Homeರಾಷ್ಟ್ರೀಯಶಾಲೆ ಮುಚ್ಚಿಸಲು ಬಂದ ಎಬಿವಿಪಿ ಮುಖಂಡನಿಗೆ ಕಪಾಳಮೋಕ್ಷ ಮಾಡಿ ವಾಪಾಸು ಕಳುಹಿಸಿದ ಮುಖ್ಯೋಪಾಧ್ಯಾಯಿನಿ

ಶಾಲೆ ಮುಚ್ಚಿಸಲು ಬಂದ ಎಬಿವಿಪಿ ಮುಖಂಡನಿಗೆ ಕಪಾಳಮೋಕ್ಷ ಮಾಡಿ ವಾಪಾಸು ಕಳುಹಿಸಿದ ಮುಖ್ಯೋಪಾಧ್ಯಾಯಿನಿ

- Advertisement -
- Advertisement -

ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ ರಾಜಂಪೇಟೆ ಪಟ್ಟಣದ ಜಿಲ್ಲಾ ಪಂಚಾಯತ್‌‌ ಬಾಲಕಿಯರ ಪ್ರೌಢಶಾಲೆಯಲ್ಲಿ, ಶಾಲೆ ಮುಚ್ಚುವಂತೆ ಒತ್ತಾಯಿಸಿ ತನ್ನೊಂದಿಗೆ ಅಸಭ್ಯವಾಗಿ ವರ್ತಿಸಿದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ನಾಯಕ ದಾಸರಿ ಅಶೋಕ್ ಎಂಬವರಿಗೆ ಶಾಲಾ ಮುಖ್ಯೋಪಾಧ್ಯಾಯಿನಿ ಕಪಾಳ ಮೋಕ್ಷ ಮಾಡಿದ ಘಟನೆ ನಡೆದಿದೆ.

ಎಬಿವಿಪಿ ಆಂಧ್ರಪ್ರದೇಶದ ರಾಜ್ಯ ಕಾರ್ಯಕಾರಿ ಸಮಿತಿಯ ಸದಸ್ಯರಾಗಿರುವ ಅಶೋಕ್‌ ಅವರು ಶಾಲೆಯ ಮುಖ್ಯೋಪಾಧ್ಯಾಯಿನಿ ಲಕ್ಷ್ಮಿದೇವಿ ಅವರೊಂದಿಗೆ ಅಸಭ್ಯವಾಗಿ ನಡೆದುಕೊಂಡಿದ್ದರಿಂದ ಕಪಾಲ ಮೋಕ್ಷ ಮಾಲಾಗಿದೆ ಎಂದು ಸಾಕ್ಷಿ ಪತ್ರಿಕೆ ವರದಿ ಮಾಡಿದೆ. ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಶಾಲೆಗಳ ವಿಲೀನಕ್ಕೆ ಸಂಬಂಧಿಸಿದ ವಿಚಾರದಲ್ಲಿ ಎಬಿವಿಪಿ ಮುಖಂಡರು ಮಂಗಳವಾರ ಪ್ರತಿಭಟನೆ ನಡೆಸಿ, ಶಿಕ್ಷಣ ಸಂಸ್ಥೆಗಳನ್ನು ಮುಚ್ಚಿಸಿದ್ದರು. ಇದೆ ವೇಳೆ ಎಬಿವಿಪಿ ನಾಯಕ ಅಶೋಕ್ ಅವರು ತಮ್ಮ ಇತರ ಮುಖಂಡರೊಂದಿಗೆ ಗರ್ಲ್ಸ್ ಹೈಸ್ಕೂಲ್‌ಗೆ ಬೆಳಿಗ್ಗೆ 11 ಗಂಟೆಗೆ ಶಾಲೆಗೆ ತಲುಪಿದ್ದರು. ಅಲ್ಲಿ ಮುಖ್ಯೋಪಾಧ್ಯಾಯಿನಿ ಲಕ್ಷ್ಮಿದೇವಿ ಅವರೊಂದಿಗೆ ತಕ್ಷಣ ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಿ ಶಾಲೆ ಮುಚ್ಚುವಂತೆ ಕೇಳಿದ್ದರು.

ಇದನ್ನೂ ಓದಿ: ವಿಜಯಪುರ: ಮುಸ್ಲಿಮರ ನರಮೇಧಕ್ಕೆ ಕರೆ ನೀಡಿದ್ದ ಎಬಿವಿಪಿ ಸದಸ್ಯೆ ಮೇಲೆ ಎಫ್‌ಐಆರ್‌

ಆದರೆ ಮುಖ್ಯೋಪಾಧ್ಯಾಯಿನಿ ಲಕ್ಷ್ಮಿದೇವೆ ಅವರು ಇದಕ್ಕೆ ಒಪ್ಪದೆ, ಮಧ್ಯಾಹ್ನದ ಊಟದ ನಂತರ ಮಕ್ಕಳನ್ನು ಮನೆಗೆ ಕಳುಹಿಸುವುದಾಗಿ ಎಬಿವಿಪಿ ಮುಖಂಡರಿಗೆ ತಿಳಿಸಿದ್ದರು. ಆದರೆ ಇದಕ್ಕೆ ಒಪ್ಪದ ಅಶೋಕ್ ಅವರು ವಿದ್ಯಾರ್ಥಿನಿಯರನ್ನು ತಕ್ಷಣವೆ ಮನೆಗೆ ಕಳುಹಿಸುವಂತೆ ಒತ್ತಾಯಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಮುಖ್ಯೋಪಾಧ್ಯಾಯಿನಿ ವಿದ್ಯಾರ್ಥಿಗಳನ್ನು ಈಗಲೇ ಮನೆಗೆ ಕಳುಹಿಸಿದರೆ ಮಧ್ಯಾಹ್ನದ ಊಟ ಮತ್ತು ಅವರಿಗಾಗಿ ಬೇಯಿಸಿ ಸಿದ್ಧಪಡಿಸಿದ ಮೊಟ್ಟೆಗಳು ವ್ಯರ್ಥವಾಗುತ್ತವೆ ಎಂದು ವಿವರಿಸಲು ಪ್ರಯತ್ನಿಸಿದ್ದಾರೆ. ಅಲ್ಲದೆ ಅನೇಕ ವಿದ್ಯಾರ್ಥಿಗಳ ಪೋಷಕರು ಮನೆಯಲ್ಲಿ ಇರುವುದಿಲ್ಲ, ಕೆಲಸಕ್ಕೆ ಹೋಗಿರುತ್ತಾರೆ. ಹಾಗಾಗಿ ಈಗಲೇ ಮಕ್ಕಳನ್ನು ಕಳುಹಿಸಿದರೆ ಅವರು ಊಟವಿಲ್ಲದೆ ಹೋಗಬೇಕಾಗುತ್ತದೆ ಎಂದು ಸಮರ್ಥಿಸಿಕೊಂಡಿದ್ದರು.

ಆದರೆ ಅಶೋಕ್ ಇದನ್ನು ಒಪ್ಪದೆ ಹಠಮಾರಿ ದೋರಣೆ ತೆಳೆದು ಮುಖ್ಯೋಪಾಧ್ಯಾಯಿನಿ ಮೇಲೆ ರೇಗಲು ಪ್ರಾರಂಭಿಸಿ ಅಸಭ್ಯವಾಗಿ ನಡೆದುಕೊಂಡಿದ್ದಾರೆ ಎಂದು ಸಾಕ್ಷಿ ಪತ್ರಿಕೆ ವರದಿ ಮಾಡಿದೆ. ಈ ವೇಳೆ ಅವರ ಮಾತಿಗೆ ಕುಪಿತಗೊಂಡ ಲಕ್ಷ್ಮಿದೇವಿ ಅವರು ಬಿಗಿಯಾಗಿ ಕಪಾಳ ಮೋಕ್ಷ ಮಾಡಿ ಅವರನ್ನು ವಾಪಾಸು ಕಳುಹಿಸಿದ್ದಾರೆ.

ಇದನ್ನೂ ಓದಿ: 60 ವರ್ಷದ ಮಹಿಳೆಗೆ ಕಿರುಕುಳ: ಎಬಿವಿಪಿ ಮಾಜಿ ರಾಷ್ಟ್ರೀಯ ಅಧ್ಯಕ್ಷನ ಬಂಧನ

ಘಟನೆಯ ವೇಳೆ ಪೊಲೀಸರು ಕೂಡಾ ಸ್ಥಳದಲ್ಲಿ ಇದ್ದರು. “ವಿದ್ಯಾರ್ಥಿಗಳಿಗೆ ಊಟ ನೀಡಿದ ನಂತರ ಅವರನ್ನು ಮನೆಗೆ ಕಳುಹಿಸಿ ನಂತರ ಶಾಲೆಯನ್ನು ಮುಚ್ಚಲು ಮುಖ್ಯೋಪಾಧ್ಯಾಯಿನಿ ಸಿದ್ದರಿದ್ದರು. ಆದರೆ ಅಶೋಕ್ ಹಠಮಾರಿ ಧೋರಣೆ ತೆಳೆದು ಅಸಭ್ಯವಾಗಿ ನಡೆದಿದ್ದರಿಂದ ಇದು ನಡೆದಿದೆ” ಎಂದು ಪ್ರತ್ಯಕ್ಷದರ್ಶಿಗಳು ಮುಖ್ಯೋಪಾಧ್ಯಾಯಿನಿಯ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ ಎಂದು ಸಾಕ್ಷಿ ಪತ್ರಿಕೆ ಹೇಳಿದೆ.

ವಿಡಿಯೊ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಶಾಲಾ ಮುಖ್ಯೋಪಾಧ್ಯಾಯರು ಆ ದರಿದ್ರ ಮುಂಡೆಮಗನಿಗೆ ತಕ್ಕ ಶಾಸ್ತಿಯನ್ನೇ ಮಾಡಿದ್ದಾರೆ. ಈ ಎಬಿವಿಪಿ ಲೋಫರ್ಸ್‌ಗಳ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಿ ಒದ್ದು ಒಳಗೆ ಹಾಕಿ ಎಲುಬು ಮರಿಬೇಕು.

  2. Inviting troubles ಅನ್ನೋದು ಇದಕ್ಕೇ. ಸಂಘಿಗಳು ತೀರಾ ನೀಚ ಮತ್ತು ಕೊಳಕು ಸ್ವಭಾವದವರು. ಆ ಶಿಕ್ಷಕಿಗೆ ಸರಕಾರ ಸೂಕ್ತ ರಕ್ಷಣೆ ಒದಗಿಸಲಿ.

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...