Homeಮುಖಪುಟತಬ್ಲೀಘಿ ಜಮಾತ್‌ನ 36 ವಿದೇಶಿಗರೂ ದೋಷಮುಕ್ತ ಎಂದ ಹೈಕೋರ್ಟ್: ಬಿಜೆಪಿಗೆ ಮುಖಭಂಗ

ತಬ್ಲೀಘಿ ಜಮಾತ್‌ನ 36 ವಿದೇಶಿಗರೂ ದೋಷಮುಕ್ತ ಎಂದ ಹೈಕೋರ್ಟ್: ಬಿಜೆಪಿಗೆ ಮುಖಭಂಗ

ವೀಸಾ ಷರತ್ತುಗಳ ಉಲ್ಲಂಘನೆ ಹಾಗೂ ಸರಕಾರದ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸದೇ ಇರುವುದಕ್ಕೆ ದೆಹಲಿ ಪೊಲೀಸರು ಸುಮಾರು 955 ವಿದೇಶಿಗರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

- Advertisement -
- Advertisement -

ಕೊರೊನಾ ಸಾಂಕ್ರಾಮಿಕದ ನಡುವೆಯೂ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಮಾರ್ಚ್‌ನಲ್ಲಿ ದೆಹಲಿಯಲ್ಲಿ ನಡೆದ ತಬ್ಲೀಘಿ ಜಮಾತ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ಎಂಬ ಆರೋಪದಲ್ಲಿ ನೂರಾರು ವಿದೇಶಿಯರ ಮೇಲೆ ಪ್ರಕರಣ ದಾಖಲಿಸಿ ಚಾರ್ಜ್‌ಶೀಟ್ ಸಲ್ಲಿಸಲಾಗಿತ್ತು. ಇವರಲ್ಲಿ 36 ವಿದೇಶಿಯರು ವಿಚಾರಣೆ ಎದುರಿಸುತ್ತಿದ್ದರು. ಈಗ ದೆಹಲಿ ಹೈಕೋರ್ಟ್ ಇವರ ಮೇಲಿನ ಪ್ರಕರಣವನ್ನು ಖುಲಾಸೆಗೊಳಿಸಿ ದೋಷಮುಕ್ತರನ್ನಾಗಿಸಿದೆ.

ಈ ಕುರಿತು ಟ್ವೀಟ್ ಮಾಡಿರುವ ಲೈವ್ ಲಾ, “ಕೊರೊನಾ ಸಾಂಕ್ರಾಮಿಕ ರೋಗದ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ತಬ್ಲೀಘಿ ಜಮಾತ್ ಸಭೆಗೆ ಹಾಜರಾಗಿದ್ದ ಆರೋಪದಡಿ 36 ವಿದೇಶಿಯರನ್ನು ದೆಹಲಿ ನ್ಯಾಯಾಲಯ ಖುಲಾಸೆಗೊಳಿಸಿದೆ” ಎಂದು ವರದಿ ಮಾಡಿದೆ.

ಇದನ್ನೂ ಓದಿ: ತಿರುಪತಿ ವರ್ಸಸ್‌ ತಬ್ಲಿಘಿ: ಸಾಂಕ್ರಾಮಿಕದ ಕೋಮುವಾದೀಕರಣಕ್ಕೆ ಸ್ಪಷ್ಟ ಉದಾಹರಣೆ

 

ಇದನ್ನೂ ಓದಿ: ತಬ್ಲೀಘಿ ಜಮಾತ್ ಕ್ಷಮೆಯಾಚಿಸಿದರೆ ಭಾರತವನ್ನು ತೊರೆಯಬಹುದು: ಕೇಂದ್ರ

ಕಳೆದ ಮಾರ್ಚ್‌ನಲ್ಲಿ ನಿಝಾಮುದ್ದೀನ್ ಮರ್ಕಝ್ ಕೋವಿಡ್-19 ಹಾಟ್‌ಸ್ಪಾಟ್ ಆಗಿ ಹೊರಹೊಮ್ಮಿದ್ದಾಗ ಭಾರೀ ಸುದ್ದಿಯಾಗಿತ್ತು. ವೀಸಾ ಷರತ್ತುಗಳ ಉಲ್ಲಂಘನೆ ಹಾಗೂ ಸರಕಾರದ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸದೇ ಇರುವುದಕ್ಕೆ ದೆಹಲಿ ಪೊಲೀಸರು ಸುಮಾರು 955 ವಿದೇಶಿಗರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಬಹುಪಾಲು ವಿದೇಶಿ ತಬ್ಲೀಘಿ ಜಮಾತ್ ಸದಸ್ಯರು ಮನವಿಯ ಮೇರೆಗೆ ತಮ್ಮ ದೇಶಗಳಿಗೆ ಮರಳಿದ್ದರೆ, 44 ಮಂದಿ ದೆಹಲಿಯಲ್ಲಿ ವಿಚಾರಣೆ ಎದುರಿಸಲು ನಿರ್ಧರಿಸಿದ್ದರು. ಇವರ ಪೈಕಿ ಮೊದಲು 8 ಸದಸ್ಯರುಗಳನ್ನು ಬಿಡುಗಡೆ ಮಾಡಲಾಗಿತ್ತು. ಅವರ ವಿರುದ್ಧ ಯಾವುದೇ ಪ್ರಾಥಮಿಕ ಸಾಕ್ಷಧಾರಗಳಿರಲಿಲ್ಲ.

ಇದನ್ನೂ ಓದಿ: ತಬ್ಲಿಘಿಗಳ ಮೇಲೆ ಮತ್ತೊಂದು ಸುಳ್ಳು ಸುದ್ದಿ ಪ್ರಕಟಿಸಿ ಸಿಕ್ಕಿಬಿದ್ದ ಝೀ ನ್ಯೂಸ್‌!

ಇದೀಗ ಎಲ್ಲಾ ಸದಸ್ಯರ ಮೇಲಿನ ಪ್ರಕರಣವನ್ನು ಖುಲಾಸೆಗೊಳಿಸಿದೆ.

ಜುಲೈನಲ್ಲಿ ದೆಹಲಿಯ ನ್ಯಾಯಾಲಯವು ಈ ಕಾರ್ಯಕ್ರಮಕ್ಕೆ ಹಾಜರಾದ 82 ಬಾಂಗ್ಲಾದೇಶಿಗಳಿಗೆ ಜಾಮೀನು ನೀಡಿತ್ತು. ಮತ್ತೊಂದು ಸ್ಥಳೀಯ ನ್ಯಾಯಾಲಯವು ದಂಡ ಪಾವತಿಸಿದ ನಂತರ ಅರವತ್ತೆರಡು ಮಲೇಷಿಯನ್ನರು ಮತ್ತು 11 ಸೌದಿ ಅರೇಬಿಯನ್ನರನ್ನು ಬಿಡುಗಡೆ ಮಾಡಲಾಗಿದೆ.

ಕೇಂದ್ರವು ಜೂನ್‌ನಲ್ಲಿ 2,500 ಕ್ಕೂ ಹೆಚ್ಚು ತಬ್ಲೀಘಿ ಸದಸ್ಯರನ್ನು ಕಪ್ಪುಪಟ್ಟಿಗೆ ಸೇರಿಸಿ, 10 ವರ್ಷಗಳ ಕಾಲ ದೇಶಕ್ಕೆ ಪ್ರವೇಶಿಸುವುದನ್ನು ನಿಷೇಧಿಸಿತ್ತು.

ಇದನ್ನೂ ಓದಿ: ತಬ್ಲಿಘಿದು ಬೇಜವಾಬ್ದಾರಿ, ಸರ್ಕಾರದ್ದು ಹೊಣೆಗೇಡಿತನ : ಅದಕ್ಕಿಂತಲೂ ಭೀಕರ ಕಮ್ಯುನಲ್ ವೈರಸ್

ಮಾರ್ಚ್ 25 ರಂದು ಪ್ರಾರಂಭವಾದ ರಾಷ್ಟ್ರವ್ಯಾಪಿ ಲಾಕ್‌ಡೌನ್‌ನ ಆರಂಭಿಕ ವಾರಗಳಲ್ಲಿ ದೇಶಾದ್ಯಂತ  ಕೊರೊನಾ ವೈರಸ್ ಸೋಂಕು ಹರಡಿದ್ದಕ್ಕೆ ತಬ್ಲೀಘಿ ಜಮಾತ್ ಸಭೆಯನ್ನು ದೂಷಿಸಲಾಗಿತ್ತು.

ಈ ಸಭೆಯಲ್ಲಿ ಅನೇಕ ವಿದೇಶಿಯರು ಭಾಗವಹಿಸಿದ್ದರು. ತಬ್ಲೀಘಿ ಜಮಾತ್ ಸುನ್ನಿ ಮುಸ್ಲಿಂ ಪಂಥವಾಗಿದ್ದು, 80 ಕ್ಕೂ ಹೆಚ್ಚು ದೇಶಗಳಲ್ಲಿ ಅನುಯಾಯಿಗಳನ್ನು ಹೊಂದಿದೆ.


ಇದನ್ನೂ ಓದಿ: ಮತ್ತೇ 12 ತಬ್ಲೀಘಿಗಳನ್ನು ದೋಷಮುಕ್ತ ಗೊಳಿಸಿದ ನ್ಯಾಯಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...