Homeಕರ್ನಾಟಕಬಿಜೆಪಿ ಕಾರ್ಯಕರ್ತರ ಆಕ್ರೋಶದ ಬಿಸಿ: ಮಧ್ಯರಾತ್ರಿ ಸುದ್ದಿಗೋಷ್ಠಿ ನಡೆಸಿ ‘ಜನೋತ್ಸವ’ ಮುಂದೂಡಿದ ಸಿಎಂ

ಬಿಜೆಪಿ ಕಾರ್ಯಕರ್ತರ ಆಕ್ರೋಶದ ಬಿಸಿ: ಮಧ್ಯರಾತ್ರಿ ಸುದ್ದಿಗೋಷ್ಠಿ ನಡೆಸಿ ‘ಜನೋತ್ಸವ’ ಮುಂದೂಡಿದ ಸಿಎಂ

- Advertisement -
- Advertisement -

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆಯ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರ ಆಕ್ರೋಶ ಭುಗಿಲೆದ್ದಿದೆ. ಈ ಎಲ್ಲ ಬೆಳವಣಿಗೆಗಳ ನಡುವೆ ತಡರಾತ್ರಿ ಸುದ್ದಿಗೋಷ್ಠಿ ನಡೆಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಾಧನಾ ಸಮಾವೇಶ ‘ಜನೋತ್ಸವ’ ಕಾರ್ಯಕ್ರಮ ರದ್ದುಪಡಿಸಿರುವುದಾಗಿ ತಿಳಿಸಿದ್ದಾರೆ.

ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡು ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಗುರುವಾರ (ಜುಲೈ 28) ಜನೋತ್ಸವ ಆಯೋಜಿಸಿತ್ತು. ಆದರೆ ಪ್ರವೀಣ್‌ ಕೊಲೆಯ ಬಳಿಕ ಕಾರ್ಯಕರ್ತರು ಅಸಮಾಧಾನಗೊಂಡಿರುವುದು ಪಕ್ಷಕ್ಕೆ ಮುಜುಗರ ತಂದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಆರ್‌.ಟಿ. ನಗರದಲ್ಲಿರುವ ತಮ್ಮ ನಿವಾಸದಲ್ಲಿ ತಡರಾತ್ರಿ 12.30ಕ್ಕೆ ತುರ್ತು ಸುದ್ದಿಗೋಷ್ಠಿ ನಡೆಸಿದರು. ‘ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ನಮ್ಮ ಪಕ್ಷದ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆಯ ಹಿನ್ನೆಲೆಯಲ್ಲಿ ಜನೋತ್ಸವವನ್ನು ರದ್ದುಪಡಿಸಲಾಗಿದೆ’ ಎಂದು ತಿಳಿಸಿದರು.

ಬೆಳಿಗ್ಗೆಯಿಂದ ಅನೇಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೆ. ಪ್ರವೀಣ ಹತ್ಯೆ ಹಾಗೂ ನಮ್ಮ ಪಕ್ಷದ ಯುವಕರ ಆಕ್ರೋಶವನ್ನೂ ಗಮನಿಸಿದೆ. ನನ್ನ ಮನಸ್ಸಿಗೂ ತುಂಬಾ ನೋವಾಗಿದೆ. ಬಹಳ ತೊಳಲಾಟದಲ್ಲಿದ್ದೆ.ಹತ್ಯೆಯಾದ ಪ್ರವೀಣ್‌ ಅವರ ತಾಯಿಯ ಆಕ್ರಂದನ ನೋಡಿದ ಬಳಿಕ ಕಾರ್ಯಕ್ರಮ ರದ್ದುಪಡಿಸಲು ತೀರ್ಮಾನಿಸಿದೆ. ಜನೋತ್ಸವ ಮಾಡಲು ನನ್ನ ಮನಃಸಾಕ್ಷಿ ಒಪ್ಪಲಿಲ್ಲ. ಹಾಗಾಗಿ ಮುಂದೂಡಲು ತೀರ್ಮಾನಿಸಿದೆ. ಪತ್ರಿಕಾಗೋಷ್ಠಿಗೆ ಬರುವ ಮುನ್ನ ನಮ್ಮ ಪಕ್ಷದ ಅಧ್ಯಕ್ಷರಾದ ಜೆ.ಪಿ. ನಡ್ಡಾ ಸೇರಿದಂತೆ ಪ್ರಮುಖರಿಗೆ ಈ ಮಾಹಿತಿಯನ್ನು ನೀಡಲಾಗಿದೆ ಎಂದಿದ್ದಾರೆ.

ಜನೋತ್ಸವ ನಡೆಸುವ ಮೂಲಕ ನಮ್ಮ ಸರ್ಕಾರ ಜನಪರವಾಗಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದನ್ನು, ಮುಂದಿನ ಯೋಜನೆಗಳನ್ನು ಘೋಷಿಸಬೇಕು ಎಂದು ನಿಶ್ಚಯಿಸಿದ್ದೆವು. ನಮ್ಮ ಪಕ್ಷದ ಅಮಾಯಕ ಹಾಗೂ ನಿಷ್ಠಾವಂತ ಕಾರ್ಯಕರ್ತ ಪ್ರವೀಣರ ಹತ್ಯೆಯ ನೋವು  ಹಾಗೂ ಯುವ ಸಮುದಾಯದ ಭಾವನೆಯನ್ನು ಗಮನಿಸಿದೆ ಎಂದು ಹೇಳಿದ್ದಾರೆ.

ಯುವಕರು, ದಲಿತರು, ಹಿಂದುಳಿದವರು ಹಾಗೂ ಮಹಿಳೆಯರ ಪರವಾದ ಕಾರ್ಯಕ್ರಮಗಳನ್ನು ಮುಂದುವರಿಸುತ್ತೇವೆ. ದೊಡ್ಡಬಳ್ಳಾಪುರ ಹಾಗೂ ವಿಧಾನಸೌಧದಲ್ಲಿ ನಡೆಯುವ ಎಲ್ಲ ಕಾರ್ಯಕ್ರಮಗಳು ರದ್ದಾಗಿವೆ. ಆದರೆ, ಜನಪರ ಕಾರ್ಯಕ್ರಮ-ಯೋಜನೆಗಳನ್ನು ಮಾಧ್ಯಮದವರ ಮೂಲಕ ಪ್ರಕಟಿಸುತ್ತೇವೆ ಎಂದು ಮಾಹಿತಿ ನೀಡಿದ್ದಾರೆ.

ಜನೋತ್ಸವ ರದ್ದಾಗಿರುವುದಕ್ಕೆ ಸಚಿವರಾದ ಸುಧಾಕರ್, ಮುನಿರತ್ನ, ನಾಗರಾಜ್ ಹಾಗೂ ಎಲ್ಲ ಕಾರ್ಯಕರ್ತರ ಕ್ಷಮೆ ಕೇಳುತ್ತೇನೆ ಎಂದಿರುವ ಅವರು, ಪ್ರವೀಣ್‌ ಹತ್ಯೆಯ ಆರೋಪಿಗಳನ್ನು ಸದೆಬಡಿಯಲು ಸರ್ಕಾರ ಬದ್ಧವಾಗಿದ್ದು, ಮಾಮೂಲಾದ ಕ್ರಮಗಳ ಹೊರತಾಗಿ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಇಂಥ ಕೃತ್ಯದಲ್ಲಿ ಭಾಗಿಯಾದ ಸಂಘಟನೆಗಳನ್ನು ನಾಶ ಮಾಡಲು, ಈಗ ಇರುವ ವ್ಯವಸ್ಥೆಯ ಹೊರತಾಗಿ ವಿಶೇಷವಾದ ಭಯೋತ್ಪಾದನಾ ನಿಗ್ರಹ ಕಮಾಂಡೋವನ್ನು ರಚಿಸಲು ನಾವು ಉದ್ದೇಶಿಸಿದ್ದೇವೆ ಎಂದಿದ್ದಾರೆ.

ಕಾರ್ಯಕರ್ತರ ಆಕ್ರೋಶ

ಕೊಲೆಯಾದ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ ಮನೆಗೆ ಬುಧವಾರ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿದ ವೇಳೆ ಪ್ರತಿಭಟನೆಯನ್ನು ಎದುರಿಸಬೇಕಾಯಿತು.

ಬಿಜೆಪಿ ಕಾರ್ಯಕರ್ತರು ನಳಿನ್ ಕುಮಾರ್ ಅವರಿಗೆ ಧಿಕ್ಕಾರ ಕೂಗಿದ್ದರು. ‘ರಾಜ್ಯ ಹಾಗೂ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇದ್ದರೂ ಪಕ್ಷದ ಕಾರ್ಯಕರ್ತನನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ ಏಕೆ’ ಎಂದು ಪ್ರಶ್ನಿಸಿದ ಅವರು, ಪಕ್ಷದ ಅಮಾಯಕ ಕಾರ್ಯಕರ್ತನ ಸಾವಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದ್ದರು.

ಕೊಲೆಗೀಡಾಗಿರುವ ಬಿಜೆಪಿ ಯುವಮೋರ್ಚಾದ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರ್ ಅವರ ಅಂತಿಮ‌ ದರ್ಶನಕ್ಕಾಗಿ ಬೆಳ್ಳಾರೆಗೆ ನಳಿನ್ ಕುಮಾರ್ ಕಟೀಲ್, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್‌ ಕುಮಾರ್ ಮತ್ತು ಪುತ್ತೂರು ಶಾಸಕ ಸಂಜೀವ ಮಠಂದೂರು ಒಟ್ಟಿಗೆ ಬಂದರು. ಅವರು ಕಾರಿನಿಂದ ಇಳಿಯುತ್ತಿದ್ದಂತೆಯೇ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು ನಳಿನ್‌ ಕುಮಾರ್ ಕಟೀಲ್ ಮತ್ತು ಬಿಜೆಪಿಗೆ ಧಿಕ್ಕಾರ ಕೂಗಿದ್ದರು.

ಕಾರನ್ನು ಉರುಳಿಸಲೂ ಕಾರ್ಯಕರ್ತರು ಯತ್ನಿಸಿದರು. ಟೈರ್​ಗಳಿಂದ ಗಾಳಿ ಹೊರಬಿಟ್ಟರು. ಪರಿಸ್ಥಿತಿ ಕೈಮೀರುವುದು ಮನಗಂಡ ಪೊಲೀಸರು ಲಾಠಿ ಚಾರ್ಜ್ ಮಾಡಿ ಗುಂಪು ಚೆದುರಿಸಿದರು. ಪೊಲೀಸ್ ಭದ್ರತೆಯಲ್ಲಿಯೇ ನಳಿನ್ ಕುಮಾರ್ ಕಟೀಲ್ ಸ್ಥಳದಿಂದ ಹೊರನಡೆದರು.

ಇದನ್ನೂ ಓದಿರಿ: ಶವ ಮೆರವಣಿಗೆಯ ಕರಾಳ ಇತಿಹಾಸದಿಂದ ಪಾಠ ಕಲಿತ್ತಿಲ್ಲವೇ ಕರ್ನಾಟಕ ಜನತೆ?

ಹಲವು ಕಡೆ ಪದಾಧಿಕಾರಿಗಳು ಬಿಜೆಪಿಗೆ ರಾಜೀನಾಮೆ ನೀಡಿ ಹೊರನಡೆದಿದ್ದಾರೆ. ಇದರಿಂದ ಪಕ್ಷವು ಇಕ್ಕಟ್ಟಿಗೆ ಸಿಲುಕಿದಂತೆ ಭಾಸವಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಗಾಜಾದಲ್ಲಿ ನರಮೇಧ ಮುಂದುವರೆಸಿದ ಇಸ್ರೇಲ್: 80 ದಿನಗಳಲ್ಲಿ 969 ಬಾರಿ ಕದನ ವಿರಾಮ ಉಲ್ಲಂಘನೆ: 418ಜನರ ಹತ್ಯೆ

80 ದಿನಗಳ ಅವಧಿಯಲ್ಲಿ ಇಸ್ರೇಲ್ 969 ಬಾರಿ ಕದನ ವಿರಾಮ ಒಪ್ಪಂದವನ್ನು ಉಲ್ಲಂಘಿಸಿದ್ದು, 418 ನಾಗರಿಕರು ಸಾವನ್ನಪ್ಪಿದ್ದಾರೆ ಮತ್ತು 1,141 ಜನರು ಗಾಯಗೊಂಡಿದ್ದಾರೆ ಎಂದು ಗಾಜಾದಲ್ಲಿರುವ ಸರ್ಕಾರಿ ಮಾಧ್ಯಮ ಕಚೇರಿ ತಿಳಿಸಿದೆ. ಭಾನುವಾರ ಬಿಡುಗಡೆ...

BREAKING NEWS: ಉನ್ನಾವೋ ಅತ್ಯಾಚಾರ: ಸೆಂಗಾರ್ ಜೀವಾವಧಿ ಶಿಕ್ಷೆ ಅಮಾನತುಗೊಳಿಸಿದ ದೆಹಲಿ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ

2017 ರ ಉನ್ನಾವೋ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಉಚ್ಚಾಟಿತ ಭಾರತೀಯ ಜನತಾ ಪಕ್ಷ (ಬಿಜೆಪಿ) ನಾಯಕ ಕುಲದೀಪ್ ಸಿಂಗ್ ಸೆಂಗಾರ್ ಅವರ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿದ್ದ ದೆಹಲಿ ಹೈಕೋರ್ಟ್ ಆದೇಶವನ್ನು...

‘ಲವ್ ಜಿಹಾದ್’ ಆರೋಪ: ಬರೇಲಿಯಲ್ಲಿ ಹುಟ್ಟುಹಬ್ಬದ ಪಾರ್ಟಿಯನ್ನು ಹಿಂಸಾಚಾರಕ್ಕೆ ತಿರುಗಿಸಿದ ಬಜರಂಗದಳ 

ಬರೇಲಿಯ ಕೆಫೆಯೊಂದರಲ್ಲಿ ನರ್ಸಿಂಗ್ ವಿದ್ಯಾರ್ಥಿನಿಯ ಹುಟ್ಟುಹಬ್ಬದ ಆಚರಣೆಯಾಗಿ ಆರಂಭವಾದ ಸಂಭ್ರಮ, ಶನಿವಾರ ಬಜರಂಗದಳ ಸದಸ್ಯರು ಸ್ಥಳಕ್ಕೆ ನುಗ್ಗಿ, ಅತಿಥಿಗಳ ಮೇಲೆ ಹಲ್ಲೆ ನಡೆಸಿ, ಅಲ್ಲಿದ್ದ ಇಬ್ಬರು ಮುಸ್ಲಿಂ ಹುಡುಗರನ್ನು "ಲವ್ ಜಿಹಾದ್" ಎಂದು...

ಉನ್ನಾವೋ ಅತ್ಯಾಚಾರ: ಕುಲದೀಪ್ ಸೆಂಗಾರ್ ಶಿಕ್ಷೆ ಅಮಾನತು ಪ್ರಶ್ನಿಸಿದ ಅರ್ಜಿ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ

ಉನ್ನಾವೋ ಅತ್ಯಾಚಾರ ಪ್ರಕರಣದ ಅಪರಾಧಿ, ಬಿಜೆಪಿ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್‌ನ ಜೀವಾವಧಿ ಶಿಕ್ಷೆ ಅಮಾನತ್ತಿನಲ್ಲಿಟ್ಟಿರುವುದನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ಅರ್ಜಿಯ ವಿಚಾರಣೆ ಇಂದು (ಡಿ.29) ಸುಪ್ರೀಂ ಕೋರ್ಟ್‌ನಲ್ಲಿ ನಡೆಯಲಿದೆ. ಮುಖ್ಯ ನ್ಯಾಯಮೂರ್ತಿ...

ಟಾಟಾನಗರ-ಎರ್ನಾಕುಲಂ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ : ಓರ್ವ ಪ್ರಯಾಣಿಕ ಸಾವು

ಆಂಧ್ರ ಪ್ರದೇಶದ ಅನಕಪಲ್ಲಿ ಜಿಲ್ಲೆಯ ಎಲಮಂಚಿಲಿ ಬಳಿ ಟಾಟಾನಗರ-ಎರ್ನಾಕುಲಂ ಎಕ್ಸ್‌ಪ್ರೆಸ್‌ ರೈಲಿನ ಎರಡು ಬೋಗಿಗಳಲ್ಲಿ ಸೋಮವಾರ (ಡಿ.29) ಮುಂಜಾನೆ ಬೆಂಕಿ ಕಾಣಿಸಿಕೊಂಡಿದ್ದು, ಓರ್ವ ಪ್ರಯಾಣಿಕ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಅನಕಪಲ್ಲಿ ಪೊಲೀಸ್ ವರಿಷ್ಠಾಧಿಕಾರಿ...

ಉಸ್ಮಾನ್ ಹಾದಿ ಹತ್ಯೆ : ಇಬ್ಬರು ಪ್ರಮುಖ ಶಂಕಿತರು ಮೇಘಾಲಯ ಮೂಲಕ ಭಾರತಕ್ಕೆ ಪರಾರಿಯಾಗಿದ್ದಾರೆ ಎಂದ ಬಾಂಗ್ಲಾ ಪೊಲೀಸರು

ಬಾಂಗ್ಲಾದೇಶದ ರಾಜಕೀಯ ಕಾರ್ಯಕರ್ತ ಉಸ್ಮಾನ್ ಹಾದಿ ಹತ್ಯೆಯ ಇಬ್ಬರು ಪ್ರಮುಖ ಶಂಕಿತರು ಮೇಘಾಲಯ ಗಡಿಯ ಮೂಲಕ ಭಾರತಕ್ಕೆ ಪಲಾಯನ ಮಾಡಿದ್ದಾರೆ ಎಂದು ಢಾಕಾ ಮೆಟ್ರೋಪಾಲಿಟನ್ ಪೊಲೀಸರು (ಡಿಎಂಪಿ) ತಿಳಿಸಿದ್ದಾರೆ ಎಂದು ದಿ ಡೈಲಿ...

ರಾಷ್ಟ್ರಪಿತನ‌ ಹೆಸರನ್ನೇ ಅಳಿಸುವ ಪಿತೂರಿಯನ್ನು ಸೋಲಿಸೋಣ : ಸಿಎಂ ಸಿದ್ದರಾಮಯ್ಯ

ನರೇಗಾ ಯೋಜನೆಗೆ ಮರುನಾಮಕರಣದ ಮೂಲಕ ರಾಷ್ಟ್ರಪಿತನ ಹೆಸರನ್ನೇ ಅಳಿಸಲು ಹೊರಟಿರುವ ಪ್ರಯತ್ನವನ್ನು ವಿಫಲಗೊಳಿಸಬೇಕು. ಗ್ರಾಮೀಣ ಆರ್ಥಿಕತೆಯನ್ನೇ ಹಾಳು ಮಾಡುವ ಹುನ್ನಾರ ಬಿಜೆಪಿಯದ್ದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿಯ ಭಾರತ್...

ವಿದ್ಯಾರ್ಥಿಗಳ ಪ್ರತಿಭಟನೆ: ರಾಜಕೀಯ ನಾಯಕರನ್ನು ಗೃಹಬಂಧನದಲ್ಲಿ ಇರಿಸಿದ ಜಮ್ಮು-ಕಾಶ್ಮೀರ ಪೊಲೀಸರು

ಸರ್ಕಾರ ಮೀಸಲಾತಿ ನೀತಿಯನ್ನು ತರ್ಕಬದ್ಧಗೊಳಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ಜೆ & ಕೆ ವಿದ್ಯಾರ್ಥಿಗಳು ಪ್ರತಿಭಟನೆ ಘೋಷಿಸುತ್ತಿದ್ದಂತೆ, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಶನಿವಾರ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಸಂಸದ ಮತ್ತು ಪೀಪಲ್ಸ್...

ಆರ್‌ಎಸ್‌ಎಸ್‌-ಬಿಜೆಪಿ ಸಂಘಟನಾ ಶಕ್ತಿ ಶ್ಲಾಘಿಸಿದ ದಿಗ್ವಿಜಯ ಸಿಂಗ್‌ಗೆ ಶಶಿ ತರೂರ್‌ ಬೆಂಬಲ : ಪವನ್‌ ಖೇರಾ ತಿರುಗೇಟು

ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಆರ್‌ಎಸ್‌ಎಸ್‌ನ ಸಂಘಟನಾ ಶಕ್ತಿಯನ್ನು ಶ್ಲಾಘಿಸಿ ಹೇಳಿಕೆ ನೀಡಿರುವುದು ಪಕ್ಷದೊಳಗೆ ಮುಜುಗರ, ಅಸಮಾಧಾನ ಮತ್ತು ಅಪಸ್ವರಕ್ಕೆ ಕಾರಣವಾಗಿದೆ ಎಂಬ ಚರ್ಚೆಗಳು ನಡೆಯುತ್ತಿವೆ. ಆದರೆ, ಸಿಂಗ್ ಹೇಳಿಕೆಯನ್ನು ಕಾಂಗ್ರೆಸ್‌...

ಕೋಗಿಲು ಬಳಿ ಒತ್ತುವರಿ ತೆರವು: ಕಳವಳ ವ್ಯಕ್ತಪಡಿಸಿದ ಕಾಂಗ್ರೆಸ್ ಹೈಕಮಾಂಡ್: ಪರಿಹಾರ ಕ್ರಮ ಜಾರಿಗೆ ತರುವಂತೆ ಸಿಎಂ, ಡಿಸಿಎಂಗೆ ಒತ್ತಾಯ 

ಬೆಂಗಳೂರು ಉತ್ತರದ ಕೋಗಿಲು ಲೇಔಟ್ ಬಳಿ ನಡೆದ ಮನೆಗಳ ತೆರವು ಪ್ರಕರಣ ಇದೀಗ ಕಾಂಗ್ರೆಸ್ ಪಕ್ಷದೊಳಗೆ ಬಿರುಕಿಗೂ ಕಾರಣವಾಗಿದೆ. ಮನೆಗಳ ತೆರವು ವಿಚಾರ ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದ್ದು, ಆಡಳಿತ ಪಕ್ಷಕ್ಕೆ ಅಹಿತಕರವಾಗಿ ಪರಿಣಮಿಸುತ್ತಿದ್ದಂತೆಯೇ...