Homeಕರ್ನಾಟಕಬಾಗಲಕೋಟೆಯನ್ನೂ ಬಿಡಲಿಲ್ಲ ಬಿಜೆಪಿಯ ಬಂಡಾಯದ ಬಿಸಿ; ಒಗ್ಗಟ್ಟಾದ ಚರಂತಿಮಠ ವಿರುದ್ಧದ ಧ್ವನಿಗಳು

ಬಾಗಲಕೋಟೆಯನ್ನೂ ಬಿಡಲಿಲ್ಲ ಬಿಜೆಪಿಯ ಬಂಡಾಯದ ಬಿಸಿ; ಒಗ್ಗಟ್ಟಾದ ಚರಂತಿಮಠ ವಿರುದ್ಧದ ಧ್ವನಿಗಳು

- Advertisement -
- Advertisement -

ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ಮಂಗಳವಾರ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಆದರೆ ಈ ಪಟ್ಟಿ ಬಿಡುಗಡೆಯ ಬಳಿಕ ರಾಜ್ಯದ ಬಹುತೇಕ ಕಡೆಗಳಲ್ಲಿ ಬಂಡಾಯ ಜೋರಾಗಿಯೇ ಸದ್ದು ಮಾಡುತ್ತಿದೆ. ಇದೀಗ ಬಾಗಲಕೋಟೆಯಲ್ಲೂ ಬಿಜೆಪಿಯ ಬಂಡಾಯದ ಬಿಸಿ ಜೋರಾಗಿದೆ. ಸಧ್ಯ ಹಾಲಿ ಶಾಸಕ ವೀರಣ್ಣ ಚರಂತಿಮಠ ಅವರಿಗೆ ಮತ್ತೆ ಟಿಕೆಟ್ ಘೋಷಣೆಯಾಗಿದ್ದು, ಅವರ ಸಹೋದರ ಹಾಗೂ ಹಲವು ಬಿಜೆಪಿ ಮುಖಂಡರು ವಿರೋಧ ವ್ಯಕ್ತಪಡಿಸಿ ಬಂಡಾಯದ ಬಾವುಟ ಹಾರಿಸಲು ಸಿದ್ಧರಾಗಿದ್ದಾರೆ.

ಬುಧವಾರ ಬೆಳಿಗ್ಗೆ ಬಿಜೆಪಿಯ ಯುವ ಮುಖಂಡ, ಶಾಸಕ ಚರಂತಿಮಠ ಸಹೋದರ ಮಲ್ಲಿಕಾರ್ಜುನ ಚರಂತಿಮಠ ಅವರು, ತಮ್ಮ ಅಭಿಮಾನಿಗಳು, ಬೆಂಬಲಿಗರು ಹಾಗೂ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ನಾನು ಇಲ್ಲವೇ ಸಂತೋಷ ಹೊಕ್ರಾಣಿ ಕಣಕ್ಕೆ ಇಳಿಯುವುದು ನಿಶ್ಚಿತ ಎಂದು ಘೋಷಣೆ ಮಾಡಿದರು.

”ಈಗಾಗಲೇ ಬಾಗಲಕೋಟೆ ವಿಧಾನಸಭಾ ಮತಕ್ಷೇತ್ರದ್ಯಾಂತ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದ್ದು, ನಾನು ಇಲ್ಲವೇ ಸಂತೋಷ ಹೊಕ್ರಾಣಿ ಇಬ್ಬರಲ್ಲಿ ಒಬ್ಬರು ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿ ಸಲಿದ್ದೇವೆ” ಎಂದು ತಿಳಿಸಿದರು.

ಈ ವೇಳೆ ಯುವ ಮುಖಂಡ ಸಂತೋಷ ಹೊಕ್ರಾಣಿ ಮಾತನಾಡಿ, ”ಬೂತ ಮಟ್ಟದಲ್ಲಿ ಕಾರ್ಯಕರ್ತರು ಕೆಲಸ ಮಾಡಿ ಗೆಲ್ಲಿಸುವ ಕೆಲಸವನ್ನು ಎಲ್ಲರೂ ಮಾಡಬೇಕು. ಈಗಾಗಲೇ ನಗರ ಹಾಗೂ ಗ್ರಾಮೀಣ ಭಾಗ ದಲ್ಲಿ ಪ್ರಚಾರ ನಡೆಸಿದ್ದು ಉತ್ತಮವಾದ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಜನಪ್ರತಿನಿಧಿಗಳ ಬಗ್ಗೆ ಆಕ್ರೋಶ
ವ್ಯಕ್ತಪಡಿಸುತ್ತಿದ್ದಾರೆ” ಎಂದು ಹೇಳಿದರು.

ಇದನ್ನೂ ಓದಿ: ಈಶ್ವರಪ್ಪ ನಿವೃತ್ತಿ ಘೋಷಣೆ ಬೆನ್ನಲ್ಲೇ ಶಿವಮೊಗ್ಗ ಪಾಲಿಕೆಯ ಮೇಯರ್, ಉಪಮೇಯರ್ ಸೇರಿ 19 ಸದಸ್ಯರಿಂದ ರಾಜೀನಾಮೆ

ಈ ವೇಳೆ ವಿಶ್ವ ಹಿಂದು ಪರಿಷತ್ ಜಿಲ್ಲಾಧ್ಯಕ್ಷ ಗಂಗಾಧರ ಮುರನಾಳ ಮಾತನಾಡಿ, ”ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಚರಂತಿಮಠ ಇಲ್ಲವೇ ಸಂತೋಷ ಹೊಕ್ರಾಣಿ ಸ್ಪರ್ಧಿಸಲಿದ್ದಾರೆ ಅವರನ್ನು ಗೆಲ್ಲಿಸುವುದು ನಮ್ಮ ಗುರಿಯಾಗಿದೆ” ಎಂದರು.

”ನಾನು ಕಳೆದ ಹಲವು ವರ್ಷಗಳಿಂದ ಸಂಘ ಪರಿವಾರದಲ್ಲಿ ಕೆಲಸ ಮಾಡುತ್ತಾ ಬಂದಿದ್ದು ಈಗಲೂ ಕೆಲಸ ಮಾಡುತ್ತಿದ್ದೇನೆ. ಯಾರೂ ಬಂಡಾಯದ ಕುರಿತು ಹೆದರಬೇಡಿ ಧೈರ್ಯದಿಂದ ಮುನ್ನುಗಿ ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸುವಂತಹ ಕೆಲಸ ಮಾಡಬೇಕಾಗಿದೆ. ಬದಲಾವಣೆ ಆಗುತ್ತಾರೆ ಎಂದು ನೋಡಿದೆವು ಆದರೆ ಅವರು ಯಾವುದೇ ಕಾರಣಕ್ಕೂ ಬದಲಾವಣೆ ಆಗುವುದಿಲ್ಲ. ನಾಯಿ ಬಾಲ ಯಾವತ್ತೂ ಡೊಂಕು ಇದ್ದಂತೆ” ಎಂದು ಸ್ಥಳೀಯ ಶಾಸಕ ವೀರಣ್ಣ ಚರಂತಿಮಠ ಬಗ್ಗೆ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.

ಹಿಂದು ಸಂಘಟನೆಯ ಮುಖಂಡ ಅಶೋಕ ಮುತ್ತಿನಮಠ ಮಾತನಾಡಿ, ”ಅನ್ಯಾಯದ ವಿರುದ್ದ ನಮ್ಮ
ಹೋರಾಟವಾಗಿದ್ದು, ಇದರಲ್ಲಿ ಜಯಶಾಲಿಯಾಗುತ್ತೇವೆ. ಇಂದು ಆಯೋಜಿಸಿದ್ದ ”ಬದಲಾವಣೆಗಾಗಿ ಪಾದಯಾತ್ರೆ”ಗೆ ಚುನಾವಣಾಧಿಕಾರಿಗಳು ಅವಕಾಶ ನೀಡದ ಹಿನ್ನೆಲೆಯಲ್ಲಿ ಪಾದಯಾತ್ರೆ ಯನ್ನು ರದ್ದುಪಡಿಸಲಾಗಿದೆ” ಎಂದು ತಿಳಿಸಿದರು.

ಈ ಸಭೆಯಲ್ಲಿ ಪ್ರಮುಖರಾದ ಬಸವರಾಜ ಕಟಗೇರಿ, ವಿಜಯ ಸುಲಾಖೆ, ಅರುಣ ಲೋಕಾಪೂರ, ಗುರು ಅನಗವಾಡಿ, ಬಸವರಾಜ ಮಾ ಟೂರ ಸೇರಿದಂತೆ ನೂರಾರು ಕಾರ್ಯಕರ್ತರು ಸಭೆಯಲ್ಲಿ ಭಾಗವಹಿಸಿದ್ದರು.

ಕಾಮಧೇನು ಸಂಸ್ಥೆಯ ಅಧ್ಯಕ್ಷ ರವಿ ಕುಮಟಗಿ ಮಾತನಾಡಿ, ಸ್ಥಳೀಯರಿಗೆ ಉದ್ಯೋಗ ನೀಡುವ ನಿಟ್ಟಿನಲ್ಲಿ ಬಾಗಲಕೋಟೆ ಮತಕ್ಷೇತ್ರದ ಶಾಸಕರು ಯಾವುದೇ ಕೆಲಸ ಮಾಡಿಲ್ಲ. ಜನರು ಬೇಸತ್ತಿದ್ದು ನಮ್ಮ ತಂಡವು ಯುವಕರಿಂದ ಕೂಡಿದ್ದು ನಮ್ಮನ್ನು ಆಯ್ಕೆ ಮಾಡಿದರೆ ಯುವಕರಿಗೆ ಉದ್ಯೋಗ ನೀಡುವ ನಿಟ್ಟಿನಲ್ಲಿ
ಕೆಲಸ ಮಾಡುತ್ತೇವೆ. ಸಮಗ್ರವಾಗಿ ಬಾಗಲಕೋಟೆ ಮತಕ್ಷೇತ್ರವನ್ನು ಅಭಿವೃದ್ದಿ ಮಾಡುತ್ತೇವೆ ಎಂದರು. ನಮ್ಮನ್ನು ಗೆಲ್ಲಿಸಲು ಕಾರ್ಯಕರ್ತರು ಪಣ ತೊಡಬೇಕು ಎಂದು ಕಾರ್ಯಕರ್ತರಲ್ಲಿ ಮನವಿ ಮಾಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...