Homeಕರ್ನಾಟಕಪಂಚಮಸಾಲಿ ಮೀಸಲಾತಿ ವಿಚಾರಕ್ಕೆ ತಾತ್ಕಾಲಿಕ ಬ್ರೇಕ್ ನೀಡಿದ ಹೈಕೋರ್ಟ್

ಪಂಚಮಸಾಲಿ ಮೀಸಲಾತಿ ವಿಚಾರಕ್ಕೆ ತಾತ್ಕಾಲಿಕ ಬ್ರೇಕ್ ನೀಡಿದ ಹೈಕೋರ್ಟ್

- Advertisement -
- Advertisement -

ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ 2-ಎ ಮೀಸಲಾತಿ ನೀಡಬಾರದು ಮತ್ತು ಮೀಸಲು ಪ್ರವರ್ಗ ಮಾರ್ಪಾಡು ಮಾಡುವಂತೆ ಕೋರಿ ಯಾವುದೇ ಜಾತಿ, ಉಪಜಾತಿ, ಸಮುದಾಯ ಬುಡಕಟ್ಟುಗಳು ಸಲ್ಲಿಸುವ ವೈಯಕ್ತಿಕ ಬೇಡಿಕೆಗಳನ್ನು ರಾಜ್ಯ ಸರ್ಕಾರ ಪ್ರೋತ್ಸಾಹಿಸದಂತೆ ತಡೆ ನೀಡಬೇಕು ಎಂಬ ಮಧ್ಯಂತರ ಮನವಿಯನ್ನು ಹೈಕೋರ್ಟ್‌ ಮಾನ್ಯ ಮಾಡಿದೆ. ಈ ಸಂಬಂಧ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶ ನೀಡಿದೆ.

ಬಹುದಿನಗಳಿಂದ 2-ಎ ಮೀಸಲಾತಿಗಾಗಿ ಹೋರಾಟ ನಡೆಸುತ್ತಿರುವ ಪಂಚಮಸಾಲಿ ಲಿಂಗಾಯತ ಸಮುದಾಯ, ಈ ಚುನಾವಣೆ ಹೊಸ್ತಿಲಲ್ಲಿ ಮೀಸಲಾತಿ ಹೋರಾಟ ಅಸ್ತ್ರ ಪ್ರಯೋಗಿಸಿತ್ತು. ರಾಜ್ಯ ಬಿಜೆಪಿ ಸರ್ಕಾರ, ಹೊಸದಾಗಿ 2-ಸಿ ಹಾಗು 2-ಡಿ ಎಂದು ಪ್ರವರ್ಗ ಸೃಷ್ಟಿಸಿ ಈ ಸಮುದಾಯಕ್ಕೆ ಮೂಗಿಗೆ ತುಪ್ಪ ಸವರುವ ಕೆಲಸಕ್ಕೆ ಮುಂದಾಯಿತು. ಆದರೆ ಪಂಚಮಸಾಲಿ ಸಮುದಾಯ ಮಾತ್ರ 2ಎ ಮೀಸಲಾತಿ ಪಟ್ಟಿಗೆ ಸೇರಿಸಲೇಬೇಕು ಎಂದು ಪಟ್ಟು ಹಿಡಿದಿದೆ.

ಇದೀಗ ಹೈಕೋರ್ಟ್, ಮುಂದಿನ ವಿಚಾರಣೆವರೆಗೂ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಹೀಗಾಗಿ, ಸಮುದಾಯದ ಪ್ರವರ್ಗ 2–ಎಗೆ ಸೇರ್ಪಡೆ ಮಾಡುವ ಬೇಡಿಕೆ ಹಾಗೂ ಸರ್ಕಾರದ 2–ಸಿ, 2–ಡಿ ಪ್ರವರ್ಗ ಸೃಷ್ಟಿ ಮಾಡಿರುವ ನಿರ್ಣಯದ ಪ್ರಕ್ರಿಯೆಗೆ ಈಗ ತಾತ್ಕಾಲಿಕ ತಡೆ ಬಿದ್ದಂತಾಗಿದೆ.

ಬೆಂಗಳೂರಿನ ಜ್ಞಾನಭಾರತಿಯ ಮೃತ್ಯುಂಜಯ ನಗರದ ನಿವಾಸಿ ಡಿ.ಜಿ ರಾಘವೇಂದ್ರ ಬಿನ್ ಸೂರ್ಯ ದೇವಾಡಿಗ ಅವರು ಈ ವಿಚಾರವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಸಲ್ಲಿಸಿದ್ದರು. ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ಹಾಗೂ ಅಶೋಕ್‌ ಎಸ್‌.ಕಿಣಗಿ ಅವರಿದ್ದ ವಿಭಾಗೀಯ ನ್ಯಾಯಪೀಠವು ಗುರುವಾರ ವಿಚಾರಣೆ ನಡೆಸಿತು.

ದಿನದ ಕಲಾಪ ಮುಗಿಯುವಾಗ ಸಂಜೆ 5.45 ರಲ್ಲಿ ಅರ್ಜಿದಾರರ ಪರ ಹಿರಿಯ ವಕೀಲ ರವಿವರ್ಮ ಕುಮಾರ್‌ ಅವರು, ‘ಪಂಚಮಸಾಲಿ ಸಮುದಾಯಕ್ಕೆ 2-ಎ ಮೀಸಲಾತಿ ನೀಡಬೇಕು ಎಂಬ ಬೇಡಿಕೆಗೆ ಸಂಬಂಧಿಸಿದ ಮಧ್ಯಂತರ ವರದಿಯನ್ನು ಹಿಂದುಳಿದ ವರ್ಗಗಳ ಆಯೋಗವು ರಾಜ್ಯ ಸರ್ಕಾರಕ್ಕೆ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಿದೆ. ಈ ವರದಿಯನ್ನು ರಾಜ್ಯ ಸರ್ಕಾರ ಇನ್ನೂ ಕೋರ್ಟ್‌ಗೆ ಸಲ್ಲಿಸಿಲ್ಲ’ ಎಂದು ಆಕ್ಷೇಪಿಸಿದರು.

ಇದಕ್ಕೆ ವಿಡಿಯೊ ಕಾನ್ಫರೆನ್ಸ್‌ ಮೂಲಕ ಹಾಜರಾಗಿ ಪ್ರತಿಕ್ರಿಯಿಸಿದ ಅಡ್ವೊಕೇಟ್‌ ಜನರಲ್‌ ಪ್ರಭುಲಿಂಗ ಕೆ.ನಾವದಗಿ, ‘ವರದಿ ಸರ್ಕಾರದ ಪರಿಶೀಲನೆಯಲ್ಲಿದೆ. ಸರ್ಕಾರ ಇನ್ನೂ ಯಾವುದೇ ಕ್ರಮ ಕೈಗೊಂಡಿಲ್ಲ. ವರದಿಯ ಪ್ರತಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಇನ್ನಷ್ಟು ಕಾಲಾವಕಾಶ ನೀಡಬೇಕು. ಹಾಗಾಗಿ, ತಡೆ ನೀಡಬಾರದು’ ಎಂದು ಮನವಿ ಮಾಡಿದರು.

ಇದಕ್ಕೆ ರವಿವರ್ಮ ಕುಮಾರ್ ಪ್ರತಿಕ್ರಿಯಿಸಿ, ‘ಸರ್ಕಾರ ಸಮಯ ತೆಗೆದುಕೊಳ್ಳಲು ನಮ್ಮ ತಕರಾರಿಲ್ಲ, ಆದರೆ ಕೆಲವು ಸಮುದಾಯಗಳು ಸರ್ಕಾರದ ಮೇಲೆ ಅಸಾಂವಿಧಾನಿಕ ಬೇಡಿಕೆಯ ಈಡೇರಿಕೆಗಾಗಿ ಒತ್ತಡ ಹೇರುತ್ತಿವೆ. ಹಾಗಾಗಿ ಈ ವಿಷಯದಲ್ಲಿ ಯಥಾಸ್ಥಿತಿ ಕಾಪಾಡಿಕೊಳ್ಳಲು ಅದೇಶಿಸಬೇಕು’ ಎಂದು ಕೋರಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ಮುಂದಿನ ವಿಚಾರಣೆಯನ್ನು ಇದೇ 30ಕ್ಕೆ ನಿಗದಿಪಡಿಸಿ ಅಲ್ಲಿಯವರೆಗೂ ಯಥಾಸ್ಥಿತಿ ಕಾಯ್ದುಕೊಂಡು ಹೋಗುವಂತೆ ಆದೇಶಿಸಿತು.

ಪಿಐಎಲ್ ನಲ್ಲಿ ಏನಿದೆ?

‘ದೇವಾಡಿಗ ಸಮುದಾಯಕ್ಕೆ ಸೇರಿದವನಾಗಿದ್ದು ಹಿಂದುಳಿದ ವರ್ಗಗಳಿಗೆ ದೊರೆಯುವ 2-ಎ ಮೀಸಲಾತಿಯ ಫಲಾನುಭವಿಯಾಗಿದ್ದೇನೆ‌. ಇತ್ತೀಚೆಗೆ ಲಿಂಗಾಯತ-ವೀರಶೈವ ಪಂಚಮಸಾಲಿ ಸಮುದಾಯದವರು ಪ್ರವರ್ಗ 2-ಎಗೆ ಸೇರಿಸಬೇಕು ಎಂ‌ಬ ಬೇಡಿಕೆಯನ್ನು ಮಂಡಿಸಿದ್ದಾರೆ. ಈ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪಂಚಮಸಾಲಿ ಸಮುದಾಯವನ್ನು 2-ಎಗೆ ಸೇರ್ಪಡೆ ಮಾಡುವುದನ್ನು ಖಚಿತಪಡಿಸಿದ್ದು ಅದಕ್ಕಾಗಿ 2022ರ ಡಿಸೆಂಬರ್‌ 29ರ ಗಡುವು ನೀಡಿದ್ದರು. ಒಂದು ವೇಳೆ ಈ ಬಲಾಢ್ಯ ಹಾಗೂ ಮುಂದುವರಿದ ಸಮುದಾಯವನ್ನು 2-ಎಗೆ ಸೇರ್ಪಡೆ ಮಾಡಿದರೆ ಹಿಂದುಳಿದ ವರ್ಗಗಳಿಗೆ ಭರಿಸಲಾಗದ ಅನ್ಯಾಯ ಉಂಟಾಗಲಿದೆ. ಹಾಗಾಗಿ, ಈ ಅರ್ಜಿ ಇತ್ಯರ್ಥವಾಗುವತನಕ ಮೀಸಲು ಪ್ರವರ್ಗಗಳನ್ನು ಮಾರ್ಪಾಡು ಮಾಡುವಂತೆ ಕೋರುವ ಬೇಡಿಕೆಗಳನ್ನು ಸರ್ಕಾರ ಪ್ರೋತ್ಸಾಹಿಸದಂತೆ ಮಧ್ಯಂತರ ತಡೆ ನೀಡಬೇಕು’ ಎಂದು ಅರ್ಜಿದಾರರು ಕೋರಿದ್ದಾರೆ.

‘ಇನ್ನು ಪಂಚಮಸಾಲಿ ಮೀಸಲಾತಿಗಾಗಿ ಹೋರಾಟದ ನೇತೃತ್ವ ವಹಿಸಿರುವ ಜಗದ್ಗುರು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಅವರು ಇದೇ 13ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಶಿಗ್ಗಾವಿ ನಿವಾಸದ ಮುಂದೆ ಸತ್ಯಾಗ್ರಹ ನಡೆಸುವ ನಿರ್ಧಾರ ಮಾಡಿದ್ದಾರೆ. ಇದು ನ್ಯಾಯಾಂಗ ನಿಂದನೆ ನ್ಯಾಯಾಂಗ ನಿಂದನೆಯಾಗುತ್ತದೆ. ಕೋರ್ಟ್‌ ಆದೇಶ ಈ ಪ್ರಕ್ರಿಯೆಯಲ್ಲಿನ ಎಲ್ಲ ವಿಧವಾದ ನಡೆಗಳಿಗೂ ಅನ್ವಯ ಆಗುತ್ತದೆ. ಸತ್ಯಾಗ್ರಹವನ್ನು ಪ್ರಶ್ನಿಸಿ ವಿಚಾರಣೆಗೆ ಒಳಪಡಿಸುವಂತೆ ಕೋರಿದರೆ ಆಗ ಅದು ಖಂಡಿತಾ ನ್ಯಾಯಾಂಗ ನಿಂದನೆ ಎನಿಸಿಕೊಳ್ಳುತ್ತದೆ’ ಎಂದು ಹಿರಿಯ ವಕೀಲ ರವಿವರ್ಮ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ.

ಇತ್ತ ಮೃತ್ಯುಂಜಯ ಸ್ವಾಮೀಜಿ, ‘ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕು ಎಂದು ನಿರಂತರವಾಗಿ ಹೋರಾಟ ಮಾಡಿಕೊಂಡು ಬಂದಿದ್ದೇವೆ. ಮುಖ್ಯಮಂತ್ರಿ ನಮ್ಮ ಹೋರಾಟದ ದಿಕ್ಕು ತಪ್ಪಿಸಲು, 2ಡಿ ಮೀಸಲಾತಿ ಘೋಷಿಸಿದರು. ಇದನ್ನು ಜನವರಿ 5ರಂದು ಬೆಳಗಾವಿಯಲ್ಲಿ ನಡೆದ ಕಾರ್ಯಕಾರಿಣಿ ಸಭೆಯಲ್ಲಿ ಸಂಪೂರ್ಣವಾಗಿ ತಿರಸ್ಕರಿಸಿದ್ದೇವೆ. 2ಎ ಮೀಸಲಾತಿ ಕೊಡುವ ಅಧಿಕಾರ ಮುಖ್ಯಮಂತ್ರಿಯವರ ಕೈಯಲ್ಲಿತ್ತು. ಆದರೆ, ಮೀಸಲಾತಿ ಕೊಡದೆ ಕಾಲಹರಣ ಮಾಡಿದರು’ ಎಂದು ಸ್ವಾಮೀಜಿ ದೂರಿದರು.

‘ಇದೀಗ ಹೈಕೋರ್ಟ್‌ ಯಥಾಸ್ಥಿತಿ ಕಾಪಾಡಿಕೊಳ್ಳುವಂತೆ ಸರ್ಕಾರಕ್ಕೆ ಆದೇಶಿಸಿದೆ. ನಮ್ಮ ಹೋರಾಟಕ್ಕೆ ಯಾವುದೇ ತಡೆ ನೀಡಿಲ್ಲ. ಹೀಗಾಗಿ ನಮ್ಮ ಹೋರಾಟ ನಿರಂತರವಾಗಿ ನಡೆಯಲಿದೆ. ಸರ್ಕಾರದ ಅನ್ಯಾಯ ಖಂಡಿಸಿ ಜ.13ರಂದು ಶಿಗ್ಗಾವಿಯಲ್ಲಿರುವ ಸಿಎಂ ಮನೆಗೆ ಮುತ್ತಿಗೆ ಕಾರ್ಯಕ್ರಮ ಹಾಕಿಕೊಂಡಿದ್ದೇವೆ’ ಎಂದು ಸ್ವಾಮೀಜಿ ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...