Homeಅಂತರಾಷ್ಟ್ರೀಯರ‍ಷ್ಯಾ ಸೇನೆಯ ಅತ್ಯಂತ ಹಿರಿಯ  ಅಣು, ಜೈವಿಕ ಮತ್ತು ರಾಸಾಯನಿಕ ರಕ್ಷಣಾ ಪಡೆಗಳ ಮುಖ್ಯಸ್ಥ ಹತ್ಯೆ: ...

ರ‍ಷ್ಯಾ ಸೇನೆಯ ಅತ್ಯಂತ ಹಿರಿಯ  ಅಣು, ಜೈವಿಕ ಮತ್ತು ರಾಸಾಯನಿಕ ರಕ್ಷಣಾ ಪಡೆಗಳ ಮುಖ್ಯಸ್ಥ ಹತ್ಯೆ:  ಉಕ್ರೇನ್ ಕೈವಾಡ ಶಂಕೆ

- Advertisement -
- Advertisement -

ಮಾಸ್ಕೋ: ಎಲೆಕ್ಟ್ರಿಕ್ ಸ್ಕೂಟರ್‌ನಲ್ಲಿ ಬಚ್ಚಿಟ್ಟಿದ್ದ ಬಾಂಬ್‌ ಸ್ಫೋಟದಿಂದ ಮಾಸ್ಕೋದಲ್ಲಿ ಪರಮಾಣು ರಕ್ಷಣಾ ಪಡೆಗಳ ಮುಖ್ಯಸ್ಥರಾಗಿದ್ದ ರಷ್ಯಾದ ಹಿರಿಯ ಜನರಲ್ ಲೆಫ್ಟಿನೆಂಟ್ ಜನರಲ್ ಇಗೊರ್ ಕಿರಿಲ್ಲೋವ್ ಇಂದು (ಮಂಗಳವಾರ) ಮೃತಪಟ್ಟಿದ್ದಾರೆ.

ರಷ್ಯಾದ ಪರಮಾಣು, ಜೈವಿಕ ಮತ್ತು ರಾಸಾಯನಿಕ ಸಂರಕ್ಷಣಾ ಪಡೆಗಳ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ಇಗೊರ್ ಕಿರಿಲ್ಲೋವ್ ಅವರು ಕ್ರೆಮ್ಲಿನ್‌ನಿಂದ ಆಗ್ನೇಯಕ್ಕೆ 7 ಕಿ.ಮೀ ದೂರದಲ್ಲಿರುವ ರಿಯಾಜಾನ್ಸ್ಕಿ ಪ್ರಾಸ್ಪೆಕ್ಟ್‌ನಲ್ಲಿರುವ ಅಪಾರ್ಟ್​ಮೆಂಟ್ ಕಟ್ಟಡದ ಬಳಿ ಬಾಂಬ್ ದಾಳಿಯಿಂದ ಮೃತರಾಗಿದ್ದಾರೆ.

ಜನರಲ್ ಕಿರಿಲ್ಲೋವ್ ಅವರ ಸಹಾಯಕ ಸಹ ಈ ಸ್ಫೋಟದಲ್ಲಿ ಸಾವನ್ನಪ್ಪಿದ್ದಾರೆ. ಇಬ್ಬರ ಸಾವಿನ ಕುರಿತು ತನಿಖೆ ಆರಂಭವಾಗಿದೆ. ತನಿಖಾಧಿಕಾರಿಗಳು, ವಿಧಿ ವಿಜ್ಞಾನ ತಂಡದ ತಜ್ಞರು ಸ್ಥಳದಲ್ಲಿ ಶೋಧ ನಡೆಸಿದ್ದಾರೆ.  ಸ್ಫೋಟಕ ಇರಿಸಿದವರ ಪತ್ತೆಗೆ ವ್ಯಾಪಕ ಶೋಧ ಕಾರ್ಯ ಆರಂಭಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಕಿರಿಲ್ಲೋವ್  ಅವರು ಉಕ್ರೇನ್  ವಿರುದ್ಧದ ಯುದ್ಧ ಆರಂಭವಾದ ಬಳಿಕ ಹತ್ಯೆಯಾದ ರಷ್ಯಾದ ಅತ್ಯಂತ ಹಿರಿಯ ಸೇನಾಧಿಕಾರಿ ಆಗಿದ್ದಾರೆ. ಉಕ್ರೇನ್ ಯುದ್ಧದಲ್ಲಿ  ರಷ್ಯಾ ಸಾಧಿಸಿರುವ ಯಶಸ್ಸಿನ ಬಗ್ಗೆ ಅಧ್ಯಕ್ಷ  ವ್ಲಾದಿಮಿರ್ ಪುಟಿನ್ ಅವರು ಹೆಮ್ಮೆಯ ಮಾತಗಳನ್ನಾಡಿದ ಮರುದಿನ ಈ ಬೆಳವಣಿಗೆ ನಡೆದಿದೆ. 54 ವರ್ಷದ  ಕಿರಿಲ್ಲೋವ್ ಅವರು ವಸತಿ ಸಮುಚ್ಚಯದಲ್ಲಿರುವ ತಮ್ಮ ಮನೆಯಿಂದ ಕಚೇರಿಗೆ ಹೊರಟಿದ್ದ ಸಂದರ್ಭದಲ್ಲಿ ಸ್ಫೋಟ ಸಂಭವಿಸಿದೆ.

ರಿಮೋಟ್‌ನಿಂದ ಸ್ಫೋಟಿಸಲಾದ ಸ್ಫೋಟಕ ಸಾಧನದ ಶಕ್ತಿಯು ಸುಮಾರು 300 ಗ್ರಾಂ ಟಿಎನ್‌ಟಿಯಷ್ಟಿದೆ ಎಂದು ರಷ್ಯಾದ ಸುದ್ದಿ ಸಂಸ್ಥೆ ಟಿಎಎಸ್​ಎಸ್​ ವರದಿ ಮಾಡಿದೆ.

ಉಕ್ರೇನ್ ವಿರುದ್ಧದ ಯುದ್ಧದಲ್ಲಿ ನಿಷೇಧಿತ ರಾಸಾಯನಿಕ ಶಸ್ತ್ರಾಸ್ತ್ರಗಳನ್ನು ಬಳಸಿದ್ದಕ್ಕಾಗಿ ಉಕ್ರೇನಿಯನ್ ಕೋರ್ಟ್​ ಜನರಲ್‌ ಕಿರಿಲ್ಲೋವ್​ ಅವರಿಗೆ ಗೈರುಹಾಜರಾಗಿದ್ದಕ್ಕೆ ಶಿಕ್ಷೆ ವಿಧಿಸಿತ್ತು. ಅದಾದ ಒಂದು ದಿನದ ನಂತರ ಕಿರಿಲ್ಲೋವ್ ಅವರ ಸಾವು ಸಂಭವಿಸಿದೆ. ಉಕ್ರೇನ್‌ನ ಭದ್ರತಾ ಸೇವೆಯ ಪ್ರಕಾರ, ಯುದ್ಧದ ಆರಂಭದಿಂದಲೂ ಕಿರಿಲ್ಲೋವ್ ಅವರ ಆದೇಶದ ಮೇರೆಗೆ ರಷ್ಯಾದ ರಾಸಾಯನಿಕ ಯುದ್ಧಸಾಮಗ್ರಿಗಳ ಬಳಕೆಯ 4,800 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.

ಕಿರಿಲ್ಲೋವ್ ಅವರ ಹತ್ಯೆಯ ಹಿಂದೆ ಉಕ್ರೇನ್ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ. ಇದು ತನ್ನ ವಿಶೇಷ ಕಾರ್ಯಾಚರಣೆ ಎಂದು ಉಕ್ರೇನ್‌ನ ಭದ್ರತೆ ಮತ್ತು ಗುಪ್ತಚರ ಸಂಸ್ಥೆ ಎಸ್‌ಬಿಯು ಹೇಳಿರುವುದಾಗಿ ಉಕ್ರೇನ್‌ನ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಕಿರಿಲ್ಲೋವ್ ಯುದ್ಧಾಪರಾಧಿಯಾಗಿದ್ದು, ಕಾನೂನಿನ ಪ್ರಕಾರವೆ ಅವರನ್ನು ಗುರಿಯಾಗಿಸಲಾಗಿದೆ. ಏಕೆಂದರೆ, ಉಕ್ರೇನ್ ಸೇನೆಯ ವಿರುದ್ಧ ರಾಸಾಯನಿಕ ಅಸ್ತ್ರಗಳನ್ನು ಬಳಸುವಂತೆ ಅವರು ರಷ್ಯಾ ಸೇನೆಗೆ ಆದೇಶಿಸಿದ್ದು, ಉಕ್ರೇನ್‌ನ ಜನರನ್ನು ಕೊಲ್ಲುವ  ಎಲ್ಲರಿಗೂ ಇಂತಹ ಅಪಮಾನಕರ ಅಂತ್ಯ ಕಾದು ಕುಳಿತಿದೆ. ಯುದ್ಧಾಪರಾಧಿಗಳ ವಿರುದ್ಧ ಪ್ರತೀಕಾರ ತೀರಿಸುವುದು ಅನಿವಾರ್ಯವಾಗಿದೆ ಎಂದಿದ್ದಾರೆ.

2022ರ ಫೆಬ್ರವರಿಯಲ್ಲಿ ಆರಂಭಗೊಂಡ ಉಕ್ರೇನ್ ಯುದ್ಧದಲ್ಲಿ ರಷ್ಯಾ ನಡೆಸಿದ ಸೇನಾ ಕಾರ್ಯಾಚರಣೆಗಳಲ್ಲಿ ಕಿರಿಲ್ಲೋವ್ ಅವರು ನಿಷೇಧಿತ  ರಾಸಾಯನಿಕ ಶಸ್ತ್ರಾಸ್ತ್ರಗಳನ್ನು ಬಳಸಿದ್ದಾರೆಂದು ಉಕ್ರೇನ್‌ನ ಭದ್ರತಾ ಸೇವಾ ಏಜೆನ್ಸಿ ಸೋಮವಾರ ಅಪಾದಿಸಿತ್ತು. 2022ರ ಫೆಬ್ರವರಿ ತಿಂಗಳಿನಿಂದೀಚೆಗೆ ರಷ್ಯಾವು ಉಕ್ರೇನ್ ಯುದ್ದರಂಗದಲ್ಲಿ 4,800ಕ್ಕೂ ಅಧಿಕ ರಾಸಾಯನಿಕ ಶಸ್ತ್ರಾಸ್ತ್ರಗಳನ್ನು ಅದರಲ್ಲೂ ವಿಶೇಷವಾಗಿ ಕೆ-1 ಮಾದರಿಯ ಯುದ್ಧ ಗ್ರೇನೆಡ್‌ಗಳನ್ನು ಬಳಸಿರುವುದನ್ನು ಉಕ್ರೇನ್ ಭದ್ರತಾ ಸೇವೆಯು ದಾಖಲಿಸಿಕೊಂಡಿದೆ.

ಮೊದಲನೇ ಮಹಾಯುದ್ಧದಲ್ಲಿ ಬಳಕೆ ಮಾಡಲಾಗಿದ್ದ ರಾಸಾಯನಿಕ ಅಸ್ತ್ರವಾದ ಕ್ಲೊರೊಪಿಕ್ರಿನ್ ನನ್ನು ರಷ್ಯಾವು  ಉಕ್ರೇನ್‌ ವಿರುದ್ಧ  ಪ್ರಯೋಗಿಸಿರುವುದನ್ನು ತಾನು ದಾಖಲಿಸಿಕೊಂಡಿರುವುದಾಗಿ ಅಮೆರಿಕದ ವಿದೇಶಾಂಗ ಇಲಾಖೆಯು ಈ ವರ್ಷದ ಮೇ ತಿಂಗಳಿನಲ್ಲಿ ತಿಳಿಸಿತ್ತು.

ಉಕ್ರೇನ್‌ ನಲ್ಲಿ ರಷ್ಯಾ ನಡೆಸಿದ ಸೇನಾ ಕಾರ್ಯಾಚಣೆಯಲ್ಲಿ ನಿಷೇಧಿತ ರಾಸಾಯನಿಕ ಶಸ್ತ್ರಾಸ್ತ್ರಗಳನ್ನು ಬಳಕೆಗಾಗಿ ಕಿರಿಲ್ಲೋವ್ ಅವರು ಅಪರಾಧಿಯೆಂದು ಉಕ್ರೇನ್‌ನ ನ್ಯಾಯಾಲಯ ಡಿ.16ರಂದು ಅವರ ಅನುಪಸ್ಥಿತಿಯಲ್ಲಿ ತೀರ್ಪು ನೀಡಿತ್ತು.

ಕಿರಿಲ್ಲೋವ್ ಉಕ್ರೇನ್‌ ಯುದ್ಧದಲ್ಲಿ ಅವರು ವಹಿಸಿದ್ದ ಪಾತ್ರಕ್ಕಾಗಿ ಅವರ ವಿರುದ್ಧ ಬ್ರಿಟನ್, ಕೆನಡಾ ಸೇರಿದಂತೆ ವಿವಿಧ ದೇಶಗಳು ನಿರ್ಬಂಧ ಹೇರಿದ್ದವು. ಈಗಾಗಲೇ  ಉಕ್ರೇನ್‌ನ ಐದನೇ ಒಂದು ಭಾಗದಷ್ಟು ಭೂಪ್ರದೇಶವನ್ನು ರಶ್ಯವು  ಸ್ವಾಧೀನಪಡಿಸಿಕೊಂಡಿದೆ.

ಇದನ್ನೂ ಓದಿ…‘ಮನರೇಗಾ ಪಾವತಿಗಳಿಗೆ ಆಧಾರ್ ಜೋಡಣೆ ಕಡ್ಡಾಯಗೊಳಿಸಬಾರದು..’; ಸಂಸದೀಯ ಸಮಿತಿಯು ಶಿಫಾರಸು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...