Homeಕರ್ನಾಟಕಪಂಚಮಸಾಲಿ ಮೀಸಲಾತಿ ವಿಚಾರಕ್ಕೆ ತಾತ್ಕಾಲಿಕ ಬ್ರೇಕ್ ನೀಡಿದ ಹೈಕೋರ್ಟ್

ಪಂಚಮಸಾಲಿ ಮೀಸಲಾತಿ ವಿಚಾರಕ್ಕೆ ತಾತ್ಕಾಲಿಕ ಬ್ರೇಕ್ ನೀಡಿದ ಹೈಕೋರ್ಟ್

- Advertisement -
- Advertisement -

ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ 2-ಎ ಮೀಸಲಾತಿ ನೀಡಬಾರದು ಮತ್ತು ಮೀಸಲು ಪ್ರವರ್ಗ ಮಾರ್ಪಾಡು ಮಾಡುವಂತೆ ಕೋರಿ ಯಾವುದೇ ಜಾತಿ, ಉಪಜಾತಿ, ಸಮುದಾಯ ಬುಡಕಟ್ಟುಗಳು ಸಲ್ಲಿಸುವ ವೈಯಕ್ತಿಕ ಬೇಡಿಕೆಗಳನ್ನು ರಾಜ್ಯ ಸರ್ಕಾರ ಪ್ರೋತ್ಸಾಹಿಸದಂತೆ ತಡೆ ನೀಡಬೇಕು ಎಂಬ ಮಧ್ಯಂತರ ಮನವಿಯನ್ನು ಹೈಕೋರ್ಟ್‌ ಮಾನ್ಯ ಮಾಡಿದೆ. ಈ ಸಂಬಂಧ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶ ನೀಡಿದೆ.

ಬಹುದಿನಗಳಿಂದ 2-ಎ ಮೀಸಲಾತಿಗಾಗಿ ಹೋರಾಟ ನಡೆಸುತ್ತಿರುವ ಪಂಚಮಸಾಲಿ ಲಿಂಗಾಯತ ಸಮುದಾಯ, ಈ ಚುನಾವಣೆ ಹೊಸ್ತಿಲಲ್ಲಿ ಮೀಸಲಾತಿ ಹೋರಾಟ ಅಸ್ತ್ರ ಪ್ರಯೋಗಿಸಿತ್ತು. ರಾಜ್ಯ ಬಿಜೆಪಿ ಸರ್ಕಾರ, ಹೊಸದಾಗಿ 2-ಸಿ ಹಾಗು 2-ಡಿ ಎಂದು ಪ್ರವರ್ಗ ಸೃಷ್ಟಿಸಿ ಈ ಸಮುದಾಯಕ್ಕೆ ಮೂಗಿಗೆ ತುಪ್ಪ ಸವರುವ ಕೆಲಸಕ್ಕೆ ಮುಂದಾಯಿತು. ಆದರೆ ಪಂಚಮಸಾಲಿ ಸಮುದಾಯ ಮಾತ್ರ 2ಎ ಮೀಸಲಾತಿ ಪಟ್ಟಿಗೆ ಸೇರಿಸಲೇಬೇಕು ಎಂದು ಪಟ್ಟು ಹಿಡಿದಿದೆ.

ಇದೀಗ ಹೈಕೋರ್ಟ್, ಮುಂದಿನ ವಿಚಾರಣೆವರೆಗೂ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಹೀಗಾಗಿ, ಸಮುದಾಯದ ಪ್ರವರ್ಗ 2–ಎಗೆ ಸೇರ್ಪಡೆ ಮಾಡುವ ಬೇಡಿಕೆ ಹಾಗೂ ಸರ್ಕಾರದ 2–ಸಿ, 2–ಡಿ ಪ್ರವರ್ಗ ಸೃಷ್ಟಿ ಮಾಡಿರುವ ನಿರ್ಣಯದ ಪ್ರಕ್ರಿಯೆಗೆ ಈಗ ತಾತ್ಕಾಲಿಕ ತಡೆ ಬಿದ್ದಂತಾಗಿದೆ.

ಬೆಂಗಳೂರಿನ ಜ್ಞಾನಭಾರತಿಯ ಮೃತ್ಯುಂಜಯ ನಗರದ ನಿವಾಸಿ ಡಿ.ಜಿ ರಾಘವೇಂದ್ರ ಬಿನ್ ಸೂರ್ಯ ದೇವಾಡಿಗ ಅವರು ಈ ವಿಚಾರವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಸಲ್ಲಿಸಿದ್ದರು. ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ಹಾಗೂ ಅಶೋಕ್‌ ಎಸ್‌.ಕಿಣಗಿ ಅವರಿದ್ದ ವಿಭಾಗೀಯ ನ್ಯಾಯಪೀಠವು ಗುರುವಾರ ವಿಚಾರಣೆ ನಡೆಸಿತು.

ದಿನದ ಕಲಾಪ ಮುಗಿಯುವಾಗ ಸಂಜೆ 5.45 ರಲ್ಲಿ ಅರ್ಜಿದಾರರ ಪರ ಹಿರಿಯ ವಕೀಲ ರವಿವರ್ಮ ಕುಮಾರ್‌ ಅವರು, ‘ಪಂಚಮಸಾಲಿ ಸಮುದಾಯಕ್ಕೆ 2-ಎ ಮೀಸಲಾತಿ ನೀಡಬೇಕು ಎಂಬ ಬೇಡಿಕೆಗೆ ಸಂಬಂಧಿಸಿದ ಮಧ್ಯಂತರ ವರದಿಯನ್ನು ಹಿಂದುಳಿದ ವರ್ಗಗಳ ಆಯೋಗವು ರಾಜ್ಯ ಸರ್ಕಾರಕ್ಕೆ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಿದೆ. ಈ ವರದಿಯನ್ನು ರಾಜ್ಯ ಸರ್ಕಾರ ಇನ್ನೂ ಕೋರ್ಟ್‌ಗೆ ಸಲ್ಲಿಸಿಲ್ಲ’ ಎಂದು ಆಕ್ಷೇಪಿಸಿದರು.

ಇದಕ್ಕೆ ವಿಡಿಯೊ ಕಾನ್ಫರೆನ್ಸ್‌ ಮೂಲಕ ಹಾಜರಾಗಿ ಪ್ರತಿಕ್ರಿಯಿಸಿದ ಅಡ್ವೊಕೇಟ್‌ ಜನರಲ್‌ ಪ್ರಭುಲಿಂಗ ಕೆ.ನಾವದಗಿ, ‘ವರದಿ ಸರ್ಕಾರದ ಪರಿಶೀಲನೆಯಲ್ಲಿದೆ. ಸರ್ಕಾರ ಇನ್ನೂ ಯಾವುದೇ ಕ್ರಮ ಕೈಗೊಂಡಿಲ್ಲ. ವರದಿಯ ಪ್ರತಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಇನ್ನಷ್ಟು ಕಾಲಾವಕಾಶ ನೀಡಬೇಕು. ಹಾಗಾಗಿ, ತಡೆ ನೀಡಬಾರದು’ ಎಂದು ಮನವಿ ಮಾಡಿದರು.

ಇದಕ್ಕೆ ರವಿವರ್ಮ ಕುಮಾರ್ ಪ್ರತಿಕ್ರಿಯಿಸಿ, ‘ಸರ್ಕಾರ ಸಮಯ ತೆಗೆದುಕೊಳ್ಳಲು ನಮ್ಮ ತಕರಾರಿಲ್ಲ, ಆದರೆ ಕೆಲವು ಸಮುದಾಯಗಳು ಸರ್ಕಾರದ ಮೇಲೆ ಅಸಾಂವಿಧಾನಿಕ ಬೇಡಿಕೆಯ ಈಡೇರಿಕೆಗಾಗಿ ಒತ್ತಡ ಹೇರುತ್ತಿವೆ. ಹಾಗಾಗಿ ಈ ವಿಷಯದಲ್ಲಿ ಯಥಾಸ್ಥಿತಿ ಕಾಪಾಡಿಕೊಳ್ಳಲು ಅದೇಶಿಸಬೇಕು’ ಎಂದು ಕೋರಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ಮುಂದಿನ ವಿಚಾರಣೆಯನ್ನು ಇದೇ 30ಕ್ಕೆ ನಿಗದಿಪಡಿಸಿ ಅಲ್ಲಿಯವರೆಗೂ ಯಥಾಸ್ಥಿತಿ ಕಾಯ್ದುಕೊಂಡು ಹೋಗುವಂತೆ ಆದೇಶಿಸಿತು.

ಪಿಐಎಲ್ ನಲ್ಲಿ ಏನಿದೆ?

‘ದೇವಾಡಿಗ ಸಮುದಾಯಕ್ಕೆ ಸೇರಿದವನಾಗಿದ್ದು ಹಿಂದುಳಿದ ವರ್ಗಗಳಿಗೆ ದೊರೆಯುವ 2-ಎ ಮೀಸಲಾತಿಯ ಫಲಾನುಭವಿಯಾಗಿದ್ದೇನೆ‌. ಇತ್ತೀಚೆಗೆ ಲಿಂಗಾಯತ-ವೀರಶೈವ ಪಂಚಮಸಾಲಿ ಸಮುದಾಯದವರು ಪ್ರವರ್ಗ 2-ಎಗೆ ಸೇರಿಸಬೇಕು ಎಂ‌ಬ ಬೇಡಿಕೆಯನ್ನು ಮಂಡಿಸಿದ್ದಾರೆ. ಈ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪಂಚಮಸಾಲಿ ಸಮುದಾಯವನ್ನು 2-ಎಗೆ ಸೇರ್ಪಡೆ ಮಾಡುವುದನ್ನು ಖಚಿತಪಡಿಸಿದ್ದು ಅದಕ್ಕಾಗಿ 2022ರ ಡಿಸೆಂಬರ್‌ 29ರ ಗಡುವು ನೀಡಿದ್ದರು. ಒಂದು ವೇಳೆ ಈ ಬಲಾಢ್ಯ ಹಾಗೂ ಮುಂದುವರಿದ ಸಮುದಾಯವನ್ನು 2-ಎಗೆ ಸೇರ್ಪಡೆ ಮಾಡಿದರೆ ಹಿಂದುಳಿದ ವರ್ಗಗಳಿಗೆ ಭರಿಸಲಾಗದ ಅನ್ಯಾಯ ಉಂಟಾಗಲಿದೆ. ಹಾಗಾಗಿ, ಈ ಅರ್ಜಿ ಇತ್ಯರ್ಥವಾಗುವತನಕ ಮೀಸಲು ಪ್ರವರ್ಗಗಳನ್ನು ಮಾರ್ಪಾಡು ಮಾಡುವಂತೆ ಕೋರುವ ಬೇಡಿಕೆಗಳನ್ನು ಸರ್ಕಾರ ಪ್ರೋತ್ಸಾಹಿಸದಂತೆ ಮಧ್ಯಂತರ ತಡೆ ನೀಡಬೇಕು’ ಎಂದು ಅರ್ಜಿದಾರರು ಕೋರಿದ್ದಾರೆ.

‘ಇನ್ನು ಪಂಚಮಸಾಲಿ ಮೀಸಲಾತಿಗಾಗಿ ಹೋರಾಟದ ನೇತೃತ್ವ ವಹಿಸಿರುವ ಜಗದ್ಗುರು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಅವರು ಇದೇ 13ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಶಿಗ್ಗಾವಿ ನಿವಾಸದ ಮುಂದೆ ಸತ್ಯಾಗ್ರಹ ನಡೆಸುವ ನಿರ್ಧಾರ ಮಾಡಿದ್ದಾರೆ. ಇದು ನ್ಯಾಯಾಂಗ ನಿಂದನೆ ನ್ಯಾಯಾಂಗ ನಿಂದನೆಯಾಗುತ್ತದೆ. ಕೋರ್ಟ್‌ ಆದೇಶ ಈ ಪ್ರಕ್ರಿಯೆಯಲ್ಲಿನ ಎಲ್ಲ ವಿಧವಾದ ನಡೆಗಳಿಗೂ ಅನ್ವಯ ಆಗುತ್ತದೆ. ಸತ್ಯಾಗ್ರಹವನ್ನು ಪ್ರಶ್ನಿಸಿ ವಿಚಾರಣೆಗೆ ಒಳಪಡಿಸುವಂತೆ ಕೋರಿದರೆ ಆಗ ಅದು ಖಂಡಿತಾ ನ್ಯಾಯಾಂಗ ನಿಂದನೆ ಎನಿಸಿಕೊಳ್ಳುತ್ತದೆ’ ಎಂದು ಹಿರಿಯ ವಕೀಲ ರವಿವರ್ಮ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ.

ಇತ್ತ ಮೃತ್ಯುಂಜಯ ಸ್ವಾಮೀಜಿ, ‘ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕು ಎಂದು ನಿರಂತರವಾಗಿ ಹೋರಾಟ ಮಾಡಿಕೊಂಡು ಬಂದಿದ್ದೇವೆ. ಮುಖ್ಯಮಂತ್ರಿ ನಮ್ಮ ಹೋರಾಟದ ದಿಕ್ಕು ತಪ್ಪಿಸಲು, 2ಡಿ ಮೀಸಲಾತಿ ಘೋಷಿಸಿದರು. ಇದನ್ನು ಜನವರಿ 5ರಂದು ಬೆಳಗಾವಿಯಲ್ಲಿ ನಡೆದ ಕಾರ್ಯಕಾರಿಣಿ ಸಭೆಯಲ್ಲಿ ಸಂಪೂರ್ಣವಾಗಿ ತಿರಸ್ಕರಿಸಿದ್ದೇವೆ. 2ಎ ಮೀಸಲಾತಿ ಕೊಡುವ ಅಧಿಕಾರ ಮುಖ್ಯಮಂತ್ರಿಯವರ ಕೈಯಲ್ಲಿತ್ತು. ಆದರೆ, ಮೀಸಲಾತಿ ಕೊಡದೆ ಕಾಲಹರಣ ಮಾಡಿದರು’ ಎಂದು ಸ್ವಾಮೀಜಿ ದೂರಿದರು.

‘ಇದೀಗ ಹೈಕೋರ್ಟ್‌ ಯಥಾಸ್ಥಿತಿ ಕಾಪಾಡಿಕೊಳ್ಳುವಂತೆ ಸರ್ಕಾರಕ್ಕೆ ಆದೇಶಿಸಿದೆ. ನಮ್ಮ ಹೋರಾಟಕ್ಕೆ ಯಾವುದೇ ತಡೆ ನೀಡಿಲ್ಲ. ಹೀಗಾಗಿ ನಮ್ಮ ಹೋರಾಟ ನಿರಂತರವಾಗಿ ನಡೆಯಲಿದೆ. ಸರ್ಕಾರದ ಅನ್ಯಾಯ ಖಂಡಿಸಿ ಜ.13ರಂದು ಶಿಗ್ಗಾವಿಯಲ್ಲಿರುವ ಸಿಎಂ ಮನೆಗೆ ಮುತ್ತಿಗೆ ಕಾರ್ಯಕ್ರಮ ಹಾಕಿಕೊಂಡಿದ್ದೇವೆ’ ಎಂದು ಸ್ವಾಮೀಜಿ ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...