Homeಕರ್ನಾಟಕಬಿಜೆಪಿ ಕಾರ್ಯಕರ್ತರ ಆಕ್ರೋಶದ ಬಿಸಿ: ಮಧ್ಯರಾತ್ರಿ ಸುದ್ದಿಗೋಷ್ಠಿ ನಡೆಸಿ ‘ಜನೋತ್ಸವ’ ಮುಂದೂಡಿದ ಸಿಎಂ

ಬಿಜೆಪಿ ಕಾರ್ಯಕರ್ತರ ಆಕ್ರೋಶದ ಬಿಸಿ: ಮಧ್ಯರಾತ್ರಿ ಸುದ್ದಿಗೋಷ್ಠಿ ನಡೆಸಿ ‘ಜನೋತ್ಸವ’ ಮುಂದೂಡಿದ ಸಿಎಂ

- Advertisement -
- Advertisement -

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆಯ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರ ಆಕ್ರೋಶ ಭುಗಿಲೆದ್ದಿದೆ. ಈ ಎಲ್ಲ ಬೆಳವಣಿಗೆಗಳ ನಡುವೆ ತಡರಾತ್ರಿ ಸುದ್ದಿಗೋಷ್ಠಿ ನಡೆಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಾಧನಾ ಸಮಾವೇಶ ‘ಜನೋತ್ಸವ’ ಕಾರ್ಯಕ್ರಮ ರದ್ದುಪಡಿಸಿರುವುದಾಗಿ ತಿಳಿಸಿದ್ದಾರೆ.

ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡು ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಗುರುವಾರ (ಜುಲೈ 28) ಜನೋತ್ಸವ ಆಯೋಜಿಸಿತ್ತು. ಆದರೆ ಪ್ರವೀಣ್‌ ಕೊಲೆಯ ಬಳಿಕ ಕಾರ್ಯಕರ್ತರು ಅಸಮಾಧಾನಗೊಂಡಿರುವುದು ಪಕ್ಷಕ್ಕೆ ಮುಜುಗರ ತಂದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಆರ್‌.ಟಿ. ನಗರದಲ್ಲಿರುವ ತಮ್ಮ ನಿವಾಸದಲ್ಲಿ ತಡರಾತ್ರಿ 12.30ಕ್ಕೆ ತುರ್ತು ಸುದ್ದಿಗೋಷ್ಠಿ ನಡೆಸಿದರು. ‘ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ನಮ್ಮ ಪಕ್ಷದ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆಯ ಹಿನ್ನೆಲೆಯಲ್ಲಿ ಜನೋತ್ಸವವನ್ನು ರದ್ದುಪಡಿಸಲಾಗಿದೆ’ ಎಂದು ತಿಳಿಸಿದರು.

ಬೆಳಿಗ್ಗೆಯಿಂದ ಅನೇಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೆ. ಪ್ರವೀಣ ಹತ್ಯೆ ಹಾಗೂ ನಮ್ಮ ಪಕ್ಷದ ಯುವಕರ ಆಕ್ರೋಶವನ್ನೂ ಗಮನಿಸಿದೆ. ನನ್ನ ಮನಸ್ಸಿಗೂ ತುಂಬಾ ನೋವಾಗಿದೆ. ಬಹಳ ತೊಳಲಾಟದಲ್ಲಿದ್ದೆ.ಹತ್ಯೆಯಾದ ಪ್ರವೀಣ್‌ ಅವರ ತಾಯಿಯ ಆಕ್ರಂದನ ನೋಡಿದ ಬಳಿಕ ಕಾರ್ಯಕ್ರಮ ರದ್ದುಪಡಿಸಲು ತೀರ್ಮಾನಿಸಿದೆ. ಜನೋತ್ಸವ ಮಾಡಲು ನನ್ನ ಮನಃಸಾಕ್ಷಿ ಒಪ್ಪಲಿಲ್ಲ. ಹಾಗಾಗಿ ಮುಂದೂಡಲು ತೀರ್ಮಾನಿಸಿದೆ. ಪತ್ರಿಕಾಗೋಷ್ಠಿಗೆ ಬರುವ ಮುನ್ನ ನಮ್ಮ ಪಕ್ಷದ ಅಧ್ಯಕ್ಷರಾದ ಜೆ.ಪಿ. ನಡ್ಡಾ ಸೇರಿದಂತೆ ಪ್ರಮುಖರಿಗೆ ಈ ಮಾಹಿತಿಯನ್ನು ನೀಡಲಾಗಿದೆ ಎಂದಿದ್ದಾರೆ.

ಜನೋತ್ಸವ ನಡೆಸುವ ಮೂಲಕ ನಮ್ಮ ಸರ್ಕಾರ ಜನಪರವಾಗಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದನ್ನು, ಮುಂದಿನ ಯೋಜನೆಗಳನ್ನು ಘೋಷಿಸಬೇಕು ಎಂದು ನಿಶ್ಚಯಿಸಿದ್ದೆವು. ನಮ್ಮ ಪಕ್ಷದ ಅಮಾಯಕ ಹಾಗೂ ನಿಷ್ಠಾವಂತ ಕಾರ್ಯಕರ್ತ ಪ್ರವೀಣರ ಹತ್ಯೆಯ ನೋವು  ಹಾಗೂ ಯುವ ಸಮುದಾಯದ ಭಾವನೆಯನ್ನು ಗಮನಿಸಿದೆ ಎಂದು ಹೇಳಿದ್ದಾರೆ.

ಯುವಕರು, ದಲಿತರು, ಹಿಂದುಳಿದವರು ಹಾಗೂ ಮಹಿಳೆಯರ ಪರವಾದ ಕಾರ್ಯಕ್ರಮಗಳನ್ನು ಮುಂದುವರಿಸುತ್ತೇವೆ. ದೊಡ್ಡಬಳ್ಳಾಪುರ ಹಾಗೂ ವಿಧಾನಸೌಧದಲ್ಲಿ ನಡೆಯುವ ಎಲ್ಲ ಕಾರ್ಯಕ್ರಮಗಳು ರದ್ದಾಗಿವೆ. ಆದರೆ, ಜನಪರ ಕಾರ್ಯಕ್ರಮ-ಯೋಜನೆಗಳನ್ನು ಮಾಧ್ಯಮದವರ ಮೂಲಕ ಪ್ರಕಟಿಸುತ್ತೇವೆ ಎಂದು ಮಾಹಿತಿ ನೀಡಿದ್ದಾರೆ.

ಜನೋತ್ಸವ ರದ್ದಾಗಿರುವುದಕ್ಕೆ ಸಚಿವರಾದ ಸುಧಾಕರ್, ಮುನಿರತ್ನ, ನಾಗರಾಜ್ ಹಾಗೂ ಎಲ್ಲ ಕಾರ್ಯಕರ್ತರ ಕ್ಷಮೆ ಕೇಳುತ್ತೇನೆ ಎಂದಿರುವ ಅವರು, ಪ್ರವೀಣ್‌ ಹತ್ಯೆಯ ಆರೋಪಿಗಳನ್ನು ಸದೆಬಡಿಯಲು ಸರ್ಕಾರ ಬದ್ಧವಾಗಿದ್ದು, ಮಾಮೂಲಾದ ಕ್ರಮಗಳ ಹೊರತಾಗಿ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಇಂಥ ಕೃತ್ಯದಲ್ಲಿ ಭಾಗಿಯಾದ ಸಂಘಟನೆಗಳನ್ನು ನಾಶ ಮಾಡಲು, ಈಗ ಇರುವ ವ್ಯವಸ್ಥೆಯ ಹೊರತಾಗಿ ವಿಶೇಷವಾದ ಭಯೋತ್ಪಾದನಾ ನಿಗ್ರಹ ಕಮಾಂಡೋವನ್ನು ರಚಿಸಲು ನಾವು ಉದ್ದೇಶಿಸಿದ್ದೇವೆ ಎಂದಿದ್ದಾರೆ.

ಕಾರ್ಯಕರ್ತರ ಆಕ್ರೋಶ

ಕೊಲೆಯಾದ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ ಮನೆಗೆ ಬುಧವಾರ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿದ ವೇಳೆ ಪ್ರತಿಭಟನೆಯನ್ನು ಎದುರಿಸಬೇಕಾಯಿತು.

ಬಿಜೆಪಿ ಕಾರ್ಯಕರ್ತರು ನಳಿನ್ ಕುಮಾರ್ ಅವರಿಗೆ ಧಿಕ್ಕಾರ ಕೂಗಿದ್ದರು. ‘ರಾಜ್ಯ ಹಾಗೂ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇದ್ದರೂ ಪಕ್ಷದ ಕಾರ್ಯಕರ್ತನನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ ಏಕೆ’ ಎಂದು ಪ್ರಶ್ನಿಸಿದ ಅವರು, ಪಕ್ಷದ ಅಮಾಯಕ ಕಾರ್ಯಕರ್ತನ ಸಾವಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದ್ದರು.

ಕೊಲೆಗೀಡಾಗಿರುವ ಬಿಜೆಪಿ ಯುವಮೋರ್ಚಾದ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರ್ ಅವರ ಅಂತಿಮ‌ ದರ್ಶನಕ್ಕಾಗಿ ಬೆಳ್ಳಾರೆಗೆ ನಳಿನ್ ಕುಮಾರ್ ಕಟೀಲ್, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್‌ ಕುಮಾರ್ ಮತ್ತು ಪುತ್ತೂರು ಶಾಸಕ ಸಂಜೀವ ಮಠಂದೂರು ಒಟ್ಟಿಗೆ ಬಂದರು. ಅವರು ಕಾರಿನಿಂದ ಇಳಿಯುತ್ತಿದ್ದಂತೆಯೇ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು ನಳಿನ್‌ ಕುಮಾರ್ ಕಟೀಲ್ ಮತ್ತು ಬಿಜೆಪಿಗೆ ಧಿಕ್ಕಾರ ಕೂಗಿದ್ದರು.

ಕಾರನ್ನು ಉರುಳಿಸಲೂ ಕಾರ್ಯಕರ್ತರು ಯತ್ನಿಸಿದರು. ಟೈರ್​ಗಳಿಂದ ಗಾಳಿ ಹೊರಬಿಟ್ಟರು. ಪರಿಸ್ಥಿತಿ ಕೈಮೀರುವುದು ಮನಗಂಡ ಪೊಲೀಸರು ಲಾಠಿ ಚಾರ್ಜ್ ಮಾಡಿ ಗುಂಪು ಚೆದುರಿಸಿದರು. ಪೊಲೀಸ್ ಭದ್ರತೆಯಲ್ಲಿಯೇ ನಳಿನ್ ಕುಮಾರ್ ಕಟೀಲ್ ಸ್ಥಳದಿಂದ ಹೊರನಡೆದರು.

ಇದನ್ನೂ ಓದಿರಿ: ಶವ ಮೆರವಣಿಗೆಯ ಕರಾಳ ಇತಿಹಾಸದಿಂದ ಪಾಠ ಕಲಿತ್ತಿಲ್ಲವೇ ಕರ್ನಾಟಕ ಜನತೆ?

ಹಲವು ಕಡೆ ಪದಾಧಿಕಾರಿಗಳು ಬಿಜೆಪಿಗೆ ರಾಜೀನಾಮೆ ನೀಡಿ ಹೊರನಡೆದಿದ್ದಾರೆ. ಇದರಿಂದ ಪಕ್ಷವು ಇಕ್ಕಟ್ಟಿಗೆ ಸಿಲುಕಿದಂತೆ ಭಾಸವಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...