Homeಅಂತರಾಷ್ಟ್ರೀಯರ‍ಷ್ಯಾ ಸೇನೆಯ ಅತ್ಯಂತ ಹಿರಿಯ  ಅಣು, ಜೈವಿಕ ಮತ್ತು ರಾಸಾಯನಿಕ ರಕ್ಷಣಾ ಪಡೆಗಳ ಮುಖ್ಯಸ್ಥ ಹತ್ಯೆ: ...

ರ‍ಷ್ಯಾ ಸೇನೆಯ ಅತ್ಯಂತ ಹಿರಿಯ  ಅಣು, ಜೈವಿಕ ಮತ್ತು ರಾಸಾಯನಿಕ ರಕ್ಷಣಾ ಪಡೆಗಳ ಮುಖ್ಯಸ್ಥ ಹತ್ಯೆ:  ಉಕ್ರೇನ್ ಕೈವಾಡ ಶಂಕೆ

- Advertisement -
- Advertisement -

ಮಾಸ್ಕೋ: ಎಲೆಕ್ಟ್ರಿಕ್ ಸ್ಕೂಟರ್‌ನಲ್ಲಿ ಬಚ್ಚಿಟ್ಟಿದ್ದ ಬಾಂಬ್‌ ಸ್ಫೋಟದಿಂದ ಮಾಸ್ಕೋದಲ್ಲಿ ಪರಮಾಣು ರಕ್ಷಣಾ ಪಡೆಗಳ ಮುಖ್ಯಸ್ಥರಾಗಿದ್ದ ರಷ್ಯಾದ ಹಿರಿಯ ಜನರಲ್ ಲೆಫ್ಟಿನೆಂಟ್ ಜನರಲ್ ಇಗೊರ್ ಕಿರಿಲ್ಲೋವ್ ಇಂದು (ಮಂಗಳವಾರ) ಮೃತಪಟ್ಟಿದ್ದಾರೆ.

ರಷ್ಯಾದ ಪರಮಾಣು, ಜೈವಿಕ ಮತ್ತು ರಾಸಾಯನಿಕ ಸಂರಕ್ಷಣಾ ಪಡೆಗಳ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ಇಗೊರ್ ಕಿರಿಲ್ಲೋವ್ ಅವರು ಕ್ರೆಮ್ಲಿನ್‌ನಿಂದ ಆಗ್ನೇಯಕ್ಕೆ 7 ಕಿ.ಮೀ ದೂರದಲ್ಲಿರುವ ರಿಯಾಜಾನ್ಸ್ಕಿ ಪ್ರಾಸ್ಪೆಕ್ಟ್‌ನಲ್ಲಿರುವ ಅಪಾರ್ಟ್​ಮೆಂಟ್ ಕಟ್ಟಡದ ಬಳಿ ಬಾಂಬ್ ದಾಳಿಯಿಂದ ಮೃತರಾಗಿದ್ದಾರೆ.

ಜನರಲ್ ಕಿರಿಲ್ಲೋವ್ ಅವರ ಸಹಾಯಕ ಸಹ ಈ ಸ್ಫೋಟದಲ್ಲಿ ಸಾವನ್ನಪ್ಪಿದ್ದಾರೆ. ಇಬ್ಬರ ಸಾವಿನ ಕುರಿತು ತನಿಖೆ ಆರಂಭವಾಗಿದೆ. ತನಿಖಾಧಿಕಾರಿಗಳು, ವಿಧಿ ವಿಜ್ಞಾನ ತಂಡದ ತಜ್ಞರು ಸ್ಥಳದಲ್ಲಿ ಶೋಧ ನಡೆಸಿದ್ದಾರೆ.  ಸ್ಫೋಟಕ ಇರಿಸಿದವರ ಪತ್ತೆಗೆ ವ್ಯಾಪಕ ಶೋಧ ಕಾರ್ಯ ಆರಂಭಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಕಿರಿಲ್ಲೋವ್  ಅವರು ಉಕ್ರೇನ್  ವಿರುದ್ಧದ ಯುದ್ಧ ಆರಂಭವಾದ ಬಳಿಕ ಹತ್ಯೆಯಾದ ರಷ್ಯಾದ ಅತ್ಯಂತ ಹಿರಿಯ ಸೇನಾಧಿಕಾರಿ ಆಗಿದ್ದಾರೆ. ಉಕ್ರೇನ್ ಯುದ್ಧದಲ್ಲಿ  ರಷ್ಯಾ ಸಾಧಿಸಿರುವ ಯಶಸ್ಸಿನ ಬಗ್ಗೆ ಅಧ್ಯಕ್ಷ  ವ್ಲಾದಿಮಿರ್ ಪುಟಿನ್ ಅವರು ಹೆಮ್ಮೆಯ ಮಾತಗಳನ್ನಾಡಿದ ಮರುದಿನ ಈ ಬೆಳವಣಿಗೆ ನಡೆದಿದೆ. 54 ವರ್ಷದ  ಕಿರಿಲ್ಲೋವ್ ಅವರು ವಸತಿ ಸಮುಚ್ಚಯದಲ್ಲಿರುವ ತಮ್ಮ ಮನೆಯಿಂದ ಕಚೇರಿಗೆ ಹೊರಟಿದ್ದ ಸಂದರ್ಭದಲ್ಲಿ ಸ್ಫೋಟ ಸಂಭವಿಸಿದೆ.

ರಿಮೋಟ್‌ನಿಂದ ಸ್ಫೋಟಿಸಲಾದ ಸ್ಫೋಟಕ ಸಾಧನದ ಶಕ್ತಿಯು ಸುಮಾರು 300 ಗ್ರಾಂ ಟಿಎನ್‌ಟಿಯಷ್ಟಿದೆ ಎಂದು ರಷ್ಯಾದ ಸುದ್ದಿ ಸಂಸ್ಥೆ ಟಿಎಎಸ್​ಎಸ್​ ವರದಿ ಮಾಡಿದೆ.

ಉಕ್ರೇನ್ ವಿರುದ್ಧದ ಯುದ್ಧದಲ್ಲಿ ನಿಷೇಧಿತ ರಾಸಾಯನಿಕ ಶಸ್ತ್ರಾಸ್ತ್ರಗಳನ್ನು ಬಳಸಿದ್ದಕ್ಕಾಗಿ ಉಕ್ರೇನಿಯನ್ ಕೋರ್ಟ್​ ಜನರಲ್‌ ಕಿರಿಲ್ಲೋವ್​ ಅವರಿಗೆ ಗೈರುಹಾಜರಾಗಿದ್ದಕ್ಕೆ ಶಿಕ್ಷೆ ವಿಧಿಸಿತ್ತು. ಅದಾದ ಒಂದು ದಿನದ ನಂತರ ಕಿರಿಲ್ಲೋವ್ ಅವರ ಸಾವು ಸಂಭವಿಸಿದೆ. ಉಕ್ರೇನ್‌ನ ಭದ್ರತಾ ಸೇವೆಯ ಪ್ರಕಾರ, ಯುದ್ಧದ ಆರಂಭದಿಂದಲೂ ಕಿರಿಲ್ಲೋವ್ ಅವರ ಆದೇಶದ ಮೇರೆಗೆ ರಷ್ಯಾದ ರಾಸಾಯನಿಕ ಯುದ್ಧಸಾಮಗ್ರಿಗಳ ಬಳಕೆಯ 4,800 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.

ಕಿರಿಲ್ಲೋವ್ ಅವರ ಹತ್ಯೆಯ ಹಿಂದೆ ಉಕ್ರೇನ್ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ. ಇದು ತನ್ನ ವಿಶೇಷ ಕಾರ್ಯಾಚರಣೆ ಎಂದು ಉಕ್ರೇನ್‌ನ ಭದ್ರತೆ ಮತ್ತು ಗುಪ್ತಚರ ಸಂಸ್ಥೆ ಎಸ್‌ಬಿಯು ಹೇಳಿರುವುದಾಗಿ ಉಕ್ರೇನ್‌ನ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಕಿರಿಲ್ಲೋವ್ ಯುದ್ಧಾಪರಾಧಿಯಾಗಿದ್ದು, ಕಾನೂನಿನ ಪ್ರಕಾರವೆ ಅವರನ್ನು ಗುರಿಯಾಗಿಸಲಾಗಿದೆ. ಏಕೆಂದರೆ, ಉಕ್ರೇನ್ ಸೇನೆಯ ವಿರುದ್ಧ ರಾಸಾಯನಿಕ ಅಸ್ತ್ರಗಳನ್ನು ಬಳಸುವಂತೆ ಅವರು ರಷ್ಯಾ ಸೇನೆಗೆ ಆದೇಶಿಸಿದ್ದು, ಉಕ್ರೇನ್‌ನ ಜನರನ್ನು ಕೊಲ್ಲುವ  ಎಲ್ಲರಿಗೂ ಇಂತಹ ಅಪಮಾನಕರ ಅಂತ್ಯ ಕಾದು ಕುಳಿತಿದೆ. ಯುದ್ಧಾಪರಾಧಿಗಳ ವಿರುದ್ಧ ಪ್ರತೀಕಾರ ತೀರಿಸುವುದು ಅನಿವಾರ್ಯವಾಗಿದೆ ಎಂದಿದ್ದಾರೆ.

2022ರ ಫೆಬ್ರವರಿಯಲ್ಲಿ ಆರಂಭಗೊಂಡ ಉಕ್ರೇನ್ ಯುದ್ಧದಲ್ಲಿ ರಷ್ಯಾ ನಡೆಸಿದ ಸೇನಾ ಕಾರ್ಯಾಚರಣೆಗಳಲ್ಲಿ ಕಿರಿಲ್ಲೋವ್ ಅವರು ನಿಷೇಧಿತ  ರಾಸಾಯನಿಕ ಶಸ್ತ್ರಾಸ್ತ್ರಗಳನ್ನು ಬಳಸಿದ್ದಾರೆಂದು ಉಕ್ರೇನ್‌ನ ಭದ್ರತಾ ಸೇವಾ ಏಜೆನ್ಸಿ ಸೋಮವಾರ ಅಪಾದಿಸಿತ್ತು. 2022ರ ಫೆಬ್ರವರಿ ತಿಂಗಳಿನಿಂದೀಚೆಗೆ ರಷ್ಯಾವು ಉಕ್ರೇನ್ ಯುದ್ದರಂಗದಲ್ಲಿ 4,800ಕ್ಕೂ ಅಧಿಕ ರಾಸಾಯನಿಕ ಶಸ್ತ್ರಾಸ್ತ್ರಗಳನ್ನು ಅದರಲ್ಲೂ ವಿಶೇಷವಾಗಿ ಕೆ-1 ಮಾದರಿಯ ಯುದ್ಧ ಗ್ರೇನೆಡ್‌ಗಳನ್ನು ಬಳಸಿರುವುದನ್ನು ಉಕ್ರೇನ್ ಭದ್ರತಾ ಸೇವೆಯು ದಾಖಲಿಸಿಕೊಂಡಿದೆ.

ಮೊದಲನೇ ಮಹಾಯುದ್ಧದಲ್ಲಿ ಬಳಕೆ ಮಾಡಲಾಗಿದ್ದ ರಾಸಾಯನಿಕ ಅಸ್ತ್ರವಾದ ಕ್ಲೊರೊಪಿಕ್ರಿನ್ ನನ್ನು ರಷ್ಯಾವು  ಉಕ್ರೇನ್‌ ವಿರುದ್ಧ  ಪ್ರಯೋಗಿಸಿರುವುದನ್ನು ತಾನು ದಾಖಲಿಸಿಕೊಂಡಿರುವುದಾಗಿ ಅಮೆರಿಕದ ವಿದೇಶಾಂಗ ಇಲಾಖೆಯು ಈ ವರ್ಷದ ಮೇ ತಿಂಗಳಿನಲ್ಲಿ ತಿಳಿಸಿತ್ತು.

ಉಕ್ರೇನ್‌ ನಲ್ಲಿ ರಷ್ಯಾ ನಡೆಸಿದ ಸೇನಾ ಕಾರ್ಯಾಚಣೆಯಲ್ಲಿ ನಿಷೇಧಿತ ರಾಸಾಯನಿಕ ಶಸ್ತ್ರಾಸ್ತ್ರಗಳನ್ನು ಬಳಕೆಗಾಗಿ ಕಿರಿಲ್ಲೋವ್ ಅವರು ಅಪರಾಧಿಯೆಂದು ಉಕ್ರೇನ್‌ನ ನ್ಯಾಯಾಲಯ ಡಿ.16ರಂದು ಅವರ ಅನುಪಸ್ಥಿತಿಯಲ್ಲಿ ತೀರ್ಪು ನೀಡಿತ್ತು.

ಕಿರಿಲ್ಲೋವ್ ಉಕ್ರೇನ್‌ ಯುದ್ಧದಲ್ಲಿ ಅವರು ವಹಿಸಿದ್ದ ಪಾತ್ರಕ್ಕಾಗಿ ಅವರ ವಿರುದ್ಧ ಬ್ರಿಟನ್, ಕೆನಡಾ ಸೇರಿದಂತೆ ವಿವಿಧ ದೇಶಗಳು ನಿರ್ಬಂಧ ಹೇರಿದ್ದವು. ಈಗಾಗಲೇ  ಉಕ್ರೇನ್‌ನ ಐದನೇ ಒಂದು ಭಾಗದಷ್ಟು ಭೂಪ್ರದೇಶವನ್ನು ರಶ್ಯವು  ಸ್ವಾಧೀನಪಡಿಸಿಕೊಂಡಿದೆ.

ಇದನ್ನೂ ಓದಿ…‘ಮನರೇಗಾ ಪಾವತಿಗಳಿಗೆ ಆಧಾರ್ ಜೋಡಣೆ ಕಡ್ಡಾಯಗೊಳಿಸಬಾರದು..’; ಸಂಸದೀಯ ಸಮಿತಿಯು ಶಿಫಾರಸು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...