Homeಕರ್ನಾಟಕಪೇಟ ಧರಿಸುವ ಸಿಖ್‌ ವಿದ್ಯಾರ್ಥಿಗಳಿಗೆ ಹೈಕೋರ್ಟ್ ಮಧ್ಯಂತರ ಆದೇಶ ಅನ್ವಯಿಸುವುದಿಲ್ಲ: ಬಿ.ಸಿ.ನಾಗೇಶ್

ಪೇಟ ಧರಿಸುವ ಸಿಖ್‌ ವಿದ್ಯಾರ್ಥಿಗಳಿಗೆ ಹೈಕೋರ್ಟ್ ಮಧ್ಯಂತರ ಆದೇಶ ಅನ್ವಯಿಸುವುದಿಲ್ಲ: ಬಿ.ಸಿ.ನಾಗೇಶ್

- Advertisement -
- Advertisement -

ಹಿಜಾಬ್‌ಗೆ ಸಂಬಂಧಿಸಿದ ಅರ್ಜಿಗಳ ವಿಚಾರಣೆಯ ಸಂದರ್ಭದಲ್ಲಿ ಹೈಕೋರ್ಟ್‌ ನೀಡಿರುವ ಮಧ್ಯಂತರ ಆದೇಶವು ಸಿಖ್ ಸಮುದಾಯದ ವಿದ್ಯಾರ್ಥಿಗಳಿಗೆ ಅನ್ವಯಿಸುವುದಿಲ್ಲ ಎಂದು ರಾಜ್ಯ ಸರ್ಕಾರ ಗುರುವಾರ ಸ್ಪಷ್ಟಪಡಿಸಿದೆ. ಬೆಂಗಳೂರಿನ ಮೌಂಟ್ ಕಾರ್ಮೆಲ್ ಕಾಲೇಜ್ ಹೈಕೋರ್ಟ್‌ನ ಮಧ್ಯಂತರ ಆದೇಶವನ್ನು ಅನುಸರಿಸುವ ಸಲುವಾಗಿ ಪೇಟವನ್ನು ತೆಗೆಯುವಂತೆ ಸಿಖ್ ವಿದ್ಯಾರ್ಥಿಗೆ ಕೇಳಿಕೊಂಡಿದ್ದಾರೆ ಎಂದು ವರದಿಯಾದ ನಂತರ ಸಿಖ್ ಸಮುದಾಯದ ವಿದ್ಯಾರ್ಥಿಗಳು ಪೇಟ ಧರಿಸುವ ಬಗ್ಗೆ ಪೋಷಕರು ಮತ್ತು ಶಿಕ್ಷಣ ವಲಯಗಳಲ್ಲಿ ವಿವಾದ ಎದ್ದಿತ್ತು.

ಈ ಬಗ್ಗೆ ಸ್ಪಷ್ಟನೆ ನೀಡಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, “ಪೇಟ ಧರಿಸುವುದು ಸಿಖ್ ಸಮುದಾಯದ ಸಾಂವಿಧಾನಿಕ ಹಕ್ಕು. ಹೈಕೋರ್ಟ್‌ನ ಮಧ್ಯಂತರ ಆದೇಶವು ಹಿಜಾಬ್, ಕೇಸರಿ ಶಾಲ್ ಮತ್ತು ಧಾರ್ಮಿಕ ಧ್ವಜಗಳನ್ನು ಧರಿಸುವುದಕ್ಕೆ ಮಾತ್ರ ಅನ್ವಯಿಸುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಟರ್ಬನ್‌ಗೂ ವಿರೋಧ ಆರಂಭ: ಮೌಂಟ್ ಕಾರ್ಮೆಲ್ ಕಾಲೇಜಿನಲ್ಲಿ ಟರ್ಬನ್ ತೆಗೆಯುವಂತೆ ಸಿಖ್ ವಿದ್ಯಾರ್ಥಿನಿಗೆ ಒತ್ತಡ

“ಸಂವಿಧಾನವು ಸಿಖ್ ಸಮುದಾಯದ ಜನರಿಗೆ ಪೇಟ ಧರಿಸಲು ಹಕ್ಕನ್ನು ನೀಡಿದೆ. ಹಿಜಾಬ್ ಧರಿಸುವುದರ ಮೇಲಿನ ಅರ್ಜಿಗಳಿಗೆ ಸಂಬಂಧಿಸಿದಂತೆ ಹೈಕೋರ್ಟ್‌ ನೀಡಿರುವ ಮಧ್ಯಂತರ ಆದೇಶವು ಸಿಖ್ ಸಮುದಾಯದ ವಿದ್ಯಾರ್ಥಿಗಳಿಗೆ ಅನ್ವಯಿಸುವುದಿಲ್ಲ” ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

ಈ ಮಧ್ಯೆ, ಮೌಂಟ್ ಕಾರ್ಮೆಲ್ ಪಿಯು ಕಾಲೇಜಿನ ಆಡಳಿತ ಪ್ರತಿನಿಧಿಗಳು ಸಿಖ್ ಸಮುದಾಯದ ಹುಡುಗಿಗೆ ಪೇಟವನ್ನು ತೆಗೆಯುವಂತೆ ಕೇಳಿದ್ದಾರೆ ಎಂಬ ವರದಿಗಳನ್ನು ನಿರಾಕರಿಸಿದ್ದಾರೆ. ಒಂದು ನಿರ್ದಿಷ್ಟ ದಿನದಂದು ಪೇಟವಿಲ್ಲದೆಯೇ ಕಾಲೇಜಿಗೆ ಬಂದಿದ್ದಕ್ಕೆ, ಟರ್ಬನ್ ಇಲ್ಲದೆ ತರಗತಿಗಳಿಗೆ ಹಾಜರಾಗಲು ‘ಸಾಧ್ಯವೆ’ ಎಂದು ಹುಡುಗಿಯನ್ನು ಕೇಳಿದ್ದೇವೆ ಎಂದು ಕಾಲೇಜು ಅಧಿಕಾರಿಗಳು ಹೇಳಿದ್ದಾರೆ ಡಕ್ಕನ್‌ ಹೆರಾಲ್ಡ್‌‌ ವರದಿ ಮಾಡಿದೆ.

ಈ ಕುರಿತು ಡೆಕ್ಕನ್‌ ಹೆರಾಲ್ಡ್‌ಗೆ ಸ್ಪಷ್ಟನೆ ನೀಡಿರುವ ಕಾಲೇಜಿನ ಆಡಳಿತಾಧಿಕಾರಿ ಡಾ.ಎಸ್.ಆರ್.ಎಂ.ಜೆನೆವೀವ್, “ಬಾಲಕಿಯನ್ನು ಪೇಟ ತೆಗೆಯುವಂತೆ ಒತ್ತಾಯಿಸಿಲ್ಲ ಅಥವಾ ಪೇಟ ಧರಿಸದಂತೆ ನಿರ್ಬಂಧ ಹೇರಿಲ್ಲ. ಇತರ ಕೆಲವು ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಪೇಟದ ಬಗ್ಗೆ ಆಕ್ಷೇಪಣೆಗಳನ್ನು ವ್ಯಕ್ತಪಡಿಸಿದ್ದರು. ಹೀಗಾಗಿ ಕೆಲವು ದಿನಗಳ ಹಿಂದೆ, ಪೇಟವನ್ನು ಧರಿಸದೆ ಕಾಲೇಜಿಗೆ ಬಂದಂತೆ ಟರ್ಬನ್ ಇಲ್ಲದೆ ತರಗತಿಗೆ ಹಾಜರಾಗಲು ಸಾಧ್ಯವೇ ಎಂದು ನಾವು ವಿದ್ಯಾರ್ಥಿಯನ್ನು ಕೇಳಿದ್ದೆವು. ಪೇಟವನ್ನು ತೆಗೆಯುವಂತೆ ನಾವು ಹುಡುಗಿಗೆ ಹೇಳಿಲ್ಲ ಅಥವಾ ಒತ್ತಾಯಿಸಲಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಟರ್ಬನ್ ಆಯ್ಕೆಯಾಗಿರಬಹುದಾದರೆ, ಹಿಜಾಬ್ ಏಕೆ ಆಗಬಾರದು?: ನಟಿ ಸೋನಮ್ ಕಪೂರ್ ಪ್ರಶ್ನೆ 

ಈ ಬಗ್ಗೆ ಪ್ರತಿಕ್ರಿಯಿಸಿರುವ ವಿದ್ಯಾರ್ಥಿನಿಯ ಪೋಷಕರಾದ ಗುರುಚರಣ್ ಸಿಂಗ್, “ಕಾಲೇಜು ನಮ್ಮ ಮಗಳಿಗೆ ಪೇಟವನ್ನು ತೆಗೆಯುವಂತೆ ಒತ್ತಾಯಿಸಿಲ್ಲ. ಅವರು ಅದನ್ನು ಧರಿಸಲು ಅವಕಾಶ ಮಾಡಿಕೊಟ್ಟಿರುವುದು ನಿಜ. ಆದರೆ ಇತ್ತೀಚೆಗೆ ಆಕೆಯನ್ನು ಪ್ರತ್ಯೇಕವಾಗಿ ಕರೆದು ತರಗತಿಯಲ್ಲಿನ ಪೇಟವನ್ನು ತೆಗೆಯಬಹುದೇ ಎಂದು ಕೇಳಲಾಯಿತು”.

“ನಂತರ, ನಾನು ಪ್ರಾಂಶುಪಾಲರಿಗೆ ಇಮೇಲ್ ಬರೆದೆ. ಒಂದು ವಾರ ಕಾಲ ಕಾಲೇಜಿನಿಂದ ಯಾವುದೇ ಪ್ರತಿಕ್ರಿಯೆ ಬರಲಿಲ್ಲ. ಆದರೆ ನಂತರ, ಕಾಲೇಜು ಅಧಿಕಾರಿಗಳು ನನ್ನೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದು, ಪೇಟವನ್ನು ಧರಿಸುವುದು ನಮ್ಮ ಸಂವಿಧಾನದ ಹಕ್ಕು ಎಂದು ನಾನು ಅವರಿಗೆ ವಿವರಿಸಿದ್ದೇನೆ” ಎಂದು ಅವರು ಡೆಕ್ಕನ್‌ ಹೆರಾಲ್ಡ್‌ ತಿಳಿಸಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿರುವ ಸಾಮಾಜಿಕ ಕಾರ್ಯಕರ್ತರೊಬ್ಬರು, “ಮಧ್ಯಂತರ ಆದೇಶವನ್ನು ತಪ್ಪಾಗಿ ವ್ಯಾಖ್ಯಾನಿಸಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಮತ್ತು ಶಿಕ್ಷಕಿಯರಿಗೆ ಕಿರುಕುಳ ನೀಡಿರುವುದರಲ್ಲಿ ಸಚಿವ ಬಿಸಿ ನಾಗೇಶ್‌ ಮತ್ತು ಇಡೀ ರಾಜ್ಯ ಸರ್ಕಾರದ ಪಾಲಿದೆ. ಸಿಖ್‌ ವಿದ್ಯಾರ್ಥಿಗಳಿಗೆ ಪೇಟ ಹೇಗೆ ಧಾರ್ಮಿಕ ಆಚರಣೆಯೊ, ಹಿಜಾಬ್ ಕೂಡಾ ಮುಸ್ಲಿಮರಿಗೆ ಧಾರ್ಮಿಕ ಆಚರಣೆ. ಆದರೆ ಕೇಸರಿ ಶಾಲು ದ್ವೇಷ ಮತ್ತು ಅಸಹಿಷ್ಟುತೆಯ ಆಚರಣೆ. ಇದನ್ನು ಅರ್ಥ ಮಾಡಕೊಳ್ಳದೆ, ಸಣ್ಣ ವಿಚಾರವನ್ನು ದೇಶದ ಸಮಸ್ಯೆಯಾಗಿಸಿ, ರಾಜ್ಯದ ಮೂಲಭೂತ ಸಮಸ್ಯೆಯನ್ನು ಸರ್ಕಾರ ಅಡಗಿಸಿಡಲು ಪ್ರಯತ್ನಿಸುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮುಸ್ಲಿಂ ವಿದ್ಯಾರ್ಥಿನಿಯರ ಪರ ವಾದಿಸುತ್ತಿರುವ ವಕೀಲರನ್ನು ಟೀಕಿಸುವುದು ತಪ್ಪು: ರಾಮಕೃಷ್ಣ ಆಶ್ರಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸಿಖ್ ಜನಾಂಗಕ್ಕೆ ಇದ್ದಂತಹ ಸಂವಿಧಾನ ಮುಸ್ಲಿಂ ಜನಾಂಗಕ್ಕೆ ಅನ್ವಯಿಸುವುದಿಲ್ಲವೇ ಶ್ರೀಯುತ. ನಾಗೇಶ್ ರವರೇ….

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...