Homeಮುಖಪುಟ’ಕಾವೇರಿ ಕಾಲಿಂಗ್’ ಪ್ರಕರಣ: ಡಿಸ್ಕವರಿ ಚಾನೆಲ್‌ಗೆ ಕಾರ್ಯಕ್ರಮ ನಿಲ್ಲಿಸಲು ಕಾನೂನು ನೋಟಿಸು ನೀಡಿದ್ದೀರ ಎಂದು ಕೇಳಿದ...

’ಕಾವೇರಿ ಕಾಲಿಂಗ್’ ಪ್ರಕರಣ: ಡಿಸ್ಕವರಿ ಚಾನೆಲ್‌ಗೆ ಕಾರ್ಯಕ್ರಮ ನಿಲ್ಲಿಸಲು ಕಾನೂನು ನೋಟಿಸು ನೀಡಿದ್ದೀರ ಎಂದು ಕೇಳಿದ ಹೈಕೋರ್ಟ್

ಇಶಾ ಫೌಂಡೇಶನ್ ಸಾರ್ವಜನಿಕರಿಂದ ಒಂದು ಮರ ನೆಡುವಿಕೆಗೆ 42 ರೂ. ವನ್ನು ಪಡೆಯುತ್ತಿದ್ದು, ಅದಕ್ಕಾಗಿ ಒಟ್ಟು 10 ಸಾವಿರ ಕೋಟಿ ರೂಪಾಯಿಗಿಂತಲೂ ಹೆಚ್ಚು ಸಂಗ್ರಹಿಸುತ್ತಿದೆ. ಇದು ದೊಡ್ಡ ಹಗರಣವಾಗಿದೆ ಎಂದು ಆರೋಪಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿತ್ತು.

- Advertisement -
- Advertisement -

ಕಾವೇರಿ ಕಾಲಿಂಗ್‌ ಪ್ರಕರಣದ ವಿಚಾರಣೆ ನಡೆಸುತ್ತಿರುವ ಕರ್ನಾಟಕ ಹೈಕೋರ್ಟ್, ಡಿಸ್ಕವರಿ ಚಾನೆಲ್‌ನಲ್ಲಿ ಪ್ರಸಾರವಾಗುತ್ತಿರುವ ಕಾವೇರಿ ಕಾಲಿಂಗ್ ಕಾರ್ಯಕ್ರಮದ ಪ್ರದರ್ಶನ ನಿಲ್ಲಿಸುವಂತೆ ಅರ್ಜಿದಾರ ಚಾನೆಲ್‌ಗೆ ನೋಟಿಸ್ ಕಳುಹಿಸಿದ್ದಾರೆಯೇ ಎಂಬ ಬಗ್ಗೆ ಸ್ಪಷ್ಟನೆ ನೀಡುವಂತೆ ಇಶಾ ಫೌಂಡೇಶನ್‌ಗೆ ನಿರ್ದೇಶಿಸಿತು.

ಇದಕ್ಕೆ ಉತ್ತರಿಸಿದ ಇಶಾ ಫೌಂಡೇಶನ್ ಪರವಾಗಿ ಹಾಜರಾದ ವಕೀಲ ಉದಯ್ ಹೊಲ್ಲಾ, ಪ್ರಕರಣವು ಹೈಕೋರ್ಟ್ ಮುಂದೆ ಬಾಕಿ ಇದೆ ಆದರೆ ಕಾರ್ಯಕ್ರಮ ಪ್ರಸಾರವಾದರೆ ಅದು ನ್ಯಾಯಾಲಯ ನಿಂದನೆಗೆ ಕಾರಣವಾಗಲಿದೆ ಎಂದು ತಿಳಿಸಿ ಅರ್ಜಿದಾರ ಮೂರು ನೋಟಿಸ್‌ಗಳನ್ನು ಚಾನೆಲ್‌ಗೆ ಕಳುಹಿಸಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮವನ್ನು ತಡೆಹಿಡಿಯಲು ನ್ಯಾಯಾಲಯವು ಯಾವುದೇ ಮಧ್ಯಂತರ ಆದೇಶವನ್ನು ಅಂಗೀಕರಿಸಿಲ್ಲ ಎಂದು ಅವರು ಸೂಚಿಸಿದರು.

ಇದನ್ನೂ ಓದಿ: ಆಧ್ಯಾತ್ಮಕ ಸಂಘಟನೆಯಾದ ಕಾರಣಕ್ಕೆ ಯಾರೂ ಕಾನೂನಿಗಿಂತ ಮಿಗಿಲಲ್ಲ: ಜಗ್ಗಿ ವಾಸುದೇವ್‌ಗೆ ಹೈಕೋರ್ಟ್‌ ತರಾಟೆ.

ಚಾನೆಲ್‌ಗೆ ನೋಟಿಸ್ ಕಳುಹಿಸಿದ್ದೀರಾ ಎಂದು ಅರ್ಜಿದಾರರೊಂದಿಗೆ ಪ್ರಶ್ನಿಸಿದ ನ್ಯಾಯಪೀಠಕ್ಕೆ ಉತ್ತರಿಸಿದ ಅವರು ಇಶಾ ಫೌಂಡೇಶನ್ ನನಗೆ ಅಫಿಡವಿಟ್ ಸಲ್ಲಿಸಿಲ್ಲ ಎಂದು ಹೇಳಿದರು. ಅರ್ಜಿದಾರರಿಗೆ ಮತ್ತೊಮ್ಮೆ ಅಫಿಡವಿಟ್ ಸಲ್ಲಿಸುವಂತೆ ನ್ಯಾಯಪೀಠ ಇಶಾ ಫೌಂಡೇಶನ್‌ಗೆ ನಿರ್ದೇಶನ ನೀಡಿ, “ನೀವು ಚಾನೆಲ್‌ಗಳನ್ನು ತಪ್ಪುದಾರಿಗೆಳೆಯುವ ಹಾಗಿಲ್ಲ” ಎಂದು ಅಭಿಪ್ರಾಯಪಟ್ಟಿತು.

ವಿಚಾರಣೆಯ ಸಮಯದಲ್ಲಿ ನ್ಯಾಯಾಲಯವು, ಕಾವೇರಿ ಕಾಲಿಂಗ್‌ ಕಾರ್ಯಕ್ರಮವು ಸರ್ಕಾರಿ ಜಮೀನಿನಲ್ಲಿದೆ ಮತ್ತು ಇದು ಸರ್ಕಾರಿ ಯೋಜನೆಯಾಗಿದೆ ಎಂದು ಸಾರ್ವಜನಿಕರಿಂದ ಹಣವನ್ನು ಸಂಗ್ರಹಿಸಲಾಗಿದೆ ಎಂಬ ಎರಡು ವಿಷಯಗಳನ್ನು ಮಾತ್ರ ನಿರ್ಧರಿಸಬೇಕಾಗಿದೆ ಎಂದು ಸೂಚಿಸಿತು.

ಪ್ರಕರಣದ ಮುಂದಿನ ವಿಚಾರಣೆಯನ್ನು ನ್ಯಾಯಾಲಯವು ಸೆಪ್ಟೆಂಬರ್ 8 ರಂದು ಮುಂದೂಡಿದೆ.

ಈ ಮಧ್ಯೆ, ಇಶಾ ಪ್ರತಿಷ್ಠಾನವು ಪ್ರಸ್ತಾಪಿಸಿರುವ ‘ಕಾವೇರಿ ಕಾಲಿಂಗ್’ ಯೋಜನೆ ರಾಜ್ಯ ಸರ್ಕಾರದ ಯೋಜನೆಯಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿತ್ತು.

ದೂರುದಾರರಾದ ವಕೀಲ ಎ.ವಿ. ಅಮರನಾಥ್ ಅವರ ಅರ್ಜಿಯ ಪ್ರಕಾರ, ಇಶಾ ಫೌಂಡೇಶನ್ ಕಾವೇರಿಯ ಉಗಮ ಸ್ಥಳವಾದ ತಲಕಾವೆರಿಯಿಂದ ತಿರುವರೂರಿನವರೆಗೆ 639 ಕಿಲೋಮೀಟರ್ ವ್ಯಾಪ್ತಿಯ ಕಾವೇರಿ ನದಿ ತೀರದಲ್ಲಿ 253 ಕೋಟಿ ಮರದ ಸಸಿಗಳನ್ನು ನೆಡಲು ಯೋಜಿಸಿದೆ. ಇದಕ್ಕಾಗಿ ಸಾರ್ವಜನಿಕರಿಂದ ಒಂದು ಮರ ನೆಡುವಿಕೆಗೆ 42 ರೂ. ವನ್ನು ಫೌಂಡೇಶನ್ ಪಡೆಯುತ್ತಿದ್ದು, ಅಂದರೆ ಇದು ಒಟ್ಟು 10 ಸಾವಿರ ಕೋಟಿ ರೂಪಾಯಿಗಿಂತಲೂ ಹೆಚ್ಚು ಸಂಗ್ರಹಿಸುತ್ತಿದೆ. ಇದು ದೊಡ್ಡ ಹಗರಣವಾಗಿದೆ ಎಂದು ಅರ್ಜಿದಾರ ವಕೀಲ ಅಮರನಾಥ್ ದೂರಿದ್ದಾರೆ.


ಓದಿ: ’ಕಾವೇರಿ ಕೂಗು’ ಎಂಬುದು ರಾಜಕೀಯ, ಮೋಸ ಮತ್ತು ನಾಟಕ: ಜಗ್ಗಿ ವಾಸುದೇವ್ ನಡೆಗೆ ಪರಿಸರ ಕಾರ್ಯಕರ್ತರ ಆಕ್ಷೇಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...