Homeಕರ್ನಾಟಕಬಾಗಲಕೋಟೆಯನ್ನೂ ಬಿಡಲಿಲ್ಲ ಬಿಜೆಪಿಯ ಬಂಡಾಯದ ಬಿಸಿ; ಒಗ್ಗಟ್ಟಾದ ಚರಂತಿಮಠ ವಿರುದ್ಧದ ಧ್ವನಿಗಳು

ಬಾಗಲಕೋಟೆಯನ್ನೂ ಬಿಡಲಿಲ್ಲ ಬಿಜೆಪಿಯ ಬಂಡಾಯದ ಬಿಸಿ; ಒಗ್ಗಟ್ಟಾದ ಚರಂತಿಮಠ ವಿರುದ್ಧದ ಧ್ವನಿಗಳು

- Advertisement -
- Advertisement -

ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ಮಂಗಳವಾರ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಆದರೆ ಈ ಪಟ್ಟಿ ಬಿಡುಗಡೆಯ ಬಳಿಕ ರಾಜ್ಯದ ಬಹುತೇಕ ಕಡೆಗಳಲ್ಲಿ ಬಂಡಾಯ ಜೋರಾಗಿಯೇ ಸದ್ದು ಮಾಡುತ್ತಿದೆ. ಇದೀಗ ಬಾಗಲಕೋಟೆಯಲ್ಲೂ ಬಿಜೆಪಿಯ ಬಂಡಾಯದ ಬಿಸಿ ಜೋರಾಗಿದೆ. ಸಧ್ಯ ಹಾಲಿ ಶಾಸಕ ವೀರಣ್ಣ ಚರಂತಿಮಠ ಅವರಿಗೆ ಮತ್ತೆ ಟಿಕೆಟ್ ಘೋಷಣೆಯಾಗಿದ್ದು, ಅವರ ಸಹೋದರ ಹಾಗೂ ಹಲವು ಬಿಜೆಪಿ ಮುಖಂಡರು ವಿರೋಧ ವ್ಯಕ್ತಪಡಿಸಿ ಬಂಡಾಯದ ಬಾವುಟ ಹಾರಿಸಲು ಸಿದ್ಧರಾಗಿದ್ದಾರೆ.

ಬುಧವಾರ ಬೆಳಿಗ್ಗೆ ಬಿಜೆಪಿಯ ಯುವ ಮುಖಂಡ, ಶಾಸಕ ಚರಂತಿಮಠ ಸಹೋದರ ಮಲ್ಲಿಕಾರ್ಜುನ ಚರಂತಿಮಠ ಅವರು, ತಮ್ಮ ಅಭಿಮಾನಿಗಳು, ಬೆಂಬಲಿಗರು ಹಾಗೂ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ನಾನು ಇಲ್ಲವೇ ಸಂತೋಷ ಹೊಕ್ರಾಣಿ ಕಣಕ್ಕೆ ಇಳಿಯುವುದು ನಿಶ್ಚಿತ ಎಂದು ಘೋಷಣೆ ಮಾಡಿದರು.

”ಈಗಾಗಲೇ ಬಾಗಲಕೋಟೆ ವಿಧಾನಸಭಾ ಮತಕ್ಷೇತ್ರದ್ಯಾಂತ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದ್ದು, ನಾನು ಇಲ್ಲವೇ ಸಂತೋಷ ಹೊಕ್ರಾಣಿ ಇಬ್ಬರಲ್ಲಿ ಒಬ್ಬರು ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿ ಸಲಿದ್ದೇವೆ” ಎಂದು ತಿಳಿಸಿದರು.

ಈ ವೇಳೆ ಯುವ ಮುಖಂಡ ಸಂತೋಷ ಹೊಕ್ರಾಣಿ ಮಾತನಾಡಿ, ”ಬೂತ ಮಟ್ಟದಲ್ಲಿ ಕಾರ್ಯಕರ್ತರು ಕೆಲಸ ಮಾಡಿ ಗೆಲ್ಲಿಸುವ ಕೆಲಸವನ್ನು ಎಲ್ಲರೂ ಮಾಡಬೇಕು. ಈಗಾಗಲೇ ನಗರ ಹಾಗೂ ಗ್ರಾಮೀಣ ಭಾಗ ದಲ್ಲಿ ಪ್ರಚಾರ ನಡೆಸಿದ್ದು ಉತ್ತಮವಾದ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಜನಪ್ರತಿನಿಧಿಗಳ ಬಗ್ಗೆ ಆಕ್ರೋಶ
ವ್ಯಕ್ತಪಡಿಸುತ್ತಿದ್ದಾರೆ” ಎಂದು ಹೇಳಿದರು.

ಇದನ್ನೂ ಓದಿ: ಈಶ್ವರಪ್ಪ ನಿವೃತ್ತಿ ಘೋಷಣೆ ಬೆನ್ನಲ್ಲೇ ಶಿವಮೊಗ್ಗ ಪಾಲಿಕೆಯ ಮೇಯರ್, ಉಪಮೇಯರ್ ಸೇರಿ 19 ಸದಸ್ಯರಿಂದ ರಾಜೀನಾಮೆ

ಈ ವೇಳೆ ವಿಶ್ವ ಹಿಂದು ಪರಿಷತ್ ಜಿಲ್ಲಾಧ್ಯಕ್ಷ ಗಂಗಾಧರ ಮುರನಾಳ ಮಾತನಾಡಿ, ”ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಚರಂತಿಮಠ ಇಲ್ಲವೇ ಸಂತೋಷ ಹೊಕ್ರಾಣಿ ಸ್ಪರ್ಧಿಸಲಿದ್ದಾರೆ ಅವರನ್ನು ಗೆಲ್ಲಿಸುವುದು ನಮ್ಮ ಗುರಿಯಾಗಿದೆ” ಎಂದರು.

”ನಾನು ಕಳೆದ ಹಲವು ವರ್ಷಗಳಿಂದ ಸಂಘ ಪರಿವಾರದಲ್ಲಿ ಕೆಲಸ ಮಾಡುತ್ತಾ ಬಂದಿದ್ದು ಈಗಲೂ ಕೆಲಸ ಮಾಡುತ್ತಿದ್ದೇನೆ. ಯಾರೂ ಬಂಡಾಯದ ಕುರಿತು ಹೆದರಬೇಡಿ ಧೈರ್ಯದಿಂದ ಮುನ್ನುಗಿ ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸುವಂತಹ ಕೆಲಸ ಮಾಡಬೇಕಾಗಿದೆ. ಬದಲಾವಣೆ ಆಗುತ್ತಾರೆ ಎಂದು ನೋಡಿದೆವು ಆದರೆ ಅವರು ಯಾವುದೇ ಕಾರಣಕ್ಕೂ ಬದಲಾವಣೆ ಆಗುವುದಿಲ್ಲ. ನಾಯಿ ಬಾಲ ಯಾವತ್ತೂ ಡೊಂಕು ಇದ್ದಂತೆ” ಎಂದು ಸ್ಥಳೀಯ ಶಾಸಕ ವೀರಣ್ಣ ಚರಂತಿಮಠ ಬಗ್ಗೆ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.

ಹಿಂದು ಸಂಘಟನೆಯ ಮುಖಂಡ ಅಶೋಕ ಮುತ್ತಿನಮಠ ಮಾತನಾಡಿ, ”ಅನ್ಯಾಯದ ವಿರುದ್ದ ನಮ್ಮ
ಹೋರಾಟವಾಗಿದ್ದು, ಇದರಲ್ಲಿ ಜಯಶಾಲಿಯಾಗುತ್ತೇವೆ. ಇಂದು ಆಯೋಜಿಸಿದ್ದ ”ಬದಲಾವಣೆಗಾಗಿ ಪಾದಯಾತ್ರೆ”ಗೆ ಚುನಾವಣಾಧಿಕಾರಿಗಳು ಅವಕಾಶ ನೀಡದ ಹಿನ್ನೆಲೆಯಲ್ಲಿ ಪಾದಯಾತ್ರೆ ಯನ್ನು ರದ್ದುಪಡಿಸಲಾಗಿದೆ” ಎಂದು ತಿಳಿಸಿದರು.

ಈ ಸಭೆಯಲ್ಲಿ ಪ್ರಮುಖರಾದ ಬಸವರಾಜ ಕಟಗೇರಿ, ವಿಜಯ ಸುಲಾಖೆ, ಅರುಣ ಲೋಕಾಪೂರ, ಗುರು ಅನಗವಾಡಿ, ಬಸವರಾಜ ಮಾ ಟೂರ ಸೇರಿದಂತೆ ನೂರಾರು ಕಾರ್ಯಕರ್ತರು ಸಭೆಯಲ್ಲಿ ಭಾಗವಹಿಸಿದ್ದರು.

ಕಾಮಧೇನು ಸಂಸ್ಥೆಯ ಅಧ್ಯಕ್ಷ ರವಿ ಕುಮಟಗಿ ಮಾತನಾಡಿ, ಸ್ಥಳೀಯರಿಗೆ ಉದ್ಯೋಗ ನೀಡುವ ನಿಟ್ಟಿನಲ್ಲಿ ಬಾಗಲಕೋಟೆ ಮತಕ್ಷೇತ್ರದ ಶಾಸಕರು ಯಾವುದೇ ಕೆಲಸ ಮಾಡಿಲ್ಲ. ಜನರು ಬೇಸತ್ತಿದ್ದು ನಮ್ಮ ತಂಡವು ಯುವಕರಿಂದ ಕೂಡಿದ್ದು ನಮ್ಮನ್ನು ಆಯ್ಕೆ ಮಾಡಿದರೆ ಯುವಕರಿಗೆ ಉದ್ಯೋಗ ನೀಡುವ ನಿಟ್ಟಿನಲ್ಲಿ
ಕೆಲಸ ಮಾಡುತ್ತೇವೆ. ಸಮಗ್ರವಾಗಿ ಬಾಗಲಕೋಟೆ ಮತಕ್ಷೇತ್ರವನ್ನು ಅಭಿವೃದ್ದಿ ಮಾಡುತ್ತೇವೆ ಎಂದರು. ನಮ್ಮನ್ನು ಗೆಲ್ಲಿಸಲು ಕಾರ್ಯಕರ್ತರು ಪಣ ತೊಡಬೇಕು ಎಂದು ಕಾರ್ಯಕರ್ತರಲ್ಲಿ ಮನವಿ ಮಾಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...