Homeಚಳವಳಿ'ಕ್ರೌರ್ಯದ ಪರಮಾವಧಿ' | ಬಿಹಾರ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ - ಪ್ರಿಯಾಂಕಾ ಟೀಕೆ

‘ಕ್ರೌರ್ಯದ ಪರಮಾವಧಿ’ | ಬಿಹಾರ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ – ಪ್ರಿಯಾಂಕಾ ಟೀಕೆ

- Advertisement -
- Advertisement -

ಪಾಟ್ನಾದಲ್ಲಿ ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರಮದ ಬಗ್ಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಗುರುವಾರ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದು, ಆಡಳಿತ ಪಕ್ಷದ ಏಕೈಕ ಗುರಿ ತನ್ನ ಕುರ್ಚಿಯನ್ನು ಉಳಿಸುವುದಾಗಿದೆ ಎಂದು ಹೇಳಿದ್ದಾರೆ. ಉದ್ಯೋಗ ಕೇಳುತ್ತಿರುವವರು ದೌರ್ಜನ್ಯಕ್ಕೊಳಗಾಗುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ. ಬಿಹಾರ ವಿದ್ಯಾರ್ಥಿಗಳ

ಬಿಹಾರ ಪಬ್ಲಿಕ್ ಸರ್ವಿಸ್ ಕಮಿಷನ್ (BPSC) ನಡೆಸಿದ ಡಿಸೆಂಬರ್ 13 ರ ಸಂಯೋಜಿತ ಪ್ರಾಥಮಿಕ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂದು ಆರೋಪಿಸಿ ಪಾಟ್ನಾದಲ್ಲಿ ಬುಧವಾರ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಹಿಂಸಾಚಾರ ನಡೆದಿದ್ದು, ಪೊಲೀಸರು ಉದ್ಯೋಗ ಆಕಾಂಕ್ಷಿ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮಾಡಿದ್ದಾರೆ.

ಪೊಲೀಸರು ನಡೆಸಿದ ಲಾಠಿ ಚಾರ್ಜ್ ವೇಳೆ ಹಲವಾರು ಪ್ರತಿಭಟನಾಕಾರರು ಗಾಯಗೊಂಡಿದ್ದಾರೆ ಎಂದು ವಿದ್ಯಾರ್ಥಿಗಳು ಹೇಳಿದ್ದು, ಆದರೆ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಈ ಆರೋಪವನ್ನು ನಿರಾಕರಿಸಿದ್ದಾರೆ. ಬಿಹಾರ ವಿದ್ಯಾರ್ಥಿಗಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಕೈ ಕಟ್ಟಿ ನಿಂತ ಯುವಕರ ಮೇಲೆ ಲಾಠಿ ಚಾರ್ಜ್ ಕ್ರೌರ್ಯದ ಪರಮಾವಧಿಯಾಗಿದೆ. ಬಿಜೆಪಿ ಆಡಳಿತದಲ್ಲಿ ಉದ್ಯೋಗಕ್ಕಾಗಿ ಬೇಡಿಕೆಯಿರುವ ಯುವಕರನ್ನು ಲಾಠಿಯಿಂದ ಥಳಿಸಲಾಗುತ್ತದೆ. ಉತ್ತರ ಪ್ರದೇಶ, ಬಿಹಾರ ಅಥವಾ ಮಧ್ಯಪ್ರದೇಶ ಇರಲಿ ಯುವಕರು ಧ್ವನಿ ಎತ್ತಿದರೆ, ಅವರನ್ನು ಅಮಾನುಷವಾಗಿ ಥಳಿಸಲಾಗುತ್ತದೆ” ಎಂದು ಪ್ರಿಯಾಂಕಾ ಹೇಳಿದ್ದಾರೆ.

ಬಿಹಾರ ಲೋಕಸೇವಾ ಆಯೋಗದ (ಬಿಪಿಎಸ್‌ಸಿ) ಆಕಾಂಕ್ಷಿಗಳ ಮೇಲೆ ಪೊಲೀಸರು ಬುಧವಾರ ಲಾಠಿ ಚಾರ್ಜ್ ಮಾಡಿದ್ದಾರೆ. ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನಲೆ ಆಕಾಂಕ್ಷಿಗಳು ಪರೀಕ್ಷೆಯನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಪಟ್ನಾದಲ್ಲಿರುವ ಆಯೋಗದ ಕಚೇರಿಗೆ “ಘೇರಾವ್” ಮಾಡಲು ಜಮಾಯಿಸಿದ ಪೊಲೀಸರು ಆಕಾಂಕ್ಷಿಗಳ ಮೇಲೆ ದಾಳಿ ಮಾಡಿದ್ದಾರೆ. ಲಾಠಿ ಚಾರ್ಜ್ ನಂತರ ಈ ಬಗ್ಗೆ ಸ್ಪಷ್ಟೀಕರಣ ನೀಡಿರುವ ಪೊಲೀಸರು, ಆಕಾಂಕ್ಷಿಗಳ ಮೇಲೆ “ಸೌಮ್ಯ ಬಲ”ವನ್ನು ಪ್ರಯೋಗಿಸಿರುವುದಾಗಿ ಹೇಳಿದ್ದು, ಯಾವುದೆ ವಿದ್ಯಾರ್ಥಿಗಳಿಗೆ ಗಾಯಗಳಾಗಿಲ್ಲ ಎಂದು ಹೇಳಿದ್ದಾರೆ.

ಅದಾಗ್ಯೂ, ಕೋಚಿಂಗ್ ಶಿಕ್ಷಕರು ಆಕಾಂಕ್ಷಿಗಳನ್ನು ಪ್ರತಿಭಟನೆಗೆ ಪ್ರೇರೇಪಿಸುತ್ತಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಆರೋಪಿಸಿದ್ದು, ವಿದ್ಯಾರ್ಥಿಗಳನ್ನು ದಾರಿ ತಪ್ಪಿಸುವ ಹಲವಾರು ಸಾಮಾಜಿಕ ಮಾಧ್ಯಮ ಖಾತೆಗಳನ್ನು ಹೆಸರಿಸಿದ್ದಾರೆ.

ಮಂಗಳವಾರ, BPSC ಅಧ್ಯಕ್ಷ ಪರ್ಮಾರ್ ರವಿ ಮನುಭಾಯಿ ಅವರು ಈ ತಿಂಗಳ ಆರಂಭದಲ್ಲಿ ನಡೆದ 70 ನೇ ಇಂಟಿಗ್ರೇಟೆಡ್ ಕಂಬೈನ್ಡ್ ಸ್ಪರ್ಧಾತ್ಮಕ ಪರೀಕ್ಷೆ (CCE) 2024 ರ ರದ್ದತಿಯನ್ನು ತಳ್ಳಿಹಾಕಿದ್ದರು. ಮಂಗಳವಾರ, ಖಾನ್ ಸರ್ ಎಂದು ಜನಪ್ರಿಯರಾಗಿರುವ ಯೂಟ್ಯೂಬರ್ ಮತ್ತು ಶಿಕ್ಷಣತಜ್ಞ ಫೈಸಲ್ ಖಾನ್ ಅವರು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳನ್ನು ಭೇಟಿ ಮಾಡಿದ್ದಾರೆ.

ಬಿಹಾರ ಲೋಕಸೇವಾ ಆಯೋಗದ (ಬಿಪಿಎಸ್‌ಸಿ) ಅಧ್ಯಕ್ಷ ಪರ್ಮಾರ್ ರವಿ ಮನುಭಾಯಿ ಮಂಗಳವಾರ (ಡಿಸೆಂಬರ್ 24, 2024) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪದಲ್ಲಿ ಸಿಲುಕಿರುವ ಈ ತಿಂಗಳ ಆರಂಭದಲ್ಲಿ ನಡೆದ 70ನೇ ಇಂಟಿಗ್ರೇಟೆಡ್ ಕಂಬೈನ್ಡ್ ಸ್ಪರ್ಧಾತ್ಮಕ ಪರೀಕ್ಷೆ (ಸಿಸಿಇ) 2024 ರ ರದ್ದತಿಯನ್ನು ತಳ್ಳಿಹಾಕಿದ್ದಾರೆ.

ಡಿಸೆಂಬರ್ 13 ರಂದು ಬಾಪು ಪರೀಕ್ಷಾ ಪರಿಸರ ಪರೀಕ್ಷಾ ಕೇಂದ್ರಕ್ಕೆ ನಿಯೋಜಿಸಲಾದ ಅಭ್ಯರ್ಥಿಗಳ ಮರುಪರೀಕ್ಷೆ ನಡೆಸುತ್ತೇವೆ ಎಂದು BPSC ಸ್ಪಷ್ಟಪಡಿಸಿದ್ದು, ಮರು ಪರೀಕ್ಷೆಯನ್ನು ಜನವರಿ 4, 2025 ರಂದು ನಡೆಸಲಾಗುವುದು ಎಂದು ಹೇಳಿದೆ.

ಇದನ್ನೂ ಓದಿ: ಬಿಹಾರ ಪ್ರಶ್ನೆ ಪತ್ರಿಕೆ ಸೋರಿಕೆ | ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್; ಸೌಮ್ಯ ಬಲ ಪ್ರಯೋಗ ಎಂದ ಪೊಲೀಸ್!

ಬಿಹಾರ ಪ್ರಶ್ನೆ ಪತ್ರಿಕೆ ಸೋರಿಕೆ | ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್; ಸೌಮ್ಯ ಬಲ ಪ್ರಯೋಗ ಎಂದ ಪೊಲೀಸ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...