Homeಕರ್ನಾಟಕಪೇಟ ಧರಿಸುವ ಸಿಖ್‌ ವಿದ್ಯಾರ್ಥಿಗಳಿಗೆ ಹೈಕೋರ್ಟ್ ಮಧ್ಯಂತರ ಆದೇಶ ಅನ್ವಯಿಸುವುದಿಲ್ಲ: ಬಿ.ಸಿ.ನಾಗೇಶ್

ಪೇಟ ಧರಿಸುವ ಸಿಖ್‌ ವಿದ್ಯಾರ್ಥಿಗಳಿಗೆ ಹೈಕೋರ್ಟ್ ಮಧ್ಯಂತರ ಆದೇಶ ಅನ್ವಯಿಸುವುದಿಲ್ಲ: ಬಿ.ಸಿ.ನಾಗೇಶ್

- Advertisement -
- Advertisement -

ಹಿಜಾಬ್‌ಗೆ ಸಂಬಂಧಿಸಿದ ಅರ್ಜಿಗಳ ವಿಚಾರಣೆಯ ಸಂದರ್ಭದಲ್ಲಿ ಹೈಕೋರ್ಟ್‌ ನೀಡಿರುವ ಮಧ್ಯಂತರ ಆದೇಶವು ಸಿಖ್ ಸಮುದಾಯದ ವಿದ್ಯಾರ್ಥಿಗಳಿಗೆ ಅನ್ವಯಿಸುವುದಿಲ್ಲ ಎಂದು ರಾಜ್ಯ ಸರ್ಕಾರ ಗುರುವಾರ ಸ್ಪಷ್ಟಪಡಿಸಿದೆ. ಬೆಂಗಳೂರಿನ ಮೌಂಟ್ ಕಾರ್ಮೆಲ್ ಕಾಲೇಜ್ ಹೈಕೋರ್ಟ್‌ನ ಮಧ್ಯಂತರ ಆದೇಶವನ್ನು ಅನುಸರಿಸುವ ಸಲುವಾಗಿ ಪೇಟವನ್ನು ತೆಗೆಯುವಂತೆ ಸಿಖ್ ವಿದ್ಯಾರ್ಥಿಗೆ ಕೇಳಿಕೊಂಡಿದ್ದಾರೆ ಎಂದು ವರದಿಯಾದ ನಂತರ ಸಿಖ್ ಸಮುದಾಯದ ವಿದ್ಯಾರ್ಥಿಗಳು ಪೇಟ ಧರಿಸುವ ಬಗ್ಗೆ ಪೋಷಕರು ಮತ್ತು ಶಿಕ್ಷಣ ವಲಯಗಳಲ್ಲಿ ವಿವಾದ ಎದ್ದಿತ್ತು.

ಈ ಬಗ್ಗೆ ಸ್ಪಷ್ಟನೆ ನೀಡಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, “ಪೇಟ ಧರಿಸುವುದು ಸಿಖ್ ಸಮುದಾಯದ ಸಾಂವಿಧಾನಿಕ ಹಕ್ಕು. ಹೈಕೋರ್ಟ್‌ನ ಮಧ್ಯಂತರ ಆದೇಶವು ಹಿಜಾಬ್, ಕೇಸರಿ ಶಾಲ್ ಮತ್ತು ಧಾರ್ಮಿಕ ಧ್ವಜಗಳನ್ನು ಧರಿಸುವುದಕ್ಕೆ ಮಾತ್ರ ಅನ್ವಯಿಸುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಟರ್ಬನ್‌ಗೂ ವಿರೋಧ ಆರಂಭ: ಮೌಂಟ್ ಕಾರ್ಮೆಲ್ ಕಾಲೇಜಿನಲ್ಲಿ ಟರ್ಬನ್ ತೆಗೆಯುವಂತೆ ಸಿಖ್ ವಿದ್ಯಾರ್ಥಿನಿಗೆ ಒತ್ತಡ

“ಸಂವಿಧಾನವು ಸಿಖ್ ಸಮುದಾಯದ ಜನರಿಗೆ ಪೇಟ ಧರಿಸಲು ಹಕ್ಕನ್ನು ನೀಡಿದೆ. ಹಿಜಾಬ್ ಧರಿಸುವುದರ ಮೇಲಿನ ಅರ್ಜಿಗಳಿಗೆ ಸಂಬಂಧಿಸಿದಂತೆ ಹೈಕೋರ್ಟ್‌ ನೀಡಿರುವ ಮಧ್ಯಂತರ ಆದೇಶವು ಸಿಖ್ ಸಮುದಾಯದ ವಿದ್ಯಾರ್ಥಿಗಳಿಗೆ ಅನ್ವಯಿಸುವುದಿಲ್ಲ” ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

ಈ ಮಧ್ಯೆ, ಮೌಂಟ್ ಕಾರ್ಮೆಲ್ ಪಿಯು ಕಾಲೇಜಿನ ಆಡಳಿತ ಪ್ರತಿನಿಧಿಗಳು ಸಿಖ್ ಸಮುದಾಯದ ಹುಡುಗಿಗೆ ಪೇಟವನ್ನು ತೆಗೆಯುವಂತೆ ಕೇಳಿದ್ದಾರೆ ಎಂಬ ವರದಿಗಳನ್ನು ನಿರಾಕರಿಸಿದ್ದಾರೆ. ಒಂದು ನಿರ್ದಿಷ್ಟ ದಿನದಂದು ಪೇಟವಿಲ್ಲದೆಯೇ ಕಾಲೇಜಿಗೆ ಬಂದಿದ್ದಕ್ಕೆ, ಟರ್ಬನ್ ಇಲ್ಲದೆ ತರಗತಿಗಳಿಗೆ ಹಾಜರಾಗಲು ‘ಸಾಧ್ಯವೆ’ ಎಂದು ಹುಡುಗಿಯನ್ನು ಕೇಳಿದ್ದೇವೆ ಎಂದು ಕಾಲೇಜು ಅಧಿಕಾರಿಗಳು ಹೇಳಿದ್ದಾರೆ ಡಕ್ಕನ್‌ ಹೆರಾಲ್ಡ್‌‌ ವರದಿ ಮಾಡಿದೆ.

ಈ ಕುರಿತು ಡೆಕ್ಕನ್‌ ಹೆರಾಲ್ಡ್‌ಗೆ ಸ್ಪಷ್ಟನೆ ನೀಡಿರುವ ಕಾಲೇಜಿನ ಆಡಳಿತಾಧಿಕಾರಿ ಡಾ.ಎಸ್.ಆರ್.ಎಂ.ಜೆನೆವೀವ್, “ಬಾಲಕಿಯನ್ನು ಪೇಟ ತೆಗೆಯುವಂತೆ ಒತ್ತಾಯಿಸಿಲ್ಲ ಅಥವಾ ಪೇಟ ಧರಿಸದಂತೆ ನಿರ್ಬಂಧ ಹೇರಿಲ್ಲ. ಇತರ ಕೆಲವು ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಪೇಟದ ಬಗ್ಗೆ ಆಕ್ಷೇಪಣೆಗಳನ್ನು ವ್ಯಕ್ತಪಡಿಸಿದ್ದರು. ಹೀಗಾಗಿ ಕೆಲವು ದಿನಗಳ ಹಿಂದೆ, ಪೇಟವನ್ನು ಧರಿಸದೆ ಕಾಲೇಜಿಗೆ ಬಂದಂತೆ ಟರ್ಬನ್ ಇಲ್ಲದೆ ತರಗತಿಗೆ ಹಾಜರಾಗಲು ಸಾಧ್ಯವೇ ಎಂದು ನಾವು ವಿದ್ಯಾರ್ಥಿಯನ್ನು ಕೇಳಿದ್ದೆವು. ಪೇಟವನ್ನು ತೆಗೆಯುವಂತೆ ನಾವು ಹುಡುಗಿಗೆ ಹೇಳಿಲ್ಲ ಅಥವಾ ಒತ್ತಾಯಿಸಲಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಟರ್ಬನ್ ಆಯ್ಕೆಯಾಗಿರಬಹುದಾದರೆ, ಹಿಜಾಬ್ ಏಕೆ ಆಗಬಾರದು?: ನಟಿ ಸೋನಮ್ ಕಪೂರ್ ಪ್ರಶ್ನೆ 

ಈ ಬಗ್ಗೆ ಪ್ರತಿಕ್ರಿಯಿಸಿರುವ ವಿದ್ಯಾರ್ಥಿನಿಯ ಪೋಷಕರಾದ ಗುರುಚರಣ್ ಸಿಂಗ್, “ಕಾಲೇಜು ನಮ್ಮ ಮಗಳಿಗೆ ಪೇಟವನ್ನು ತೆಗೆಯುವಂತೆ ಒತ್ತಾಯಿಸಿಲ್ಲ. ಅವರು ಅದನ್ನು ಧರಿಸಲು ಅವಕಾಶ ಮಾಡಿಕೊಟ್ಟಿರುವುದು ನಿಜ. ಆದರೆ ಇತ್ತೀಚೆಗೆ ಆಕೆಯನ್ನು ಪ್ರತ್ಯೇಕವಾಗಿ ಕರೆದು ತರಗತಿಯಲ್ಲಿನ ಪೇಟವನ್ನು ತೆಗೆಯಬಹುದೇ ಎಂದು ಕೇಳಲಾಯಿತು”.

“ನಂತರ, ನಾನು ಪ್ರಾಂಶುಪಾಲರಿಗೆ ಇಮೇಲ್ ಬರೆದೆ. ಒಂದು ವಾರ ಕಾಲ ಕಾಲೇಜಿನಿಂದ ಯಾವುದೇ ಪ್ರತಿಕ್ರಿಯೆ ಬರಲಿಲ್ಲ. ಆದರೆ ನಂತರ, ಕಾಲೇಜು ಅಧಿಕಾರಿಗಳು ನನ್ನೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದು, ಪೇಟವನ್ನು ಧರಿಸುವುದು ನಮ್ಮ ಸಂವಿಧಾನದ ಹಕ್ಕು ಎಂದು ನಾನು ಅವರಿಗೆ ವಿವರಿಸಿದ್ದೇನೆ” ಎಂದು ಅವರು ಡೆಕ್ಕನ್‌ ಹೆರಾಲ್ಡ್‌ ತಿಳಿಸಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿರುವ ಸಾಮಾಜಿಕ ಕಾರ್ಯಕರ್ತರೊಬ್ಬರು, “ಮಧ್ಯಂತರ ಆದೇಶವನ್ನು ತಪ್ಪಾಗಿ ವ್ಯಾಖ್ಯಾನಿಸಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಮತ್ತು ಶಿಕ್ಷಕಿಯರಿಗೆ ಕಿರುಕುಳ ನೀಡಿರುವುದರಲ್ಲಿ ಸಚಿವ ಬಿಸಿ ನಾಗೇಶ್‌ ಮತ್ತು ಇಡೀ ರಾಜ್ಯ ಸರ್ಕಾರದ ಪಾಲಿದೆ. ಸಿಖ್‌ ವಿದ್ಯಾರ್ಥಿಗಳಿಗೆ ಪೇಟ ಹೇಗೆ ಧಾರ್ಮಿಕ ಆಚರಣೆಯೊ, ಹಿಜಾಬ್ ಕೂಡಾ ಮುಸ್ಲಿಮರಿಗೆ ಧಾರ್ಮಿಕ ಆಚರಣೆ. ಆದರೆ ಕೇಸರಿ ಶಾಲು ದ್ವೇಷ ಮತ್ತು ಅಸಹಿಷ್ಟುತೆಯ ಆಚರಣೆ. ಇದನ್ನು ಅರ್ಥ ಮಾಡಕೊಳ್ಳದೆ, ಸಣ್ಣ ವಿಚಾರವನ್ನು ದೇಶದ ಸಮಸ್ಯೆಯಾಗಿಸಿ, ರಾಜ್ಯದ ಮೂಲಭೂತ ಸಮಸ್ಯೆಯನ್ನು ಸರ್ಕಾರ ಅಡಗಿಸಿಡಲು ಪ್ರಯತ್ನಿಸುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮುಸ್ಲಿಂ ವಿದ್ಯಾರ್ಥಿನಿಯರ ಪರ ವಾದಿಸುತ್ತಿರುವ ವಕೀಲರನ್ನು ಟೀಕಿಸುವುದು ತಪ್ಪು: ರಾಮಕೃಷ್ಣ ಆಶ್ರಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸಿಖ್ ಜನಾಂಗಕ್ಕೆ ಇದ್ದಂತಹ ಸಂವಿಧಾನ ಮುಸ್ಲಿಂ ಜನಾಂಗಕ್ಕೆ ಅನ್ವಯಿಸುವುದಿಲ್ಲವೇ ಶ್ರೀಯುತ. ನಾಗೇಶ್ ರವರೇ….

LEAVE A REPLY

Please enter your comment!
Please enter your name here

- Advertisment -

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....