರ್ 14 ರಂದು ನಾಲ್ವರು ಮೇಲ್ಜಾತಿ ಯುವಕರಿಂದ ಸಾಮೂಹಿಕ ಅತ್ಯಾಚಾರ ಮತ್ತು ಹಲ್ಲೆಗೊಳಗಾಗಿದ್ದ ದಲಿತ ಯುವತಿ ಮೃತಪಟ್ಟಾಗ ಕುಟುಂಬದವರಿಗೆ ಆಕೆಯ ಮುಖ ನೋಡಲು ಸಹ ಅವಕಾಶ ಕೊಡದೇ, ಪೊಲೀಸರೇ ಸುಟ್ಟು ಹಾಕಿದ್ದು ಏಕೆ? ಒಂದು ವೇಳೆ ನಿಮ್ಮ ಮಗಳು ಮೃತಪಟ್ಟರೆ ಆಕೆಯನ್ನು ಇದೇ ರೀತಿ ಅಂತ್ಯಕ್ರಿಯೆ ಮಾಡುತ್ತೀರಾ? ಎಂದು ಕೋರ್ಟ್ ಪ್ರಶ್ನಿಸಿದೆ.

ಹತ್ರಾಸ್‌ನಲ್ಲಿ ಕೆಲವೇ ದಲಿತ ಕುಟುಂಬಗಳಿದ್ದು, ಪ್ರಕರಣ ನಡೆದಾಗಿನಿಂದ ಮೇಲ್ಜಾತಿ ಠಾಕೂರರಿಂದ ಬೆದರಿಕೆಗಳು ಬರುತ್ತಿರುವುದರಿಂದ ಇನ್ನು ಹೆಚ್ಚಿನ ರಕ್ಷಣೆ ನೀಡಬೇಕೆಂದು ಕೋರ್ಟ್ ಸರ್ಕಾರಕ್ಕೆ ಆದೇಶಿಸಿದೆ.

ಜಿಲ್ಲಾ ಆಡಳಿತವು ಮಧ್ಯರಾತ್ರಿಯಲ್ಲಿ ಕುಟುಂಬದ ಅನುಪಸ್ಥಿತಿಯಲ್ಲಿ ಶವ ಸುಟ್ಟ ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದೆ. ಆ ಸಂದರ್ಭದಲ್ಲಿ ಸಂತ್ರಸ್ತ ಯುವತಿಯ ಸಹೋದರ ಮತ್ತು ಪೋಷಕರನ್ನು ಕೂಡಿಹಾಕಲಾಗಿತ್ತು. ಅವರು ತಮ್ಮ ಮಗಳ ದೇಹವನ್ನು ತಮಗೆ ನೀಡಬೇಕೆಂದು ಪರಿಪರಿಯಾಗಿ ಬೇಡಿಕೊಂಡರೂ ಪೊಲೀಸರು ಶವ ನೀಡದೇ, ಮಧ್ಯರಾತ್ರಿಯಲ್ಲಿ ಪೆಟ್ರೋಲ್ ಹಾಕಿ ಸುಟ್ಟು ಹಾಕಲಾಯಿತು ಎಂದು ಮಾಧ್ಯಮಗಳು ವರದಿ ಮಾಡಿವೆ.

ಇದಕ್ಕೆ ವಿರುದ್ಧವಾಗಿ “ಮಧ್ಯರಾತ್ರಿಯಲ್ಲಿ ಅಂತ್ಯಸಂಸ್ಕಾರ ಮಾಡಲು ನಮಗೆ ರಾಜ್ಯ ಸರ್ಕಾರದಿಂದ ಯಾವುದೇ ಒತ್ತಡ ಬಂದಿರಲಿಲ್ಲ. ಕಾನೂನು ಸುವ್ಯವಸ್ಥೆ ಕಾಪಾಡಲು ನಾವು ಆ ಕ್ರಮ ತೆಗೆದುಕೊಳ್ಳಬೇಕಾಯಿತು” ಎಂದು ಹತ್ರಾಸ್ ಜಿಲ್ಲಾಧಿಕಾರಿ ಪ್ರವೀಣ್ ಕುಮಾರ್ ಲಕ್ಸರ್ ವಾದಿಸಿದ್ದಾರೆ.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಕೋರ್ಟ್, “ಸಂತ್ರಸ್ತ ಯುವತಿ ಬಡವರಾಗಿರುವ ಬದಲು ಶ್ರೀಮಂತ ಕುಟುಂಬಕ್ಕೆ ಸೇರಿದ್ದರೆ ನೀವು ಇದೇ ರೀತಿ ಅಂತ್ಯಕ್ರಿಯೆ ಮಾಡುತ್ತಿದ್ದೀರಾ?” ಎಂದು ಪ್ರಶ್ನಿಸಿದೆ.

ಪ್ರಕರಣದ ವಿಚಾರಣೆಯಲ್ಲಿ ನ್ಯಾಯಾಲಯವು ನವೆಂಬರ್ 02ಕ್ಕೆ ಮುಂದೂಡಿದೆ. ನಿನ್ನೆಯ ವಿಚಾರಣೆಗೆ ಸಂತ್ರಸ್ತ ಕುಟುಂಬವನ್ನು ಭಾರೀ ಭದ್ರತೆಯಲ್ಲಿ ಲಖನೌಗೆ ಕರೆತರಲಾಗಿತ್ತು.


ಇದನ್ನೂ ಓದಿ: ಹತ್ರಾಸ್: ಶವ ಸುಟ್ಟಿದ್ದನ್ನು ಸುಪ್ರೀಂ‌ನಲ್ಲಿ ಸಮರ್ಥಿಸಿಕೊಂಡ ಯುಪಿ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...