Homeರಾಷ್ಟ್ರೀಯಶಾಲೆ ಮುಚ್ಚಿಸಲು ಬಂದ ಎಬಿವಿಪಿ ಮುಖಂಡನಿಗೆ ಕಪಾಳಮೋಕ್ಷ ಮಾಡಿ ವಾಪಾಸು ಕಳುಹಿಸಿದ ಮುಖ್ಯೋಪಾಧ್ಯಾಯಿನಿ

ಶಾಲೆ ಮುಚ್ಚಿಸಲು ಬಂದ ಎಬಿವಿಪಿ ಮುಖಂಡನಿಗೆ ಕಪಾಳಮೋಕ್ಷ ಮಾಡಿ ವಾಪಾಸು ಕಳುಹಿಸಿದ ಮುಖ್ಯೋಪಾಧ್ಯಾಯಿನಿ

- Advertisement -
- Advertisement -

ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ ರಾಜಂಪೇಟೆ ಪಟ್ಟಣದ ಜಿಲ್ಲಾ ಪಂಚಾಯತ್‌‌ ಬಾಲಕಿಯರ ಪ್ರೌಢಶಾಲೆಯಲ್ಲಿ, ಶಾಲೆ ಮುಚ್ಚುವಂತೆ ಒತ್ತಾಯಿಸಿ ತನ್ನೊಂದಿಗೆ ಅಸಭ್ಯವಾಗಿ ವರ್ತಿಸಿದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ನಾಯಕ ದಾಸರಿ ಅಶೋಕ್ ಎಂಬವರಿಗೆ ಶಾಲಾ ಮುಖ್ಯೋಪಾಧ್ಯಾಯಿನಿ ಕಪಾಳ ಮೋಕ್ಷ ಮಾಡಿದ ಘಟನೆ ನಡೆದಿದೆ.

ಎಬಿವಿಪಿ ಆಂಧ್ರಪ್ರದೇಶದ ರಾಜ್ಯ ಕಾರ್ಯಕಾರಿ ಸಮಿತಿಯ ಸದಸ್ಯರಾಗಿರುವ ಅಶೋಕ್‌ ಅವರು ಶಾಲೆಯ ಮುಖ್ಯೋಪಾಧ್ಯಾಯಿನಿ ಲಕ್ಷ್ಮಿದೇವಿ ಅವರೊಂದಿಗೆ ಅಸಭ್ಯವಾಗಿ ನಡೆದುಕೊಂಡಿದ್ದರಿಂದ ಕಪಾಲ ಮೋಕ್ಷ ಮಾಲಾಗಿದೆ ಎಂದು ಸಾಕ್ಷಿ ಪತ್ರಿಕೆ ವರದಿ ಮಾಡಿದೆ. ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಶಾಲೆಗಳ ವಿಲೀನಕ್ಕೆ ಸಂಬಂಧಿಸಿದ ವಿಚಾರದಲ್ಲಿ ಎಬಿವಿಪಿ ಮುಖಂಡರು ಮಂಗಳವಾರ ಪ್ರತಿಭಟನೆ ನಡೆಸಿ, ಶಿಕ್ಷಣ ಸಂಸ್ಥೆಗಳನ್ನು ಮುಚ್ಚಿಸಿದ್ದರು. ಇದೆ ವೇಳೆ ಎಬಿವಿಪಿ ನಾಯಕ ಅಶೋಕ್ ಅವರು ತಮ್ಮ ಇತರ ಮುಖಂಡರೊಂದಿಗೆ ಗರ್ಲ್ಸ್ ಹೈಸ್ಕೂಲ್‌ಗೆ ಬೆಳಿಗ್ಗೆ 11 ಗಂಟೆಗೆ ಶಾಲೆಗೆ ತಲುಪಿದ್ದರು. ಅಲ್ಲಿ ಮುಖ್ಯೋಪಾಧ್ಯಾಯಿನಿ ಲಕ್ಷ್ಮಿದೇವಿ ಅವರೊಂದಿಗೆ ತಕ್ಷಣ ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಿ ಶಾಲೆ ಮುಚ್ಚುವಂತೆ ಕೇಳಿದ್ದರು.

ಇದನ್ನೂ ಓದಿ: ವಿಜಯಪುರ: ಮುಸ್ಲಿಮರ ನರಮೇಧಕ್ಕೆ ಕರೆ ನೀಡಿದ್ದ ಎಬಿವಿಪಿ ಸದಸ್ಯೆ ಮೇಲೆ ಎಫ್‌ಐಆರ್‌

ಆದರೆ ಮುಖ್ಯೋಪಾಧ್ಯಾಯಿನಿ ಲಕ್ಷ್ಮಿದೇವೆ ಅವರು ಇದಕ್ಕೆ ಒಪ್ಪದೆ, ಮಧ್ಯಾಹ್ನದ ಊಟದ ನಂತರ ಮಕ್ಕಳನ್ನು ಮನೆಗೆ ಕಳುಹಿಸುವುದಾಗಿ ಎಬಿವಿಪಿ ಮುಖಂಡರಿಗೆ ತಿಳಿಸಿದ್ದರು. ಆದರೆ ಇದಕ್ಕೆ ಒಪ್ಪದ ಅಶೋಕ್ ಅವರು ವಿದ್ಯಾರ್ಥಿನಿಯರನ್ನು ತಕ್ಷಣವೆ ಮನೆಗೆ ಕಳುಹಿಸುವಂತೆ ಒತ್ತಾಯಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಮುಖ್ಯೋಪಾಧ್ಯಾಯಿನಿ ವಿದ್ಯಾರ್ಥಿಗಳನ್ನು ಈಗಲೇ ಮನೆಗೆ ಕಳುಹಿಸಿದರೆ ಮಧ್ಯಾಹ್ನದ ಊಟ ಮತ್ತು ಅವರಿಗಾಗಿ ಬೇಯಿಸಿ ಸಿದ್ಧಪಡಿಸಿದ ಮೊಟ್ಟೆಗಳು ವ್ಯರ್ಥವಾಗುತ್ತವೆ ಎಂದು ವಿವರಿಸಲು ಪ್ರಯತ್ನಿಸಿದ್ದಾರೆ. ಅಲ್ಲದೆ ಅನೇಕ ವಿದ್ಯಾರ್ಥಿಗಳ ಪೋಷಕರು ಮನೆಯಲ್ಲಿ ಇರುವುದಿಲ್ಲ, ಕೆಲಸಕ್ಕೆ ಹೋಗಿರುತ್ತಾರೆ. ಹಾಗಾಗಿ ಈಗಲೇ ಮಕ್ಕಳನ್ನು ಕಳುಹಿಸಿದರೆ ಅವರು ಊಟವಿಲ್ಲದೆ ಹೋಗಬೇಕಾಗುತ್ತದೆ ಎಂದು ಸಮರ್ಥಿಸಿಕೊಂಡಿದ್ದರು.

ಆದರೆ ಅಶೋಕ್ ಇದನ್ನು ಒಪ್ಪದೆ ಹಠಮಾರಿ ದೋರಣೆ ತೆಳೆದು ಮುಖ್ಯೋಪಾಧ್ಯಾಯಿನಿ ಮೇಲೆ ರೇಗಲು ಪ್ರಾರಂಭಿಸಿ ಅಸಭ್ಯವಾಗಿ ನಡೆದುಕೊಂಡಿದ್ದಾರೆ ಎಂದು ಸಾಕ್ಷಿ ಪತ್ರಿಕೆ ವರದಿ ಮಾಡಿದೆ. ಈ ವೇಳೆ ಅವರ ಮಾತಿಗೆ ಕುಪಿತಗೊಂಡ ಲಕ್ಷ್ಮಿದೇವಿ ಅವರು ಬಿಗಿಯಾಗಿ ಕಪಾಳ ಮೋಕ್ಷ ಮಾಡಿ ಅವರನ್ನು ವಾಪಾಸು ಕಳುಹಿಸಿದ್ದಾರೆ.

ಇದನ್ನೂ ಓದಿ: 60 ವರ್ಷದ ಮಹಿಳೆಗೆ ಕಿರುಕುಳ: ಎಬಿವಿಪಿ ಮಾಜಿ ರಾಷ್ಟ್ರೀಯ ಅಧ್ಯಕ್ಷನ ಬಂಧನ

ಘಟನೆಯ ವೇಳೆ ಪೊಲೀಸರು ಕೂಡಾ ಸ್ಥಳದಲ್ಲಿ ಇದ್ದರು. “ವಿದ್ಯಾರ್ಥಿಗಳಿಗೆ ಊಟ ನೀಡಿದ ನಂತರ ಅವರನ್ನು ಮನೆಗೆ ಕಳುಹಿಸಿ ನಂತರ ಶಾಲೆಯನ್ನು ಮುಚ್ಚಲು ಮುಖ್ಯೋಪಾಧ್ಯಾಯಿನಿ ಸಿದ್ದರಿದ್ದರು. ಆದರೆ ಅಶೋಕ್ ಹಠಮಾರಿ ಧೋರಣೆ ತೆಳೆದು ಅಸಭ್ಯವಾಗಿ ನಡೆದಿದ್ದರಿಂದ ಇದು ನಡೆದಿದೆ” ಎಂದು ಪ್ರತ್ಯಕ್ಷದರ್ಶಿಗಳು ಮುಖ್ಯೋಪಾಧ್ಯಾಯಿನಿಯ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ ಎಂದು ಸಾಕ್ಷಿ ಪತ್ರಿಕೆ ಹೇಳಿದೆ.

ವಿಡಿಯೊ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಶಾಲಾ ಮುಖ್ಯೋಪಾಧ್ಯಾಯರು ಆ ದರಿದ್ರ ಮುಂಡೆಮಗನಿಗೆ ತಕ್ಕ ಶಾಸ್ತಿಯನ್ನೇ ಮಾಡಿದ್ದಾರೆ. ಈ ಎಬಿವಿಪಿ ಲೋಫರ್ಸ್‌ಗಳ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಿ ಒದ್ದು ಒಳಗೆ ಹಾಕಿ ಎಲುಬು ಮರಿಬೇಕು.

  2. Inviting troubles ಅನ್ನೋದು ಇದಕ್ಕೇ. ಸಂಘಿಗಳು ತೀರಾ ನೀಚ ಮತ್ತು ಕೊಳಕು ಸ್ವಭಾವದವರು. ಆ ಶಿಕ್ಷಕಿಗೆ ಸರಕಾರ ಸೂಕ್ತ ರಕ್ಷಣೆ ಒದಗಿಸಲಿ.

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...