Homeಅಂತರಾಷ್ಟ್ರೀಯರ‍ಷ್ಯಾ ಸೇನೆಯ ಅತ್ಯಂತ ಹಿರಿಯ  ಅಣು, ಜೈವಿಕ ಮತ್ತು ರಾಸಾಯನಿಕ ರಕ್ಷಣಾ ಪಡೆಗಳ ಮುಖ್ಯಸ್ಥ ಹತ್ಯೆ: ...

ರ‍ಷ್ಯಾ ಸೇನೆಯ ಅತ್ಯಂತ ಹಿರಿಯ  ಅಣು, ಜೈವಿಕ ಮತ್ತು ರಾಸಾಯನಿಕ ರಕ್ಷಣಾ ಪಡೆಗಳ ಮುಖ್ಯಸ್ಥ ಹತ್ಯೆ:  ಉಕ್ರೇನ್ ಕೈವಾಡ ಶಂಕೆ

- Advertisement -
- Advertisement -

ಮಾಸ್ಕೋ: ಎಲೆಕ್ಟ್ರಿಕ್ ಸ್ಕೂಟರ್‌ನಲ್ಲಿ ಬಚ್ಚಿಟ್ಟಿದ್ದ ಬಾಂಬ್‌ ಸ್ಫೋಟದಿಂದ ಮಾಸ್ಕೋದಲ್ಲಿ ಪರಮಾಣು ರಕ್ಷಣಾ ಪಡೆಗಳ ಮುಖ್ಯಸ್ಥರಾಗಿದ್ದ ರಷ್ಯಾದ ಹಿರಿಯ ಜನರಲ್ ಲೆಫ್ಟಿನೆಂಟ್ ಜನರಲ್ ಇಗೊರ್ ಕಿರಿಲ್ಲೋವ್ ಇಂದು (ಮಂಗಳವಾರ) ಮೃತಪಟ್ಟಿದ್ದಾರೆ.

ರಷ್ಯಾದ ಪರಮಾಣು, ಜೈವಿಕ ಮತ್ತು ರಾಸಾಯನಿಕ ಸಂರಕ್ಷಣಾ ಪಡೆಗಳ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ಇಗೊರ್ ಕಿರಿಲ್ಲೋವ್ ಅವರು ಕ್ರೆಮ್ಲಿನ್‌ನಿಂದ ಆಗ್ನೇಯಕ್ಕೆ 7 ಕಿ.ಮೀ ದೂರದಲ್ಲಿರುವ ರಿಯಾಜಾನ್ಸ್ಕಿ ಪ್ರಾಸ್ಪೆಕ್ಟ್‌ನಲ್ಲಿರುವ ಅಪಾರ್ಟ್​ಮೆಂಟ್ ಕಟ್ಟಡದ ಬಳಿ ಬಾಂಬ್ ದಾಳಿಯಿಂದ ಮೃತರಾಗಿದ್ದಾರೆ.

ಜನರಲ್ ಕಿರಿಲ್ಲೋವ್ ಅವರ ಸಹಾಯಕ ಸಹ ಈ ಸ್ಫೋಟದಲ್ಲಿ ಸಾವನ್ನಪ್ಪಿದ್ದಾರೆ. ಇಬ್ಬರ ಸಾವಿನ ಕುರಿತು ತನಿಖೆ ಆರಂಭವಾಗಿದೆ. ತನಿಖಾಧಿಕಾರಿಗಳು, ವಿಧಿ ವಿಜ್ಞಾನ ತಂಡದ ತಜ್ಞರು ಸ್ಥಳದಲ್ಲಿ ಶೋಧ ನಡೆಸಿದ್ದಾರೆ.  ಸ್ಫೋಟಕ ಇರಿಸಿದವರ ಪತ್ತೆಗೆ ವ್ಯಾಪಕ ಶೋಧ ಕಾರ್ಯ ಆರಂಭಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಕಿರಿಲ್ಲೋವ್  ಅವರು ಉಕ್ರೇನ್  ವಿರುದ್ಧದ ಯುದ್ಧ ಆರಂಭವಾದ ಬಳಿಕ ಹತ್ಯೆಯಾದ ರಷ್ಯಾದ ಅತ್ಯಂತ ಹಿರಿಯ ಸೇನಾಧಿಕಾರಿ ಆಗಿದ್ದಾರೆ. ಉಕ್ರೇನ್ ಯುದ್ಧದಲ್ಲಿ  ರಷ್ಯಾ ಸಾಧಿಸಿರುವ ಯಶಸ್ಸಿನ ಬಗ್ಗೆ ಅಧ್ಯಕ್ಷ  ವ್ಲಾದಿಮಿರ್ ಪುಟಿನ್ ಅವರು ಹೆಮ್ಮೆಯ ಮಾತಗಳನ್ನಾಡಿದ ಮರುದಿನ ಈ ಬೆಳವಣಿಗೆ ನಡೆದಿದೆ. 54 ವರ್ಷದ  ಕಿರಿಲ್ಲೋವ್ ಅವರು ವಸತಿ ಸಮುಚ್ಚಯದಲ್ಲಿರುವ ತಮ್ಮ ಮನೆಯಿಂದ ಕಚೇರಿಗೆ ಹೊರಟಿದ್ದ ಸಂದರ್ಭದಲ್ಲಿ ಸ್ಫೋಟ ಸಂಭವಿಸಿದೆ.

ರಿಮೋಟ್‌ನಿಂದ ಸ್ಫೋಟಿಸಲಾದ ಸ್ಫೋಟಕ ಸಾಧನದ ಶಕ್ತಿಯು ಸುಮಾರು 300 ಗ್ರಾಂ ಟಿಎನ್‌ಟಿಯಷ್ಟಿದೆ ಎಂದು ರಷ್ಯಾದ ಸುದ್ದಿ ಸಂಸ್ಥೆ ಟಿಎಎಸ್​ಎಸ್​ ವರದಿ ಮಾಡಿದೆ.

ಉಕ್ರೇನ್ ವಿರುದ್ಧದ ಯುದ್ಧದಲ್ಲಿ ನಿಷೇಧಿತ ರಾಸಾಯನಿಕ ಶಸ್ತ್ರಾಸ್ತ್ರಗಳನ್ನು ಬಳಸಿದ್ದಕ್ಕಾಗಿ ಉಕ್ರೇನಿಯನ್ ಕೋರ್ಟ್​ ಜನರಲ್‌ ಕಿರಿಲ್ಲೋವ್​ ಅವರಿಗೆ ಗೈರುಹಾಜರಾಗಿದ್ದಕ್ಕೆ ಶಿಕ್ಷೆ ವಿಧಿಸಿತ್ತು. ಅದಾದ ಒಂದು ದಿನದ ನಂತರ ಕಿರಿಲ್ಲೋವ್ ಅವರ ಸಾವು ಸಂಭವಿಸಿದೆ. ಉಕ್ರೇನ್‌ನ ಭದ್ರತಾ ಸೇವೆಯ ಪ್ರಕಾರ, ಯುದ್ಧದ ಆರಂಭದಿಂದಲೂ ಕಿರಿಲ್ಲೋವ್ ಅವರ ಆದೇಶದ ಮೇರೆಗೆ ರಷ್ಯಾದ ರಾಸಾಯನಿಕ ಯುದ್ಧಸಾಮಗ್ರಿಗಳ ಬಳಕೆಯ 4,800 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.

ಕಿರಿಲ್ಲೋವ್ ಅವರ ಹತ್ಯೆಯ ಹಿಂದೆ ಉಕ್ರೇನ್ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ. ಇದು ತನ್ನ ವಿಶೇಷ ಕಾರ್ಯಾಚರಣೆ ಎಂದು ಉಕ್ರೇನ್‌ನ ಭದ್ರತೆ ಮತ್ತು ಗುಪ್ತಚರ ಸಂಸ್ಥೆ ಎಸ್‌ಬಿಯು ಹೇಳಿರುವುದಾಗಿ ಉಕ್ರೇನ್‌ನ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಕಿರಿಲ್ಲೋವ್ ಯುದ್ಧಾಪರಾಧಿಯಾಗಿದ್ದು, ಕಾನೂನಿನ ಪ್ರಕಾರವೆ ಅವರನ್ನು ಗುರಿಯಾಗಿಸಲಾಗಿದೆ. ಏಕೆಂದರೆ, ಉಕ್ರೇನ್ ಸೇನೆಯ ವಿರುದ್ಧ ರಾಸಾಯನಿಕ ಅಸ್ತ್ರಗಳನ್ನು ಬಳಸುವಂತೆ ಅವರು ರಷ್ಯಾ ಸೇನೆಗೆ ಆದೇಶಿಸಿದ್ದು, ಉಕ್ರೇನ್‌ನ ಜನರನ್ನು ಕೊಲ್ಲುವ  ಎಲ್ಲರಿಗೂ ಇಂತಹ ಅಪಮಾನಕರ ಅಂತ್ಯ ಕಾದು ಕುಳಿತಿದೆ. ಯುದ್ಧಾಪರಾಧಿಗಳ ವಿರುದ್ಧ ಪ್ರತೀಕಾರ ತೀರಿಸುವುದು ಅನಿವಾರ್ಯವಾಗಿದೆ ಎಂದಿದ್ದಾರೆ.

2022ರ ಫೆಬ್ರವರಿಯಲ್ಲಿ ಆರಂಭಗೊಂಡ ಉಕ್ರೇನ್ ಯುದ್ಧದಲ್ಲಿ ರಷ್ಯಾ ನಡೆಸಿದ ಸೇನಾ ಕಾರ್ಯಾಚರಣೆಗಳಲ್ಲಿ ಕಿರಿಲ್ಲೋವ್ ಅವರು ನಿಷೇಧಿತ  ರಾಸಾಯನಿಕ ಶಸ್ತ್ರಾಸ್ತ್ರಗಳನ್ನು ಬಳಸಿದ್ದಾರೆಂದು ಉಕ್ರೇನ್‌ನ ಭದ್ರತಾ ಸೇವಾ ಏಜೆನ್ಸಿ ಸೋಮವಾರ ಅಪಾದಿಸಿತ್ತು. 2022ರ ಫೆಬ್ರವರಿ ತಿಂಗಳಿನಿಂದೀಚೆಗೆ ರಷ್ಯಾವು ಉಕ್ರೇನ್ ಯುದ್ದರಂಗದಲ್ಲಿ 4,800ಕ್ಕೂ ಅಧಿಕ ರಾಸಾಯನಿಕ ಶಸ್ತ್ರಾಸ್ತ್ರಗಳನ್ನು ಅದರಲ್ಲೂ ವಿಶೇಷವಾಗಿ ಕೆ-1 ಮಾದರಿಯ ಯುದ್ಧ ಗ್ರೇನೆಡ್‌ಗಳನ್ನು ಬಳಸಿರುವುದನ್ನು ಉಕ್ರೇನ್ ಭದ್ರತಾ ಸೇವೆಯು ದಾಖಲಿಸಿಕೊಂಡಿದೆ.

ಮೊದಲನೇ ಮಹಾಯುದ್ಧದಲ್ಲಿ ಬಳಕೆ ಮಾಡಲಾಗಿದ್ದ ರಾಸಾಯನಿಕ ಅಸ್ತ್ರವಾದ ಕ್ಲೊರೊಪಿಕ್ರಿನ್ ನನ್ನು ರಷ್ಯಾವು  ಉಕ್ರೇನ್‌ ವಿರುದ್ಧ  ಪ್ರಯೋಗಿಸಿರುವುದನ್ನು ತಾನು ದಾಖಲಿಸಿಕೊಂಡಿರುವುದಾಗಿ ಅಮೆರಿಕದ ವಿದೇಶಾಂಗ ಇಲಾಖೆಯು ಈ ವರ್ಷದ ಮೇ ತಿಂಗಳಿನಲ್ಲಿ ತಿಳಿಸಿತ್ತು.

ಉಕ್ರೇನ್‌ ನಲ್ಲಿ ರಷ್ಯಾ ನಡೆಸಿದ ಸೇನಾ ಕಾರ್ಯಾಚಣೆಯಲ್ಲಿ ನಿಷೇಧಿತ ರಾಸಾಯನಿಕ ಶಸ್ತ್ರಾಸ್ತ್ರಗಳನ್ನು ಬಳಕೆಗಾಗಿ ಕಿರಿಲ್ಲೋವ್ ಅವರು ಅಪರಾಧಿಯೆಂದು ಉಕ್ರೇನ್‌ನ ನ್ಯಾಯಾಲಯ ಡಿ.16ರಂದು ಅವರ ಅನುಪಸ್ಥಿತಿಯಲ್ಲಿ ತೀರ್ಪು ನೀಡಿತ್ತು.

ಕಿರಿಲ್ಲೋವ್ ಉಕ್ರೇನ್‌ ಯುದ್ಧದಲ್ಲಿ ಅವರು ವಹಿಸಿದ್ದ ಪಾತ್ರಕ್ಕಾಗಿ ಅವರ ವಿರುದ್ಧ ಬ್ರಿಟನ್, ಕೆನಡಾ ಸೇರಿದಂತೆ ವಿವಿಧ ದೇಶಗಳು ನಿರ್ಬಂಧ ಹೇರಿದ್ದವು. ಈಗಾಗಲೇ  ಉಕ್ರೇನ್‌ನ ಐದನೇ ಒಂದು ಭಾಗದಷ್ಟು ಭೂಪ್ರದೇಶವನ್ನು ರಶ್ಯವು  ಸ್ವಾಧೀನಪಡಿಸಿಕೊಂಡಿದೆ.

ಇದನ್ನೂ ಓದಿ…‘ಮನರೇಗಾ ಪಾವತಿಗಳಿಗೆ ಆಧಾರ್ ಜೋಡಣೆ ಕಡ್ಡಾಯಗೊಳಿಸಬಾರದು..’; ಸಂಸದೀಯ ಸಮಿತಿಯು ಶಿಫಾರಸು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...