Homeಕರ್ನಾಟಕಪಂಚಮಸಾಲಿ ಮೀಸಲಾತಿ ವಿಚಾರಕ್ಕೆ ತಾತ್ಕಾಲಿಕ ಬ್ರೇಕ್ ನೀಡಿದ ಹೈಕೋರ್ಟ್

ಪಂಚಮಸಾಲಿ ಮೀಸಲಾತಿ ವಿಚಾರಕ್ಕೆ ತಾತ್ಕಾಲಿಕ ಬ್ರೇಕ್ ನೀಡಿದ ಹೈಕೋರ್ಟ್

- Advertisement -
- Advertisement -

ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ 2-ಎ ಮೀಸಲಾತಿ ನೀಡಬಾರದು ಮತ್ತು ಮೀಸಲು ಪ್ರವರ್ಗ ಮಾರ್ಪಾಡು ಮಾಡುವಂತೆ ಕೋರಿ ಯಾವುದೇ ಜಾತಿ, ಉಪಜಾತಿ, ಸಮುದಾಯ ಬುಡಕಟ್ಟುಗಳು ಸಲ್ಲಿಸುವ ವೈಯಕ್ತಿಕ ಬೇಡಿಕೆಗಳನ್ನು ರಾಜ್ಯ ಸರ್ಕಾರ ಪ್ರೋತ್ಸಾಹಿಸದಂತೆ ತಡೆ ನೀಡಬೇಕು ಎಂಬ ಮಧ್ಯಂತರ ಮನವಿಯನ್ನು ಹೈಕೋರ್ಟ್‌ ಮಾನ್ಯ ಮಾಡಿದೆ. ಈ ಸಂಬಂಧ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶ ನೀಡಿದೆ.

ಬಹುದಿನಗಳಿಂದ 2-ಎ ಮೀಸಲಾತಿಗಾಗಿ ಹೋರಾಟ ನಡೆಸುತ್ತಿರುವ ಪಂಚಮಸಾಲಿ ಲಿಂಗಾಯತ ಸಮುದಾಯ, ಈ ಚುನಾವಣೆ ಹೊಸ್ತಿಲಲ್ಲಿ ಮೀಸಲಾತಿ ಹೋರಾಟ ಅಸ್ತ್ರ ಪ್ರಯೋಗಿಸಿತ್ತು. ರಾಜ್ಯ ಬಿಜೆಪಿ ಸರ್ಕಾರ, ಹೊಸದಾಗಿ 2-ಸಿ ಹಾಗು 2-ಡಿ ಎಂದು ಪ್ರವರ್ಗ ಸೃಷ್ಟಿಸಿ ಈ ಸಮುದಾಯಕ್ಕೆ ಮೂಗಿಗೆ ತುಪ್ಪ ಸವರುವ ಕೆಲಸಕ್ಕೆ ಮುಂದಾಯಿತು. ಆದರೆ ಪಂಚಮಸಾಲಿ ಸಮುದಾಯ ಮಾತ್ರ 2ಎ ಮೀಸಲಾತಿ ಪಟ್ಟಿಗೆ ಸೇರಿಸಲೇಬೇಕು ಎಂದು ಪಟ್ಟು ಹಿಡಿದಿದೆ.

ಇದೀಗ ಹೈಕೋರ್ಟ್, ಮುಂದಿನ ವಿಚಾರಣೆವರೆಗೂ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಹೀಗಾಗಿ, ಸಮುದಾಯದ ಪ್ರವರ್ಗ 2–ಎಗೆ ಸೇರ್ಪಡೆ ಮಾಡುವ ಬೇಡಿಕೆ ಹಾಗೂ ಸರ್ಕಾರದ 2–ಸಿ, 2–ಡಿ ಪ್ರವರ್ಗ ಸೃಷ್ಟಿ ಮಾಡಿರುವ ನಿರ್ಣಯದ ಪ್ರಕ್ರಿಯೆಗೆ ಈಗ ತಾತ್ಕಾಲಿಕ ತಡೆ ಬಿದ್ದಂತಾಗಿದೆ.

ಬೆಂಗಳೂರಿನ ಜ್ಞಾನಭಾರತಿಯ ಮೃತ್ಯುಂಜಯ ನಗರದ ನಿವಾಸಿ ಡಿ.ಜಿ ರಾಘವೇಂದ್ರ ಬಿನ್ ಸೂರ್ಯ ದೇವಾಡಿಗ ಅವರು ಈ ವಿಚಾರವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಸಲ್ಲಿಸಿದ್ದರು. ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ಹಾಗೂ ಅಶೋಕ್‌ ಎಸ್‌.ಕಿಣಗಿ ಅವರಿದ್ದ ವಿಭಾಗೀಯ ನ್ಯಾಯಪೀಠವು ಗುರುವಾರ ವಿಚಾರಣೆ ನಡೆಸಿತು.

ದಿನದ ಕಲಾಪ ಮುಗಿಯುವಾಗ ಸಂಜೆ 5.45 ರಲ್ಲಿ ಅರ್ಜಿದಾರರ ಪರ ಹಿರಿಯ ವಕೀಲ ರವಿವರ್ಮ ಕುಮಾರ್‌ ಅವರು, ‘ಪಂಚಮಸಾಲಿ ಸಮುದಾಯಕ್ಕೆ 2-ಎ ಮೀಸಲಾತಿ ನೀಡಬೇಕು ಎಂಬ ಬೇಡಿಕೆಗೆ ಸಂಬಂಧಿಸಿದ ಮಧ್ಯಂತರ ವರದಿಯನ್ನು ಹಿಂದುಳಿದ ವರ್ಗಗಳ ಆಯೋಗವು ರಾಜ್ಯ ಸರ್ಕಾರಕ್ಕೆ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಿದೆ. ಈ ವರದಿಯನ್ನು ರಾಜ್ಯ ಸರ್ಕಾರ ಇನ್ನೂ ಕೋರ್ಟ್‌ಗೆ ಸಲ್ಲಿಸಿಲ್ಲ’ ಎಂದು ಆಕ್ಷೇಪಿಸಿದರು.

ಇದಕ್ಕೆ ವಿಡಿಯೊ ಕಾನ್ಫರೆನ್ಸ್‌ ಮೂಲಕ ಹಾಜರಾಗಿ ಪ್ರತಿಕ್ರಿಯಿಸಿದ ಅಡ್ವೊಕೇಟ್‌ ಜನರಲ್‌ ಪ್ರಭುಲಿಂಗ ಕೆ.ನಾವದಗಿ, ‘ವರದಿ ಸರ್ಕಾರದ ಪರಿಶೀಲನೆಯಲ್ಲಿದೆ. ಸರ್ಕಾರ ಇನ್ನೂ ಯಾವುದೇ ಕ್ರಮ ಕೈಗೊಂಡಿಲ್ಲ. ವರದಿಯ ಪ್ರತಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಇನ್ನಷ್ಟು ಕಾಲಾವಕಾಶ ನೀಡಬೇಕು. ಹಾಗಾಗಿ, ತಡೆ ನೀಡಬಾರದು’ ಎಂದು ಮನವಿ ಮಾಡಿದರು.

ಇದಕ್ಕೆ ರವಿವರ್ಮ ಕುಮಾರ್ ಪ್ರತಿಕ್ರಿಯಿಸಿ, ‘ಸರ್ಕಾರ ಸಮಯ ತೆಗೆದುಕೊಳ್ಳಲು ನಮ್ಮ ತಕರಾರಿಲ್ಲ, ಆದರೆ ಕೆಲವು ಸಮುದಾಯಗಳು ಸರ್ಕಾರದ ಮೇಲೆ ಅಸಾಂವಿಧಾನಿಕ ಬೇಡಿಕೆಯ ಈಡೇರಿಕೆಗಾಗಿ ಒತ್ತಡ ಹೇರುತ್ತಿವೆ. ಹಾಗಾಗಿ ಈ ವಿಷಯದಲ್ಲಿ ಯಥಾಸ್ಥಿತಿ ಕಾಪಾಡಿಕೊಳ್ಳಲು ಅದೇಶಿಸಬೇಕು’ ಎಂದು ಕೋರಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ಮುಂದಿನ ವಿಚಾರಣೆಯನ್ನು ಇದೇ 30ಕ್ಕೆ ನಿಗದಿಪಡಿಸಿ ಅಲ್ಲಿಯವರೆಗೂ ಯಥಾಸ್ಥಿತಿ ಕಾಯ್ದುಕೊಂಡು ಹೋಗುವಂತೆ ಆದೇಶಿಸಿತು.

ಪಿಐಎಲ್ ನಲ್ಲಿ ಏನಿದೆ?

‘ದೇವಾಡಿಗ ಸಮುದಾಯಕ್ಕೆ ಸೇರಿದವನಾಗಿದ್ದು ಹಿಂದುಳಿದ ವರ್ಗಗಳಿಗೆ ದೊರೆಯುವ 2-ಎ ಮೀಸಲಾತಿಯ ಫಲಾನುಭವಿಯಾಗಿದ್ದೇನೆ‌. ಇತ್ತೀಚೆಗೆ ಲಿಂಗಾಯತ-ವೀರಶೈವ ಪಂಚಮಸಾಲಿ ಸಮುದಾಯದವರು ಪ್ರವರ್ಗ 2-ಎಗೆ ಸೇರಿಸಬೇಕು ಎಂ‌ಬ ಬೇಡಿಕೆಯನ್ನು ಮಂಡಿಸಿದ್ದಾರೆ. ಈ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪಂಚಮಸಾಲಿ ಸಮುದಾಯವನ್ನು 2-ಎಗೆ ಸೇರ್ಪಡೆ ಮಾಡುವುದನ್ನು ಖಚಿತಪಡಿಸಿದ್ದು ಅದಕ್ಕಾಗಿ 2022ರ ಡಿಸೆಂಬರ್‌ 29ರ ಗಡುವು ನೀಡಿದ್ದರು. ಒಂದು ವೇಳೆ ಈ ಬಲಾಢ್ಯ ಹಾಗೂ ಮುಂದುವರಿದ ಸಮುದಾಯವನ್ನು 2-ಎಗೆ ಸೇರ್ಪಡೆ ಮಾಡಿದರೆ ಹಿಂದುಳಿದ ವರ್ಗಗಳಿಗೆ ಭರಿಸಲಾಗದ ಅನ್ಯಾಯ ಉಂಟಾಗಲಿದೆ. ಹಾಗಾಗಿ, ಈ ಅರ್ಜಿ ಇತ್ಯರ್ಥವಾಗುವತನಕ ಮೀಸಲು ಪ್ರವರ್ಗಗಳನ್ನು ಮಾರ್ಪಾಡು ಮಾಡುವಂತೆ ಕೋರುವ ಬೇಡಿಕೆಗಳನ್ನು ಸರ್ಕಾರ ಪ್ರೋತ್ಸಾಹಿಸದಂತೆ ಮಧ್ಯಂತರ ತಡೆ ನೀಡಬೇಕು’ ಎಂದು ಅರ್ಜಿದಾರರು ಕೋರಿದ್ದಾರೆ.

‘ಇನ್ನು ಪಂಚಮಸಾಲಿ ಮೀಸಲಾತಿಗಾಗಿ ಹೋರಾಟದ ನೇತೃತ್ವ ವಹಿಸಿರುವ ಜಗದ್ಗುರು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಅವರು ಇದೇ 13ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಶಿಗ್ಗಾವಿ ನಿವಾಸದ ಮುಂದೆ ಸತ್ಯಾಗ್ರಹ ನಡೆಸುವ ನಿರ್ಧಾರ ಮಾಡಿದ್ದಾರೆ. ಇದು ನ್ಯಾಯಾಂಗ ನಿಂದನೆ ನ್ಯಾಯಾಂಗ ನಿಂದನೆಯಾಗುತ್ತದೆ. ಕೋರ್ಟ್‌ ಆದೇಶ ಈ ಪ್ರಕ್ರಿಯೆಯಲ್ಲಿನ ಎಲ್ಲ ವಿಧವಾದ ನಡೆಗಳಿಗೂ ಅನ್ವಯ ಆಗುತ್ತದೆ. ಸತ್ಯಾಗ್ರಹವನ್ನು ಪ್ರಶ್ನಿಸಿ ವಿಚಾರಣೆಗೆ ಒಳಪಡಿಸುವಂತೆ ಕೋರಿದರೆ ಆಗ ಅದು ಖಂಡಿತಾ ನ್ಯಾಯಾಂಗ ನಿಂದನೆ ಎನಿಸಿಕೊಳ್ಳುತ್ತದೆ’ ಎಂದು ಹಿರಿಯ ವಕೀಲ ರವಿವರ್ಮ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ.

ಇತ್ತ ಮೃತ್ಯುಂಜಯ ಸ್ವಾಮೀಜಿ, ‘ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕು ಎಂದು ನಿರಂತರವಾಗಿ ಹೋರಾಟ ಮಾಡಿಕೊಂಡು ಬಂದಿದ್ದೇವೆ. ಮುಖ್ಯಮಂತ್ರಿ ನಮ್ಮ ಹೋರಾಟದ ದಿಕ್ಕು ತಪ್ಪಿಸಲು, 2ಡಿ ಮೀಸಲಾತಿ ಘೋಷಿಸಿದರು. ಇದನ್ನು ಜನವರಿ 5ರಂದು ಬೆಳಗಾವಿಯಲ್ಲಿ ನಡೆದ ಕಾರ್ಯಕಾರಿಣಿ ಸಭೆಯಲ್ಲಿ ಸಂಪೂರ್ಣವಾಗಿ ತಿರಸ್ಕರಿಸಿದ್ದೇವೆ. 2ಎ ಮೀಸಲಾತಿ ಕೊಡುವ ಅಧಿಕಾರ ಮುಖ್ಯಮಂತ್ರಿಯವರ ಕೈಯಲ್ಲಿತ್ತು. ಆದರೆ, ಮೀಸಲಾತಿ ಕೊಡದೆ ಕಾಲಹರಣ ಮಾಡಿದರು’ ಎಂದು ಸ್ವಾಮೀಜಿ ದೂರಿದರು.

‘ಇದೀಗ ಹೈಕೋರ್ಟ್‌ ಯಥಾಸ್ಥಿತಿ ಕಾಪಾಡಿಕೊಳ್ಳುವಂತೆ ಸರ್ಕಾರಕ್ಕೆ ಆದೇಶಿಸಿದೆ. ನಮ್ಮ ಹೋರಾಟಕ್ಕೆ ಯಾವುದೇ ತಡೆ ನೀಡಿಲ್ಲ. ಹೀಗಾಗಿ ನಮ್ಮ ಹೋರಾಟ ನಿರಂತರವಾಗಿ ನಡೆಯಲಿದೆ. ಸರ್ಕಾರದ ಅನ್ಯಾಯ ಖಂಡಿಸಿ ಜ.13ರಂದು ಶಿಗ್ಗಾವಿಯಲ್ಲಿರುವ ಸಿಎಂ ಮನೆಗೆ ಮುತ್ತಿಗೆ ಕಾರ್ಯಕ್ರಮ ಹಾಕಿಕೊಂಡಿದ್ದೇವೆ’ ಎಂದು ಸ್ವಾಮೀಜಿ ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...