Homeಕರ್ನಾಟಕಬಾಗಲಕೋಟೆಯನ್ನೂ ಬಿಡಲಿಲ್ಲ ಬಿಜೆಪಿಯ ಬಂಡಾಯದ ಬಿಸಿ; ಒಗ್ಗಟ್ಟಾದ ಚರಂತಿಮಠ ವಿರುದ್ಧದ ಧ್ವನಿಗಳು

ಬಾಗಲಕೋಟೆಯನ್ನೂ ಬಿಡಲಿಲ್ಲ ಬಿಜೆಪಿಯ ಬಂಡಾಯದ ಬಿಸಿ; ಒಗ್ಗಟ್ಟಾದ ಚರಂತಿಮಠ ವಿರುದ್ಧದ ಧ್ವನಿಗಳು

- Advertisement -
- Advertisement -

ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ಮಂಗಳವಾರ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಆದರೆ ಈ ಪಟ್ಟಿ ಬಿಡುಗಡೆಯ ಬಳಿಕ ರಾಜ್ಯದ ಬಹುತೇಕ ಕಡೆಗಳಲ್ಲಿ ಬಂಡಾಯ ಜೋರಾಗಿಯೇ ಸದ್ದು ಮಾಡುತ್ತಿದೆ. ಇದೀಗ ಬಾಗಲಕೋಟೆಯಲ್ಲೂ ಬಿಜೆಪಿಯ ಬಂಡಾಯದ ಬಿಸಿ ಜೋರಾಗಿದೆ. ಸಧ್ಯ ಹಾಲಿ ಶಾಸಕ ವೀರಣ್ಣ ಚರಂತಿಮಠ ಅವರಿಗೆ ಮತ್ತೆ ಟಿಕೆಟ್ ಘೋಷಣೆಯಾಗಿದ್ದು, ಅವರ ಸಹೋದರ ಹಾಗೂ ಹಲವು ಬಿಜೆಪಿ ಮುಖಂಡರು ವಿರೋಧ ವ್ಯಕ್ತಪಡಿಸಿ ಬಂಡಾಯದ ಬಾವುಟ ಹಾರಿಸಲು ಸಿದ್ಧರಾಗಿದ್ದಾರೆ.

ಬುಧವಾರ ಬೆಳಿಗ್ಗೆ ಬಿಜೆಪಿಯ ಯುವ ಮುಖಂಡ, ಶಾಸಕ ಚರಂತಿಮಠ ಸಹೋದರ ಮಲ್ಲಿಕಾರ್ಜುನ ಚರಂತಿಮಠ ಅವರು, ತಮ್ಮ ಅಭಿಮಾನಿಗಳು, ಬೆಂಬಲಿಗರು ಹಾಗೂ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ನಾನು ಇಲ್ಲವೇ ಸಂತೋಷ ಹೊಕ್ರಾಣಿ ಕಣಕ್ಕೆ ಇಳಿಯುವುದು ನಿಶ್ಚಿತ ಎಂದು ಘೋಷಣೆ ಮಾಡಿದರು.

”ಈಗಾಗಲೇ ಬಾಗಲಕೋಟೆ ವಿಧಾನಸಭಾ ಮತಕ್ಷೇತ್ರದ್ಯಾಂತ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದ್ದು, ನಾನು ಇಲ್ಲವೇ ಸಂತೋಷ ಹೊಕ್ರಾಣಿ ಇಬ್ಬರಲ್ಲಿ ಒಬ್ಬರು ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿ ಸಲಿದ್ದೇವೆ” ಎಂದು ತಿಳಿಸಿದರು.

ಈ ವೇಳೆ ಯುವ ಮುಖಂಡ ಸಂತೋಷ ಹೊಕ್ರಾಣಿ ಮಾತನಾಡಿ, ”ಬೂತ ಮಟ್ಟದಲ್ಲಿ ಕಾರ್ಯಕರ್ತರು ಕೆಲಸ ಮಾಡಿ ಗೆಲ್ಲಿಸುವ ಕೆಲಸವನ್ನು ಎಲ್ಲರೂ ಮಾಡಬೇಕು. ಈಗಾಗಲೇ ನಗರ ಹಾಗೂ ಗ್ರಾಮೀಣ ಭಾಗ ದಲ್ಲಿ ಪ್ರಚಾರ ನಡೆಸಿದ್ದು ಉತ್ತಮವಾದ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಜನಪ್ರತಿನಿಧಿಗಳ ಬಗ್ಗೆ ಆಕ್ರೋಶ
ವ್ಯಕ್ತಪಡಿಸುತ್ತಿದ್ದಾರೆ” ಎಂದು ಹೇಳಿದರು.

ಇದನ್ನೂ ಓದಿ: ಈಶ್ವರಪ್ಪ ನಿವೃತ್ತಿ ಘೋಷಣೆ ಬೆನ್ನಲ್ಲೇ ಶಿವಮೊಗ್ಗ ಪಾಲಿಕೆಯ ಮೇಯರ್, ಉಪಮೇಯರ್ ಸೇರಿ 19 ಸದಸ್ಯರಿಂದ ರಾಜೀನಾಮೆ

ಈ ವೇಳೆ ವಿಶ್ವ ಹಿಂದು ಪರಿಷತ್ ಜಿಲ್ಲಾಧ್ಯಕ್ಷ ಗಂಗಾಧರ ಮುರನಾಳ ಮಾತನಾಡಿ, ”ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಚರಂತಿಮಠ ಇಲ್ಲವೇ ಸಂತೋಷ ಹೊಕ್ರಾಣಿ ಸ್ಪರ್ಧಿಸಲಿದ್ದಾರೆ ಅವರನ್ನು ಗೆಲ್ಲಿಸುವುದು ನಮ್ಮ ಗುರಿಯಾಗಿದೆ” ಎಂದರು.

”ನಾನು ಕಳೆದ ಹಲವು ವರ್ಷಗಳಿಂದ ಸಂಘ ಪರಿವಾರದಲ್ಲಿ ಕೆಲಸ ಮಾಡುತ್ತಾ ಬಂದಿದ್ದು ಈಗಲೂ ಕೆಲಸ ಮಾಡುತ್ತಿದ್ದೇನೆ. ಯಾರೂ ಬಂಡಾಯದ ಕುರಿತು ಹೆದರಬೇಡಿ ಧೈರ್ಯದಿಂದ ಮುನ್ನುಗಿ ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸುವಂತಹ ಕೆಲಸ ಮಾಡಬೇಕಾಗಿದೆ. ಬದಲಾವಣೆ ಆಗುತ್ತಾರೆ ಎಂದು ನೋಡಿದೆವು ಆದರೆ ಅವರು ಯಾವುದೇ ಕಾರಣಕ್ಕೂ ಬದಲಾವಣೆ ಆಗುವುದಿಲ್ಲ. ನಾಯಿ ಬಾಲ ಯಾವತ್ತೂ ಡೊಂಕು ಇದ್ದಂತೆ” ಎಂದು ಸ್ಥಳೀಯ ಶಾಸಕ ವೀರಣ್ಣ ಚರಂತಿಮಠ ಬಗ್ಗೆ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.

ಹಿಂದು ಸಂಘಟನೆಯ ಮುಖಂಡ ಅಶೋಕ ಮುತ್ತಿನಮಠ ಮಾತನಾಡಿ, ”ಅನ್ಯಾಯದ ವಿರುದ್ದ ನಮ್ಮ
ಹೋರಾಟವಾಗಿದ್ದು, ಇದರಲ್ಲಿ ಜಯಶಾಲಿಯಾಗುತ್ತೇವೆ. ಇಂದು ಆಯೋಜಿಸಿದ್ದ ”ಬದಲಾವಣೆಗಾಗಿ ಪಾದಯಾತ್ರೆ”ಗೆ ಚುನಾವಣಾಧಿಕಾರಿಗಳು ಅವಕಾಶ ನೀಡದ ಹಿನ್ನೆಲೆಯಲ್ಲಿ ಪಾದಯಾತ್ರೆ ಯನ್ನು ರದ್ದುಪಡಿಸಲಾಗಿದೆ” ಎಂದು ತಿಳಿಸಿದರು.

ಈ ಸಭೆಯಲ್ಲಿ ಪ್ರಮುಖರಾದ ಬಸವರಾಜ ಕಟಗೇರಿ, ವಿಜಯ ಸುಲಾಖೆ, ಅರುಣ ಲೋಕಾಪೂರ, ಗುರು ಅನಗವಾಡಿ, ಬಸವರಾಜ ಮಾ ಟೂರ ಸೇರಿದಂತೆ ನೂರಾರು ಕಾರ್ಯಕರ್ತರು ಸಭೆಯಲ್ಲಿ ಭಾಗವಹಿಸಿದ್ದರು.

ಕಾಮಧೇನು ಸಂಸ್ಥೆಯ ಅಧ್ಯಕ್ಷ ರವಿ ಕುಮಟಗಿ ಮಾತನಾಡಿ, ಸ್ಥಳೀಯರಿಗೆ ಉದ್ಯೋಗ ನೀಡುವ ನಿಟ್ಟಿನಲ್ಲಿ ಬಾಗಲಕೋಟೆ ಮತಕ್ಷೇತ್ರದ ಶಾಸಕರು ಯಾವುದೇ ಕೆಲಸ ಮಾಡಿಲ್ಲ. ಜನರು ಬೇಸತ್ತಿದ್ದು ನಮ್ಮ ತಂಡವು ಯುವಕರಿಂದ ಕೂಡಿದ್ದು ನಮ್ಮನ್ನು ಆಯ್ಕೆ ಮಾಡಿದರೆ ಯುವಕರಿಗೆ ಉದ್ಯೋಗ ನೀಡುವ ನಿಟ್ಟಿನಲ್ಲಿ
ಕೆಲಸ ಮಾಡುತ್ತೇವೆ. ಸಮಗ್ರವಾಗಿ ಬಾಗಲಕೋಟೆ ಮತಕ್ಷೇತ್ರವನ್ನು ಅಭಿವೃದ್ದಿ ಮಾಡುತ್ತೇವೆ ಎಂದರು. ನಮ್ಮನ್ನು ಗೆಲ್ಲಿಸಲು ಕಾರ್ಯಕರ್ತರು ಪಣ ತೊಡಬೇಕು ಎಂದು ಕಾರ್ಯಕರ್ತರಲ್ಲಿ ಮನವಿ ಮಾಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...