Homeಮುಖಪುಟಪ್ರಕರಣವನ್ನು ದೆಹಲಿ ಅಥವಾ ಮುಂಬೈಗೆ ವರ್ಗಾಹಿಸಲು ಹತ್ರಾಸ್ ಸಂತ್ರಸ್ತ ಕುಟುಂಬದ ಒತ್ತಾಯ

ಪ್ರಕರಣವನ್ನು ದೆಹಲಿ ಅಥವಾ ಮುಂಬೈಗೆ ವರ್ಗಾಹಿಸಲು ಹತ್ರಾಸ್ ಸಂತ್ರಸ್ತ ಕುಟುಂಬದ ಒತ್ತಾಯ

ಹತ್ರಾಸ್‌ನಲ್ಲಿ ಕೆಲವೇ ದಲಿತ ಕುಟುಂಬಗಳಿದ್ದು, ಪ್ರಕರಣ ನಡೆದಾಗಿನಿಂದ ಮೇಲ್ಜಾತಿ ಠಾಕೂರರಿಂದ ಬೆದರಿಕೆಗಳು ಬರುತ್ತಿರುವುದರಿಂದ ಇನ್ನು ಹೆಚ್ಚಿನ ರಕ್ಷಣೆ ನೀಡಬೇಕೆಂದು ಕೋರ್ಟ್ ಸರ್ಕಾರಕ್ಕೆ ಆದೇಶಿಸಿದೆ.

- Advertisement -
- Advertisement -

ಸಾಮೂಹಿಕ ಅತ್ಯಾಚಾರಕ್ಕೊಳಗಾಗಿ ಕೊಲೆಗೀಡಾದ ಹತ್ರಾಸ್ ಯುವತಿಯ ಕುಟುಂಬವು ಪ್ರಕರಣವನ್ನು ಉತ್ತರ ಪ್ರದೇಶದಿಂದ ಬೇರೆಡೆಗೆ ವರ್ಗಾಯಿಸಲು ಒತ್ತಾಯಿಸಿದೆ. ಪ್ರಕರಣವನ್ನು ದೆಹಲಿ ಅಥವಾ ಮುಂಬೈಗೆ ವರ್ಗಾಹಿಸಲು ಹತ್ರಾಸ್ ಸಂತ್ರಸ್ತ ಕುಟುಂಬ ಅಲಹಾಬಾದ್ ಹೈಕೋರ್ಟ್‌ನಲ್ಲಿ ಒತ್ತಾಯಿಸಿದೆ ಎಂದು ಅವರ ಪರ ವಕೀಲೆ ಸೀಮಾ ಕುಶ್ವಾಹ ತಿಳಿಸಿದ್ದಾರೆ.

ಪ್ರಕರಣದ ತನಿಖೆ ನಡೆಯುತ್ತಿರುವಾಗ ಅದನ್ನು ಸಾರ್ವಜನಿಕವಾಗಿ ವರದಿ ಮಾಡಬಾರದು, ಪ್ರಕರಣವನ್ನು ರಾಜ್ಯದಿಂದ ಬೇರೆಡೆಗೆ ವರ್ಗಾಹಿಸಬೇಕು ಮತ್ತು ತಮ್ಮ ಮಗಳಿಗೆ ನ್ಯಾಯ ಸಿಗುವವರೆಗೂ ಚಿತಾಭಸ್ಮ ಬಿಡುವುದಿಲ್ಲ ಎಂದು ಕುಟುಂಬ ನಿರ್ಧರಿಸಿದೆ.

ಅಲಹಾಬಾದ್ ಹೈಕೋರ್ಟ್ ನಿನ್ನೆ ಪ್ರಕರಣ ವಿಚಾರಣೆ ನಡೆಸಿ ಉತ್ತರ ಪ್ರದೇಶದ ಆಡಳಿತ ಮತ್ತು ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದೆ. ಸೆಪ್ಟಂಬರ್ 14 ರಂದು ನಾಲ್ವರು ಮೇಲ್ಜಾತಿ ಯುವಕರಿಂದ ಸಾಮೂಹಿಕ ಅತ್ಯಾಚಾರ ಮತ್ತು ಹಲ್ಲೆಗೊಳಗಾಗಿದ್ದ ದಲಿತ ಯುವತಿ ಮೃತಪಟ್ಟಾಗ ಕುಟುಂಬದವರಿಗೆ ಆಕೆಯ ಮುಖ ನೋಡಲು ಸಹ ಅವಕಾಶ ಕೊಡದೇ, ಪೊಲೀಸರೇ ಸುಟ್ಟು ಹಾಕಿದ್ದು ಏಕೆ? ಒಂದು ವೇಳೆ ನಿಮ್ಮ ಮಗಳು ಮೃತಪಟ್ಟರೆ ಆಕೆಯನ್ನು ಇದೇ ರೀತಿ ಅಂತ್ಯಕ್ರಿಯೆ ಮಾಡುತ್ತೀರಾ? ಎಂದು ಕೋರ್ಟ್ ಪ್ರಶ್ನಿಸಿದೆ.

ಹತ್ರಾಸ್‌ನಲ್ಲಿ ಕೆಲವೇ ದಲಿತ ಕುಟುಂಬಗಳಿದ್ದು, ಪ್ರಕರಣ ನಡೆದಾಗಿನಿಂದ ಮೇಲ್ಜಾತಿ ಠಾಕೂರರಿಂದ ಬೆದರಿಕೆಗಳು ಬರುತ್ತಿರುವುದರಿಂದ ಇನ್ನು ಹೆಚ್ಚಿನ ರಕ್ಷಣೆ ನೀಡಬೇಕೆಂದು ಕೋರ್ಟ್ ಸರ್ಕಾರಕ್ಕೆ ಆದೇಶಿಸಿದೆ.

ಜಿಲ್ಲಾ ಆಡಳಿತವು ಮಧ್ಯರಾತ್ರಿಯಲ್ಲಿ ಕುಟುಂಬದ ಅನುಪಸ್ಥಿತಿಯಲ್ಲಿ ಶವ ಸುಟ್ಟ ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದೆ. ಆ ಸಂದರ್ಭದಲ್ಲಿ ಸಂತ್ರಸ್ತ ಯುವತಿಯ ಸಹೋದರ ಮತ್ತು ಪೋಷಕರನ್ನು ಕೂಡಿಹಾಕಲಾಗಿತ್ತು. ಅವರು ತಮ್ಮ ಮಗಳ ದೇಹವನ್ನು ತಮಗೆ ನೀಡಬೇಕೆಂದು ಪರಿಪರಿಯಾಗಿ ಬೇಡಿಕೊಂಡರೂ ಪೊಲೀಸರು ಶವ ನೀಡದೇ, ಮಧ್ಯರಾತ್ರಿಯಲ್ಲಿ ಪೆಟ್ರೋಲ್ ಹಾಕಿ ಸುಟ್ಟು ಹಾಕಲಾಯಿತು ಎಂದು ಮಾಧ್ಯಮಗಳು ವರದಿ ಮಾಡಿವೆ.

ಇದಕ್ಕೆ ವಿರುದ್ಧವಾಗಿ “ಮಧ್ಯರಾತ್ರಿಯಲ್ಲಿ ಅಂತ್ಯಸಂಸ್ಕಾರ ಮಾಡಲು ನಮಗೆ ರಾಜ್ಯ ಸರ್ಕಾರದಿಂದ ಯಾವುದೇ ಒತ್ತಡ ಬಂದಿರಲಿಲ್ಲ. ಕಾನೂನು ಸುವ್ಯವಸ್ಥೆ ಕಾಪಾಡಲು ನಾವು ಆ ಕ್ರಮ ತೆಗೆದುಕೊಳ್ಳಬೇಕಾಯಿತು” ಎಂದು ಹತ್ರಾಸ್ ಜಿಲ್ಲಾಧಿಕಾರಿ ಪ್ರವೀಣ್ ಕುಮಾರ್ ಲಕ್ಸರ್ ವಾದಿಸಿದ್ದಾರೆ.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಕೋರ್ಟ್, “ಸಂತ್ರಸ್ತ ಯುವತಿ ಬಡವರಾಗಿರುವ ಬದಲು ಶ್ರೀಮಂತ ಕುಟುಂಬಕ್ಕೆ ಸೇರಿದ್ದರೆ ನೀವು ಇದೇ ರೀತಿ ಅಂತ್ಯಕ್ರಿಯೆ ಮಾಡುತ್ತಿದ್ದೀರಾ?” ಎಂದು ಪ್ರಶ್ನಿಸಿದೆ.

ಪ್ರಕರಣದ ವಿಚಾರಣೆಯಲ್ಲಿ ನ್ಯಾಯಾಲಯವು ನವೆಂಬರ್ 02ಕ್ಕೆ ಮುಂದೂಡಿದೆ. ನಿನ್ನೆಯ ವಿಚಾರಣೆಗೆ ಸಂತ್ರಸ್ತ ಕುಟುಂಬವನ್ನು ಭಾರೀ ಭದ್ರತೆಯಲ್ಲಿ ಲಖನೌಗೆ ಕರೆತರಲಾಗಿತ್ತು.


ಇದನ್ನೂ ಓದಿ: ಹತ್ರಾಸ್: ಶವ ಸುಟ್ಟಿದ್ದನ್ನು ಸುಪ್ರೀಂ‌ನಲ್ಲಿ ಸಮರ್ಥಿಸಿಕೊಂಡ ಯುಪಿ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...