Homeಕರ್ನಾಟಕಬಾಗಲಕೋಟೆಯನ್ನೂ ಬಿಡಲಿಲ್ಲ ಬಿಜೆಪಿಯ ಬಂಡಾಯದ ಬಿಸಿ; ಒಗ್ಗಟ್ಟಾದ ಚರಂತಿಮಠ ವಿರುದ್ಧದ ಧ್ವನಿಗಳು

ಬಾಗಲಕೋಟೆಯನ್ನೂ ಬಿಡಲಿಲ್ಲ ಬಿಜೆಪಿಯ ಬಂಡಾಯದ ಬಿಸಿ; ಒಗ್ಗಟ್ಟಾದ ಚರಂತಿಮಠ ವಿರುದ್ಧದ ಧ್ವನಿಗಳು

- Advertisement -
- Advertisement -

ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ಮಂಗಳವಾರ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಆದರೆ ಈ ಪಟ್ಟಿ ಬಿಡುಗಡೆಯ ಬಳಿಕ ರಾಜ್ಯದ ಬಹುತೇಕ ಕಡೆಗಳಲ್ಲಿ ಬಂಡಾಯ ಜೋರಾಗಿಯೇ ಸದ್ದು ಮಾಡುತ್ತಿದೆ. ಇದೀಗ ಬಾಗಲಕೋಟೆಯಲ್ಲೂ ಬಿಜೆಪಿಯ ಬಂಡಾಯದ ಬಿಸಿ ಜೋರಾಗಿದೆ. ಸಧ್ಯ ಹಾಲಿ ಶಾಸಕ ವೀರಣ್ಣ ಚರಂತಿಮಠ ಅವರಿಗೆ ಮತ್ತೆ ಟಿಕೆಟ್ ಘೋಷಣೆಯಾಗಿದ್ದು, ಅವರ ಸಹೋದರ ಹಾಗೂ ಹಲವು ಬಿಜೆಪಿ ಮುಖಂಡರು ವಿರೋಧ ವ್ಯಕ್ತಪಡಿಸಿ ಬಂಡಾಯದ ಬಾವುಟ ಹಾರಿಸಲು ಸಿದ್ಧರಾಗಿದ್ದಾರೆ.

ಬುಧವಾರ ಬೆಳಿಗ್ಗೆ ಬಿಜೆಪಿಯ ಯುವ ಮುಖಂಡ, ಶಾಸಕ ಚರಂತಿಮಠ ಸಹೋದರ ಮಲ್ಲಿಕಾರ್ಜುನ ಚರಂತಿಮಠ ಅವರು, ತಮ್ಮ ಅಭಿಮಾನಿಗಳು, ಬೆಂಬಲಿಗರು ಹಾಗೂ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ನಾನು ಇಲ್ಲವೇ ಸಂತೋಷ ಹೊಕ್ರಾಣಿ ಕಣಕ್ಕೆ ಇಳಿಯುವುದು ನಿಶ್ಚಿತ ಎಂದು ಘೋಷಣೆ ಮಾಡಿದರು.

”ಈಗಾಗಲೇ ಬಾಗಲಕೋಟೆ ವಿಧಾನಸಭಾ ಮತಕ್ಷೇತ್ರದ್ಯಾಂತ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದ್ದು, ನಾನು ಇಲ್ಲವೇ ಸಂತೋಷ ಹೊಕ್ರಾಣಿ ಇಬ್ಬರಲ್ಲಿ ಒಬ್ಬರು ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿ ಸಲಿದ್ದೇವೆ” ಎಂದು ತಿಳಿಸಿದರು.

ಈ ವೇಳೆ ಯುವ ಮುಖಂಡ ಸಂತೋಷ ಹೊಕ್ರಾಣಿ ಮಾತನಾಡಿ, ”ಬೂತ ಮಟ್ಟದಲ್ಲಿ ಕಾರ್ಯಕರ್ತರು ಕೆಲಸ ಮಾಡಿ ಗೆಲ್ಲಿಸುವ ಕೆಲಸವನ್ನು ಎಲ್ಲರೂ ಮಾಡಬೇಕು. ಈಗಾಗಲೇ ನಗರ ಹಾಗೂ ಗ್ರಾಮೀಣ ಭಾಗ ದಲ್ಲಿ ಪ್ರಚಾರ ನಡೆಸಿದ್ದು ಉತ್ತಮವಾದ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಜನಪ್ರತಿನಿಧಿಗಳ ಬಗ್ಗೆ ಆಕ್ರೋಶ
ವ್ಯಕ್ತಪಡಿಸುತ್ತಿದ್ದಾರೆ” ಎಂದು ಹೇಳಿದರು.

ಇದನ್ನೂ ಓದಿ: ಈಶ್ವರಪ್ಪ ನಿವೃತ್ತಿ ಘೋಷಣೆ ಬೆನ್ನಲ್ಲೇ ಶಿವಮೊಗ್ಗ ಪಾಲಿಕೆಯ ಮೇಯರ್, ಉಪಮೇಯರ್ ಸೇರಿ 19 ಸದಸ್ಯರಿಂದ ರಾಜೀನಾಮೆ

ಈ ವೇಳೆ ವಿಶ್ವ ಹಿಂದು ಪರಿಷತ್ ಜಿಲ್ಲಾಧ್ಯಕ್ಷ ಗಂಗಾಧರ ಮುರನಾಳ ಮಾತನಾಡಿ, ”ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಚರಂತಿಮಠ ಇಲ್ಲವೇ ಸಂತೋಷ ಹೊಕ್ರಾಣಿ ಸ್ಪರ್ಧಿಸಲಿದ್ದಾರೆ ಅವರನ್ನು ಗೆಲ್ಲಿಸುವುದು ನಮ್ಮ ಗುರಿಯಾಗಿದೆ” ಎಂದರು.

”ನಾನು ಕಳೆದ ಹಲವು ವರ್ಷಗಳಿಂದ ಸಂಘ ಪರಿವಾರದಲ್ಲಿ ಕೆಲಸ ಮಾಡುತ್ತಾ ಬಂದಿದ್ದು ಈಗಲೂ ಕೆಲಸ ಮಾಡುತ್ತಿದ್ದೇನೆ. ಯಾರೂ ಬಂಡಾಯದ ಕುರಿತು ಹೆದರಬೇಡಿ ಧೈರ್ಯದಿಂದ ಮುನ್ನುಗಿ ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸುವಂತಹ ಕೆಲಸ ಮಾಡಬೇಕಾಗಿದೆ. ಬದಲಾವಣೆ ಆಗುತ್ತಾರೆ ಎಂದು ನೋಡಿದೆವು ಆದರೆ ಅವರು ಯಾವುದೇ ಕಾರಣಕ್ಕೂ ಬದಲಾವಣೆ ಆಗುವುದಿಲ್ಲ. ನಾಯಿ ಬಾಲ ಯಾವತ್ತೂ ಡೊಂಕು ಇದ್ದಂತೆ” ಎಂದು ಸ್ಥಳೀಯ ಶಾಸಕ ವೀರಣ್ಣ ಚರಂತಿಮಠ ಬಗ್ಗೆ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.

ಹಿಂದು ಸಂಘಟನೆಯ ಮುಖಂಡ ಅಶೋಕ ಮುತ್ತಿನಮಠ ಮಾತನಾಡಿ, ”ಅನ್ಯಾಯದ ವಿರುದ್ದ ನಮ್ಮ
ಹೋರಾಟವಾಗಿದ್ದು, ಇದರಲ್ಲಿ ಜಯಶಾಲಿಯಾಗುತ್ತೇವೆ. ಇಂದು ಆಯೋಜಿಸಿದ್ದ ”ಬದಲಾವಣೆಗಾಗಿ ಪಾದಯಾತ್ರೆ”ಗೆ ಚುನಾವಣಾಧಿಕಾರಿಗಳು ಅವಕಾಶ ನೀಡದ ಹಿನ್ನೆಲೆಯಲ್ಲಿ ಪಾದಯಾತ್ರೆ ಯನ್ನು ರದ್ದುಪಡಿಸಲಾಗಿದೆ” ಎಂದು ತಿಳಿಸಿದರು.

ಈ ಸಭೆಯಲ್ಲಿ ಪ್ರಮುಖರಾದ ಬಸವರಾಜ ಕಟಗೇರಿ, ವಿಜಯ ಸುಲಾಖೆ, ಅರುಣ ಲೋಕಾಪೂರ, ಗುರು ಅನಗವಾಡಿ, ಬಸವರಾಜ ಮಾ ಟೂರ ಸೇರಿದಂತೆ ನೂರಾರು ಕಾರ್ಯಕರ್ತರು ಸಭೆಯಲ್ಲಿ ಭಾಗವಹಿಸಿದ್ದರು.

ಕಾಮಧೇನು ಸಂಸ್ಥೆಯ ಅಧ್ಯಕ್ಷ ರವಿ ಕುಮಟಗಿ ಮಾತನಾಡಿ, ಸ್ಥಳೀಯರಿಗೆ ಉದ್ಯೋಗ ನೀಡುವ ನಿಟ್ಟಿನಲ್ಲಿ ಬಾಗಲಕೋಟೆ ಮತಕ್ಷೇತ್ರದ ಶಾಸಕರು ಯಾವುದೇ ಕೆಲಸ ಮಾಡಿಲ್ಲ. ಜನರು ಬೇಸತ್ತಿದ್ದು ನಮ್ಮ ತಂಡವು ಯುವಕರಿಂದ ಕೂಡಿದ್ದು ನಮ್ಮನ್ನು ಆಯ್ಕೆ ಮಾಡಿದರೆ ಯುವಕರಿಗೆ ಉದ್ಯೋಗ ನೀಡುವ ನಿಟ್ಟಿನಲ್ಲಿ
ಕೆಲಸ ಮಾಡುತ್ತೇವೆ. ಸಮಗ್ರವಾಗಿ ಬಾಗಲಕೋಟೆ ಮತಕ್ಷೇತ್ರವನ್ನು ಅಭಿವೃದ್ದಿ ಮಾಡುತ್ತೇವೆ ಎಂದರು. ನಮ್ಮನ್ನು ಗೆಲ್ಲಿಸಲು ಕಾರ್ಯಕರ್ತರು ಪಣ ತೊಡಬೇಕು ಎಂದು ಕಾರ್ಯಕರ್ತರಲ್ಲಿ ಮನವಿ ಮಾಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...