Homeರಾಷ್ಟ್ರೀಯಶಾಲೆ ಮುಚ್ಚಿಸಲು ಬಂದ ಎಬಿವಿಪಿ ಮುಖಂಡನಿಗೆ ಕಪಾಳಮೋಕ್ಷ ಮಾಡಿ ವಾಪಾಸು ಕಳುಹಿಸಿದ ಮುಖ್ಯೋಪಾಧ್ಯಾಯಿನಿ

ಶಾಲೆ ಮುಚ್ಚಿಸಲು ಬಂದ ಎಬಿವಿಪಿ ಮುಖಂಡನಿಗೆ ಕಪಾಳಮೋಕ್ಷ ಮಾಡಿ ವಾಪಾಸು ಕಳುಹಿಸಿದ ಮುಖ್ಯೋಪಾಧ್ಯಾಯಿನಿ

- Advertisement -
- Advertisement -

ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ ರಾಜಂಪೇಟೆ ಪಟ್ಟಣದ ಜಿಲ್ಲಾ ಪಂಚಾಯತ್‌‌ ಬಾಲಕಿಯರ ಪ್ರೌಢಶಾಲೆಯಲ್ಲಿ, ಶಾಲೆ ಮುಚ್ಚುವಂತೆ ಒತ್ತಾಯಿಸಿ ತನ್ನೊಂದಿಗೆ ಅಸಭ್ಯವಾಗಿ ವರ್ತಿಸಿದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ನಾಯಕ ದಾಸರಿ ಅಶೋಕ್ ಎಂಬವರಿಗೆ ಶಾಲಾ ಮುಖ್ಯೋಪಾಧ್ಯಾಯಿನಿ ಕಪಾಳ ಮೋಕ್ಷ ಮಾಡಿದ ಘಟನೆ ನಡೆದಿದೆ.

ಎಬಿವಿಪಿ ಆಂಧ್ರಪ್ರದೇಶದ ರಾಜ್ಯ ಕಾರ್ಯಕಾರಿ ಸಮಿತಿಯ ಸದಸ್ಯರಾಗಿರುವ ಅಶೋಕ್‌ ಅವರು ಶಾಲೆಯ ಮುಖ್ಯೋಪಾಧ್ಯಾಯಿನಿ ಲಕ್ಷ್ಮಿದೇವಿ ಅವರೊಂದಿಗೆ ಅಸಭ್ಯವಾಗಿ ನಡೆದುಕೊಂಡಿದ್ದರಿಂದ ಕಪಾಲ ಮೋಕ್ಷ ಮಾಲಾಗಿದೆ ಎಂದು ಸಾಕ್ಷಿ ಪತ್ರಿಕೆ ವರದಿ ಮಾಡಿದೆ. ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಶಾಲೆಗಳ ವಿಲೀನಕ್ಕೆ ಸಂಬಂಧಿಸಿದ ವಿಚಾರದಲ್ಲಿ ಎಬಿವಿಪಿ ಮುಖಂಡರು ಮಂಗಳವಾರ ಪ್ರತಿಭಟನೆ ನಡೆಸಿ, ಶಿಕ್ಷಣ ಸಂಸ್ಥೆಗಳನ್ನು ಮುಚ್ಚಿಸಿದ್ದರು. ಇದೆ ವೇಳೆ ಎಬಿವಿಪಿ ನಾಯಕ ಅಶೋಕ್ ಅವರು ತಮ್ಮ ಇತರ ಮುಖಂಡರೊಂದಿಗೆ ಗರ್ಲ್ಸ್ ಹೈಸ್ಕೂಲ್‌ಗೆ ಬೆಳಿಗ್ಗೆ 11 ಗಂಟೆಗೆ ಶಾಲೆಗೆ ತಲುಪಿದ್ದರು. ಅಲ್ಲಿ ಮುಖ್ಯೋಪಾಧ್ಯಾಯಿನಿ ಲಕ್ಷ್ಮಿದೇವಿ ಅವರೊಂದಿಗೆ ತಕ್ಷಣ ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಿ ಶಾಲೆ ಮುಚ್ಚುವಂತೆ ಕೇಳಿದ್ದರು.

ಇದನ್ನೂ ಓದಿ: ವಿಜಯಪುರ: ಮುಸ್ಲಿಮರ ನರಮೇಧಕ್ಕೆ ಕರೆ ನೀಡಿದ್ದ ಎಬಿವಿಪಿ ಸದಸ್ಯೆ ಮೇಲೆ ಎಫ್‌ಐಆರ್‌

ಆದರೆ ಮುಖ್ಯೋಪಾಧ್ಯಾಯಿನಿ ಲಕ್ಷ್ಮಿದೇವೆ ಅವರು ಇದಕ್ಕೆ ಒಪ್ಪದೆ, ಮಧ್ಯಾಹ್ನದ ಊಟದ ನಂತರ ಮಕ್ಕಳನ್ನು ಮನೆಗೆ ಕಳುಹಿಸುವುದಾಗಿ ಎಬಿವಿಪಿ ಮುಖಂಡರಿಗೆ ತಿಳಿಸಿದ್ದರು. ಆದರೆ ಇದಕ್ಕೆ ಒಪ್ಪದ ಅಶೋಕ್ ಅವರು ವಿದ್ಯಾರ್ಥಿನಿಯರನ್ನು ತಕ್ಷಣವೆ ಮನೆಗೆ ಕಳುಹಿಸುವಂತೆ ಒತ್ತಾಯಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಮುಖ್ಯೋಪಾಧ್ಯಾಯಿನಿ ವಿದ್ಯಾರ್ಥಿಗಳನ್ನು ಈಗಲೇ ಮನೆಗೆ ಕಳುಹಿಸಿದರೆ ಮಧ್ಯಾಹ್ನದ ಊಟ ಮತ್ತು ಅವರಿಗಾಗಿ ಬೇಯಿಸಿ ಸಿದ್ಧಪಡಿಸಿದ ಮೊಟ್ಟೆಗಳು ವ್ಯರ್ಥವಾಗುತ್ತವೆ ಎಂದು ವಿವರಿಸಲು ಪ್ರಯತ್ನಿಸಿದ್ದಾರೆ. ಅಲ್ಲದೆ ಅನೇಕ ವಿದ್ಯಾರ್ಥಿಗಳ ಪೋಷಕರು ಮನೆಯಲ್ಲಿ ಇರುವುದಿಲ್ಲ, ಕೆಲಸಕ್ಕೆ ಹೋಗಿರುತ್ತಾರೆ. ಹಾಗಾಗಿ ಈಗಲೇ ಮಕ್ಕಳನ್ನು ಕಳುಹಿಸಿದರೆ ಅವರು ಊಟವಿಲ್ಲದೆ ಹೋಗಬೇಕಾಗುತ್ತದೆ ಎಂದು ಸಮರ್ಥಿಸಿಕೊಂಡಿದ್ದರು.

ಆದರೆ ಅಶೋಕ್ ಇದನ್ನು ಒಪ್ಪದೆ ಹಠಮಾರಿ ದೋರಣೆ ತೆಳೆದು ಮುಖ್ಯೋಪಾಧ್ಯಾಯಿನಿ ಮೇಲೆ ರೇಗಲು ಪ್ರಾರಂಭಿಸಿ ಅಸಭ್ಯವಾಗಿ ನಡೆದುಕೊಂಡಿದ್ದಾರೆ ಎಂದು ಸಾಕ್ಷಿ ಪತ್ರಿಕೆ ವರದಿ ಮಾಡಿದೆ. ಈ ವೇಳೆ ಅವರ ಮಾತಿಗೆ ಕುಪಿತಗೊಂಡ ಲಕ್ಷ್ಮಿದೇವಿ ಅವರು ಬಿಗಿಯಾಗಿ ಕಪಾಳ ಮೋಕ್ಷ ಮಾಡಿ ಅವರನ್ನು ವಾಪಾಸು ಕಳುಹಿಸಿದ್ದಾರೆ.

ಇದನ್ನೂ ಓದಿ: 60 ವರ್ಷದ ಮಹಿಳೆಗೆ ಕಿರುಕುಳ: ಎಬಿವಿಪಿ ಮಾಜಿ ರಾಷ್ಟ್ರೀಯ ಅಧ್ಯಕ್ಷನ ಬಂಧನ

ಘಟನೆಯ ವೇಳೆ ಪೊಲೀಸರು ಕೂಡಾ ಸ್ಥಳದಲ್ಲಿ ಇದ್ದರು. “ವಿದ್ಯಾರ್ಥಿಗಳಿಗೆ ಊಟ ನೀಡಿದ ನಂತರ ಅವರನ್ನು ಮನೆಗೆ ಕಳುಹಿಸಿ ನಂತರ ಶಾಲೆಯನ್ನು ಮುಚ್ಚಲು ಮುಖ್ಯೋಪಾಧ್ಯಾಯಿನಿ ಸಿದ್ದರಿದ್ದರು. ಆದರೆ ಅಶೋಕ್ ಹಠಮಾರಿ ಧೋರಣೆ ತೆಳೆದು ಅಸಭ್ಯವಾಗಿ ನಡೆದಿದ್ದರಿಂದ ಇದು ನಡೆದಿದೆ” ಎಂದು ಪ್ರತ್ಯಕ್ಷದರ್ಶಿಗಳು ಮುಖ್ಯೋಪಾಧ್ಯಾಯಿನಿಯ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ ಎಂದು ಸಾಕ್ಷಿ ಪತ್ರಿಕೆ ಹೇಳಿದೆ.

ವಿಡಿಯೊ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಶಾಲಾ ಮುಖ್ಯೋಪಾಧ್ಯಾಯರು ಆ ದರಿದ್ರ ಮುಂಡೆಮಗನಿಗೆ ತಕ್ಕ ಶಾಸ್ತಿಯನ್ನೇ ಮಾಡಿದ್ದಾರೆ. ಈ ಎಬಿವಿಪಿ ಲೋಫರ್ಸ್‌ಗಳ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಿ ಒದ್ದು ಒಳಗೆ ಹಾಕಿ ಎಲುಬು ಮರಿಬೇಕು.

  2. Inviting troubles ಅನ್ನೋದು ಇದಕ್ಕೇ. ಸಂಘಿಗಳು ತೀರಾ ನೀಚ ಮತ್ತು ಕೊಳಕು ಸ್ವಭಾವದವರು. ಆ ಶಿಕ್ಷಕಿಗೆ ಸರಕಾರ ಸೂಕ್ತ ರಕ್ಷಣೆ ಒದಗಿಸಲಿ.

LEAVE A REPLY

Please enter your comment!
Please enter your name here

- Advertisment -

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...