Homeಕರ್ನಾಟಕಕಾರ್ಮಿಕರಿಗೆ ನೆರವಾಗಬೇಕಾಗಿದ್ದ ಸಹಾಯವಾಣಿ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ: ಆರೋಪ

ಕಾರ್ಮಿಕರಿಗೆ ನೆರವಾಗಬೇಕಾಗಿದ್ದ ಸಹಾಯವಾಣಿ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ: ಆರೋಪ

ಮಾರ್ಚ್ 28 ರಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಕೊರೊನಾ ಲಾಕ್ ಡೌನ್ ನಿಂದಾಗಿ ಅನ್ನವಿಲ್ಲದೆ ಕಷ್ಟಪಡುವ ಕೂಲಿ ಕಾರ್ಮಿಕರಿಗೆ ನೆರವಾಗಲು ರಾಜ್ಯ ಕಾರ್ಮಿಕ ಇಲಾಖೆಯ ಅಡಿಯಲ್ಲಿ ಈ ಸಹಾಯವಾಣಿಯನ್ನು ಲೋಕಾರ್ಪಣೆ ಮಾಡಿದ್ದರು.

- Advertisement -
- Advertisement -

ರಾಜ್ಯ ಕಾರ್ಮಿಕ ಇಲಾಖೆ ಪ್ರಾರಂಭಿಸಿದ್ದ ಕೊರೊನಾ ಲಾಕ್‌ಡೌನ್ ನಿಂದ ಸಂಕಷ್ಟಕ್ಕೆ ಸಿಲುಕಿರುವ ಕೂಲಿಕಾರರ ಸಹಾಯವಾಣಿ (155214) ಪ್ರಾರಂಭವಾಗಿ ಒಂದು ತಿಂಗಳಾದರೂ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂಬ ಆರೋಪಗಳು ಕೇಳಿ ಬರುತ್ತಿದೆ.

ಮಾರ್ಚ್ 28 ರಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಕೊರೊನಾ ಲಾಕ್ ಡೌನ್ ನಿಂದಾಗಿ ಅನ್ನವಿಲ್ಲದೆ ಕಷ್ಟಪಡುವ ಕೂಲಿ ಕಾರ್ಮಿಕರಿಗೆ ನೆರವಾಗಲು ರಾಜ್ಯ ಕಾರ್ಮಿಕ ಇಲಾಖೆಯ ಅಡಿಯಲ್ಲಿ ಈ ಸಹಾಯವಾಣಿಯನ್ನು ಲೋಕಾರ್ಪಣೆ ಮಾಡಿದ್ದರು.

ಈ ಸಂದರ್ಭದಲ್ಲಿ ಸಚಿವರು ಮಾತನಾಡಿ, ಅನ್ನವಿಲ್ಲದೆ ಸಂಕಷ್ಟಕ್ಕೆ ಸಿಲುಕಿರುವ ಕೂಲಿಕಾರರು ಸಹಾಯವಾಣಿಗೆ ಕರೆ ಮಾಡಿದಲ್ಲಿ ಅವರು ಎಲ್ಲಿಂದ ಕರೆ ಮಾಡಿದ್ದಾರೆ ಎಂಬುದನ್ನು ದೃಢಪಡಿಸಿಕೊಂಡು ಸಮೀಪದ ಇಂದಿರಾ ಕ್ಯಾಂಟೀನ್ ಅಥವಾ ಸರ್ಕಾರೇತರ ಸಂಘ-ಸಂಸ್ಥೆಗಳ ನೆರವಿನಿಂದ ಅವರು ಇದ್ದಲ್ಲೇ ಊಟದ ವ್ಯವಸ್ಥೆ ಮಾಡಲು ಸಹಾಯವಾಣಿ ನೆರವು ಒದಗಿಸಲಿದೆ ಎಂದಿದ್ದರು.

ದ.ಕ ಗ್ರಾಹಕ ರಕ್ಷಣಾ ಪರಿಷತ್ತಿನ ಮಾಜಿ ಸದಸ್ಯರಾದ ಸುಳ್ಯದ ಸಚಿನ್ ರಾಜ್ ಶೆಟ್ಟಿ “ಕಾರ್ಮಿಕ ಇಲಾಖೆ ಸಹಾಯ ವಾಣಿಯೂ ನಿಷ್ಪ್ರಯೋಜಕ” ಎಂದು ದೂರಿದ್ದಾರೆ. “ಕಾರ್ಮಿಕ ಇಲಾಖೆಯಿಂದ ದಿನಸಿ ಸಾಮಗ್ರಿ, ಬಿಸಿಯೂಟ ಹಾಗೂ ಇತರ ಸೇವೆಗಳಿಗಾಗಿ 155214 ಸಹಾಯವಾಣಿಯನ್ನು ರೂಪಿಸಿದ್ದು ಇದರಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ಸರಿಯಾದ ಮಾಹಿತಿ ನೀಡದೆ ಜನರಿಗೆ ವಂಚನೆ ಮಾಡುತ್ತಿದ್ದಾರೆ. ಹೆಸರಿಗೆ ಮಾತ್ರ ಇಂತಹ ಸಹಾಯವಾಣಿ ಮಾಡಿರುವುದನ್ನು ನೋಡಿದಾಗ ಸರಕಾರ ಎಡವಿದೆ ಎಂಬುದು ಸ್ಪಷ್ಟ” ಎಂದು ಹೇಳಿದ್ದಾರೆ.

ಕನಿಷ್ಠ ಹತ್ತು ಬಾರಿಯಾದರೂ ಕರೆ ಮಾಡಿದ್ದೇನೆ ಸಹಾಯವಾಣಿಯಲ್ಲಿ ಸರಿಯಾದ ಮಾಹಿತಿ ನೀಡುತ್ತಿಲ್ಲ, ಕರೆಯನ್ನು ಸ್ವೀಕರಿಸಿದರೆ ಸಹಾಯವಾಣಿ ಕೇವಲ ಬೆಂಗಳೂರಿಗೆ ನೀವು ಜಿಲ್ಲೆ, ಗ್ರಾಮ ಪಂಚಾಯತ್ ಕಚೇರಿಗೆ ಸಂಪರ್ಕಿಸಬೇಕಾಗುತ್ತದೆ ಎಂದಿರುವ ಕರೆಯ ಆಡಿಯೋ ರೆಕಾರ್ಡ್ ಗಳು ಹರಿದಾಡುತ್ತಿದೆ. ಸಹಾಯವಾಣಿ ಇಡೀ ಕರ್ನಾಟಕಕ್ಕೆ ಅನ್ವಯವಾಗುತ್ತಿದ್ದರೂ ಸಹಯವಾಣಿ ಸಿಬ್ಬಂದಿಗಳು ಮಾತ್ರ ಇದು ಕೇವಲ ಬೆಂಗಳೂರಿಗೆ ಎಂದು ಹೇಳುವುದನ್ನು ಈ ಕರೆಯ ರೆಕಾರ್ಡಿನಲ್ಲಿ ಕೇಳಬಹುದಾಗಿದೆ.

ಇದರ ಬಗ್ಗೆ ನಾನುಗೌರಿ.ಕಾಮ್ ಹಿಂದೆಯೆ ವರದಿ ಮಾಡಿದ್ದು ಆದರೂ ಸರ್ಕರ ಎಚ್ಚೆತ್ತುಕೊಂಡಿಲ್ಲ.


ಇದನ್ನೂ ಓದಿ: ಕೊರೋನಾ ಆಹಾರ ಸಹಾಯವಾಣಿ 155214ಕೆಲಸ ಮಾಡುತ್ತಿದೆಯೇ?: ನಾನುಗೌರಿ.ಕಾಂಗೆ ಆಘಾತ ತಂದ ಅನುಭವ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...