Homeಕರ್ನಾಟಕ'ಈ ನೆಲದ ಪರಂಪರೆಯೇ ಸರ್ವ ಜನಾಂಗದ ಶಾಂತಿಯ ತೋಟ..'; ದಸರಾ ಉದ್ಘಾಟಿಸಿದ ಬಾನು ಮುಷ್ತಾಕ್

‘ಈ ನೆಲದ ಪರಂಪರೆಯೇ ಸರ್ವ ಜನಾಂಗದ ಶಾಂತಿಯ ತೋಟ..’; ದಸರಾ ಉದ್ಘಾಟಿಸಿದ ಬಾನು ಮುಷ್ತಾಕ್

- Advertisement -
- Advertisement -

ಮೈಸೂರು ದಸರಾ, ನಾಡಿನ ನಾಡಿ, ಸಂಸ್ಕೃತಿಯ ಉತ್ಸವ, ಎಲ್ಲರನ್ನೂ ಒಗ್ಗೂಡಿಸುವ ಸಮನ್ವಯದ ಮೇಳವಾಗಿದೆ ಎಂದು ಸಾಹಿತಿ ಹಾಗೂ 2025ರ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತರಾದ ಬಾನು ಮುಷ್ತಾಕ್ ಅವರು ದಸರಾ ಉದ್ಘಾಟಿಸಿ ಮಾತನಾಡಿದರು.

ನಾಡದೇವತೆ ಚಾಮುಂಡೇಶ್ವರಿ ದೇವಿಯ ಅಗ್ರಪೂಜೆಯೊಂದಿಗೆ ಪ್ರಾರಂಭವಾದ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಅವರು ಇಂದು ಉದ್ಘಾಟಿಸಿದರು.

“ಮೈಸೂರು ದಸರಾದ ಪವಿತ್ರದ ಕ್ಷಣದಲ್ಲಿ ಚಾಮುಂಡಿ ತಾಯಿಯ ಕೃಪೆಯ ನೆರಳಿನಲ್ಲಿ, ಈ ವೇದಿಕೆಯಿಂದ ನಿಮ್ಮೆದುರು ನಿಲ್ಲುವ ಅವಕಾಶ ದೊರೆತಿರುವುದು ನನ್ನ ಜೀವನದ ಅತ್ಯಂತ ಗೌರವದ ಘಳಿಕೆ. ದಸರಾ ಎಂದರೆ ಕೇವಲ ಹಬ್ಬವಲ್ಲ, ಇದು ನಾಡಿನ ನಾಡಿ, ಸಂಸ್ಕೃತಿಯ ಉತ್ಸವ, ಎಲ್ಲರನ್ನೂ ಒಗ್ಗೂಡಿಸುವ ಸಮನ್ವಯದ ಮೇಳ. ಈ ನೆಲದಲ್ಲಿ ಹುಟ್ಟಿದ ಪ್ರತಿಯೊಂದು ಜೀವಕ್ಕೂ ಈ ಮಣ್ಣಿನ ಬಾರಿಸುದಾರಿಕೆ, ಸ್ಪಂದನೆ ಮತ್ತು ನೆನಪುಗಳಿವೆ” ಎಂದರು.

“ಮೈಸೂರು ಅರಸರ ಸಂಸ್ಕೃತಿಯ ಪರಂಪರೆಯಿಂದ ಹಿಡಿದು,ಕನ್ನಡ ಭಾಷೆಯ ಅಂತರಾಳದ ಹೃದಯಸ್ಪಂದನದವರೆಗೆ ಈ ಹಬ್ಬವು ನಮಗೆ ಸ್ಮರಿಸುತ್ತದೆ. ಸಂಸ್ಕೃತಿ ಎಂದರೆ ಬೇರೆ ಬೇರೆ ಧ್ವನಿಗಳ ಸಂಗಮ. ವಿಭಿನ್ನತೆಯಲ್ಲೇ ಏಕತೆಯ ಸುಗಂಧ. ಮಹಾರಾಜರು ಜಯಚಾಮರಾಜೇಂದ್ರ ಒಡೆಯರು ಮುಸ್ಲಿಂರ ನಂಬಿ, ಅವರನ್ನು ಅನುಮಾನಿಸದೇ, ಅಂಗರಕ್ಷಕರ ಪಡೆಯ ಸದಸ್ಯರಾಗಿದ್ದರು, ಇದು ನಮಗೆ ಬಹಳ ಹೆಮ್ಮೆಯ ಮತ್ತು ಅಪ್ಯಾಯಮಾನವಾದ ವಿಷಯ. ಸಂಸ್ಕೃತಿ ಎಂದರೆ ಹೃದಯದಗಲವನ್ನು ಹುಟ್ಟಿಸುವ ನನ್ನ ಧಾರ್ಮಿಕ ನಂಬಿಕೆ, ಯಾವಗಾಗಲೂ ಜೀವ ಪರ ಮಾನವೀಯಪರ. ಈ ನೆಲದ ಸಂಸ್ಕೃತಿಯ ಮೂಲ- ಎಲ್ಲರನ್ನೊಳಗೊಳ್ಳುವ ಎಲ್ಲರ ಬದುಕನ್ನು ಗೌರವಿಸುವ, ನಮ್ಮೆಲ್ಲರ ಸರ್ವ ಜನಾಂಗದ ಶಾಂತಿಯ ತೋಟ” ಎಂದರು.

ದಸರಾ-ಶಾಂತಿಯ ಹಬ್ಬ, ಸೌಹಾರ್ದದ ಮೇಳ

“ಮೈಸೂರು ದಸರಾ ಘೋಷಣೆಯ ನಮ್ಮೆಲ್ಲರ ಕಿವಿಯಲ್ಲಿ ಪ್ರತಿಧ್ವನಿಸಲಿ. ಇದು ಶಾಂತಿಯ ಹಬ್ಬ, ಸೌಹಾರ್ದದ ಮೇಳ, ಇದು ಸರ್ವಜನಾಂಗದ ಶಾಂತಿಯ ತೋಟ. ನಾವು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಗೌರವಿಸಿ, ಪರಸ್ಪರರ ನಂಬಿಕೆಗಳನ್ನು, ಸಂಸ್ಕೃತಿಗಳನ್ನು ಗೌರವಿಸುವುದರ ಮೂಲಕ ನಮ್ಮ ಬದುಕನ್ನು ಶ್ರೀಮಂತಗೊಳಿಸಬೇಕಿದೆ. ಈ ನೆಲದ ಸುಗಂಧವನ್ನು ಐಕ್ಯತೆಯಾಗಲಿ, ನೆಲದ ಬಿಸಿಲು ಕೂಡ ಸಾಹಾರ್ದತೆಯಿಂದ ಕೂಡಿದೆ. ಈ ನೆಲದ ಬಿಸಿಲು ಕೂಡ ಮಾನವೀಯ ಪ್ರೀತಿಯ ಪ್ರತೀಕವಾಗಿದೆ. ಈ ಸಂದರ್ಭದಲ್ಲಿ ಚಾಮುಂಡಿ ತಾಯಿಯ ಮಹಿಮೆ ನಮ್ಮೆಲ್ಲರ ಜೀವನಕ್ಕೆ ಮಾರ್ಗದರ್ಶಕವಾಗಿರಲಿ. ತಾಯಿ ಚಾಮುಂಡಿಯ ಸತ್ಯ, ಧೈರ್ಯ ಹಾಗೂ ರಕ್ಷಕತ್ವದ ಸಂಕೇತ. ನಮ್ಮೊಳಗಿನ ದ್ವೇಷ, ಅಸಹಿಷ್ಣುತೆಗಳನ್ನು ನಾಶವಾಗಲೆಂದು ಬಯಸುತ್ತೇನೆ. ಈ ದಸರಾ ಹಬ್ಬ ಕೇವಲ ಮೈಸೂರು ನಗರಕ್ಕೆ ಸೀಮಿತವಾಗದೇ, ನಮ್ಮ ನಾಡಿಗೆ ಮಾತ್ರ, ದೇಶಕ್ಕೆ ಮಾತ್ರ ಸೀಮಿತವಾಗದೇ, ಇಡೀ ಜಗಗತ್ತಿನಾದ್ಯಂತ ಮಾನವ ಕುಲಕ್ಕೆ ಶಾಂತಿ ಸಹಾನುಭೂತಿ, ಪ್ರೀತಿ ಮತ್ತು ನ್ಯಾಯದ ದೀಪವನ್ನು ಬೆಳೆಗಿಸಲೆಂದು ಹಾರೈಸುತ್ತೇನೆ. ಇಂದು ಬೆಳೆಗಿಸಿದ ದೀಪ ಈ ಸಂದೇಶದೊಂದಿಗೆ ಇಡೀ ಪ್ರಪಂಚದಾದ್ಯಂತ ತನ್ನ ನೆಲೆಯನ್ನು ಕಂಡುಕೊಳ್ಳಲಿ ಎಂದು ಆಶಿಸುತ್ತೇನೆ” ಎಂದರು.

ವ್ಯಕ್ತಿಯಿಂದ ಸಮಷ್ಠಿಯೆಡೆಗೆ ಸಾಗುವುದೇ ಬದುಕಿನ ನಿಜವಾದ ದಾರಿ

“ನನ್ನ ಬದುಕು ನನಗೆ ಅನೇಕ ಪಾಠಗಳನ್ನು ಕಲಿಸಿದೆ. ಅದರಲ್ಲಿ ಮುಖ್ಯಪಾಠವೆಂದರೆ, ವ್ಯಕ್ತಿಯಿಂದ ಸಮಷ್ಠಿಯೆಡೆಗೆ ಸಾಗುವ ದಾರಿ ಮಾತ್ರ ನಿಜವಾದ ದಾರಿ. ನನ್ನ ಧಾರ್ಮಿಕ ನಂಬಿಕೆಗಳು, ನನ್ನ ಜೀವನ ದರ್ಶನ ಎಂದಿಗೂ ಜೀವಪರ. ಅವು ಮರದ ನೆರಳಿನಂತೆ, ತಂಪಾದ ನದಿಯಂತೆ, ಇಂದಿನ ಜಗತ್ತು ಯುದ್ಧದ ಜ್ವಾಲೆಯಲ್ಲಿ ಸುಡುತ್ತಿದೆ. ಇಂದು ಮನುಕುಲವು ದ್ವೇಷ ಮತ್ತು ರಕ್ತಪಾತದಲ್ಲಿ ಮುಳುಗಿರುವಾಗ, ದಸರಾ ಘೋಷಣೆಯು ಎಲ್ಲರ ಕಿವಿಯಲ್ಲಿ ಪ್ರತಿಧ್ವನಿಸಲಿ, ಇದು ಶಾಂತಿಯ ಹಬ್ಬ, ಸೌಹಾರ್ದದ ಮೇಳ. ಇದು ಸರ್ವಜನಾಂಗದ ಶಾಂತಿಯ ತೋಟ. ನನ್ನ ಜೀವನದ ದರ್ಶನ ಯಾವತ್ತಿಗೂ ಜೀವಪರ. ಅಸ್ತ್ರಗಳಿಂದಲ್ಲ, ಅಕ್ಷರದಿಂದ ಬದುಕನ್ನು ಗೆಲ್ಲಬಹುದು. ಹಗೆಗಳಿಂದಲ್ಲ, ಪ್ರೀತಿಯಿಂದ ಬದುಕನ್ನು ಅರಳಿಸಬಹುದು” ಎಂದು ಹೇಳಿದರು.

“ಈ ನೆಲದ ಪರಂಪರೆಯೇ ಸರ್ವಜನಾಂಗದ ಶಾಂತಿಯ ತೋಟವಾಗಿದೆ. ಈ ತೋಟದಲ್ಲಿ ಪ್ರತಿ ಹೂವು ತನ್ನ ಬಣ್ಣದಲ್ಲೇ ಅರಳಲಿ, ಪ್ರತಿ ಹಕ್ಕಿ ತನ್ನ ರಾಗದಲ್ಲೇ ಹಾಡಲಿ. ಆದರೆ, ಒಟ್ಟಿಗೆ ಸೇರಿದಾಗ ಅದು ಸೌಹಾರ್ದ ಸಿಂಫನಿಯಾಗಲಿ. ಪ್ರಜಾಪ್ರಭುತ್ವವು ಕೇವಲ ವ್ಯವಸ್ಥೆಯಲ್ಲ, ಅದು ಮೌಲ್ಯ. ಅದು ಪ್ರತಿಯೊಬ್ಬರ ಧ್ವನಿಯನ್ನು ಗೌರವಿಸುವ ಮನೋಭಾವ. ಅದು ಬೇರೆಯವರ ಬದುಕಿನಲ್ಲಿ ಅರ್ಥಪೂರ್ಣವಾಗಿ ನಡೆದುಕೊಳ್ಳುವ ಜವಾಬ್ದಾರಿ. ಅದನ್ನು ಗೌರವಿಸುವು ನಮ್ಮೆಲ್ಲರ ಕರ್ತವ್ಯ” ಎಂದರು.

ನಾವೆಲ್ಲಾ ಒಂದೇ ಗಗನದಡಿಯ ಪಯಣಿಗರು

“ನಾವು ಎಲ್ಲರೂ ಒಂದೇ ಗಗನದಡಿಯ ಪಯಣಿಗರು. ಆಕಾಶವು ಯಾರನ್ನೂ ಬೇರ್ಪಡಿಸುವುದಿಲ್ಲ. ಭೂಮಿ ಯಾರನ್ನೂ ತಳ್ಳುವುದಿಲ್ಲ. ಮನುಷ್ಯನು ಮಾತ್ರ ಗಡಿ ಹಾಕುತ್ತಾನೆ. ಆ ಗಡಿಗಳನ್ನು ನಾವೇ ಅಳಿಸಬೇಕು. ಇಂದು ಈ ಹಬ್ಬ ಮೈಸೂರಿನ ಬೀದಿಗಳಲ್ಲಿ ಮಾತ್ರವತ್ತ. ಇಡೀ ಜಗತ್ತಿನ ಹೃದಯಗಳಲ್ಲಿ ಬೆಳಗಲಿ” ಎಂದು ಹೇಳಿದರು.

“ಇತಿಹಾಸದತ್ತ ನೋಡಿದರೆ ನಾಲ್ವಡಿ ಕೃಷ್ಣರಾಜ ಒಡೆಯರ್ ಎಂದೆಂದಿಗೂ ಪ್ರಸ್ತುತವಾಗುತ್ತಾರೆ. ಅವರು ಹಂಚಿಕೊಳ್ಳುವ ಮನದ ಅರಸ. ರಾಜಕೀಯ, ಆರ್ಥಿಕ, ಸಾಮಾಜಿಕ ನ್ಯಾಯದ ಔದಾರ್ಯದ ದೊರೆಯಾಗಿದ್ದರು. ಭೇದ ಭಾವಕ್ಕಿಂತ ವಿಶಾಲ ಮನಸ್ಸಿಗೆ ಗೌರವವಿತ್ತು. ಅವರು ನೀಡಿದ ಸಂದೇಶ ಸಂಪತ್ತನ್ನು ಹಂಚಿದಾದ ಮಾತ್ರ ಅದು ಬೆಳೆಯುತ್ತದೆ. ಶಕ್ತಿಯನ್ನು ಹಂಚಿಕೊಂಡಾಗ ಮಾತ್ರ ದೀರ್ಘಕಾಲ ಬದುಕತ್ತದೆ” ಎಂದರು.

ಸಂಸ್ಕೃತಿ ನಮ್ಮ ಬೇರು ಸೌಹಾರ್ದ ನಮ್ಮ ಶಕ್ತಿ

“ಸಂಸ್ಕೃತಿ ನಮ್ಮ ಬೇರು. ಸೌಹಾರ್ದ ನಮ್ಮ ಶಕ್ತಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ, ಔದ್ಯೋಗಿಕವಾಗಿ ಭಾರತದ ನೆಲೆಯಲ್ಲಿ ನಮ್ಮ ಯುವಶಕ್ತಿಯೊಂದಿಗೆ ಸೇರಿ ಮಾನವೀಯ ಮೌಲ್ಯಗಳ , ಪ್ರೀತಿಯ ಹೊಸ ಸುಧಾರಿತ ಸಮಾಜವನ್ನು ಕಟ್ಟೋಣ” ಎಂದರು. ತಾನೊಬ್ಬ ಕವಿಯತ್ರಿಯಾಗಿದ್ದು, ಕವಿತೆಯ ಮೂಲಕ ನನ್ನ ಸಂದೇಶವನ್ನು ತಿಳಿಸಲು ಬಯಸಿದ್ದು, ಮುಸ್ಲಿಂ ಹೆಣ್ಣುಮಗಳು ಬಾಗಿನವನ್ನು ಪಡೆದಾಗಿನ ತನ್ನ ಮನಸ್ಸಿನ ಭಾವನೆಯನ್ನು ವ್ಯಕ್ತಪಡಿಸುವ ಕವಿತೆಯನ್ನು ಓದಿದರು.

ಮೈಸೂರು ದಸರಾ ಉತ್ಸವಕ್ಕೆ ಚಾಲನೆ ನೀಡಿದ ಅಂತಾರಾಷ್ಟ್ರೀಯ ಬೂಕರ್ ವಿಜೇತ ಲೇಖಕಿ ಬಾನು ಮುಷ್ತಾಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...