Homeಕರ್ನಾಟಕಪಂಚಮಸಾಲಿ ಮೀಸಲಾತಿ ವಿಚಾರಕ್ಕೆ ತಾತ್ಕಾಲಿಕ ಬ್ರೇಕ್ ನೀಡಿದ ಹೈಕೋರ್ಟ್

ಪಂಚಮಸಾಲಿ ಮೀಸಲಾತಿ ವಿಚಾರಕ್ಕೆ ತಾತ್ಕಾಲಿಕ ಬ್ರೇಕ್ ನೀಡಿದ ಹೈಕೋರ್ಟ್

- Advertisement -
- Advertisement -

ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ 2-ಎ ಮೀಸಲಾತಿ ನೀಡಬಾರದು ಮತ್ತು ಮೀಸಲು ಪ್ರವರ್ಗ ಮಾರ್ಪಾಡು ಮಾಡುವಂತೆ ಕೋರಿ ಯಾವುದೇ ಜಾತಿ, ಉಪಜಾತಿ, ಸಮುದಾಯ ಬುಡಕಟ್ಟುಗಳು ಸಲ್ಲಿಸುವ ವೈಯಕ್ತಿಕ ಬೇಡಿಕೆಗಳನ್ನು ರಾಜ್ಯ ಸರ್ಕಾರ ಪ್ರೋತ್ಸಾಹಿಸದಂತೆ ತಡೆ ನೀಡಬೇಕು ಎಂಬ ಮಧ್ಯಂತರ ಮನವಿಯನ್ನು ಹೈಕೋರ್ಟ್‌ ಮಾನ್ಯ ಮಾಡಿದೆ. ಈ ಸಂಬಂಧ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶ ನೀಡಿದೆ.

ಬಹುದಿನಗಳಿಂದ 2-ಎ ಮೀಸಲಾತಿಗಾಗಿ ಹೋರಾಟ ನಡೆಸುತ್ತಿರುವ ಪಂಚಮಸಾಲಿ ಲಿಂಗಾಯತ ಸಮುದಾಯ, ಈ ಚುನಾವಣೆ ಹೊಸ್ತಿಲಲ್ಲಿ ಮೀಸಲಾತಿ ಹೋರಾಟ ಅಸ್ತ್ರ ಪ್ರಯೋಗಿಸಿತ್ತು. ರಾಜ್ಯ ಬಿಜೆಪಿ ಸರ್ಕಾರ, ಹೊಸದಾಗಿ 2-ಸಿ ಹಾಗು 2-ಡಿ ಎಂದು ಪ್ರವರ್ಗ ಸೃಷ್ಟಿಸಿ ಈ ಸಮುದಾಯಕ್ಕೆ ಮೂಗಿಗೆ ತುಪ್ಪ ಸವರುವ ಕೆಲಸಕ್ಕೆ ಮುಂದಾಯಿತು. ಆದರೆ ಪಂಚಮಸಾಲಿ ಸಮುದಾಯ ಮಾತ್ರ 2ಎ ಮೀಸಲಾತಿ ಪಟ್ಟಿಗೆ ಸೇರಿಸಲೇಬೇಕು ಎಂದು ಪಟ್ಟು ಹಿಡಿದಿದೆ.

ಇದೀಗ ಹೈಕೋರ್ಟ್, ಮುಂದಿನ ವಿಚಾರಣೆವರೆಗೂ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಹೀಗಾಗಿ, ಸಮುದಾಯದ ಪ್ರವರ್ಗ 2–ಎಗೆ ಸೇರ್ಪಡೆ ಮಾಡುವ ಬೇಡಿಕೆ ಹಾಗೂ ಸರ್ಕಾರದ 2–ಸಿ, 2–ಡಿ ಪ್ರವರ್ಗ ಸೃಷ್ಟಿ ಮಾಡಿರುವ ನಿರ್ಣಯದ ಪ್ರಕ್ರಿಯೆಗೆ ಈಗ ತಾತ್ಕಾಲಿಕ ತಡೆ ಬಿದ್ದಂತಾಗಿದೆ.

ಬೆಂಗಳೂರಿನ ಜ್ಞಾನಭಾರತಿಯ ಮೃತ್ಯುಂಜಯ ನಗರದ ನಿವಾಸಿ ಡಿ.ಜಿ ರಾಘವೇಂದ್ರ ಬಿನ್ ಸೂರ್ಯ ದೇವಾಡಿಗ ಅವರು ಈ ವಿಚಾರವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಸಲ್ಲಿಸಿದ್ದರು. ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ಹಾಗೂ ಅಶೋಕ್‌ ಎಸ್‌.ಕಿಣಗಿ ಅವರಿದ್ದ ವಿಭಾಗೀಯ ನ್ಯಾಯಪೀಠವು ಗುರುವಾರ ವಿಚಾರಣೆ ನಡೆಸಿತು.

ದಿನದ ಕಲಾಪ ಮುಗಿಯುವಾಗ ಸಂಜೆ 5.45 ರಲ್ಲಿ ಅರ್ಜಿದಾರರ ಪರ ಹಿರಿಯ ವಕೀಲ ರವಿವರ್ಮ ಕುಮಾರ್‌ ಅವರು, ‘ಪಂಚಮಸಾಲಿ ಸಮುದಾಯಕ್ಕೆ 2-ಎ ಮೀಸಲಾತಿ ನೀಡಬೇಕು ಎಂಬ ಬೇಡಿಕೆಗೆ ಸಂಬಂಧಿಸಿದ ಮಧ್ಯಂತರ ವರದಿಯನ್ನು ಹಿಂದುಳಿದ ವರ್ಗಗಳ ಆಯೋಗವು ರಾಜ್ಯ ಸರ್ಕಾರಕ್ಕೆ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಿದೆ. ಈ ವರದಿಯನ್ನು ರಾಜ್ಯ ಸರ್ಕಾರ ಇನ್ನೂ ಕೋರ್ಟ್‌ಗೆ ಸಲ್ಲಿಸಿಲ್ಲ’ ಎಂದು ಆಕ್ಷೇಪಿಸಿದರು.

ಇದಕ್ಕೆ ವಿಡಿಯೊ ಕಾನ್ಫರೆನ್ಸ್‌ ಮೂಲಕ ಹಾಜರಾಗಿ ಪ್ರತಿಕ್ರಿಯಿಸಿದ ಅಡ್ವೊಕೇಟ್‌ ಜನರಲ್‌ ಪ್ರಭುಲಿಂಗ ಕೆ.ನಾವದಗಿ, ‘ವರದಿ ಸರ್ಕಾರದ ಪರಿಶೀಲನೆಯಲ್ಲಿದೆ. ಸರ್ಕಾರ ಇನ್ನೂ ಯಾವುದೇ ಕ್ರಮ ಕೈಗೊಂಡಿಲ್ಲ. ವರದಿಯ ಪ್ರತಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಇನ್ನಷ್ಟು ಕಾಲಾವಕಾಶ ನೀಡಬೇಕು. ಹಾಗಾಗಿ, ತಡೆ ನೀಡಬಾರದು’ ಎಂದು ಮನವಿ ಮಾಡಿದರು.

ಇದಕ್ಕೆ ರವಿವರ್ಮ ಕುಮಾರ್ ಪ್ರತಿಕ್ರಿಯಿಸಿ, ‘ಸರ್ಕಾರ ಸಮಯ ತೆಗೆದುಕೊಳ್ಳಲು ನಮ್ಮ ತಕರಾರಿಲ್ಲ, ಆದರೆ ಕೆಲವು ಸಮುದಾಯಗಳು ಸರ್ಕಾರದ ಮೇಲೆ ಅಸಾಂವಿಧಾನಿಕ ಬೇಡಿಕೆಯ ಈಡೇರಿಕೆಗಾಗಿ ಒತ್ತಡ ಹೇರುತ್ತಿವೆ. ಹಾಗಾಗಿ ಈ ವಿಷಯದಲ್ಲಿ ಯಥಾಸ್ಥಿತಿ ಕಾಪಾಡಿಕೊಳ್ಳಲು ಅದೇಶಿಸಬೇಕು’ ಎಂದು ಕೋರಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ಮುಂದಿನ ವಿಚಾರಣೆಯನ್ನು ಇದೇ 30ಕ್ಕೆ ನಿಗದಿಪಡಿಸಿ ಅಲ್ಲಿಯವರೆಗೂ ಯಥಾಸ್ಥಿತಿ ಕಾಯ್ದುಕೊಂಡು ಹೋಗುವಂತೆ ಆದೇಶಿಸಿತು.

ಪಿಐಎಲ್ ನಲ್ಲಿ ಏನಿದೆ?

‘ದೇವಾಡಿಗ ಸಮುದಾಯಕ್ಕೆ ಸೇರಿದವನಾಗಿದ್ದು ಹಿಂದುಳಿದ ವರ್ಗಗಳಿಗೆ ದೊರೆಯುವ 2-ಎ ಮೀಸಲಾತಿಯ ಫಲಾನುಭವಿಯಾಗಿದ್ದೇನೆ‌. ಇತ್ತೀಚೆಗೆ ಲಿಂಗಾಯತ-ವೀರಶೈವ ಪಂಚಮಸಾಲಿ ಸಮುದಾಯದವರು ಪ್ರವರ್ಗ 2-ಎಗೆ ಸೇರಿಸಬೇಕು ಎಂ‌ಬ ಬೇಡಿಕೆಯನ್ನು ಮಂಡಿಸಿದ್ದಾರೆ. ಈ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪಂಚಮಸಾಲಿ ಸಮುದಾಯವನ್ನು 2-ಎಗೆ ಸೇರ್ಪಡೆ ಮಾಡುವುದನ್ನು ಖಚಿತಪಡಿಸಿದ್ದು ಅದಕ್ಕಾಗಿ 2022ರ ಡಿಸೆಂಬರ್‌ 29ರ ಗಡುವು ನೀಡಿದ್ದರು. ಒಂದು ವೇಳೆ ಈ ಬಲಾಢ್ಯ ಹಾಗೂ ಮುಂದುವರಿದ ಸಮುದಾಯವನ್ನು 2-ಎಗೆ ಸೇರ್ಪಡೆ ಮಾಡಿದರೆ ಹಿಂದುಳಿದ ವರ್ಗಗಳಿಗೆ ಭರಿಸಲಾಗದ ಅನ್ಯಾಯ ಉಂಟಾಗಲಿದೆ. ಹಾಗಾಗಿ, ಈ ಅರ್ಜಿ ಇತ್ಯರ್ಥವಾಗುವತನಕ ಮೀಸಲು ಪ್ರವರ್ಗಗಳನ್ನು ಮಾರ್ಪಾಡು ಮಾಡುವಂತೆ ಕೋರುವ ಬೇಡಿಕೆಗಳನ್ನು ಸರ್ಕಾರ ಪ್ರೋತ್ಸಾಹಿಸದಂತೆ ಮಧ್ಯಂತರ ತಡೆ ನೀಡಬೇಕು’ ಎಂದು ಅರ್ಜಿದಾರರು ಕೋರಿದ್ದಾರೆ.

‘ಇನ್ನು ಪಂಚಮಸಾಲಿ ಮೀಸಲಾತಿಗಾಗಿ ಹೋರಾಟದ ನೇತೃತ್ವ ವಹಿಸಿರುವ ಜಗದ್ಗುರು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಅವರು ಇದೇ 13ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಶಿಗ್ಗಾವಿ ನಿವಾಸದ ಮುಂದೆ ಸತ್ಯಾಗ್ರಹ ನಡೆಸುವ ನಿರ್ಧಾರ ಮಾಡಿದ್ದಾರೆ. ಇದು ನ್ಯಾಯಾಂಗ ನಿಂದನೆ ನ್ಯಾಯಾಂಗ ನಿಂದನೆಯಾಗುತ್ತದೆ. ಕೋರ್ಟ್‌ ಆದೇಶ ಈ ಪ್ರಕ್ರಿಯೆಯಲ್ಲಿನ ಎಲ್ಲ ವಿಧವಾದ ನಡೆಗಳಿಗೂ ಅನ್ವಯ ಆಗುತ್ತದೆ. ಸತ್ಯಾಗ್ರಹವನ್ನು ಪ್ರಶ್ನಿಸಿ ವಿಚಾರಣೆಗೆ ಒಳಪಡಿಸುವಂತೆ ಕೋರಿದರೆ ಆಗ ಅದು ಖಂಡಿತಾ ನ್ಯಾಯಾಂಗ ನಿಂದನೆ ಎನಿಸಿಕೊಳ್ಳುತ್ತದೆ’ ಎಂದು ಹಿರಿಯ ವಕೀಲ ರವಿವರ್ಮ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ.

ಇತ್ತ ಮೃತ್ಯುಂಜಯ ಸ್ವಾಮೀಜಿ, ‘ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕು ಎಂದು ನಿರಂತರವಾಗಿ ಹೋರಾಟ ಮಾಡಿಕೊಂಡು ಬಂದಿದ್ದೇವೆ. ಮುಖ್ಯಮಂತ್ರಿ ನಮ್ಮ ಹೋರಾಟದ ದಿಕ್ಕು ತಪ್ಪಿಸಲು, 2ಡಿ ಮೀಸಲಾತಿ ಘೋಷಿಸಿದರು. ಇದನ್ನು ಜನವರಿ 5ರಂದು ಬೆಳಗಾವಿಯಲ್ಲಿ ನಡೆದ ಕಾರ್ಯಕಾರಿಣಿ ಸಭೆಯಲ್ಲಿ ಸಂಪೂರ್ಣವಾಗಿ ತಿರಸ್ಕರಿಸಿದ್ದೇವೆ. 2ಎ ಮೀಸಲಾತಿ ಕೊಡುವ ಅಧಿಕಾರ ಮುಖ್ಯಮಂತ್ರಿಯವರ ಕೈಯಲ್ಲಿತ್ತು. ಆದರೆ, ಮೀಸಲಾತಿ ಕೊಡದೆ ಕಾಲಹರಣ ಮಾಡಿದರು’ ಎಂದು ಸ್ವಾಮೀಜಿ ದೂರಿದರು.

‘ಇದೀಗ ಹೈಕೋರ್ಟ್‌ ಯಥಾಸ್ಥಿತಿ ಕಾಪಾಡಿಕೊಳ್ಳುವಂತೆ ಸರ್ಕಾರಕ್ಕೆ ಆದೇಶಿಸಿದೆ. ನಮ್ಮ ಹೋರಾಟಕ್ಕೆ ಯಾವುದೇ ತಡೆ ನೀಡಿಲ್ಲ. ಹೀಗಾಗಿ ನಮ್ಮ ಹೋರಾಟ ನಿರಂತರವಾಗಿ ನಡೆಯಲಿದೆ. ಸರ್ಕಾರದ ಅನ್ಯಾಯ ಖಂಡಿಸಿ ಜ.13ರಂದು ಶಿಗ್ಗಾವಿಯಲ್ಲಿರುವ ಸಿಎಂ ಮನೆಗೆ ಮುತ್ತಿಗೆ ಕಾರ್ಯಕ್ರಮ ಹಾಕಿಕೊಂಡಿದ್ದೇವೆ’ ಎಂದು ಸ್ವಾಮೀಜಿ ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...