Homeಕರ್ನಾಟಕಪೇಟ ಧರಿಸುವ ಸಿಖ್‌ ವಿದ್ಯಾರ್ಥಿಗಳಿಗೆ ಹೈಕೋರ್ಟ್ ಮಧ್ಯಂತರ ಆದೇಶ ಅನ್ವಯಿಸುವುದಿಲ್ಲ: ಬಿ.ಸಿ.ನಾಗೇಶ್

ಪೇಟ ಧರಿಸುವ ಸಿಖ್‌ ವಿದ್ಯಾರ್ಥಿಗಳಿಗೆ ಹೈಕೋರ್ಟ್ ಮಧ್ಯಂತರ ಆದೇಶ ಅನ್ವಯಿಸುವುದಿಲ್ಲ: ಬಿ.ಸಿ.ನಾಗೇಶ್

- Advertisement -
- Advertisement -

ಹಿಜಾಬ್‌ಗೆ ಸಂಬಂಧಿಸಿದ ಅರ್ಜಿಗಳ ವಿಚಾರಣೆಯ ಸಂದರ್ಭದಲ್ಲಿ ಹೈಕೋರ್ಟ್‌ ನೀಡಿರುವ ಮಧ್ಯಂತರ ಆದೇಶವು ಸಿಖ್ ಸಮುದಾಯದ ವಿದ್ಯಾರ್ಥಿಗಳಿಗೆ ಅನ್ವಯಿಸುವುದಿಲ್ಲ ಎಂದು ರಾಜ್ಯ ಸರ್ಕಾರ ಗುರುವಾರ ಸ್ಪಷ್ಟಪಡಿಸಿದೆ. ಬೆಂಗಳೂರಿನ ಮೌಂಟ್ ಕಾರ್ಮೆಲ್ ಕಾಲೇಜ್ ಹೈಕೋರ್ಟ್‌ನ ಮಧ್ಯಂತರ ಆದೇಶವನ್ನು ಅನುಸರಿಸುವ ಸಲುವಾಗಿ ಪೇಟವನ್ನು ತೆಗೆಯುವಂತೆ ಸಿಖ್ ವಿದ್ಯಾರ್ಥಿಗೆ ಕೇಳಿಕೊಂಡಿದ್ದಾರೆ ಎಂದು ವರದಿಯಾದ ನಂತರ ಸಿಖ್ ಸಮುದಾಯದ ವಿದ್ಯಾರ್ಥಿಗಳು ಪೇಟ ಧರಿಸುವ ಬಗ್ಗೆ ಪೋಷಕರು ಮತ್ತು ಶಿಕ್ಷಣ ವಲಯಗಳಲ್ಲಿ ವಿವಾದ ಎದ್ದಿತ್ತು.

ಈ ಬಗ್ಗೆ ಸ್ಪಷ್ಟನೆ ನೀಡಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, “ಪೇಟ ಧರಿಸುವುದು ಸಿಖ್ ಸಮುದಾಯದ ಸಾಂವಿಧಾನಿಕ ಹಕ್ಕು. ಹೈಕೋರ್ಟ್‌ನ ಮಧ್ಯಂತರ ಆದೇಶವು ಹಿಜಾಬ್, ಕೇಸರಿ ಶಾಲ್ ಮತ್ತು ಧಾರ್ಮಿಕ ಧ್ವಜಗಳನ್ನು ಧರಿಸುವುದಕ್ಕೆ ಮಾತ್ರ ಅನ್ವಯಿಸುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಟರ್ಬನ್‌ಗೂ ವಿರೋಧ ಆರಂಭ: ಮೌಂಟ್ ಕಾರ್ಮೆಲ್ ಕಾಲೇಜಿನಲ್ಲಿ ಟರ್ಬನ್ ತೆಗೆಯುವಂತೆ ಸಿಖ್ ವಿದ್ಯಾರ್ಥಿನಿಗೆ ಒತ್ತಡ

“ಸಂವಿಧಾನವು ಸಿಖ್ ಸಮುದಾಯದ ಜನರಿಗೆ ಪೇಟ ಧರಿಸಲು ಹಕ್ಕನ್ನು ನೀಡಿದೆ. ಹಿಜಾಬ್ ಧರಿಸುವುದರ ಮೇಲಿನ ಅರ್ಜಿಗಳಿಗೆ ಸಂಬಂಧಿಸಿದಂತೆ ಹೈಕೋರ್ಟ್‌ ನೀಡಿರುವ ಮಧ್ಯಂತರ ಆದೇಶವು ಸಿಖ್ ಸಮುದಾಯದ ವಿದ್ಯಾರ್ಥಿಗಳಿಗೆ ಅನ್ವಯಿಸುವುದಿಲ್ಲ” ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

ಈ ಮಧ್ಯೆ, ಮೌಂಟ್ ಕಾರ್ಮೆಲ್ ಪಿಯು ಕಾಲೇಜಿನ ಆಡಳಿತ ಪ್ರತಿನಿಧಿಗಳು ಸಿಖ್ ಸಮುದಾಯದ ಹುಡುಗಿಗೆ ಪೇಟವನ್ನು ತೆಗೆಯುವಂತೆ ಕೇಳಿದ್ದಾರೆ ಎಂಬ ವರದಿಗಳನ್ನು ನಿರಾಕರಿಸಿದ್ದಾರೆ. ಒಂದು ನಿರ್ದಿಷ್ಟ ದಿನದಂದು ಪೇಟವಿಲ್ಲದೆಯೇ ಕಾಲೇಜಿಗೆ ಬಂದಿದ್ದಕ್ಕೆ, ಟರ್ಬನ್ ಇಲ್ಲದೆ ತರಗತಿಗಳಿಗೆ ಹಾಜರಾಗಲು ‘ಸಾಧ್ಯವೆ’ ಎಂದು ಹುಡುಗಿಯನ್ನು ಕೇಳಿದ್ದೇವೆ ಎಂದು ಕಾಲೇಜು ಅಧಿಕಾರಿಗಳು ಹೇಳಿದ್ದಾರೆ ಡಕ್ಕನ್‌ ಹೆರಾಲ್ಡ್‌‌ ವರದಿ ಮಾಡಿದೆ.

ಈ ಕುರಿತು ಡೆಕ್ಕನ್‌ ಹೆರಾಲ್ಡ್‌ಗೆ ಸ್ಪಷ್ಟನೆ ನೀಡಿರುವ ಕಾಲೇಜಿನ ಆಡಳಿತಾಧಿಕಾರಿ ಡಾ.ಎಸ್.ಆರ್.ಎಂ.ಜೆನೆವೀವ್, “ಬಾಲಕಿಯನ್ನು ಪೇಟ ತೆಗೆಯುವಂತೆ ಒತ್ತಾಯಿಸಿಲ್ಲ ಅಥವಾ ಪೇಟ ಧರಿಸದಂತೆ ನಿರ್ಬಂಧ ಹೇರಿಲ್ಲ. ಇತರ ಕೆಲವು ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಪೇಟದ ಬಗ್ಗೆ ಆಕ್ಷೇಪಣೆಗಳನ್ನು ವ್ಯಕ್ತಪಡಿಸಿದ್ದರು. ಹೀಗಾಗಿ ಕೆಲವು ದಿನಗಳ ಹಿಂದೆ, ಪೇಟವನ್ನು ಧರಿಸದೆ ಕಾಲೇಜಿಗೆ ಬಂದಂತೆ ಟರ್ಬನ್ ಇಲ್ಲದೆ ತರಗತಿಗೆ ಹಾಜರಾಗಲು ಸಾಧ್ಯವೇ ಎಂದು ನಾವು ವಿದ್ಯಾರ್ಥಿಯನ್ನು ಕೇಳಿದ್ದೆವು. ಪೇಟವನ್ನು ತೆಗೆಯುವಂತೆ ನಾವು ಹುಡುಗಿಗೆ ಹೇಳಿಲ್ಲ ಅಥವಾ ಒತ್ತಾಯಿಸಲಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಟರ್ಬನ್ ಆಯ್ಕೆಯಾಗಿರಬಹುದಾದರೆ, ಹಿಜಾಬ್ ಏಕೆ ಆಗಬಾರದು?: ನಟಿ ಸೋನಮ್ ಕಪೂರ್ ಪ್ರಶ್ನೆ 

ಈ ಬಗ್ಗೆ ಪ್ರತಿಕ್ರಿಯಿಸಿರುವ ವಿದ್ಯಾರ್ಥಿನಿಯ ಪೋಷಕರಾದ ಗುರುಚರಣ್ ಸಿಂಗ್, “ಕಾಲೇಜು ನಮ್ಮ ಮಗಳಿಗೆ ಪೇಟವನ್ನು ತೆಗೆಯುವಂತೆ ಒತ್ತಾಯಿಸಿಲ್ಲ. ಅವರು ಅದನ್ನು ಧರಿಸಲು ಅವಕಾಶ ಮಾಡಿಕೊಟ್ಟಿರುವುದು ನಿಜ. ಆದರೆ ಇತ್ತೀಚೆಗೆ ಆಕೆಯನ್ನು ಪ್ರತ್ಯೇಕವಾಗಿ ಕರೆದು ತರಗತಿಯಲ್ಲಿನ ಪೇಟವನ್ನು ತೆಗೆಯಬಹುದೇ ಎಂದು ಕೇಳಲಾಯಿತು”.

“ನಂತರ, ನಾನು ಪ್ರಾಂಶುಪಾಲರಿಗೆ ಇಮೇಲ್ ಬರೆದೆ. ಒಂದು ವಾರ ಕಾಲ ಕಾಲೇಜಿನಿಂದ ಯಾವುದೇ ಪ್ರತಿಕ್ರಿಯೆ ಬರಲಿಲ್ಲ. ಆದರೆ ನಂತರ, ಕಾಲೇಜು ಅಧಿಕಾರಿಗಳು ನನ್ನೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದು, ಪೇಟವನ್ನು ಧರಿಸುವುದು ನಮ್ಮ ಸಂವಿಧಾನದ ಹಕ್ಕು ಎಂದು ನಾನು ಅವರಿಗೆ ವಿವರಿಸಿದ್ದೇನೆ” ಎಂದು ಅವರು ಡೆಕ್ಕನ್‌ ಹೆರಾಲ್ಡ್‌ ತಿಳಿಸಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿರುವ ಸಾಮಾಜಿಕ ಕಾರ್ಯಕರ್ತರೊಬ್ಬರು, “ಮಧ್ಯಂತರ ಆದೇಶವನ್ನು ತಪ್ಪಾಗಿ ವ್ಯಾಖ್ಯಾನಿಸಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಮತ್ತು ಶಿಕ್ಷಕಿಯರಿಗೆ ಕಿರುಕುಳ ನೀಡಿರುವುದರಲ್ಲಿ ಸಚಿವ ಬಿಸಿ ನಾಗೇಶ್‌ ಮತ್ತು ಇಡೀ ರಾಜ್ಯ ಸರ್ಕಾರದ ಪಾಲಿದೆ. ಸಿಖ್‌ ವಿದ್ಯಾರ್ಥಿಗಳಿಗೆ ಪೇಟ ಹೇಗೆ ಧಾರ್ಮಿಕ ಆಚರಣೆಯೊ, ಹಿಜಾಬ್ ಕೂಡಾ ಮುಸ್ಲಿಮರಿಗೆ ಧಾರ್ಮಿಕ ಆಚರಣೆ. ಆದರೆ ಕೇಸರಿ ಶಾಲು ದ್ವೇಷ ಮತ್ತು ಅಸಹಿಷ್ಟುತೆಯ ಆಚರಣೆ. ಇದನ್ನು ಅರ್ಥ ಮಾಡಕೊಳ್ಳದೆ, ಸಣ್ಣ ವಿಚಾರವನ್ನು ದೇಶದ ಸಮಸ್ಯೆಯಾಗಿಸಿ, ರಾಜ್ಯದ ಮೂಲಭೂತ ಸಮಸ್ಯೆಯನ್ನು ಸರ್ಕಾರ ಅಡಗಿಸಿಡಲು ಪ್ರಯತ್ನಿಸುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮುಸ್ಲಿಂ ವಿದ್ಯಾರ್ಥಿನಿಯರ ಪರ ವಾದಿಸುತ್ತಿರುವ ವಕೀಲರನ್ನು ಟೀಕಿಸುವುದು ತಪ್ಪು: ರಾಮಕೃಷ್ಣ ಆಶ್ರಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸಿಖ್ ಜನಾಂಗಕ್ಕೆ ಇದ್ದಂತಹ ಸಂವಿಧಾನ ಮುಸ್ಲಿಂ ಜನಾಂಗಕ್ಕೆ ಅನ್ವಯಿಸುವುದಿಲ್ಲವೇ ಶ್ರೀಯುತ. ನಾಗೇಶ್ ರವರೇ….

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...