Homeಕರ್ನಾಟಕಕಾರ್ಮಿಕರಿಗೆ ನೆರವಾಗಬೇಕಾಗಿದ್ದ ಸಹಾಯವಾಣಿ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ: ಆರೋಪ

ಕಾರ್ಮಿಕರಿಗೆ ನೆರವಾಗಬೇಕಾಗಿದ್ದ ಸಹಾಯವಾಣಿ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ: ಆರೋಪ

ಮಾರ್ಚ್ 28 ರಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಕೊರೊನಾ ಲಾಕ್ ಡೌನ್ ನಿಂದಾಗಿ ಅನ್ನವಿಲ್ಲದೆ ಕಷ್ಟಪಡುವ ಕೂಲಿ ಕಾರ್ಮಿಕರಿಗೆ ನೆರವಾಗಲು ರಾಜ್ಯ ಕಾರ್ಮಿಕ ಇಲಾಖೆಯ ಅಡಿಯಲ್ಲಿ ಈ ಸಹಾಯವಾಣಿಯನ್ನು ಲೋಕಾರ್ಪಣೆ ಮಾಡಿದ್ದರು.

- Advertisement -
- Advertisement -

ರಾಜ್ಯ ಕಾರ್ಮಿಕ ಇಲಾಖೆ ಪ್ರಾರಂಭಿಸಿದ್ದ ಕೊರೊನಾ ಲಾಕ್‌ಡೌನ್ ನಿಂದ ಸಂಕಷ್ಟಕ್ಕೆ ಸಿಲುಕಿರುವ ಕೂಲಿಕಾರರ ಸಹಾಯವಾಣಿ (155214) ಪ್ರಾರಂಭವಾಗಿ ಒಂದು ತಿಂಗಳಾದರೂ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂಬ ಆರೋಪಗಳು ಕೇಳಿ ಬರುತ್ತಿದೆ.

ಮಾರ್ಚ್ 28 ರಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಕೊರೊನಾ ಲಾಕ್ ಡೌನ್ ನಿಂದಾಗಿ ಅನ್ನವಿಲ್ಲದೆ ಕಷ್ಟಪಡುವ ಕೂಲಿ ಕಾರ್ಮಿಕರಿಗೆ ನೆರವಾಗಲು ರಾಜ್ಯ ಕಾರ್ಮಿಕ ಇಲಾಖೆಯ ಅಡಿಯಲ್ಲಿ ಈ ಸಹಾಯವಾಣಿಯನ್ನು ಲೋಕಾರ್ಪಣೆ ಮಾಡಿದ್ದರು.

ಈ ಸಂದರ್ಭದಲ್ಲಿ ಸಚಿವರು ಮಾತನಾಡಿ, ಅನ್ನವಿಲ್ಲದೆ ಸಂಕಷ್ಟಕ್ಕೆ ಸಿಲುಕಿರುವ ಕೂಲಿಕಾರರು ಸಹಾಯವಾಣಿಗೆ ಕರೆ ಮಾಡಿದಲ್ಲಿ ಅವರು ಎಲ್ಲಿಂದ ಕರೆ ಮಾಡಿದ್ದಾರೆ ಎಂಬುದನ್ನು ದೃಢಪಡಿಸಿಕೊಂಡು ಸಮೀಪದ ಇಂದಿರಾ ಕ್ಯಾಂಟೀನ್ ಅಥವಾ ಸರ್ಕಾರೇತರ ಸಂಘ-ಸಂಸ್ಥೆಗಳ ನೆರವಿನಿಂದ ಅವರು ಇದ್ದಲ್ಲೇ ಊಟದ ವ್ಯವಸ್ಥೆ ಮಾಡಲು ಸಹಾಯವಾಣಿ ನೆರವು ಒದಗಿಸಲಿದೆ ಎಂದಿದ್ದರು.

ದ.ಕ ಗ್ರಾಹಕ ರಕ್ಷಣಾ ಪರಿಷತ್ತಿನ ಮಾಜಿ ಸದಸ್ಯರಾದ ಸುಳ್ಯದ ಸಚಿನ್ ರಾಜ್ ಶೆಟ್ಟಿ “ಕಾರ್ಮಿಕ ಇಲಾಖೆ ಸಹಾಯ ವಾಣಿಯೂ ನಿಷ್ಪ್ರಯೋಜಕ” ಎಂದು ದೂರಿದ್ದಾರೆ. “ಕಾರ್ಮಿಕ ಇಲಾಖೆಯಿಂದ ದಿನಸಿ ಸಾಮಗ್ರಿ, ಬಿಸಿಯೂಟ ಹಾಗೂ ಇತರ ಸೇವೆಗಳಿಗಾಗಿ 155214 ಸಹಾಯವಾಣಿಯನ್ನು ರೂಪಿಸಿದ್ದು ಇದರಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ಸರಿಯಾದ ಮಾಹಿತಿ ನೀಡದೆ ಜನರಿಗೆ ವಂಚನೆ ಮಾಡುತ್ತಿದ್ದಾರೆ. ಹೆಸರಿಗೆ ಮಾತ್ರ ಇಂತಹ ಸಹಾಯವಾಣಿ ಮಾಡಿರುವುದನ್ನು ನೋಡಿದಾಗ ಸರಕಾರ ಎಡವಿದೆ ಎಂಬುದು ಸ್ಪಷ್ಟ” ಎಂದು ಹೇಳಿದ್ದಾರೆ.

ಕನಿಷ್ಠ ಹತ್ತು ಬಾರಿಯಾದರೂ ಕರೆ ಮಾಡಿದ್ದೇನೆ ಸಹಾಯವಾಣಿಯಲ್ಲಿ ಸರಿಯಾದ ಮಾಹಿತಿ ನೀಡುತ್ತಿಲ್ಲ, ಕರೆಯನ್ನು ಸ್ವೀಕರಿಸಿದರೆ ಸಹಾಯವಾಣಿ ಕೇವಲ ಬೆಂಗಳೂರಿಗೆ ನೀವು ಜಿಲ್ಲೆ, ಗ್ರಾಮ ಪಂಚಾಯತ್ ಕಚೇರಿಗೆ ಸಂಪರ್ಕಿಸಬೇಕಾಗುತ್ತದೆ ಎಂದಿರುವ ಕರೆಯ ಆಡಿಯೋ ರೆಕಾರ್ಡ್ ಗಳು ಹರಿದಾಡುತ್ತಿದೆ. ಸಹಾಯವಾಣಿ ಇಡೀ ಕರ್ನಾಟಕಕ್ಕೆ ಅನ್ವಯವಾಗುತ್ತಿದ್ದರೂ ಸಹಯವಾಣಿ ಸಿಬ್ಬಂದಿಗಳು ಮಾತ್ರ ಇದು ಕೇವಲ ಬೆಂಗಳೂರಿಗೆ ಎಂದು ಹೇಳುವುದನ್ನು ಈ ಕರೆಯ ರೆಕಾರ್ಡಿನಲ್ಲಿ ಕೇಳಬಹುದಾಗಿದೆ.

ಇದರ ಬಗ್ಗೆ ನಾನುಗೌರಿ.ಕಾಮ್ ಹಿಂದೆಯೆ ವರದಿ ಮಾಡಿದ್ದು ಆದರೂ ಸರ್ಕರ ಎಚ್ಚೆತ್ತುಕೊಂಡಿಲ್ಲ.


ಇದನ್ನೂ ಓದಿ: ಕೊರೋನಾ ಆಹಾರ ಸಹಾಯವಾಣಿ 155214ಕೆಲಸ ಮಾಡುತ್ತಿದೆಯೇ?: ನಾನುಗೌರಿ.ಕಾಂಗೆ ಆಘಾತ ತಂದ ಅನುಭವ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...