Homeಕರ್ನಾಟಕ'ಈ ನೆಲದ ಪರಂಪರೆಯೇ ಸರ್ವ ಜನಾಂಗದ ಶಾಂತಿಯ ತೋಟ..'; ದಸರಾ ಉದ್ಘಾಟಿಸಿದ ಬಾನು ಮುಷ್ತಾಕ್

‘ಈ ನೆಲದ ಪರಂಪರೆಯೇ ಸರ್ವ ಜನಾಂಗದ ಶಾಂತಿಯ ತೋಟ..’; ದಸರಾ ಉದ್ಘಾಟಿಸಿದ ಬಾನು ಮುಷ್ತಾಕ್

- Advertisement -
- Advertisement -

ಮೈಸೂರು ದಸರಾ, ನಾಡಿನ ನಾಡಿ, ಸಂಸ್ಕೃತಿಯ ಉತ್ಸವ, ಎಲ್ಲರನ್ನೂ ಒಗ್ಗೂಡಿಸುವ ಸಮನ್ವಯದ ಮೇಳವಾಗಿದೆ ಎಂದು ಸಾಹಿತಿ ಹಾಗೂ 2025ರ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತರಾದ ಬಾನು ಮುಷ್ತಾಕ್ ಅವರು ದಸರಾ ಉದ್ಘಾಟಿಸಿ ಮಾತನಾಡಿದರು.

ನಾಡದೇವತೆ ಚಾಮುಂಡೇಶ್ವರಿ ದೇವಿಯ ಅಗ್ರಪೂಜೆಯೊಂದಿಗೆ ಪ್ರಾರಂಭವಾದ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಅವರು ಇಂದು ಉದ್ಘಾಟಿಸಿದರು.

“ಮೈಸೂರು ದಸರಾದ ಪವಿತ್ರದ ಕ್ಷಣದಲ್ಲಿ ಚಾಮುಂಡಿ ತಾಯಿಯ ಕೃಪೆಯ ನೆರಳಿನಲ್ಲಿ, ಈ ವೇದಿಕೆಯಿಂದ ನಿಮ್ಮೆದುರು ನಿಲ್ಲುವ ಅವಕಾಶ ದೊರೆತಿರುವುದು ನನ್ನ ಜೀವನದ ಅತ್ಯಂತ ಗೌರವದ ಘಳಿಕೆ. ದಸರಾ ಎಂದರೆ ಕೇವಲ ಹಬ್ಬವಲ್ಲ, ಇದು ನಾಡಿನ ನಾಡಿ, ಸಂಸ್ಕೃತಿಯ ಉತ್ಸವ, ಎಲ್ಲರನ್ನೂ ಒಗ್ಗೂಡಿಸುವ ಸಮನ್ವಯದ ಮೇಳ. ಈ ನೆಲದಲ್ಲಿ ಹುಟ್ಟಿದ ಪ್ರತಿಯೊಂದು ಜೀವಕ್ಕೂ ಈ ಮಣ್ಣಿನ ಬಾರಿಸುದಾರಿಕೆ, ಸ್ಪಂದನೆ ಮತ್ತು ನೆನಪುಗಳಿವೆ” ಎಂದರು.

“ಮೈಸೂರು ಅರಸರ ಸಂಸ್ಕೃತಿಯ ಪರಂಪರೆಯಿಂದ ಹಿಡಿದು,ಕನ್ನಡ ಭಾಷೆಯ ಅಂತರಾಳದ ಹೃದಯಸ್ಪಂದನದವರೆಗೆ ಈ ಹಬ್ಬವು ನಮಗೆ ಸ್ಮರಿಸುತ್ತದೆ. ಸಂಸ್ಕೃತಿ ಎಂದರೆ ಬೇರೆ ಬೇರೆ ಧ್ವನಿಗಳ ಸಂಗಮ. ವಿಭಿನ್ನತೆಯಲ್ಲೇ ಏಕತೆಯ ಸುಗಂಧ. ಮಹಾರಾಜರು ಜಯಚಾಮರಾಜೇಂದ್ರ ಒಡೆಯರು ಮುಸ್ಲಿಂರ ನಂಬಿ, ಅವರನ್ನು ಅನುಮಾನಿಸದೇ, ಅಂಗರಕ್ಷಕರ ಪಡೆಯ ಸದಸ್ಯರಾಗಿದ್ದರು, ಇದು ನಮಗೆ ಬಹಳ ಹೆಮ್ಮೆಯ ಮತ್ತು ಅಪ್ಯಾಯಮಾನವಾದ ವಿಷಯ. ಸಂಸ್ಕೃತಿ ಎಂದರೆ ಹೃದಯದಗಲವನ್ನು ಹುಟ್ಟಿಸುವ ನನ್ನ ಧಾರ್ಮಿಕ ನಂಬಿಕೆ, ಯಾವಗಾಗಲೂ ಜೀವ ಪರ ಮಾನವೀಯಪರ. ಈ ನೆಲದ ಸಂಸ್ಕೃತಿಯ ಮೂಲ- ಎಲ್ಲರನ್ನೊಳಗೊಳ್ಳುವ ಎಲ್ಲರ ಬದುಕನ್ನು ಗೌರವಿಸುವ, ನಮ್ಮೆಲ್ಲರ ಸರ್ವ ಜನಾಂಗದ ಶಾಂತಿಯ ತೋಟ” ಎಂದರು.

ದಸರಾ-ಶಾಂತಿಯ ಹಬ್ಬ, ಸೌಹಾರ್ದದ ಮೇಳ

“ಮೈಸೂರು ದಸರಾ ಘೋಷಣೆಯ ನಮ್ಮೆಲ್ಲರ ಕಿವಿಯಲ್ಲಿ ಪ್ರತಿಧ್ವನಿಸಲಿ. ಇದು ಶಾಂತಿಯ ಹಬ್ಬ, ಸೌಹಾರ್ದದ ಮೇಳ, ಇದು ಸರ್ವಜನಾಂಗದ ಶಾಂತಿಯ ತೋಟ. ನಾವು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಗೌರವಿಸಿ, ಪರಸ್ಪರರ ನಂಬಿಕೆಗಳನ್ನು, ಸಂಸ್ಕೃತಿಗಳನ್ನು ಗೌರವಿಸುವುದರ ಮೂಲಕ ನಮ್ಮ ಬದುಕನ್ನು ಶ್ರೀಮಂತಗೊಳಿಸಬೇಕಿದೆ. ಈ ನೆಲದ ಸುಗಂಧವನ್ನು ಐಕ್ಯತೆಯಾಗಲಿ, ನೆಲದ ಬಿಸಿಲು ಕೂಡ ಸಾಹಾರ್ದತೆಯಿಂದ ಕೂಡಿದೆ. ಈ ನೆಲದ ಬಿಸಿಲು ಕೂಡ ಮಾನವೀಯ ಪ್ರೀತಿಯ ಪ್ರತೀಕವಾಗಿದೆ. ಈ ಸಂದರ್ಭದಲ್ಲಿ ಚಾಮುಂಡಿ ತಾಯಿಯ ಮಹಿಮೆ ನಮ್ಮೆಲ್ಲರ ಜೀವನಕ್ಕೆ ಮಾರ್ಗದರ್ಶಕವಾಗಿರಲಿ. ತಾಯಿ ಚಾಮುಂಡಿಯ ಸತ್ಯ, ಧೈರ್ಯ ಹಾಗೂ ರಕ್ಷಕತ್ವದ ಸಂಕೇತ. ನಮ್ಮೊಳಗಿನ ದ್ವೇಷ, ಅಸಹಿಷ್ಣುತೆಗಳನ್ನು ನಾಶವಾಗಲೆಂದು ಬಯಸುತ್ತೇನೆ. ಈ ದಸರಾ ಹಬ್ಬ ಕೇವಲ ಮೈಸೂರು ನಗರಕ್ಕೆ ಸೀಮಿತವಾಗದೇ, ನಮ್ಮ ನಾಡಿಗೆ ಮಾತ್ರ, ದೇಶಕ್ಕೆ ಮಾತ್ರ ಸೀಮಿತವಾಗದೇ, ಇಡೀ ಜಗಗತ್ತಿನಾದ್ಯಂತ ಮಾನವ ಕುಲಕ್ಕೆ ಶಾಂತಿ ಸಹಾನುಭೂತಿ, ಪ್ರೀತಿ ಮತ್ತು ನ್ಯಾಯದ ದೀಪವನ್ನು ಬೆಳೆಗಿಸಲೆಂದು ಹಾರೈಸುತ್ತೇನೆ. ಇಂದು ಬೆಳೆಗಿಸಿದ ದೀಪ ಈ ಸಂದೇಶದೊಂದಿಗೆ ಇಡೀ ಪ್ರಪಂಚದಾದ್ಯಂತ ತನ್ನ ನೆಲೆಯನ್ನು ಕಂಡುಕೊಳ್ಳಲಿ ಎಂದು ಆಶಿಸುತ್ತೇನೆ” ಎಂದರು.

ವ್ಯಕ್ತಿಯಿಂದ ಸಮಷ್ಠಿಯೆಡೆಗೆ ಸಾಗುವುದೇ ಬದುಕಿನ ನಿಜವಾದ ದಾರಿ

“ನನ್ನ ಬದುಕು ನನಗೆ ಅನೇಕ ಪಾಠಗಳನ್ನು ಕಲಿಸಿದೆ. ಅದರಲ್ಲಿ ಮುಖ್ಯಪಾಠವೆಂದರೆ, ವ್ಯಕ್ತಿಯಿಂದ ಸಮಷ್ಠಿಯೆಡೆಗೆ ಸಾಗುವ ದಾರಿ ಮಾತ್ರ ನಿಜವಾದ ದಾರಿ. ನನ್ನ ಧಾರ್ಮಿಕ ನಂಬಿಕೆಗಳು, ನನ್ನ ಜೀವನ ದರ್ಶನ ಎಂದಿಗೂ ಜೀವಪರ. ಅವು ಮರದ ನೆರಳಿನಂತೆ, ತಂಪಾದ ನದಿಯಂತೆ, ಇಂದಿನ ಜಗತ್ತು ಯುದ್ಧದ ಜ್ವಾಲೆಯಲ್ಲಿ ಸುಡುತ್ತಿದೆ. ಇಂದು ಮನುಕುಲವು ದ್ವೇಷ ಮತ್ತು ರಕ್ತಪಾತದಲ್ಲಿ ಮುಳುಗಿರುವಾಗ, ದಸರಾ ಘೋಷಣೆಯು ಎಲ್ಲರ ಕಿವಿಯಲ್ಲಿ ಪ್ರತಿಧ್ವನಿಸಲಿ, ಇದು ಶಾಂತಿಯ ಹಬ್ಬ, ಸೌಹಾರ್ದದ ಮೇಳ. ಇದು ಸರ್ವಜನಾಂಗದ ಶಾಂತಿಯ ತೋಟ. ನನ್ನ ಜೀವನದ ದರ್ಶನ ಯಾವತ್ತಿಗೂ ಜೀವಪರ. ಅಸ್ತ್ರಗಳಿಂದಲ್ಲ, ಅಕ್ಷರದಿಂದ ಬದುಕನ್ನು ಗೆಲ್ಲಬಹುದು. ಹಗೆಗಳಿಂದಲ್ಲ, ಪ್ರೀತಿಯಿಂದ ಬದುಕನ್ನು ಅರಳಿಸಬಹುದು” ಎಂದು ಹೇಳಿದರು.

“ಈ ನೆಲದ ಪರಂಪರೆಯೇ ಸರ್ವಜನಾಂಗದ ಶಾಂತಿಯ ತೋಟವಾಗಿದೆ. ಈ ತೋಟದಲ್ಲಿ ಪ್ರತಿ ಹೂವು ತನ್ನ ಬಣ್ಣದಲ್ಲೇ ಅರಳಲಿ, ಪ್ರತಿ ಹಕ್ಕಿ ತನ್ನ ರಾಗದಲ್ಲೇ ಹಾಡಲಿ. ಆದರೆ, ಒಟ್ಟಿಗೆ ಸೇರಿದಾಗ ಅದು ಸೌಹಾರ್ದ ಸಿಂಫನಿಯಾಗಲಿ. ಪ್ರಜಾಪ್ರಭುತ್ವವು ಕೇವಲ ವ್ಯವಸ್ಥೆಯಲ್ಲ, ಅದು ಮೌಲ್ಯ. ಅದು ಪ್ರತಿಯೊಬ್ಬರ ಧ್ವನಿಯನ್ನು ಗೌರವಿಸುವ ಮನೋಭಾವ. ಅದು ಬೇರೆಯವರ ಬದುಕಿನಲ್ಲಿ ಅರ್ಥಪೂರ್ಣವಾಗಿ ನಡೆದುಕೊಳ್ಳುವ ಜವಾಬ್ದಾರಿ. ಅದನ್ನು ಗೌರವಿಸುವು ನಮ್ಮೆಲ್ಲರ ಕರ್ತವ್ಯ” ಎಂದರು.

ನಾವೆಲ್ಲಾ ಒಂದೇ ಗಗನದಡಿಯ ಪಯಣಿಗರು

“ನಾವು ಎಲ್ಲರೂ ಒಂದೇ ಗಗನದಡಿಯ ಪಯಣಿಗರು. ಆಕಾಶವು ಯಾರನ್ನೂ ಬೇರ್ಪಡಿಸುವುದಿಲ್ಲ. ಭೂಮಿ ಯಾರನ್ನೂ ತಳ್ಳುವುದಿಲ್ಲ. ಮನುಷ್ಯನು ಮಾತ್ರ ಗಡಿ ಹಾಕುತ್ತಾನೆ. ಆ ಗಡಿಗಳನ್ನು ನಾವೇ ಅಳಿಸಬೇಕು. ಇಂದು ಈ ಹಬ್ಬ ಮೈಸೂರಿನ ಬೀದಿಗಳಲ್ಲಿ ಮಾತ್ರವತ್ತ. ಇಡೀ ಜಗತ್ತಿನ ಹೃದಯಗಳಲ್ಲಿ ಬೆಳಗಲಿ” ಎಂದು ಹೇಳಿದರು.

“ಇತಿಹಾಸದತ್ತ ನೋಡಿದರೆ ನಾಲ್ವಡಿ ಕೃಷ್ಣರಾಜ ಒಡೆಯರ್ ಎಂದೆಂದಿಗೂ ಪ್ರಸ್ತುತವಾಗುತ್ತಾರೆ. ಅವರು ಹಂಚಿಕೊಳ್ಳುವ ಮನದ ಅರಸ. ರಾಜಕೀಯ, ಆರ್ಥಿಕ, ಸಾಮಾಜಿಕ ನ್ಯಾಯದ ಔದಾರ್ಯದ ದೊರೆಯಾಗಿದ್ದರು. ಭೇದ ಭಾವಕ್ಕಿಂತ ವಿಶಾಲ ಮನಸ್ಸಿಗೆ ಗೌರವವಿತ್ತು. ಅವರು ನೀಡಿದ ಸಂದೇಶ ಸಂಪತ್ತನ್ನು ಹಂಚಿದಾದ ಮಾತ್ರ ಅದು ಬೆಳೆಯುತ್ತದೆ. ಶಕ್ತಿಯನ್ನು ಹಂಚಿಕೊಂಡಾಗ ಮಾತ್ರ ದೀರ್ಘಕಾಲ ಬದುಕತ್ತದೆ” ಎಂದರು.

ಸಂಸ್ಕೃತಿ ನಮ್ಮ ಬೇರು ಸೌಹಾರ್ದ ನಮ್ಮ ಶಕ್ತಿ

“ಸಂಸ್ಕೃತಿ ನಮ್ಮ ಬೇರು. ಸೌಹಾರ್ದ ನಮ್ಮ ಶಕ್ತಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ, ಔದ್ಯೋಗಿಕವಾಗಿ ಭಾರತದ ನೆಲೆಯಲ್ಲಿ ನಮ್ಮ ಯುವಶಕ್ತಿಯೊಂದಿಗೆ ಸೇರಿ ಮಾನವೀಯ ಮೌಲ್ಯಗಳ , ಪ್ರೀತಿಯ ಹೊಸ ಸುಧಾರಿತ ಸಮಾಜವನ್ನು ಕಟ್ಟೋಣ” ಎಂದರು. ತಾನೊಬ್ಬ ಕವಿಯತ್ರಿಯಾಗಿದ್ದು, ಕವಿತೆಯ ಮೂಲಕ ನನ್ನ ಸಂದೇಶವನ್ನು ತಿಳಿಸಲು ಬಯಸಿದ್ದು, ಮುಸ್ಲಿಂ ಹೆಣ್ಣುಮಗಳು ಬಾಗಿನವನ್ನು ಪಡೆದಾಗಿನ ತನ್ನ ಮನಸ್ಸಿನ ಭಾವನೆಯನ್ನು ವ್ಯಕ್ತಪಡಿಸುವ ಕವಿತೆಯನ್ನು ಓದಿದರು.

ಮೈಸೂರು ದಸರಾ ಉತ್ಸವಕ್ಕೆ ಚಾಲನೆ ನೀಡಿದ ಅಂತಾರಾಷ್ಟ್ರೀಯ ಬೂಕರ್ ವಿಜೇತ ಲೇಖಕಿ ಬಾನು ಮುಷ್ತಾಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...