Homeಕರ್ನಾಟಕಬಾಗಲಕೋಟೆಯನ್ನೂ ಬಿಡಲಿಲ್ಲ ಬಿಜೆಪಿಯ ಬಂಡಾಯದ ಬಿಸಿ; ಒಗ್ಗಟ್ಟಾದ ಚರಂತಿಮಠ ವಿರುದ್ಧದ ಧ್ವನಿಗಳು

ಬಾಗಲಕೋಟೆಯನ್ನೂ ಬಿಡಲಿಲ್ಲ ಬಿಜೆಪಿಯ ಬಂಡಾಯದ ಬಿಸಿ; ಒಗ್ಗಟ್ಟಾದ ಚರಂತಿಮಠ ವಿರುದ್ಧದ ಧ್ವನಿಗಳು

- Advertisement -
- Advertisement -

ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ಮಂಗಳವಾರ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಆದರೆ ಈ ಪಟ್ಟಿ ಬಿಡುಗಡೆಯ ಬಳಿಕ ರಾಜ್ಯದ ಬಹುತೇಕ ಕಡೆಗಳಲ್ಲಿ ಬಂಡಾಯ ಜೋರಾಗಿಯೇ ಸದ್ದು ಮಾಡುತ್ತಿದೆ. ಇದೀಗ ಬಾಗಲಕೋಟೆಯಲ್ಲೂ ಬಿಜೆಪಿಯ ಬಂಡಾಯದ ಬಿಸಿ ಜೋರಾಗಿದೆ. ಸಧ್ಯ ಹಾಲಿ ಶಾಸಕ ವೀರಣ್ಣ ಚರಂತಿಮಠ ಅವರಿಗೆ ಮತ್ತೆ ಟಿಕೆಟ್ ಘೋಷಣೆಯಾಗಿದ್ದು, ಅವರ ಸಹೋದರ ಹಾಗೂ ಹಲವು ಬಿಜೆಪಿ ಮುಖಂಡರು ವಿರೋಧ ವ್ಯಕ್ತಪಡಿಸಿ ಬಂಡಾಯದ ಬಾವುಟ ಹಾರಿಸಲು ಸಿದ್ಧರಾಗಿದ್ದಾರೆ.

ಬುಧವಾರ ಬೆಳಿಗ್ಗೆ ಬಿಜೆಪಿಯ ಯುವ ಮುಖಂಡ, ಶಾಸಕ ಚರಂತಿಮಠ ಸಹೋದರ ಮಲ್ಲಿಕಾರ್ಜುನ ಚರಂತಿಮಠ ಅವರು, ತಮ್ಮ ಅಭಿಮಾನಿಗಳು, ಬೆಂಬಲಿಗರು ಹಾಗೂ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ನಾನು ಇಲ್ಲವೇ ಸಂತೋಷ ಹೊಕ್ರಾಣಿ ಕಣಕ್ಕೆ ಇಳಿಯುವುದು ನಿಶ್ಚಿತ ಎಂದು ಘೋಷಣೆ ಮಾಡಿದರು.

”ಈಗಾಗಲೇ ಬಾಗಲಕೋಟೆ ವಿಧಾನಸಭಾ ಮತಕ್ಷೇತ್ರದ್ಯಾಂತ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದ್ದು, ನಾನು ಇಲ್ಲವೇ ಸಂತೋಷ ಹೊಕ್ರಾಣಿ ಇಬ್ಬರಲ್ಲಿ ಒಬ್ಬರು ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿ ಸಲಿದ್ದೇವೆ” ಎಂದು ತಿಳಿಸಿದರು.

ಈ ವೇಳೆ ಯುವ ಮುಖಂಡ ಸಂತೋಷ ಹೊಕ್ರಾಣಿ ಮಾತನಾಡಿ, ”ಬೂತ ಮಟ್ಟದಲ್ಲಿ ಕಾರ್ಯಕರ್ತರು ಕೆಲಸ ಮಾಡಿ ಗೆಲ್ಲಿಸುವ ಕೆಲಸವನ್ನು ಎಲ್ಲರೂ ಮಾಡಬೇಕು. ಈಗಾಗಲೇ ನಗರ ಹಾಗೂ ಗ್ರಾಮೀಣ ಭಾಗ ದಲ್ಲಿ ಪ್ರಚಾರ ನಡೆಸಿದ್ದು ಉತ್ತಮವಾದ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಜನಪ್ರತಿನಿಧಿಗಳ ಬಗ್ಗೆ ಆಕ್ರೋಶ
ವ್ಯಕ್ತಪಡಿಸುತ್ತಿದ್ದಾರೆ” ಎಂದು ಹೇಳಿದರು.

ಇದನ್ನೂ ಓದಿ: ಈಶ್ವರಪ್ಪ ನಿವೃತ್ತಿ ಘೋಷಣೆ ಬೆನ್ನಲ್ಲೇ ಶಿವಮೊಗ್ಗ ಪಾಲಿಕೆಯ ಮೇಯರ್, ಉಪಮೇಯರ್ ಸೇರಿ 19 ಸದಸ್ಯರಿಂದ ರಾಜೀನಾಮೆ

ಈ ವೇಳೆ ವಿಶ್ವ ಹಿಂದು ಪರಿಷತ್ ಜಿಲ್ಲಾಧ್ಯಕ್ಷ ಗಂಗಾಧರ ಮುರನಾಳ ಮಾತನಾಡಿ, ”ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಚರಂತಿಮಠ ಇಲ್ಲವೇ ಸಂತೋಷ ಹೊಕ್ರಾಣಿ ಸ್ಪರ್ಧಿಸಲಿದ್ದಾರೆ ಅವರನ್ನು ಗೆಲ್ಲಿಸುವುದು ನಮ್ಮ ಗುರಿಯಾಗಿದೆ” ಎಂದರು.

”ನಾನು ಕಳೆದ ಹಲವು ವರ್ಷಗಳಿಂದ ಸಂಘ ಪರಿವಾರದಲ್ಲಿ ಕೆಲಸ ಮಾಡುತ್ತಾ ಬಂದಿದ್ದು ಈಗಲೂ ಕೆಲಸ ಮಾಡುತ್ತಿದ್ದೇನೆ. ಯಾರೂ ಬಂಡಾಯದ ಕುರಿತು ಹೆದರಬೇಡಿ ಧೈರ್ಯದಿಂದ ಮುನ್ನುಗಿ ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸುವಂತಹ ಕೆಲಸ ಮಾಡಬೇಕಾಗಿದೆ. ಬದಲಾವಣೆ ಆಗುತ್ತಾರೆ ಎಂದು ನೋಡಿದೆವು ಆದರೆ ಅವರು ಯಾವುದೇ ಕಾರಣಕ್ಕೂ ಬದಲಾವಣೆ ಆಗುವುದಿಲ್ಲ. ನಾಯಿ ಬಾಲ ಯಾವತ್ತೂ ಡೊಂಕು ಇದ್ದಂತೆ” ಎಂದು ಸ್ಥಳೀಯ ಶಾಸಕ ವೀರಣ್ಣ ಚರಂತಿಮಠ ಬಗ್ಗೆ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.

ಹಿಂದು ಸಂಘಟನೆಯ ಮುಖಂಡ ಅಶೋಕ ಮುತ್ತಿನಮಠ ಮಾತನಾಡಿ, ”ಅನ್ಯಾಯದ ವಿರುದ್ದ ನಮ್ಮ
ಹೋರಾಟವಾಗಿದ್ದು, ಇದರಲ್ಲಿ ಜಯಶಾಲಿಯಾಗುತ್ತೇವೆ. ಇಂದು ಆಯೋಜಿಸಿದ್ದ ”ಬದಲಾವಣೆಗಾಗಿ ಪಾದಯಾತ್ರೆ”ಗೆ ಚುನಾವಣಾಧಿಕಾರಿಗಳು ಅವಕಾಶ ನೀಡದ ಹಿನ್ನೆಲೆಯಲ್ಲಿ ಪಾದಯಾತ್ರೆ ಯನ್ನು ರದ್ದುಪಡಿಸಲಾಗಿದೆ” ಎಂದು ತಿಳಿಸಿದರು.

ಈ ಸಭೆಯಲ್ಲಿ ಪ್ರಮುಖರಾದ ಬಸವರಾಜ ಕಟಗೇರಿ, ವಿಜಯ ಸುಲಾಖೆ, ಅರುಣ ಲೋಕಾಪೂರ, ಗುರು ಅನಗವಾಡಿ, ಬಸವರಾಜ ಮಾ ಟೂರ ಸೇರಿದಂತೆ ನೂರಾರು ಕಾರ್ಯಕರ್ತರು ಸಭೆಯಲ್ಲಿ ಭಾಗವಹಿಸಿದ್ದರು.

ಕಾಮಧೇನು ಸಂಸ್ಥೆಯ ಅಧ್ಯಕ್ಷ ರವಿ ಕುಮಟಗಿ ಮಾತನಾಡಿ, ಸ್ಥಳೀಯರಿಗೆ ಉದ್ಯೋಗ ನೀಡುವ ನಿಟ್ಟಿನಲ್ಲಿ ಬಾಗಲಕೋಟೆ ಮತಕ್ಷೇತ್ರದ ಶಾಸಕರು ಯಾವುದೇ ಕೆಲಸ ಮಾಡಿಲ್ಲ. ಜನರು ಬೇಸತ್ತಿದ್ದು ನಮ್ಮ ತಂಡವು ಯುವಕರಿಂದ ಕೂಡಿದ್ದು ನಮ್ಮನ್ನು ಆಯ್ಕೆ ಮಾಡಿದರೆ ಯುವಕರಿಗೆ ಉದ್ಯೋಗ ನೀಡುವ ನಿಟ್ಟಿನಲ್ಲಿ
ಕೆಲಸ ಮಾಡುತ್ತೇವೆ. ಸಮಗ್ರವಾಗಿ ಬಾಗಲಕೋಟೆ ಮತಕ್ಷೇತ್ರವನ್ನು ಅಭಿವೃದ್ದಿ ಮಾಡುತ್ತೇವೆ ಎಂದರು. ನಮ್ಮನ್ನು ಗೆಲ್ಲಿಸಲು ಕಾರ್ಯಕರ್ತರು ಪಣ ತೊಡಬೇಕು ಎಂದು ಕಾರ್ಯಕರ್ತರಲ್ಲಿ ಮನವಿ ಮಾಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...