Homeಕರ್ನಾಟಕ'ಈ ನೆಲದ ಪರಂಪರೆಯೇ ಸರ್ವ ಜನಾಂಗದ ಶಾಂತಿಯ ತೋಟ..'; ದಸರಾ ಉದ್ಘಾಟಿಸಿದ ಬಾನು ಮುಷ್ತಾಕ್

‘ಈ ನೆಲದ ಪರಂಪರೆಯೇ ಸರ್ವ ಜನಾಂಗದ ಶಾಂತಿಯ ತೋಟ..’; ದಸರಾ ಉದ್ಘಾಟಿಸಿದ ಬಾನು ಮುಷ್ತಾಕ್

- Advertisement -
- Advertisement -

ಮೈಸೂರು ದಸರಾ, ನಾಡಿನ ನಾಡಿ, ಸಂಸ್ಕೃತಿಯ ಉತ್ಸವ, ಎಲ್ಲರನ್ನೂ ಒಗ್ಗೂಡಿಸುವ ಸಮನ್ವಯದ ಮೇಳವಾಗಿದೆ ಎಂದು ಸಾಹಿತಿ ಹಾಗೂ 2025ರ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತರಾದ ಬಾನು ಮುಷ್ತಾಕ್ ಅವರು ದಸರಾ ಉದ್ಘಾಟಿಸಿ ಮಾತನಾಡಿದರು.

ನಾಡದೇವತೆ ಚಾಮುಂಡೇಶ್ವರಿ ದೇವಿಯ ಅಗ್ರಪೂಜೆಯೊಂದಿಗೆ ಪ್ರಾರಂಭವಾದ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಅವರು ಇಂದು ಉದ್ಘಾಟಿಸಿದರು.

“ಮೈಸೂರು ದಸರಾದ ಪವಿತ್ರದ ಕ್ಷಣದಲ್ಲಿ ಚಾಮುಂಡಿ ತಾಯಿಯ ಕೃಪೆಯ ನೆರಳಿನಲ್ಲಿ, ಈ ವೇದಿಕೆಯಿಂದ ನಿಮ್ಮೆದುರು ನಿಲ್ಲುವ ಅವಕಾಶ ದೊರೆತಿರುವುದು ನನ್ನ ಜೀವನದ ಅತ್ಯಂತ ಗೌರವದ ಘಳಿಕೆ. ದಸರಾ ಎಂದರೆ ಕೇವಲ ಹಬ್ಬವಲ್ಲ, ಇದು ನಾಡಿನ ನಾಡಿ, ಸಂಸ್ಕೃತಿಯ ಉತ್ಸವ, ಎಲ್ಲರನ್ನೂ ಒಗ್ಗೂಡಿಸುವ ಸಮನ್ವಯದ ಮೇಳ. ಈ ನೆಲದಲ್ಲಿ ಹುಟ್ಟಿದ ಪ್ರತಿಯೊಂದು ಜೀವಕ್ಕೂ ಈ ಮಣ್ಣಿನ ಬಾರಿಸುದಾರಿಕೆ, ಸ್ಪಂದನೆ ಮತ್ತು ನೆನಪುಗಳಿವೆ” ಎಂದರು.

“ಮೈಸೂರು ಅರಸರ ಸಂಸ್ಕೃತಿಯ ಪರಂಪರೆಯಿಂದ ಹಿಡಿದು,ಕನ್ನಡ ಭಾಷೆಯ ಅಂತರಾಳದ ಹೃದಯಸ್ಪಂದನದವರೆಗೆ ಈ ಹಬ್ಬವು ನಮಗೆ ಸ್ಮರಿಸುತ್ತದೆ. ಸಂಸ್ಕೃತಿ ಎಂದರೆ ಬೇರೆ ಬೇರೆ ಧ್ವನಿಗಳ ಸಂಗಮ. ವಿಭಿನ್ನತೆಯಲ್ಲೇ ಏಕತೆಯ ಸುಗಂಧ. ಮಹಾರಾಜರು ಜಯಚಾಮರಾಜೇಂದ್ರ ಒಡೆಯರು ಮುಸ್ಲಿಂರ ನಂಬಿ, ಅವರನ್ನು ಅನುಮಾನಿಸದೇ, ಅಂಗರಕ್ಷಕರ ಪಡೆಯ ಸದಸ್ಯರಾಗಿದ್ದರು, ಇದು ನಮಗೆ ಬಹಳ ಹೆಮ್ಮೆಯ ಮತ್ತು ಅಪ್ಯಾಯಮಾನವಾದ ವಿಷಯ. ಸಂಸ್ಕೃತಿ ಎಂದರೆ ಹೃದಯದಗಲವನ್ನು ಹುಟ್ಟಿಸುವ ನನ್ನ ಧಾರ್ಮಿಕ ನಂಬಿಕೆ, ಯಾವಗಾಗಲೂ ಜೀವ ಪರ ಮಾನವೀಯಪರ. ಈ ನೆಲದ ಸಂಸ್ಕೃತಿಯ ಮೂಲ- ಎಲ್ಲರನ್ನೊಳಗೊಳ್ಳುವ ಎಲ್ಲರ ಬದುಕನ್ನು ಗೌರವಿಸುವ, ನಮ್ಮೆಲ್ಲರ ಸರ್ವ ಜನಾಂಗದ ಶಾಂತಿಯ ತೋಟ” ಎಂದರು.

ದಸರಾ-ಶಾಂತಿಯ ಹಬ್ಬ, ಸೌಹಾರ್ದದ ಮೇಳ

“ಮೈಸೂರು ದಸರಾ ಘೋಷಣೆಯ ನಮ್ಮೆಲ್ಲರ ಕಿವಿಯಲ್ಲಿ ಪ್ರತಿಧ್ವನಿಸಲಿ. ಇದು ಶಾಂತಿಯ ಹಬ್ಬ, ಸೌಹಾರ್ದದ ಮೇಳ, ಇದು ಸರ್ವಜನಾಂಗದ ಶಾಂತಿಯ ತೋಟ. ನಾವು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಗೌರವಿಸಿ, ಪರಸ್ಪರರ ನಂಬಿಕೆಗಳನ್ನು, ಸಂಸ್ಕೃತಿಗಳನ್ನು ಗೌರವಿಸುವುದರ ಮೂಲಕ ನಮ್ಮ ಬದುಕನ್ನು ಶ್ರೀಮಂತಗೊಳಿಸಬೇಕಿದೆ. ಈ ನೆಲದ ಸುಗಂಧವನ್ನು ಐಕ್ಯತೆಯಾಗಲಿ, ನೆಲದ ಬಿಸಿಲು ಕೂಡ ಸಾಹಾರ್ದತೆಯಿಂದ ಕೂಡಿದೆ. ಈ ನೆಲದ ಬಿಸಿಲು ಕೂಡ ಮಾನವೀಯ ಪ್ರೀತಿಯ ಪ್ರತೀಕವಾಗಿದೆ. ಈ ಸಂದರ್ಭದಲ್ಲಿ ಚಾಮುಂಡಿ ತಾಯಿಯ ಮಹಿಮೆ ನಮ್ಮೆಲ್ಲರ ಜೀವನಕ್ಕೆ ಮಾರ್ಗದರ್ಶಕವಾಗಿರಲಿ. ತಾಯಿ ಚಾಮುಂಡಿಯ ಸತ್ಯ, ಧೈರ್ಯ ಹಾಗೂ ರಕ್ಷಕತ್ವದ ಸಂಕೇತ. ನಮ್ಮೊಳಗಿನ ದ್ವೇಷ, ಅಸಹಿಷ್ಣುತೆಗಳನ್ನು ನಾಶವಾಗಲೆಂದು ಬಯಸುತ್ತೇನೆ. ಈ ದಸರಾ ಹಬ್ಬ ಕೇವಲ ಮೈಸೂರು ನಗರಕ್ಕೆ ಸೀಮಿತವಾಗದೇ, ನಮ್ಮ ನಾಡಿಗೆ ಮಾತ್ರ, ದೇಶಕ್ಕೆ ಮಾತ್ರ ಸೀಮಿತವಾಗದೇ, ಇಡೀ ಜಗಗತ್ತಿನಾದ್ಯಂತ ಮಾನವ ಕುಲಕ್ಕೆ ಶಾಂತಿ ಸಹಾನುಭೂತಿ, ಪ್ರೀತಿ ಮತ್ತು ನ್ಯಾಯದ ದೀಪವನ್ನು ಬೆಳೆಗಿಸಲೆಂದು ಹಾರೈಸುತ್ತೇನೆ. ಇಂದು ಬೆಳೆಗಿಸಿದ ದೀಪ ಈ ಸಂದೇಶದೊಂದಿಗೆ ಇಡೀ ಪ್ರಪಂಚದಾದ್ಯಂತ ತನ್ನ ನೆಲೆಯನ್ನು ಕಂಡುಕೊಳ್ಳಲಿ ಎಂದು ಆಶಿಸುತ್ತೇನೆ” ಎಂದರು.

ವ್ಯಕ್ತಿಯಿಂದ ಸಮಷ್ಠಿಯೆಡೆಗೆ ಸಾಗುವುದೇ ಬದುಕಿನ ನಿಜವಾದ ದಾರಿ

“ನನ್ನ ಬದುಕು ನನಗೆ ಅನೇಕ ಪಾಠಗಳನ್ನು ಕಲಿಸಿದೆ. ಅದರಲ್ಲಿ ಮುಖ್ಯಪಾಠವೆಂದರೆ, ವ್ಯಕ್ತಿಯಿಂದ ಸಮಷ್ಠಿಯೆಡೆಗೆ ಸಾಗುವ ದಾರಿ ಮಾತ್ರ ನಿಜವಾದ ದಾರಿ. ನನ್ನ ಧಾರ್ಮಿಕ ನಂಬಿಕೆಗಳು, ನನ್ನ ಜೀವನ ದರ್ಶನ ಎಂದಿಗೂ ಜೀವಪರ. ಅವು ಮರದ ನೆರಳಿನಂತೆ, ತಂಪಾದ ನದಿಯಂತೆ, ಇಂದಿನ ಜಗತ್ತು ಯುದ್ಧದ ಜ್ವಾಲೆಯಲ್ಲಿ ಸುಡುತ್ತಿದೆ. ಇಂದು ಮನುಕುಲವು ದ್ವೇಷ ಮತ್ತು ರಕ್ತಪಾತದಲ್ಲಿ ಮುಳುಗಿರುವಾಗ, ದಸರಾ ಘೋಷಣೆಯು ಎಲ್ಲರ ಕಿವಿಯಲ್ಲಿ ಪ್ರತಿಧ್ವನಿಸಲಿ, ಇದು ಶಾಂತಿಯ ಹಬ್ಬ, ಸೌಹಾರ್ದದ ಮೇಳ. ಇದು ಸರ್ವಜನಾಂಗದ ಶಾಂತಿಯ ತೋಟ. ನನ್ನ ಜೀವನದ ದರ್ಶನ ಯಾವತ್ತಿಗೂ ಜೀವಪರ. ಅಸ್ತ್ರಗಳಿಂದಲ್ಲ, ಅಕ್ಷರದಿಂದ ಬದುಕನ್ನು ಗೆಲ್ಲಬಹುದು. ಹಗೆಗಳಿಂದಲ್ಲ, ಪ್ರೀತಿಯಿಂದ ಬದುಕನ್ನು ಅರಳಿಸಬಹುದು” ಎಂದು ಹೇಳಿದರು.

“ಈ ನೆಲದ ಪರಂಪರೆಯೇ ಸರ್ವಜನಾಂಗದ ಶಾಂತಿಯ ತೋಟವಾಗಿದೆ. ಈ ತೋಟದಲ್ಲಿ ಪ್ರತಿ ಹೂವು ತನ್ನ ಬಣ್ಣದಲ್ಲೇ ಅರಳಲಿ, ಪ್ರತಿ ಹಕ್ಕಿ ತನ್ನ ರಾಗದಲ್ಲೇ ಹಾಡಲಿ. ಆದರೆ, ಒಟ್ಟಿಗೆ ಸೇರಿದಾಗ ಅದು ಸೌಹಾರ್ದ ಸಿಂಫನಿಯಾಗಲಿ. ಪ್ರಜಾಪ್ರಭುತ್ವವು ಕೇವಲ ವ್ಯವಸ್ಥೆಯಲ್ಲ, ಅದು ಮೌಲ್ಯ. ಅದು ಪ್ರತಿಯೊಬ್ಬರ ಧ್ವನಿಯನ್ನು ಗೌರವಿಸುವ ಮನೋಭಾವ. ಅದು ಬೇರೆಯವರ ಬದುಕಿನಲ್ಲಿ ಅರ್ಥಪೂರ್ಣವಾಗಿ ನಡೆದುಕೊಳ್ಳುವ ಜವಾಬ್ದಾರಿ. ಅದನ್ನು ಗೌರವಿಸುವು ನಮ್ಮೆಲ್ಲರ ಕರ್ತವ್ಯ” ಎಂದರು.

ನಾವೆಲ್ಲಾ ಒಂದೇ ಗಗನದಡಿಯ ಪಯಣಿಗರು

“ನಾವು ಎಲ್ಲರೂ ಒಂದೇ ಗಗನದಡಿಯ ಪಯಣಿಗರು. ಆಕಾಶವು ಯಾರನ್ನೂ ಬೇರ್ಪಡಿಸುವುದಿಲ್ಲ. ಭೂಮಿ ಯಾರನ್ನೂ ತಳ್ಳುವುದಿಲ್ಲ. ಮನುಷ್ಯನು ಮಾತ್ರ ಗಡಿ ಹಾಕುತ್ತಾನೆ. ಆ ಗಡಿಗಳನ್ನು ನಾವೇ ಅಳಿಸಬೇಕು. ಇಂದು ಈ ಹಬ್ಬ ಮೈಸೂರಿನ ಬೀದಿಗಳಲ್ಲಿ ಮಾತ್ರವತ್ತ. ಇಡೀ ಜಗತ್ತಿನ ಹೃದಯಗಳಲ್ಲಿ ಬೆಳಗಲಿ” ಎಂದು ಹೇಳಿದರು.

“ಇತಿಹಾಸದತ್ತ ನೋಡಿದರೆ ನಾಲ್ವಡಿ ಕೃಷ್ಣರಾಜ ಒಡೆಯರ್ ಎಂದೆಂದಿಗೂ ಪ್ರಸ್ತುತವಾಗುತ್ತಾರೆ. ಅವರು ಹಂಚಿಕೊಳ್ಳುವ ಮನದ ಅರಸ. ರಾಜಕೀಯ, ಆರ್ಥಿಕ, ಸಾಮಾಜಿಕ ನ್ಯಾಯದ ಔದಾರ್ಯದ ದೊರೆಯಾಗಿದ್ದರು. ಭೇದ ಭಾವಕ್ಕಿಂತ ವಿಶಾಲ ಮನಸ್ಸಿಗೆ ಗೌರವವಿತ್ತು. ಅವರು ನೀಡಿದ ಸಂದೇಶ ಸಂಪತ್ತನ್ನು ಹಂಚಿದಾದ ಮಾತ್ರ ಅದು ಬೆಳೆಯುತ್ತದೆ. ಶಕ್ತಿಯನ್ನು ಹಂಚಿಕೊಂಡಾಗ ಮಾತ್ರ ದೀರ್ಘಕಾಲ ಬದುಕತ್ತದೆ” ಎಂದರು.

ಸಂಸ್ಕೃತಿ ನಮ್ಮ ಬೇರು ಸೌಹಾರ್ದ ನಮ್ಮ ಶಕ್ತಿ

“ಸಂಸ್ಕೃತಿ ನಮ್ಮ ಬೇರು. ಸೌಹಾರ್ದ ನಮ್ಮ ಶಕ್ತಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ, ಔದ್ಯೋಗಿಕವಾಗಿ ಭಾರತದ ನೆಲೆಯಲ್ಲಿ ನಮ್ಮ ಯುವಶಕ್ತಿಯೊಂದಿಗೆ ಸೇರಿ ಮಾನವೀಯ ಮೌಲ್ಯಗಳ , ಪ್ರೀತಿಯ ಹೊಸ ಸುಧಾರಿತ ಸಮಾಜವನ್ನು ಕಟ್ಟೋಣ” ಎಂದರು. ತಾನೊಬ್ಬ ಕವಿಯತ್ರಿಯಾಗಿದ್ದು, ಕವಿತೆಯ ಮೂಲಕ ನನ್ನ ಸಂದೇಶವನ್ನು ತಿಳಿಸಲು ಬಯಸಿದ್ದು, ಮುಸ್ಲಿಂ ಹೆಣ್ಣುಮಗಳು ಬಾಗಿನವನ್ನು ಪಡೆದಾಗಿನ ತನ್ನ ಮನಸ್ಸಿನ ಭಾವನೆಯನ್ನು ವ್ಯಕ್ತಪಡಿಸುವ ಕವಿತೆಯನ್ನು ಓದಿದರು.

ಮೈಸೂರು ದಸರಾ ಉತ್ಸವಕ್ಕೆ ಚಾಲನೆ ನೀಡಿದ ಅಂತಾರಾಷ್ಟ್ರೀಯ ಬೂಕರ್ ವಿಜೇತ ಲೇಖಕಿ ಬಾನು ಮುಷ್ತಾಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...