Homeಅಂತರಾಷ್ಟ್ರೀಯರ‍ಷ್ಯಾ ಸೇನೆಯ ಅತ್ಯಂತ ಹಿರಿಯ  ಅಣು, ಜೈವಿಕ ಮತ್ತು ರಾಸಾಯನಿಕ ರಕ್ಷಣಾ ಪಡೆಗಳ ಮುಖ್ಯಸ್ಥ ಹತ್ಯೆ: ...

ರ‍ಷ್ಯಾ ಸೇನೆಯ ಅತ್ಯಂತ ಹಿರಿಯ  ಅಣು, ಜೈವಿಕ ಮತ್ತು ರಾಸಾಯನಿಕ ರಕ್ಷಣಾ ಪಡೆಗಳ ಮುಖ್ಯಸ್ಥ ಹತ್ಯೆ:  ಉಕ್ರೇನ್ ಕೈವಾಡ ಶಂಕೆ

- Advertisement -
- Advertisement -

ಮಾಸ್ಕೋ: ಎಲೆಕ್ಟ್ರಿಕ್ ಸ್ಕೂಟರ್‌ನಲ್ಲಿ ಬಚ್ಚಿಟ್ಟಿದ್ದ ಬಾಂಬ್‌ ಸ್ಫೋಟದಿಂದ ಮಾಸ್ಕೋದಲ್ಲಿ ಪರಮಾಣು ರಕ್ಷಣಾ ಪಡೆಗಳ ಮುಖ್ಯಸ್ಥರಾಗಿದ್ದ ರಷ್ಯಾದ ಹಿರಿಯ ಜನರಲ್ ಲೆಫ್ಟಿನೆಂಟ್ ಜನರಲ್ ಇಗೊರ್ ಕಿರಿಲ್ಲೋವ್ ಇಂದು (ಮಂಗಳವಾರ) ಮೃತಪಟ್ಟಿದ್ದಾರೆ.

ರಷ್ಯಾದ ಪರಮಾಣು, ಜೈವಿಕ ಮತ್ತು ರಾಸಾಯನಿಕ ಸಂರಕ್ಷಣಾ ಪಡೆಗಳ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ಇಗೊರ್ ಕಿರಿಲ್ಲೋವ್ ಅವರು ಕ್ರೆಮ್ಲಿನ್‌ನಿಂದ ಆಗ್ನೇಯಕ್ಕೆ 7 ಕಿ.ಮೀ ದೂರದಲ್ಲಿರುವ ರಿಯಾಜಾನ್ಸ್ಕಿ ಪ್ರಾಸ್ಪೆಕ್ಟ್‌ನಲ್ಲಿರುವ ಅಪಾರ್ಟ್​ಮೆಂಟ್ ಕಟ್ಟಡದ ಬಳಿ ಬಾಂಬ್ ದಾಳಿಯಿಂದ ಮೃತರಾಗಿದ್ದಾರೆ.

ಜನರಲ್ ಕಿರಿಲ್ಲೋವ್ ಅವರ ಸಹಾಯಕ ಸಹ ಈ ಸ್ಫೋಟದಲ್ಲಿ ಸಾವನ್ನಪ್ಪಿದ್ದಾರೆ. ಇಬ್ಬರ ಸಾವಿನ ಕುರಿತು ತನಿಖೆ ಆರಂಭವಾಗಿದೆ. ತನಿಖಾಧಿಕಾರಿಗಳು, ವಿಧಿ ವಿಜ್ಞಾನ ತಂಡದ ತಜ್ಞರು ಸ್ಥಳದಲ್ಲಿ ಶೋಧ ನಡೆಸಿದ್ದಾರೆ.  ಸ್ಫೋಟಕ ಇರಿಸಿದವರ ಪತ್ತೆಗೆ ವ್ಯಾಪಕ ಶೋಧ ಕಾರ್ಯ ಆರಂಭಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಕಿರಿಲ್ಲೋವ್  ಅವರು ಉಕ್ರೇನ್  ವಿರುದ್ಧದ ಯುದ್ಧ ಆರಂಭವಾದ ಬಳಿಕ ಹತ್ಯೆಯಾದ ರಷ್ಯಾದ ಅತ್ಯಂತ ಹಿರಿಯ ಸೇನಾಧಿಕಾರಿ ಆಗಿದ್ದಾರೆ. ಉಕ್ರೇನ್ ಯುದ್ಧದಲ್ಲಿ  ರಷ್ಯಾ ಸಾಧಿಸಿರುವ ಯಶಸ್ಸಿನ ಬಗ್ಗೆ ಅಧ್ಯಕ್ಷ  ವ್ಲಾದಿಮಿರ್ ಪುಟಿನ್ ಅವರು ಹೆಮ್ಮೆಯ ಮಾತಗಳನ್ನಾಡಿದ ಮರುದಿನ ಈ ಬೆಳವಣಿಗೆ ನಡೆದಿದೆ. 54 ವರ್ಷದ  ಕಿರಿಲ್ಲೋವ್ ಅವರು ವಸತಿ ಸಮುಚ್ಚಯದಲ್ಲಿರುವ ತಮ್ಮ ಮನೆಯಿಂದ ಕಚೇರಿಗೆ ಹೊರಟಿದ್ದ ಸಂದರ್ಭದಲ್ಲಿ ಸ್ಫೋಟ ಸಂಭವಿಸಿದೆ.

ರಿಮೋಟ್‌ನಿಂದ ಸ್ಫೋಟಿಸಲಾದ ಸ್ಫೋಟಕ ಸಾಧನದ ಶಕ್ತಿಯು ಸುಮಾರು 300 ಗ್ರಾಂ ಟಿಎನ್‌ಟಿಯಷ್ಟಿದೆ ಎಂದು ರಷ್ಯಾದ ಸುದ್ದಿ ಸಂಸ್ಥೆ ಟಿಎಎಸ್​ಎಸ್​ ವರದಿ ಮಾಡಿದೆ.

ಉಕ್ರೇನ್ ವಿರುದ್ಧದ ಯುದ್ಧದಲ್ಲಿ ನಿಷೇಧಿತ ರಾಸಾಯನಿಕ ಶಸ್ತ್ರಾಸ್ತ್ರಗಳನ್ನು ಬಳಸಿದ್ದಕ್ಕಾಗಿ ಉಕ್ರೇನಿಯನ್ ಕೋರ್ಟ್​ ಜನರಲ್‌ ಕಿರಿಲ್ಲೋವ್​ ಅವರಿಗೆ ಗೈರುಹಾಜರಾಗಿದ್ದಕ್ಕೆ ಶಿಕ್ಷೆ ವಿಧಿಸಿತ್ತು. ಅದಾದ ಒಂದು ದಿನದ ನಂತರ ಕಿರಿಲ್ಲೋವ್ ಅವರ ಸಾವು ಸಂಭವಿಸಿದೆ. ಉಕ್ರೇನ್‌ನ ಭದ್ರತಾ ಸೇವೆಯ ಪ್ರಕಾರ, ಯುದ್ಧದ ಆರಂಭದಿಂದಲೂ ಕಿರಿಲ್ಲೋವ್ ಅವರ ಆದೇಶದ ಮೇರೆಗೆ ರಷ್ಯಾದ ರಾಸಾಯನಿಕ ಯುದ್ಧಸಾಮಗ್ರಿಗಳ ಬಳಕೆಯ 4,800 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.

ಕಿರಿಲ್ಲೋವ್ ಅವರ ಹತ್ಯೆಯ ಹಿಂದೆ ಉಕ್ರೇನ್ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ. ಇದು ತನ್ನ ವಿಶೇಷ ಕಾರ್ಯಾಚರಣೆ ಎಂದು ಉಕ್ರೇನ್‌ನ ಭದ್ರತೆ ಮತ್ತು ಗುಪ್ತಚರ ಸಂಸ್ಥೆ ಎಸ್‌ಬಿಯು ಹೇಳಿರುವುದಾಗಿ ಉಕ್ರೇನ್‌ನ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಕಿರಿಲ್ಲೋವ್ ಯುದ್ಧಾಪರಾಧಿಯಾಗಿದ್ದು, ಕಾನೂನಿನ ಪ್ರಕಾರವೆ ಅವರನ್ನು ಗುರಿಯಾಗಿಸಲಾಗಿದೆ. ಏಕೆಂದರೆ, ಉಕ್ರೇನ್ ಸೇನೆಯ ವಿರುದ್ಧ ರಾಸಾಯನಿಕ ಅಸ್ತ್ರಗಳನ್ನು ಬಳಸುವಂತೆ ಅವರು ರಷ್ಯಾ ಸೇನೆಗೆ ಆದೇಶಿಸಿದ್ದು, ಉಕ್ರೇನ್‌ನ ಜನರನ್ನು ಕೊಲ್ಲುವ  ಎಲ್ಲರಿಗೂ ಇಂತಹ ಅಪಮಾನಕರ ಅಂತ್ಯ ಕಾದು ಕುಳಿತಿದೆ. ಯುದ್ಧಾಪರಾಧಿಗಳ ವಿರುದ್ಧ ಪ್ರತೀಕಾರ ತೀರಿಸುವುದು ಅನಿವಾರ್ಯವಾಗಿದೆ ಎಂದಿದ್ದಾರೆ.

2022ರ ಫೆಬ್ರವರಿಯಲ್ಲಿ ಆರಂಭಗೊಂಡ ಉಕ್ರೇನ್ ಯುದ್ಧದಲ್ಲಿ ರಷ್ಯಾ ನಡೆಸಿದ ಸೇನಾ ಕಾರ್ಯಾಚರಣೆಗಳಲ್ಲಿ ಕಿರಿಲ್ಲೋವ್ ಅವರು ನಿಷೇಧಿತ  ರಾಸಾಯನಿಕ ಶಸ್ತ್ರಾಸ್ತ್ರಗಳನ್ನು ಬಳಸಿದ್ದಾರೆಂದು ಉಕ್ರೇನ್‌ನ ಭದ್ರತಾ ಸೇವಾ ಏಜೆನ್ಸಿ ಸೋಮವಾರ ಅಪಾದಿಸಿತ್ತು. 2022ರ ಫೆಬ್ರವರಿ ತಿಂಗಳಿನಿಂದೀಚೆಗೆ ರಷ್ಯಾವು ಉಕ್ರೇನ್ ಯುದ್ದರಂಗದಲ್ಲಿ 4,800ಕ್ಕೂ ಅಧಿಕ ರಾಸಾಯನಿಕ ಶಸ್ತ್ರಾಸ್ತ್ರಗಳನ್ನು ಅದರಲ್ಲೂ ವಿಶೇಷವಾಗಿ ಕೆ-1 ಮಾದರಿಯ ಯುದ್ಧ ಗ್ರೇನೆಡ್‌ಗಳನ್ನು ಬಳಸಿರುವುದನ್ನು ಉಕ್ರೇನ್ ಭದ್ರತಾ ಸೇವೆಯು ದಾಖಲಿಸಿಕೊಂಡಿದೆ.

ಮೊದಲನೇ ಮಹಾಯುದ್ಧದಲ್ಲಿ ಬಳಕೆ ಮಾಡಲಾಗಿದ್ದ ರಾಸಾಯನಿಕ ಅಸ್ತ್ರವಾದ ಕ್ಲೊರೊಪಿಕ್ರಿನ್ ನನ್ನು ರಷ್ಯಾವು  ಉಕ್ರೇನ್‌ ವಿರುದ್ಧ  ಪ್ರಯೋಗಿಸಿರುವುದನ್ನು ತಾನು ದಾಖಲಿಸಿಕೊಂಡಿರುವುದಾಗಿ ಅಮೆರಿಕದ ವಿದೇಶಾಂಗ ಇಲಾಖೆಯು ಈ ವರ್ಷದ ಮೇ ತಿಂಗಳಿನಲ್ಲಿ ತಿಳಿಸಿತ್ತು.

ಉಕ್ರೇನ್‌ ನಲ್ಲಿ ರಷ್ಯಾ ನಡೆಸಿದ ಸೇನಾ ಕಾರ್ಯಾಚಣೆಯಲ್ಲಿ ನಿಷೇಧಿತ ರಾಸಾಯನಿಕ ಶಸ್ತ್ರಾಸ್ತ್ರಗಳನ್ನು ಬಳಕೆಗಾಗಿ ಕಿರಿಲ್ಲೋವ್ ಅವರು ಅಪರಾಧಿಯೆಂದು ಉಕ್ರೇನ್‌ನ ನ್ಯಾಯಾಲಯ ಡಿ.16ರಂದು ಅವರ ಅನುಪಸ್ಥಿತಿಯಲ್ಲಿ ತೀರ್ಪು ನೀಡಿತ್ತು.

ಕಿರಿಲ್ಲೋವ್ ಉಕ್ರೇನ್‌ ಯುದ್ಧದಲ್ಲಿ ಅವರು ವಹಿಸಿದ್ದ ಪಾತ್ರಕ್ಕಾಗಿ ಅವರ ವಿರುದ್ಧ ಬ್ರಿಟನ್, ಕೆನಡಾ ಸೇರಿದಂತೆ ವಿವಿಧ ದೇಶಗಳು ನಿರ್ಬಂಧ ಹೇರಿದ್ದವು. ಈಗಾಗಲೇ  ಉಕ್ರೇನ್‌ನ ಐದನೇ ಒಂದು ಭಾಗದಷ್ಟು ಭೂಪ್ರದೇಶವನ್ನು ರಶ್ಯವು  ಸ್ವಾಧೀನಪಡಿಸಿಕೊಂಡಿದೆ.

ಇದನ್ನೂ ಓದಿ…‘ಮನರೇಗಾ ಪಾವತಿಗಳಿಗೆ ಆಧಾರ್ ಜೋಡಣೆ ಕಡ್ಡಾಯಗೊಳಿಸಬಾರದು..’; ಸಂಸದೀಯ ಸಮಿತಿಯು ಶಿಫಾರಸು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...