Homeಕರ್ನಾಟಕಪೇಟ ಧರಿಸುವ ಸಿಖ್‌ ವಿದ್ಯಾರ್ಥಿಗಳಿಗೆ ಹೈಕೋರ್ಟ್ ಮಧ್ಯಂತರ ಆದೇಶ ಅನ್ವಯಿಸುವುದಿಲ್ಲ: ಬಿ.ಸಿ.ನಾಗೇಶ್

ಪೇಟ ಧರಿಸುವ ಸಿಖ್‌ ವಿದ್ಯಾರ್ಥಿಗಳಿಗೆ ಹೈಕೋರ್ಟ್ ಮಧ್ಯಂತರ ಆದೇಶ ಅನ್ವಯಿಸುವುದಿಲ್ಲ: ಬಿ.ಸಿ.ನಾಗೇಶ್

- Advertisement -
- Advertisement -

ಹಿಜಾಬ್‌ಗೆ ಸಂಬಂಧಿಸಿದ ಅರ್ಜಿಗಳ ವಿಚಾರಣೆಯ ಸಂದರ್ಭದಲ್ಲಿ ಹೈಕೋರ್ಟ್‌ ನೀಡಿರುವ ಮಧ್ಯಂತರ ಆದೇಶವು ಸಿಖ್ ಸಮುದಾಯದ ವಿದ್ಯಾರ್ಥಿಗಳಿಗೆ ಅನ್ವಯಿಸುವುದಿಲ್ಲ ಎಂದು ರಾಜ್ಯ ಸರ್ಕಾರ ಗುರುವಾರ ಸ್ಪಷ್ಟಪಡಿಸಿದೆ. ಬೆಂಗಳೂರಿನ ಮೌಂಟ್ ಕಾರ್ಮೆಲ್ ಕಾಲೇಜ್ ಹೈಕೋರ್ಟ್‌ನ ಮಧ್ಯಂತರ ಆದೇಶವನ್ನು ಅನುಸರಿಸುವ ಸಲುವಾಗಿ ಪೇಟವನ್ನು ತೆಗೆಯುವಂತೆ ಸಿಖ್ ವಿದ್ಯಾರ್ಥಿಗೆ ಕೇಳಿಕೊಂಡಿದ್ದಾರೆ ಎಂದು ವರದಿಯಾದ ನಂತರ ಸಿಖ್ ಸಮುದಾಯದ ವಿದ್ಯಾರ್ಥಿಗಳು ಪೇಟ ಧರಿಸುವ ಬಗ್ಗೆ ಪೋಷಕರು ಮತ್ತು ಶಿಕ್ಷಣ ವಲಯಗಳಲ್ಲಿ ವಿವಾದ ಎದ್ದಿತ್ತು.

ಈ ಬಗ್ಗೆ ಸ್ಪಷ್ಟನೆ ನೀಡಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, “ಪೇಟ ಧರಿಸುವುದು ಸಿಖ್ ಸಮುದಾಯದ ಸಾಂವಿಧಾನಿಕ ಹಕ್ಕು. ಹೈಕೋರ್ಟ್‌ನ ಮಧ್ಯಂತರ ಆದೇಶವು ಹಿಜಾಬ್, ಕೇಸರಿ ಶಾಲ್ ಮತ್ತು ಧಾರ್ಮಿಕ ಧ್ವಜಗಳನ್ನು ಧರಿಸುವುದಕ್ಕೆ ಮಾತ್ರ ಅನ್ವಯಿಸುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಟರ್ಬನ್‌ಗೂ ವಿರೋಧ ಆರಂಭ: ಮೌಂಟ್ ಕಾರ್ಮೆಲ್ ಕಾಲೇಜಿನಲ್ಲಿ ಟರ್ಬನ್ ತೆಗೆಯುವಂತೆ ಸಿಖ್ ವಿದ್ಯಾರ್ಥಿನಿಗೆ ಒತ್ತಡ

“ಸಂವಿಧಾನವು ಸಿಖ್ ಸಮುದಾಯದ ಜನರಿಗೆ ಪೇಟ ಧರಿಸಲು ಹಕ್ಕನ್ನು ನೀಡಿದೆ. ಹಿಜಾಬ್ ಧರಿಸುವುದರ ಮೇಲಿನ ಅರ್ಜಿಗಳಿಗೆ ಸಂಬಂಧಿಸಿದಂತೆ ಹೈಕೋರ್ಟ್‌ ನೀಡಿರುವ ಮಧ್ಯಂತರ ಆದೇಶವು ಸಿಖ್ ಸಮುದಾಯದ ವಿದ್ಯಾರ್ಥಿಗಳಿಗೆ ಅನ್ವಯಿಸುವುದಿಲ್ಲ” ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

ಈ ಮಧ್ಯೆ, ಮೌಂಟ್ ಕಾರ್ಮೆಲ್ ಪಿಯು ಕಾಲೇಜಿನ ಆಡಳಿತ ಪ್ರತಿನಿಧಿಗಳು ಸಿಖ್ ಸಮುದಾಯದ ಹುಡುಗಿಗೆ ಪೇಟವನ್ನು ತೆಗೆಯುವಂತೆ ಕೇಳಿದ್ದಾರೆ ಎಂಬ ವರದಿಗಳನ್ನು ನಿರಾಕರಿಸಿದ್ದಾರೆ. ಒಂದು ನಿರ್ದಿಷ್ಟ ದಿನದಂದು ಪೇಟವಿಲ್ಲದೆಯೇ ಕಾಲೇಜಿಗೆ ಬಂದಿದ್ದಕ್ಕೆ, ಟರ್ಬನ್ ಇಲ್ಲದೆ ತರಗತಿಗಳಿಗೆ ಹಾಜರಾಗಲು ‘ಸಾಧ್ಯವೆ’ ಎಂದು ಹುಡುಗಿಯನ್ನು ಕೇಳಿದ್ದೇವೆ ಎಂದು ಕಾಲೇಜು ಅಧಿಕಾರಿಗಳು ಹೇಳಿದ್ದಾರೆ ಡಕ್ಕನ್‌ ಹೆರಾಲ್ಡ್‌‌ ವರದಿ ಮಾಡಿದೆ.

ಈ ಕುರಿತು ಡೆಕ್ಕನ್‌ ಹೆರಾಲ್ಡ್‌ಗೆ ಸ್ಪಷ್ಟನೆ ನೀಡಿರುವ ಕಾಲೇಜಿನ ಆಡಳಿತಾಧಿಕಾರಿ ಡಾ.ಎಸ್.ಆರ್.ಎಂ.ಜೆನೆವೀವ್, “ಬಾಲಕಿಯನ್ನು ಪೇಟ ತೆಗೆಯುವಂತೆ ಒತ್ತಾಯಿಸಿಲ್ಲ ಅಥವಾ ಪೇಟ ಧರಿಸದಂತೆ ನಿರ್ಬಂಧ ಹೇರಿಲ್ಲ. ಇತರ ಕೆಲವು ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಪೇಟದ ಬಗ್ಗೆ ಆಕ್ಷೇಪಣೆಗಳನ್ನು ವ್ಯಕ್ತಪಡಿಸಿದ್ದರು. ಹೀಗಾಗಿ ಕೆಲವು ದಿನಗಳ ಹಿಂದೆ, ಪೇಟವನ್ನು ಧರಿಸದೆ ಕಾಲೇಜಿಗೆ ಬಂದಂತೆ ಟರ್ಬನ್ ಇಲ್ಲದೆ ತರಗತಿಗೆ ಹಾಜರಾಗಲು ಸಾಧ್ಯವೇ ಎಂದು ನಾವು ವಿದ್ಯಾರ್ಥಿಯನ್ನು ಕೇಳಿದ್ದೆವು. ಪೇಟವನ್ನು ತೆಗೆಯುವಂತೆ ನಾವು ಹುಡುಗಿಗೆ ಹೇಳಿಲ್ಲ ಅಥವಾ ಒತ್ತಾಯಿಸಲಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಟರ್ಬನ್ ಆಯ್ಕೆಯಾಗಿರಬಹುದಾದರೆ, ಹಿಜಾಬ್ ಏಕೆ ಆಗಬಾರದು?: ನಟಿ ಸೋನಮ್ ಕಪೂರ್ ಪ್ರಶ್ನೆ 

ಈ ಬಗ್ಗೆ ಪ್ರತಿಕ್ರಿಯಿಸಿರುವ ವಿದ್ಯಾರ್ಥಿನಿಯ ಪೋಷಕರಾದ ಗುರುಚರಣ್ ಸಿಂಗ್, “ಕಾಲೇಜು ನಮ್ಮ ಮಗಳಿಗೆ ಪೇಟವನ್ನು ತೆಗೆಯುವಂತೆ ಒತ್ತಾಯಿಸಿಲ್ಲ. ಅವರು ಅದನ್ನು ಧರಿಸಲು ಅವಕಾಶ ಮಾಡಿಕೊಟ್ಟಿರುವುದು ನಿಜ. ಆದರೆ ಇತ್ತೀಚೆಗೆ ಆಕೆಯನ್ನು ಪ್ರತ್ಯೇಕವಾಗಿ ಕರೆದು ತರಗತಿಯಲ್ಲಿನ ಪೇಟವನ್ನು ತೆಗೆಯಬಹುದೇ ಎಂದು ಕೇಳಲಾಯಿತು”.

“ನಂತರ, ನಾನು ಪ್ರಾಂಶುಪಾಲರಿಗೆ ಇಮೇಲ್ ಬರೆದೆ. ಒಂದು ವಾರ ಕಾಲ ಕಾಲೇಜಿನಿಂದ ಯಾವುದೇ ಪ್ರತಿಕ್ರಿಯೆ ಬರಲಿಲ್ಲ. ಆದರೆ ನಂತರ, ಕಾಲೇಜು ಅಧಿಕಾರಿಗಳು ನನ್ನೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದು, ಪೇಟವನ್ನು ಧರಿಸುವುದು ನಮ್ಮ ಸಂವಿಧಾನದ ಹಕ್ಕು ಎಂದು ನಾನು ಅವರಿಗೆ ವಿವರಿಸಿದ್ದೇನೆ” ಎಂದು ಅವರು ಡೆಕ್ಕನ್‌ ಹೆರಾಲ್ಡ್‌ ತಿಳಿಸಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿರುವ ಸಾಮಾಜಿಕ ಕಾರ್ಯಕರ್ತರೊಬ್ಬರು, “ಮಧ್ಯಂತರ ಆದೇಶವನ್ನು ತಪ್ಪಾಗಿ ವ್ಯಾಖ್ಯಾನಿಸಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಮತ್ತು ಶಿಕ್ಷಕಿಯರಿಗೆ ಕಿರುಕುಳ ನೀಡಿರುವುದರಲ್ಲಿ ಸಚಿವ ಬಿಸಿ ನಾಗೇಶ್‌ ಮತ್ತು ಇಡೀ ರಾಜ್ಯ ಸರ್ಕಾರದ ಪಾಲಿದೆ. ಸಿಖ್‌ ವಿದ್ಯಾರ್ಥಿಗಳಿಗೆ ಪೇಟ ಹೇಗೆ ಧಾರ್ಮಿಕ ಆಚರಣೆಯೊ, ಹಿಜಾಬ್ ಕೂಡಾ ಮುಸ್ಲಿಮರಿಗೆ ಧಾರ್ಮಿಕ ಆಚರಣೆ. ಆದರೆ ಕೇಸರಿ ಶಾಲು ದ್ವೇಷ ಮತ್ತು ಅಸಹಿಷ್ಟುತೆಯ ಆಚರಣೆ. ಇದನ್ನು ಅರ್ಥ ಮಾಡಕೊಳ್ಳದೆ, ಸಣ್ಣ ವಿಚಾರವನ್ನು ದೇಶದ ಸಮಸ್ಯೆಯಾಗಿಸಿ, ರಾಜ್ಯದ ಮೂಲಭೂತ ಸಮಸ್ಯೆಯನ್ನು ಸರ್ಕಾರ ಅಡಗಿಸಿಡಲು ಪ್ರಯತ್ನಿಸುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮುಸ್ಲಿಂ ವಿದ್ಯಾರ್ಥಿನಿಯರ ಪರ ವಾದಿಸುತ್ತಿರುವ ವಕೀಲರನ್ನು ಟೀಕಿಸುವುದು ತಪ್ಪು: ರಾಮಕೃಷ್ಣ ಆಶ್ರಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸಿಖ್ ಜನಾಂಗಕ್ಕೆ ಇದ್ದಂತಹ ಸಂವಿಧಾನ ಮುಸ್ಲಿಂ ಜನಾಂಗಕ್ಕೆ ಅನ್ವಯಿಸುವುದಿಲ್ಲವೇ ಶ್ರೀಯುತ. ನಾಗೇಶ್ ರವರೇ….

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...