Homeಕರ್ನಾಟಕಪೇಟ ಧರಿಸುವ ಸಿಖ್‌ ವಿದ್ಯಾರ್ಥಿಗಳಿಗೆ ಹೈಕೋರ್ಟ್ ಮಧ್ಯಂತರ ಆದೇಶ ಅನ್ವಯಿಸುವುದಿಲ್ಲ: ಬಿ.ಸಿ.ನಾಗೇಶ್

ಪೇಟ ಧರಿಸುವ ಸಿಖ್‌ ವಿದ್ಯಾರ್ಥಿಗಳಿಗೆ ಹೈಕೋರ್ಟ್ ಮಧ್ಯಂತರ ಆದೇಶ ಅನ್ವಯಿಸುವುದಿಲ್ಲ: ಬಿ.ಸಿ.ನಾಗೇಶ್

- Advertisement -
- Advertisement -

ಹಿಜಾಬ್‌ಗೆ ಸಂಬಂಧಿಸಿದ ಅರ್ಜಿಗಳ ವಿಚಾರಣೆಯ ಸಂದರ್ಭದಲ್ಲಿ ಹೈಕೋರ್ಟ್‌ ನೀಡಿರುವ ಮಧ್ಯಂತರ ಆದೇಶವು ಸಿಖ್ ಸಮುದಾಯದ ವಿದ್ಯಾರ್ಥಿಗಳಿಗೆ ಅನ್ವಯಿಸುವುದಿಲ್ಲ ಎಂದು ರಾಜ್ಯ ಸರ್ಕಾರ ಗುರುವಾರ ಸ್ಪಷ್ಟಪಡಿಸಿದೆ. ಬೆಂಗಳೂರಿನ ಮೌಂಟ್ ಕಾರ್ಮೆಲ್ ಕಾಲೇಜ್ ಹೈಕೋರ್ಟ್‌ನ ಮಧ್ಯಂತರ ಆದೇಶವನ್ನು ಅನುಸರಿಸುವ ಸಲುವಾಗಿ ಪೇಟವನ್ನು ತೆಗೆಯುವಂತೆ ಸಿಖ್ ವಿದ್ಯಾರ್ಥಿಗೆ ಕೇಳಿಕೊಂಡಿದ್ದಾರೆ ಎಂದು ವರದಿಯಾದ ನಂತರ ಸಿಖ್ ಸಮುದಾಯದ ವಿದ್ಯಾರ್ಥಿಗಳು ಪೇಟ ಧರಿಸುವ ಬಗ್ಗೆ ಪೋಷಕರು ಮತ್ತು ಶಿಕ್ಷಣ ವಲಯಗಳಲ್ಲಿ ವಿವಾದ ಎದ್ದಿತ್ತು.

ಈ ಬಗ್ಗೆ ಸ್ಪಷ್ಟನೆ ನೀಡಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, “ಪೇಟ ಧರಿಸುವುದು ಸಿಖ್ ಸಮುದಾಯದ ಸಾಂವಿಧಾನಿಕ ಹಕ್ಕು. ಹೈಕೋರ್ಟ್‌ನ ಮಧ್ಯಂತರ ಆದೇಶವು ಹಿಜಾಬ್, ಕೇಸರಿ ಶಾಲ್ ಮತ್ತು ಧಾರ್ಮಿಕ ಧ್ವಜಗಳನ್ನು ಧರಿಸುವುದಕ್ಕೆ ಮಾತ್ರ ಅನ್ವಯಿಸುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಟರ್ಬನ್‌ಗೂ ವಿರೋಧ ಆರಂಭ: ಮೌಂಟ್ ಕಾರ್ಮೆಲ್ ಕಾಲೇಜಿನಲ್ಲಿ ಟರ್ಬನ್ ತೆಗೆಯುವಂತೆ ಸಿಖ್ ವಿದ್ಯಾರ್ಥಿನಿಗೆ ಒತ್ತಡ

“ಸಂವಿಧಾನವು ಸಿಖ್ ಸಮುದಾಯದ ಜನರಿಗೆ ಪೇಟ ಧರಿಸಲು ಹಕ್ಕನ್ನು ನೀಡಿದೆ. ಹಿಜಾಬ್ ಧರಿಸುವುದರ ಮೇಲಿನ ಅರ್ಜಿಗಳಿಗೆ ಸಂಬಂಧಿಸಿದಂತೆ ಹೈಕೋರ್ಟ್‌ ನೀಡಿರುವ ಮಧ್ಯಂತರ ಆದೇಶವು ಸಿಖ್ ಸಮುದಾಯದ ವಿದ್ಯಾರ್ಥಿಗಳಿಗೆ ಅನ್ವಯಿಸುವುದಿಲ್ಲ” ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

ಈ ಮಧ್ಯೆ, ಮೌಂಟ್ ಕಾರ್ಮೆಲ್ ಪಿಯು ಕಾಲೇಜಿನ ಆಡಳಿತ ಪ್ರತಿನಿಧಿಗಳು ಸಿಖ್ ಸಮುದಾಯದ ಹುಡುಗಿಗೆ ಪೇಟವನ್ನು ತೆಗೆಯುವಂತೆ ಕೇಳಿದ್ದಾರೆ ಎಂಬ ವರದಿಗಳನ್ನು ನಿರಾಕರಿಸಿದ್ದಾರೆ. ಒಂದು ನಿರ್ದಿಷ್ಟ ದಿನದಂದು ಪೇಟವಿಲ್ಲದೆಯೇ ಕಾಲೇಜಿಗೆ ಬಂದಿದ್ದಕ್ಕೆ, ಟರ್ಬನ್ ಇಲ್ಲದೆ ತರಗತಿಗಳಿಗೆ ಹಾಜರಾಗಲು ‘ಸಾಧ್ಯವೆ’ ಎಂದು ಹುಡುಗಿಯನ್ನು ಕೇಳಿದ್ದೇವೆ ಎಂದು ಕಾಲೇಜು ಅಧಿಕಾರಿಗಳು ಹೇಳಿದ್ದಾರೆ ಡಕ್ಕನ್‌ ಹೆರಾಲ್ಡ್‌‌ ವರದಿ ಮಾಡಿದೆ.

ಈ ಕುರಿತು ಡೆಕ್ಕನ್‌ ಹೆರಾಲ್ಡ್‌ಗೆ ಸ್ಪಷ್ಟನೆ ನೀಡಿರುವ ಕಾಲೇಜಿನ ಆಡಳಿತಾಧಿಕಾರಿ ಡಾ.ಎಸ್.ಆರ್.ಎಂ.ಜೆನೆವೀವ್, “ಬಾಲಕಿಯನ್ನು ಪೇಟ ತೆಗೆಯುವಂತೆ ಒತ್ತಾಯಿಸಿಲ್ಲ ಅಥವಾ ಪೇಟ ಧರಿಸದಂತೆ ನಿರ್ಬಂಧ ಹೇರಿಲ್ಲ. ಇತರ ಕೆಲವು ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಪೇಟದ ಬಗ್ಗೆ ಆಕ್ಷೇಪಣೆಗಳನ್ನು ವ್ಯಕ್ತಪಡಿಸಿದ್ದರು. ಹೀಗಾಗಿ ಕೆಲವು ದಿನಗಳ ಹಿಂದೆ, ಪೇಟವನ್ನು ಧರಿಸದೆ ಕಾಲೇಜಿಗೆ ಬಂದಂತೆ ಟರ್ಬನ್ ಇಲ್ಲದೆ ತರಗತಿಗೆ ಹಾಜರಾಗಲು ಸಾಧ್ಯವೇ ಎಂದು ನಾವು ವಿದ್ಯಾರ್ಥಿಯನ್ನು ಕೇಳಿದ್ದೆವು. ಪೇಟವನ್ನು ತೆಗೆಯುವಂತೆ ನಾವು ಹುಡುಗಿಗೆ ಹೇಳಿಲ್ಲ ಅಥವಾ ಒತ್ತಾಯಿಸಲಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಟರ್ಬನ್ ಆಯ್ಕೆಯಾಗಿರಬಹುದಾದರೆ, ಹಿಜಾಬ್ ಏಕೆ ಆಗಬಾರದು?: ನಟಿ ಸೋನಮ್ ಕಪೂರ್ ಪ್ರಶ್ನೆ 

ಈ ಬಗ್ಗೆ ಪ್ರತಿಕ್ರಿಯಿಸಿರುವ ವಿದ್ಯಾರ್ಥಿನಿಯ ಪೋಷಕರಾದ ಗುರುಚರಣ್ ಸಿಂಗ್, “ಕಾಲೇಜು ನಮ್ಮ ಮಗಳಿಗೆ ಪೇಟವನ್ನು ತೆಗೆಯುವಂತೆ ಒತ್ತಾಯಿಸಿಲ್ಲ. ಅವರು ಅದನ್ನು ಧರಿಸಲು ಅವಕಾಶ ಮಾಡಿಕೊಟ್ಟಿರುವುದು ನಿಜ. ಆದರೆ ಇತ್ತೀಚೆಗೆ ಆಕೆಯನ್ನು ಪ್ರತ್ಯೇಕವಾಗಿ ಕರೆದು ತರಗತಿಯಲ್ಲಿನ ಪೇಟವನ್ನು ತೆಗೆಯಬಹುದೇ ಎಂದು ಕೇಳಲಾಯಿತು”.

“ನಂತರ, ನಾನು ಪ್ರಾಂಶುಪಾಲರಿಗೆ ಇಮೇಲ್ ಬರೆದೆ. ಒಂದು ವಾರ ಕಾಲ ಕಾಲೇಜಿನಿಂದ ಯಾವುದೇ ಪ್ರತಿಕ್ರಿಯೆ ಬರಲಿಲ್ಲ. ಆದರೆ ನಂತರ, ಕಾಲೇಜು ಅಧಿಕಾರಿಗಳು ನನ್ನೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದು, ಪೇಟವನ್ನು ಧರಿಸುವುದು ನಮ್ಮ ಸಂವಿಧಾನದ ಹಕ್ಕು ಎಂದು ನಾನು ಅವರಿಗೆ ವಿವರಿಸಿದ್ದೇನೆ” ಎಂದು ಅವರು ಡೆಕ್ಕನ್‌ ಹೆರಾಲ್ಡ್‌ ತಿಳಿಸಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿರುವ ಸಾಮಾಜಿಕ ಕಾರ್ಯಕರ್ತರೊಬ್ಬರು, “ಮಧ್ಯಂತರ ಆದೇಶವನ್ನು ತಪ್ಪಾಗಿ ವ್ಯಾಖ್ಯಾನಿಸಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಮತ್ತು ಶಿಕ್ಷಕಿಯರಿಗೆ ಕಿರುಕುಳ ನೀಡಿರುವುದರಲ್ಲಿ ಸಚಿವ ಬಿಸಿ ನಾಗೇಶ್‌ ಮತ್ತು ಇಡೀ ರಾಜ್ಯ ಸರ್ಕಾರದ ಪಾಲಿದೆ. ಸಿಖ್‌ ವಿದ್ಯಾರ್ಥಿಗಳಿಗೆ ಪೇಟ ಹೇಗೆ ಧಾರ್ಮಿಕ ಆಚರಣೆಯೊ, ಹಿಜಾಬ್ ಕೂಡಾ ಮುಸ್ಲಿಮರಿಗೆ ಧಾರ್ಮಿಕ ಆಚರಣೆ. ಆದರೆ ಕೇಸರಿ ಶಾಲು ದ್ವೇಷ ಮತ್ತು ಅಸಹಿಷ್ಟುತೆಯ ಆಚರಣೆ. ಇದನ್ನು ಅರ್ಥ ಮಾಡಕೊಳ್ಳದೆ, ಸಣ್ಣ ವಿಚಾರವನ್ನು ದೇಶದ ಸಮಸ್ಯೆಯಾಗಿಸಿ, ರಾಜ್ಯದ ಮೂಲಭೂತ ಸಮಸ್ಯೆಯನ್ನು ಸರ್ಕಾರ ಅಡಗಿಸಿಡಲು ಪ್ರಯತ್ನಿಸುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮುಸ್ಲಿಂ ವಿದ್ಯಾರ್ಥಿನಿಯರ ಪರ ವಾದಿಸುತ್ತಿರುವ ವಕೀಲರನ್ನು ಟೀಕಿಸುವುದು ತಪ್ಪು: ರಾಮಕೃಷ್ಣ ಆಶ್ರಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸಿಖ್ ಜನಾಂಗಕ್ಕೆ ಇದ್ದಂತಹ ಸಂವಿಧಾನ ಮುಸ್ಲಿಂ ಜನಾಂಗಕ್ಕೆ ಅನ್ವಯಿಸುವುದಿಲ್ಲವೇ ಶ್ರೀಯುತ. ನಾಗೇಶ್ ರವರೇ….

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...