Homeಕರ್ನಾಟಕ'ಈ ನೆಲದ ಪರಂಪರೆಯೇ ಸರ್ವ ಜನಾಂಗದ ಶಾಂತಿಯ ತೋಟ..'; ದಸರಾ ಉದ್ಘಾಟಿಸಿದ ಬಾನು ಮುಷ್ತಾಕ್

‘ಈ ನೆಲದ ಪರಂಪರೆಯೇ ಸರ್ವ ಜನಾಂಗದ ಶಾಂತಿಯ ತೋಟ..’; ದಸರಾ ಉದ್ಘಾಟಿಸಿದ ಬಾನು ಮುಷ್ತಾಕ್

- Advertisement -
- Advertisement -

ಮೈಸೂರು ದಸರಾ, ನಾಡಿನ ನಾಡಿ, ಸಂಸ್ಕೃತಿಯ ಉತ್ಸವ, ಎಲ್ಲರನ್ನೂ ಒಗ್ಗೂಡಿಸುವ ಸಮನ್ವಯದ ಮೇಳವಾಗಿದೆ ಎಂದು ಸಾಹಿತಿ ಹಾಗೂ 2025ರ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತರಾದ ಬಾನು ಮುಷ್ತಾಕ್ ಅವರು ದಸರಾ ಉದ್ಘಾಟಿಸಿ ಮಾತನಾಡಿದರು.

ನಾಡದೇವತೆ ಚಾಮುಂಡೇಶ್ವರಿ ದೇವಿಯ ಅಗ್ರಪೂಜೆಯೊಂದಿಗೆ ಪ್ರಾರಂಭವಾದ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಅವರು ಇಂದು ಉದ್ಘಾಟಿಸಿದರು.

“ಮೈಸೂರು ದಸರಾದ ಪವಿತ್ರದ ಕ್ಷಣದಲ್ಲಿ ಚಾಮುಂಡಿ ತಾಯಿಯ ಕೃಪೆಯ ನೆರಳಿನಲ್ಲಿ, ಈ ವೇದಿಕೆಯಿಂದ ನಿಮ್ಮೆದುರು ನಿಲ್ಲುವ ಅವಕಾಶ ದೊರೆತಿರುವುದು ನನ್ನ ಜೀವನದ ಅತ್ಯಂತ ಗೌರವದ ಘಳಿಕೆ. ದಸರಾ ಎಂದರೆ ಕೇವಲ ಹಬ್ಬವಲ್ಲ, ಇದು ನಾಡಿನ ನಾಡಿ, ಸಂಸ್ಕೃತಿಯ ಉತ್ಸವ, ಎಲ್ಲರನ್ನೂ ಒಗ್ಗೂಡಿಸುವ ಸಮನ್ವಯದ ಮೇಳ. ಈ ನೆಲದಲ್ಲಿ ಹುಟ್ಟಿದ ಪ್ರತಿಯೊಂದು ಜೀವಕ್ಕೂ ಈ ಮಣ್ಣಿನ ಬಾರಿಸುದಾರಿಕೆ, ಸ್ಪಂದನೆ ಮತ್ತು ನೆನಪುಗಳಿವೆ” ಎಂದರು.

“ಮೈಸೂರು ಅರಸರ ಸಂಸ್ಕೃತಿಯ ಪರಂಪರೆಯಿಂದ ಹಿಡಿದು,ಕನ್ನಡ ಭಾಷೆಯ ಅಂತರಾಳದ ಹೃದಯಸ್ಪಂದನದವರೆಗೆ ಈ ಹಬ್ಬವು ನಮಗೆ ಸ್ಮರಿಸುತ್ತದೆ. ಸಂಸ್ಕೃತಿ ಎಂದರೆ ಬೇರೆ ಬೇರೆ ಧ್ವನಿಗಳ ಸಂಗಮ. ವಿಭಿನ್ನತೆಯಲ್ಲೇ ಏಕತೆಯ ಸುಗಂಧ. ಮಹಾರಾಜರು ಜಯಚಾಮರಾಜೇಂದ್ರ ಒಡೆಯರು ಮುಸ್ಲಿಂರ ನಂಬಿ, ಅವರನ್ನು ಅನುಮಾನಿಸದೇ, ಅಂಗರಕ್ಷಕರ ಪಡೆಯ ಸದಸ್ಯರಾಗಿದ್ದರು, ಇದು ನಮಗೆ ಬಹಳ ಹೆಮ್ಮೆಯ ಮತ್ತು ಅಪ್ಯಾಯಮಾನವಾದ ವಿಷಯ. ಸಂಸ್ಕೃತಿ ಎಂದರೆ ಹೃದಯದಗಲವನ್ನು ಹುಟ್ಟಿಸುವ ನನ್ನ ಧಾರ್ಮಿಕ ನಂಬಿಕೆ, ಯಾವಗಾಗಲೂ ಜೀವ ಪರ ಮಾನವೀಯಪರ. ಈ ನೆಲದ ಸಂಸ್ಕೃತಿಯ ಮೂಲ- ಎಲ್ಲರನ್ನೊಳಗೊಳ್ಳುವ ಎಲ್ಲರ ಬದುಕನ್ನು ಗೌರವಿಸುವ, ನಮ್ಮೆಲ್ಲರ ಸರ್ವ ಜನಾಂಗದ ಶಾಂತಿಯ ತೋಟ” ಎಂದರು.

ದಸರಾ-ಶಾಂತಿಯ ಹಬ್ಬ, ಸೌಹಾರ್ದದ ಮೇಳ

“ಮೈಸೂರು ದಸರಾ ಘೋಷಣೆಯ ನಮ್ಮೆಲ್ಲರ ಕಿವಿಯಲ್ಲಿ ಪ್ರತಿಧ್ವನಿಸಲಿ. ಇದು ಶಾಂತಿಯ ಹಬ್ಬ, ಸೌಹಾರ್ದದ ಮೇಳ, ಇದು ಸರ್ವಜನಾಂಗದ ಶಾಂತಿಯ ತೋಟ. ನಾವು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಗೌರವಿಸಿ, ಪರಸ್ಪರರ ನಂಬಿಕೆಗಳನ್ನು, ಸಂಸ್ಕೃತಿಗಳನ್ನು ಗೌರವಿಸುವುದರ ಮೂಲಕ ನಮ್ಮ ಬದುಕನ್ನು ಶ್ರೀಮಂತಗೊಳಿಸಬೇಕಿದೆ. ಈ ನೆಲದ ಸುಗಂಧವನ್ನು ಐಕ್ಯತೆಯಾಗಲಿ, ನೆಲದ ಬಿಸಿಲು ಕೂಡ ಸಾಹಾರ್ದತೆಯಿಂದ ಕೂಡಿದೆ. ಈ ನೆಲದ ಬಿಸಿಲು ಕೂಡ ಮಾನವೀಯ ಪ್ರೀತಿಯ ಪ್ರತೀಕವಾಗಿದೆ. ಈ ಸಂದರ್ಭದಲ್ಲಿ ಚಾಮುಂಡಿ ತಾಯಿಯ ಮಹಿಮೆ ನಮ್ಮೆಲ್ಲರ ಜೀವನಕ್ಕೆ ಮಾರ್ಗದರ್ಶಕವಾಗಿರಲಿ. ತಾಯಿ ಚಾಮುಂಡಿಯ ಸತ್ಯ, ಧೈರ್ಯ ಹಾಗೂ ರಕ್ಷಕತ್ವದ ಸಂಕೇತ. ನಮ್ಮೊಳಗಿನ ದ್ವೇಷ, ಅಸಹಿಷ್ಣುತೆಗಳನ್ನು ನಾಶವಾಗಲೆಂದು ಬಯಸುತ್ತೇನೆ. ಈ ದಸರಾ ಹಬ್ಬ ಕೇವಲ ಮೈಸೂರು ನಗರಕ್ಕೆ ಸೀಮಿತವಾಗದೇ, ನಮ್ಮ ನಾಡಿಗೆ ಮಾತ್ರ, ದೇಶಕ್ಕೆ ಮಾತ್ರ ಸೀಮಿತವಾಗದೇ, ಇಡೀ ಜಗಗತ್ತಿನಾದ್ಯಂತ ಮಾನವ ಕುಲಕ್ಕೆ ಶಾಂತಿ ಸಹಾನುಭೂತಿ, ಪ್ರೀತಿ ಮತ್ತು ನ್ಯಾಯದ ದೀಪವನ್ನು ಬೆಳೆಗಿಸಲೆಂದು ಹಾರೈಸುತ್ತೇನೆ. ಇಂದು ಬೆಳೆಗಿಸಿದ ದೀಪ ಈ ಸಂದೇಶದೊಂದಿಗೆ ಇಡೀ ಪ್ರಪಂಚದಾದ್ಯಂತ ತನ್ನ ನೆಲೆಯನ್ನು ಕಂಡುಕೊಳ್ಳಲಿ ಎಂದು ಆಶಿಸುತ್ತೇನೆ” ಎಂದರು.

ವ್ಯಕ್ತಿಯಿಂದ ಸಮಷ್ಠಿಯೆಡೆಗೆ ಸಾಗುವುದೇ ಬದುಕಿನ ನಿಜವಾದ ದಾರಿ

“ನನ್ನ ಬದುಕು ನನಗೆ ಅನೇಕ ಪಾಠಗಳನ್ನು ಕಲಿಸಿದೆ. ಅದರಲ್ಲಿ ಮುಖ್ಯಪಾಠವೆಂದರೆ, ವ್ಯಕ್ತಿಯಿಂದ ಸಮಷ್ಠಿಯೆಡೆಗೆ ಸಾಗುವ ದಾರಿ ಮಾತ್ರ ನಿಜವಾದ ದಾರಿ. ನನ್ನ ಧಾರ್ಮಿಕ ನಂಬಿಕೆಗಳು, ನನ್ನ ಜೀವನ ದರ್ಶನ ಎಂದಿಗೂ ಜೀವಪರ. ಅವು ಮರದ ನೆರಳಿನಂತೆ, ತಂಪಾದ ನದಿಯಂತೆ, ಇಂದಿನ ಜಗತ್ತು ಯುದ್ಧದ ಜ್ವಾಲೆಯಲ್ಲಿ ಸುಡುತ್ತಿದೆ. ಇಂದು ಮನುಕುಲವು ದ್ವೇಷ ಮತ್ತು ರಕ್ತಪಾತದಲ್ಲಿ ಮುಳುಗಿರುವಾಗ, ದಸರಾ ಘೋಷಣೆಯು ಎಲ್ಲರ ಕಿವಿಯಲ್ಲಿ ಪ್ರತಿಧ್ವನಿಸಲಿ, ಇದು ಶಾಂತಿಯ ಹಬ್ಬ, ಸೌಹಾರ್ದದ ಮೇಳ. ಇದು ಸರ್ವಜನಾಂಗದ ಶಾಂತಿಯ ತೋಟ. ನನ್ನ ಜೀವನದ ದರ್ಶನ ಯಾವತ್ತಿಗೂ ಜೀವಪರ. ಅಸ್ತ್ರಗಳಿಂದಲ್ಲ, ಅಕ್ಷರದಿಂದ ಬದುಕನ್ನು ಗೆಲ್ಲಬಹುದು. ಹಗೆಗಳಿಂದಲ್ಲ, ಪ್ರೀತಿಯಿಂದ ಬದುಕನ್ನು ಅರಳಿಸಬಹುದು” ಎಂದು ಹೇಳಿದರು.

“ಈ ನೆಲದ ಪರಂಪರೆಯೇ ಸರ್ವಜನಾಂಗದ ಶಾಂತಿಯ ತೋಟವಾಗಿದೆ. ಈ ತೋಟದಲ್ಲಿ ಪ್ರತಿ ಹೂವು ತನ್ನ ಬಣ್ಣದಲ್ಲೇ ಅರಳಲಿ, ಪ್ರತಿ ಹಕ್ಕಿ ತನ್ನ ರಾಗದಲ್ಲೇ ಹಾಡಲಿ. ಆದರೆ, ಒಟ್ಟಿಗೆ ಸೇರಿದಾಗ ಅದು ಸೌಹಾರ್ದ ಸಿಂಫನಿಯಾಗಲಿ. ಪ್ರಜಾಪ್ರಭುತ್ವವು ಕೇವಲ ವ್ಯವಸ್ಥೆಯಲ್ಲ, ಅದು ಮೌಲ್ಯ. ಅದು ಪ್ರತಿಯೊಬ್ಬರ ಧ್ವನಿಯನ್ನು ಗೌರವಿಸುವ ಮನೋಭಾವ. ಅದು ಬೇರೆಯವರ ಬದುಕಿನಲ್ಲಿ ಅರ್ಥಪೂರ್ಣವಾಗಿ ನಡೆದುಕೊಳ್ಳುವ ಜವಾಬ್ದಾರಿ. ಅದನ್ನು ಗೌರವಿಸುವು ನಮ್ಮೆಲ್ಲರ ಕರ್ತವ್ಯ” ಎಂದರು.

ನಾವೆಲ್ಲಾ ಒಂದೇ ಗಗನದಡಿಯ ಪಯಣಿಗರು

“ನಾವು ಎಲ್ಲರೂ ಒಂದೇ ಗಗನದಡಿಯ ಪಯಣಿಗರು. ಆಕಾಶವು ಯಾರನ್ನೂ ಬೇರ್ಪಡಿಸುವುದಿಲ್ಲ. ಭೂಮಿ ಯಾರನ್ನೂ ತಳ್ಳುವುದಿಲ್ಲ. ಮನುಷ್ಯನು ಮಾತ್ರ ಗಡಿ ಹಾಕುತ್ತಾನೆ. ಆ ಗಡಿಗಳನ್ನು ನಾವೇ ಅಳಿಸಬೇಕು. ಇಂದು ಈ ಹಬ್ಬ ಮೈಸೂರಿನ ಬೀದಿಗಳಲ್ಲಿ ಮಾತ್ರವತ್ತ. ಇಡೀ ಜಗತ್ತಿನ ಹೃದಯಗಳಲ್ಲಿ ಬೆಳಗಲಿ” ಎಂದು ಹೇಳಿದರು.

“ಇತಿಹಾಸದತ್ತ ನೋಡಿದರೆ ನಾಲ್ವಡಿ ಕೃಷ್ಣರಾಜ ಒಡೆಯರ್ ಎಂದೆಂದಿಗೂ ಪ್ರಸ್ತುತವಾಗುತ್ತಾರೆ. ಅವರು ಹಂಚಿಕೊಳ್ಳುವ ಮನದ ಅರಸ. ರಾಜಕೀಯ, ಆರ್ಥಿಕ, ಸಾಮಾಜಿಕ ನ್ಯಾಯದ ಔದಾರ್ಯದ ದೊರೆಯಾಗಿದ್ದರು. ಭೇದ ಭಾವಕ್ಕಿಂತ ವಿಶಾಲ ಮನಸ್ಸಿಗೆ ಗೌರವವಿತ್ತು. ಅವರು ನೀಡಿದ ಸಂದೇಶ ಸಂಪತ್ತನ್ನು ಹಂಚಿದಾದ ಮಾತ್ರ ಅದು ಬೆಳೆಯುತ್ತದೆ. ಶಕ್ತಿಯನ್ನು ಹಂಚಿಕೊಂಡಾಗ ಮಾತ್ರ ದೀರ್ಘಕಾಲ ಬದುಕತ್ತದೆ” ಎಂದರು.

ಸಂಸ್ಕೃತಿ ನಮ್ಮ ಬೇರು ಸೌಹಾರ್ದ ನಮ್ಮ ಶಕ್ತಿ

“ಸಂಸ್ಕೃತಿ ನಮ್ಮ ಬೇರು. ಸೌಹಾರ್ದ ನಮ್ಮ ಶಕ್ತಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ, ಔದ್ಯೋಗಿಕವಾಗಿ ಭಾರತದ ನೆಲೆಯಲ್ಲಿ ನಮ್ಮ ಯುವಶಕ್ತಿಯೊಂದಿಗೆ ಸೇರಿ ಮಾನವೀಯ ಮೌಲ್ಯಗಳ , ಪ್ರೀತಿಯ ಹೊಸ ಸುಧಾರಿತ ಸಮಾಜವನ್ನು ಕಟ್ಟೋಣ” ಎಂದರು. ತಾನೊಬ್ಬ ಕವಿಯತ್ರಿಯಾಗಿದ್ದು, ಕವಿತೆಯ ಮೂಲಕ ನನ್ನ ಸಂದೇಶವನ್ನು ತಿಳಿಸಲು ಬಯಸಿದ್ದು, ಮುಸ್ಲಿಂ ಹೆಣ್ಣುಮಗಳು ಬಾಗಿನವನ್ನು ಪಡೆದಾಗಿನ ತನ್ನ ಮನಸ್ಸಿನ ಭಾವನೆಯನ್ನು ವ್ಯಕ್ತಪಡಿಸುವ ಕವಿತೆಯನ್ನು ಓದಿದರು.

ಮೈಸೂರು ದಸರಾ ಉತ್ಸವಕ್ಕೆ ಚಾಲನೆ ನೀಡಿದ ಅಂತಾರಾಷ್ಟ್ರೀಯ ಬೂಕರ್ ವಿಜೇತ ಲೇಖಕಿ ಬಾನು ಮುಷ್ತಾಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...