Homeಅಂತರಾಷ್ಟ್ರೀಯರ‍ಷ್ಯಾ ಸೇನೆಯ ಅತ್ಯಂತ ಹಿರಿಯ  ಅಣು, ಜೈವಿಕ ಮತ್ತು ರಾಸಾಯನಿಕ ರಕ್ಷಣಾ ಪಡೆಗಳ ಮುಖ್ಯಸ್ಥ ಹತ್ಯೆ: ...

ರ‍ಷ್ಯಾ ಸೇನೆಯ ಅತ್ಯಂತ ಹಿರಿಯ  ಅಣು, ಜೈವಿಕ ಮತ್ತು ರಾಸಾಯನಿಕ ರಕ್ಷಣಾ ಪಡೆಗಳ ಮುಖ್ಯಸ್ಥ ಹತ್ಯೆ:  ಉಕ್ರೇನ್ ಕೈವಾಡ ಶಂಕೆ

- Advertisement -
- Advertisement -

ಮಾಸ್ಕೋ: ಎಲೆಕ್ಟ್ರಿಕ್ ಸ್ಕೂಟರ್‌ನಲ್ಲಿ ಬಚ್ಚಿಟ್ಟಿದ್ದ ಬಾಂಬ್‌ ಸ್ಫೋಟದಿಂದ ಮಾಸ್ಕೋದಲ್ಲಿ ಪರಮಾಣು ರಕ್ಷಣಾ ಪಡೆಗಳ ಮುಖ್ಯಸ್ಥರಾಗಿದ್ದ ರಷ್ಯಾದ ಹಿರಿಯ ಜನರಲ್ ಲೆಫ್ಟಿನೆಂಟ್ ಜನರಲ್ ಇಗೊರ್ ಕಿರಿಲ್ಲೋವ್ ಇಂದು (ಮಂಗಳವಾರ) ಮೃತಪಟ್ಟಿದ್ದಾರೆ.

ರಷ್ಯಾದ ಪರಮಾಣು, ಜೈವಿಕ ಮತ್ತು ರಾಸಾಯನಿಕ ಸಂರಕ್ಷಣಾ ಪಡೆಗಳ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ಇಗೊರ್ ಕಿರಿಲ್ಲೋವ್ ಅವರು ಕ್ರೆಮ್ಲಿನ್‌ನಿಂದ ಆಗ್ನೇಯಕ್ಕೆ 7 ಕಿ.ಮೀ ದೂರದಲ್ಲಿರುವ ರಿಯಾಜಾನ್ಸ್ಕಿ ಪ್ರಾಸ್ಪೆಕ್ಟ್‌ನಲ್ಲಿರುವ ಅಪಾರ್ಟ್​ಮೆಂಟ್ ಕಟ್ಟಡದ ಬಳಿ ಬಾಂಬ್ ದಾಳಿಯಿಂದ ಮೃತರಾಗಿದ್ದಾರೆ.

ಜನರಲ್ ಕಿರಿಲ್ಲೋವ್ ಅವರ ಸಹಾಯಕ ಸಹ ಈ ಸ್ಫೋಟದಲ್ಲಿ ಸಾವನ್ನಪ್ಪಿದ್ದಾರೆ. ಇಬ್ಬರ ಸಾವಿನ ಕುರಿತು ತನಿಖೆ ಆರಂಭವಾಗಿದೆ. ತನಿಖಾಧಿಕಾರಿಗಳು, ವಿಧಿ ವಿಜ್ಞಾನ ತಂಡದ ತಜ್ಞರು ಸ್ಥಳದಲ್ಲಿ ಶೋಧ ನಡೆಸಿದ್ದಾರೆ.  ಸ್ಫೋಟಕ ಇರಿಸಿದವರ ಪತ್ತೆಗೆ ವ್ಯಾಪಕ ಶೋಧ ಕಾರ್ಯ ಆರಂಭಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಕಿರಿಲ್ಲೋವ್  ಅವರು ಉಕ್ರೇನ್  ವಿರುದ್ಧದ ಯುದ್ಧ ಆರಂಭವಾದ ಬಳಿಕ ಹತ್ಯೆಯಾದ ರಷ್ಯಾದ ಅತ್ಯಂತ ಹಿರಿಯ ಸೇನಾಧಿಕಾರಿ ಆಗಿದ್ದಾರೆ. ಉಕ್ರೇನ್ ಯುದ್ಧದಲ್ಲಿ  ರಷ್ಯಾ ಸಾಧಿಸಿರುವ ಯಶಸ್ಸಿನ ಬಗ್ಗೆ ಅಧ್ಯಕ್ಷ  ವ್ಲಾದಿಮಿರ್ ಪುಟಿನ್ ಅವರು ಹೆಮ್ಮೆಯ ಮಾತಗಳನ್ನಾಡಿದ ಮರುದಿನ ಈ ಬೆಳವಣಿಗೆ ನಡೆದಿದೆ. 54 ವರ್ಷದ  ಕಿರಿಲ್ಲೋವ್ ಅವರು ವಸತಿ ಸಮುಚ್ಚಯದಲ್ಲಿರುವ ತಮ್ಮ ಮನೆಯಿಂದ ಕಚೇರಿಗೆ ಹೊರಟಿದ್ದ ಸಂದರ್ಭದಲ್ಲಿ ಸ್ಫೋಟ ಸಂಭವಿಸಿದೆ.

ರಿಮೋಟ್‌ನಿಂದ ಸ್ಫೋಟಿಸಲಾದ ಸ್ಫೋಟಕ ಸಾಧನದ ಶಕ್ತಿಯು ಸುಮಾರು 300 ಗ್ರಾಂ ಟಿಎನ್‌ಟಿಯಷ್ಟಿದೆ ಎಂದು ರಷ್ಯಾದ ಸುದ್ದಿ ಸಂಸ್ಥೆ ಟಿಎಎಸ್​ಎಸ್​ ವರದಿ ಮಾಡಿದೆ.

ಉಕ್ರೇನ್ ವಿರುದ್ಧದ ಯುದ್ಧದಲ್ಲಿ ನಿಷೇಧಿತ ರಾಸಾಯನಿಕ ಶಸ್ತ್ರಾಸ್ತ್ರಗಳನ್ನು ಬಳಸಿದ್ದಕ್ಕಾಗಿ ಉಕ್ರೇನಿಯನ್ ಕೋರ್ಟ್​ ಜನರಲ್‌ ಕಿರಿಲ್ಲೋವ್​ ಅವರಿಗೆ ಗೈರುಹಾಜರಾಗಿದ್ದಕ್ಕೆ ಶಿಕ್ಷೆ ವಿಧಿಸಿತ್ತು. ಅದಾದ ಒಂದು ದಿನದ ನಂತರ ಕಿರಿಲ್ಲೋವ್ ಅವರ ಸಾವು ಸಂಭವಿಸಿದೆ. ಉಕ್ರೇನ್‌ನ ಭದ್ರತಾ ಸೇವೆಯ ಪ್ರಕಾರ, ಯುದ್ಧದ ಆರಂಭದಿಂದಲೂ ಕಿರಿಲ್ಲೋವ್ ಅವರ ಆದೇಶದ ಮೇರೆಗೆ ರಷ್ಯಾದ ರಾಸಾಯನಿಕ ಯುದ್ಧಸಾಮಗ್ರಿಗಳ ಬಳಕೆಯ 4,800 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.

ಕಿರಿಲ್ಲೋವ್ ಅವರ ಹತ್ಯೆಯ ಹಿಂದೆ ಉಕ್ರೇನ್ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ. ಇದು ತನ್ನ ವಿಶೇಷ ಕಾರ್ಯಾಚರಣೆ ಎಂದು ಉಕ್ರೇನ್‌ನ ಭದ್ರತೆ ಮತ್ತು ಗುಪ್ತಚರ ಸಂಸ್ಥೆ ಎಸ್‌ಬಿಯು ಹೇಳಿರುವುದಾಗಿ ಉಕ್ರೇನ್‌ನ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಕಿರಿಲ್ಲೋವ್ ಯುದ್ಧಾಪರಾಧಿಯಾಗಿದ್ದು, ಕಾನೂನಿನ ಪ್ರಕಾರವೆ ಅವರನ್ನು ಗುರಿಯಾಗಿಸಲಾಗಿದೆ. ಏಕೆಂದರೆ, ಉಕ್ರೇನ್ ಸೇನೆಯ ವಿರುದ್ಧ ರಾಸಾಯನಿಕ ಅಸ್ತ್ರಗಳನ್ನು ಬಳಸುವಂತೆ ಅವರು ರಷ್ಯಾ ಸೇನೆಗೆ ಆದೇಶಿಸಿದ್ದು, ಉಕ್ರೇನ್‌ನ ಜನರನ್ನು ಕೊಲ್ಲುವ  ಎಲ್ಲರಿಗೂ ಇಂತಹ ಅಪಮಾನಕರ ಅಂತ್ಯ ಕಾದು ಕುಳಿತಿದೆ. ಯುದ್ಧಾಪರಾಧಿಗಳ ವಿರುದ್ಧ ಪ್ರತೀಕಾರ ತೀರಿಸುವುದು ಅನಿವಾರ್ಯವಾಗಿದೆ ಎಂದಿದ್ದಾರೆ.

2022ರ ಫೆಬ್ರವರಿಯಲ್ಲಿ ಆರಂಭಗೊಂಡ ಉಕ್ರೇನ್ ಯುದ್ಧದಲ್ಲಿ ರಷ್ಯಾ ನಡೆಸಿದ ಸೇನಾ ಕಾರ್ಯಾಚರಣೆಗಳಲ್ಲಿ ಕಿರಿಲ್ಲೋವ್ ಅವರು ನಿಷೇಧಿತ  ರಾಸಾಯನಿಕ ಶಸ್ತ್ರಾಸ್ತ್ರಗಳನ್ನು ಬಳಸಿದ್ದಾರೆಂದು ಉಕ್ರೇನ್‌ನ ಭದ್ರತಾ ಸೇವಾ ಏಜೆನ್ಸಿ ಸೋಮವಾರ ಅಪಾದಿಸಿತ್ತು. 2022ರ ಫೆಬ್ರವರಿ ತಿಂಗಳಿನಿಂದೀಚೆಗೆ ರಷ್ಯಾವು ಉಕ್ರೇನ್ ಯುದ್ದರಂಗದಲ್ಲಿ 4,800ಕ್ಕೂ ಅಧಿಕ ರಾಸಾಯನಿಕ ಶಸ್ತ್ರಾಸ್ತ್ರಗಳನ್ನು ಅದರಲ್ಲೂ ವಿಶೇಷವಾಗಿ ಕೆ-1 ಮಾದರಿಯ ಯುದ್ಧ ಗ್ರೇನೆಡ್‌ಗಳನ್ನು ಬಳಸಿರುವುದನ್ನು ಉಕ್ರೇನ್ ಭದ್ರತಾ ಸೇವೆಯು ದಾಖಲಿಸಿಕೊಂಡಿದೆ.

ಮೊದಲನೇ ಮಹಾಯುದ್ಧದಲ್ಲಿ ಬಳಕೆ ಮಾಡಲಾಗಿದ್ದ ರಾಸಾಯನಿಕ ಅಸ್ತ್ರವಾದ ಕ್ಲೊರೊಪಿಕ್ರಿನ್ ನನ್ನು ರಷ್ಯಾವು  ಉಕ್ರೇನ್‌ ವಿರುದ್ಧ  ಪ್ರಯೋಗಿಸಿರುವುದನ್ನು ತಾನು ದಾಖಲಿಸಿಕೊಂಡಿರುವುದಾಗಿ ಅಮೆರಿಕದ ವಿದೇಶಾಂಗ ಇಲಾಖೆಯು ಈ ವರ್ಷದ ಮೇ ತಿಂಗಳಿನಲ್ಲಿ ತಿಳಿಸಿತ್ತು.

ಉಕ್ರೇನ್‌ ನಲ್ಲಿ ರಷ್ಯಾ ನಡೆಸಿದ ಸೇನಾ ಕಾರ್ಯಾಚಣೆಯಲ್ಲಿ ನಿಷೇಧಿತ ರಾಸಾಯನಿಕ ಶಸ್ತ್ರಾಸ್ತ್ರಗಳನ್ನು ಬಳಕೆಗಾಗಿ ಕಿರಿಲ್ಲೋವ್ ಅವರು ಅಪರಾಧಿಯೆಂದು ಉಕ್ರೇನ್‌ನ ನ್ಯಾಯಾಲಯ ಡಿ.16ರಂದು ಅವರ ಅನುಪಸ್ಥಿತಿಯಲ್ಲಿ ತೀರ್ಪು ನೀಡಿತ್ತು.

ಕಿರಿಲ್ಲೋವ್ ಉಕ್ರೇನ್‌ ಯುದ್ಧದಲ್ಲಿ ಅವರು ವಹಿಸಿದ್ದ ಪಾತ್ರಕ್ಕಾಗಿ ಅವರ ವಿರುದ್ಧ ಬ್ರಿಟನ್, ಕೆನಡಾ ಸೇರಿದಂತೆ ವಿವಿಧ ದೇಶಗಳು ನಿರ್ಬಂಧ ಹೇರಿದ್ದವು. ಈಗಾಗಲೇ  ಉಕ್ರೇನ್‌ನ ಐದನೇ ಒಂದು ಭಾಗದಷ್ಟು ಭೂಪ್ರದೇಶವನ್ನು ರಶ್ಯವು  ಸ್ವಾಧೀನಪಡಿಸಿಕೊಂಡಿದೆ.

ಇದನ್ನೂ ಓದಿ…‘ಮನರೇಗಾ ಪಾವತಿಗಳಿಗೆ ಆಧಾರ್ ಜೋಡಣೆ ಕಡ್ಡಾಯಗೊಳಿಸಬಾರದು..’; ಸಂಸದೀಯ ಸಮಿತಿಯು ಶಿಫಾರಸು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟೋಲ್ ಪ್ಲಾಜಾಗಳಲ್ಲಿನ ಅಶುಚಿತ್ವ ಶೌಚಾಲಯಗಳ ಬಗ್ಗೆ ವರದಿ ಮಾಡಿದರೆ ಬಹುಮಾನ: ಕೇಂದ್ರ ಸರ್ಕಾರ

ರಾಷ್ಟ್ರೀಯ ಹೆದ್ದಾರಿಗಳಲ್ಲಿನ ನೈರ್ಮಲ್ಯದ ಬಗ್ಗೆ ದೀರ್ಘಕಾಲದ ಕಳವಳಗಳನ್ನು ಪರಿಹರಿಸುವ ಪ್ರಯತ್ನದಲ್ಲಿ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (MoRTH) ಟೋಲ್ ಪ್ಲಾಜಾಗಳಲ್ಲಿ ಅಶುಚಿಯಾದ ಶೌಚಾಲಯ ಸೌಲಭ್ಯಗಳ ಬಗ್ಗೆ ವರದಿ ಮಾಡಲು ಪ್ರಯಾಣಿಕರನ್ನು ಪ್ರೋತ್ಸಾಹಿಸುವ...

ಮಣಿಪುರ: ಬಾಂಬ್ ದಾಳಿಗೆ ಇಬ್ಬರು ಮಕ್ಕಳು ಬಲಿ; ಕುಕಿ ದಂಗೆಕೋರರಿಂದ ದಾಳಿ ಆರೋಪ; ಇದು ಅನಾಗರಿಕ ಕೃತ್ಯ ಎಂದ ಸಿಎಂ 

ಗುವಾಹಟಿ: ಮಣಿಪುರದ ಮೈತೇಯಿ ಪ್ರಾಬಲ್ಯದ ಬಿಷ್ಣುಪುರ ಜಿಲ್ಲೆಯಲ್ಲಿ ಮಂಗಳವಾರ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಘಟನೆಯಲ್ಲಿ ಐದು ತಿಂಗಳ ಗಂಡು ಮಗು ಸೇರಿದಂತೆ ಇಬ್ಬರು ಅಪ್ರಾಪ್ತ ವಯಸ್ಕರು ಸಾವನ್ನಪ್ಪಿರುವ ಘಟನೆ ನಡೆದಿದೆ.  ಮೊಯಿರಾಂಗ್...

ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ವಿಪಕ್ಷಗಳಿಂದ ನೋಟಿಸ್‌ : ಕಾರಣ ನೀಡದೆ ತಿರಸ್ಕರಿಸಿದ ಸಂಸತ್ತಿನ ಉಭಯ ಸದನಗಳ ಮುಖ್ಯಸ್ಥರು-ವರದಿ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸಲು ವಿಪಕ್ಷ ಸಂಸದರು ಸಲ್ಲಿಸಿದ್ದ ನಿಲುವಳಿ ನೋಟಿಸ್ ಅನ್ನು ರಾಜ್ಯಸಭಾ ಅಧ್ಯಕ್ಷ ಸಿ.ಪಿ. ರಾಧಾಕೃಷ್ಣನ್ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ತಿರಸ್ಕರಿಸಿದ್ದಾರೆ. ಉಭಯ...

ಎನ್‌ಸಿಪಿ ನಾಯಕನ ಕೊಲೆ ಪ್ರಕರಣ : ಛತ್ತೀಸ್‌ಗಢ ಮಾಜಿ ಸಿಎಂ ಅಜಿತ್ ಜೋಗಿ ಮಗ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ

2003ರ ಕೊಲೆ ಪ್ರಕರಣದಲ್ಲಿ ಛತ್ತೀಸ್‌ಗಢ ಹೈಕೋರ್ಟ್ ಮಾಜಿ ಮುಖ್ಯಮಂತ್ರಿ ಅಜಿತ್ ಜೋಗಿ ಅವರ ಪುತ್ರ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ದಿ ಹಿಂದೂ ಸೋಮವಾರ (ಏ.6) ವರದಿ ಮಾಡಿದೆ. ರಾಷ್ಟ್ರೀಯವಾದಿ ಕಾಂಗ್ರೆಸ್...

ಪ. ಬಂಗಾಳ | ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಸೂಕ್ತ ಕಾರಣ ನೀಡದ ಚುನಾವಣಾ ಆಯೋಗ : ಕಾಂಗ್ರೆಸ್ ಅಭ್ಯರ್ಥಿ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲ್ಪಟ್ಟವರ ಅರ್ಜಿಗಳ ವಿಚಾರಣೆಗಾಗಿ ಕೋಲ್ಕತ್ತಾದಲ್ಲಿ ಸ್ಥಾಪಿಸಲಾದ ಮೇಲ್ಮನವಿ ನ್ಯಾಯಮಂಡಳಿಯು, ಮುಂಬರುವ ವಿಧಾನಸಭಾ ಚುನಾವಣೆಯ ಫರಕ್ಕಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊತಾಬ್ ಶೇಖ್ ಅವರ ಹೆಸರನ್ನು ಭಾನುವಾರ...

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...