Homeಕರ್ನಾಟಕಪೇಟ ಧರಿಸುವ ಸಿಖ್‌ ವಿದ್ಯಾರ್ಥಿಗಳಿಗೆ ಹೈಕೋರ್ಟ್ ಮಧ್ಯಂತರ ಆದೇಶ ಅನ್ವಯಿಸುವುದಿಲ್ಲ: ಬಿ.ಸಿ.ನಾಗೇಶ್

ಪೇಟ ಧರಿಸುವ ಸಿಖ್‌ ವಿದ್ಯಾರ್ಥಿಗಳಿಗೆ ಹೈಕೋರ್ಟ್ ಮಧ್ಯಂತರ ಆದೇಶ ಅನ್ವಯಿಸುವುದಿಲ್ಲ: ಬಿ.ಸಿ.ನಾಗೇಶ್

- Advertisement -
- Advertisement -

ಹಿಜಾಬ್‌ಗೆ ಸಂಬಂಧಿಸಿದ ಅರ್ಜಿಗಳ ವಿಚಾರಣೆಯ ಸಂದರ್ಭದಲ್ಲಿ ಹೈಕೋರ್ಟ್‌ ನೀಡಿರುವ ಮಧ್ಯಂತರ ಆದೇಶವು ಸಿಖ್ ಸಮುದಾಯದ ವಿದ್ಯಾರ್ಥಿಗಳಿಗೆ ಅನ್ವಯಿಸುವುದಿಲ್ಲ ಎಂದು ರಾಜ್ಯ ಸರ್ಕಾರ ಗುರುವಾರ ಸ್ಪಷ್ಟಪಡಿಸಿದೆ. ಬೆಂಗಳೂರಿನ ಮೌಂಟ್ ಕಾರ್ಮೆಲ್ ಕಾಲೇಜ್ ಹೈಕೋರ್ಟ್‌ನ ಮಧ್ಯಂತರ ಆದೇಶವನ್ನು ಅನುಸರಿಸುವ ಸಲುವಾಗಿ ಪೇಟವನ್ನು ತೆಗೆಯುವಂತೆ ಸಿಖ್ ವಿದ್ಯಾರ್ಥಿಗೆ ಕೇಳಿಕೊಂಡಿದ್ದಾರೆ ಎಂದು ವರದಿಯಾದ ನಂತರ ಸಿಖ್ ಸಮುದಾಯದ ವಿದ್ಯಾರ್ಥಿಗಳು ಪೇಟ ಧರಿಸುವ ಬಗ್ಗೆ ಪೋಷಕರು ಮತ್ತು ಶಿಕ್ಷಣ ವಲಯಗಳಲ್ಲಿ ವಿವಾದ ಎದ್ದಿತ್ತು.

ಈ ಬಗ್ಗೆ ಸ್ಪಷ್ಟನೆ ನೀಡಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, “ಪೇಟ ಧರಿಸುವುದು ಸಿಖ್ ಸಮುದಾಯದ ಸಾಂವಿಧಾನಿಕ ಹಕ್ಕು. ಹೈಕೋರ್ಟ್‌ನ ಮಧ್ಯಂತರ ಆದೇಶವು ಹಿಜಾಬ್, ಕೇಸರಿ ಶಾಲ್ ಮತ್ತು ಧಾರ್ಮಿಕ ಧ್ವಜಗಳನ್ನು ಧರಿಸುವುದಕ್ಕೆ ಮಾತ್ರ ಅನ್ವಯಿಸುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಟರ್ಬನ್‌ಗೂ ವಿರೋಧ ಆರಂಭ: ಮೌಂಟ್ ಕಾರ್ಮೆಲ್ ಕಾಲೇಜಿನಲ್ಲಿ ಟರ್ಬನ್ ತೆಗೆಯುವಂತೆ ಸಿಖ್ ವಿದ್ಯಾರ್ಥಿನಿಗೆ ಒತ್ತಡ

“ಸಂವಿಧಾನವು ಸಿಖ್ ಸಮುದಾಯದ ಜನರಿಗೆ ಪೇಟ ಧರಿಸಲು ಹಕ್ಕನ್ನು ನೀಡಿದೆ. ಹಿಜಾಬ್ ಧರಿಸುವುದರ ಮೇಲಿನ ಅರ್ಜಿಗಳಿಗೆ ಸಂಬಂಧಿಸಿದಂತೆ ಹೈಕೋರ್ಟ್‌ ನೀಡಿರುವ ಮಧ್ಯಂತರ ಆದೇಶವು ಸಿಖ್ ಸಮುದಾಯದ ವಿದ್ಯಾರ್ಥಿಗಳಿಗೆ ಅನ್ವಯಿಸುವುದಿಲ್ಲ” ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

ಈ ಮಧ್ಯೆ, ಮೌಂಟ್ ಕಾರ್ಮೆಲ್ ಪಿಯು ಕಾಲೇಜಿನ ಆಡಳಿತ ಪ್ರತಿನಿಧಿಗಳು ಸಿಖ್ ಸಮುದಾಯದ ಹುಡುಗಿಗೆ ಪೇಟವನ್ನು ತೆಗೆಯುವಂತೆ ಕೇಳಿದ್ದಾರೆ ಎಂಬ ವರದಿಗಳನ್ನು ನಿರಾಕರಿಸಿದ್ದಾರೆ. ಒಂದು ನಿರ್ದಿಷ್ಟ ದಿನದಂದು ಪೇಟವಿಲ್ಲದೆಯೇ ಕಾಲೇಜಿಗೆ ಬಂದಿದ್ದಕ್ಕೆ, ಟರ್ಬನ್ ಇಲ್ಲದೆ ತರಗತಿಗಳಿಗೆ ಹಾಜರಾಗಲು ‘ಸಾಧ್ಯವೆ’ ಎಂದು ಹುಡುಗಿಯನ್ನು ಕೇಳಿದ್ದೇವೆ ಎಂದು ಕಾಲೇಜು ಅಧಿಕಾರಿಗಳು ಹೇಳಿದ್ದಾರೆ ಡಕ್ಕನ್‌ ಹೆರಾಲ್ಡ್‌‌ ವರದಿ ಮಾಡಿದೆ.

ಈ ಕುರಿತು ಡೆಕ್ಕನ್‌ ಹೆರಾಲ್ಡ್‌ಗೆ ಸ್ಪಷ್ಟನೆ ನೀಡಿರುವ ಕಾಲೇಜಿನ ಆಡಳಿತಾಧಿಕಾರಿ ಡಾ.ಎಸ್.ಆರ್.ಎಂ.ಜೆನೆವೀವ್, “ಬಾಲಕಿಯನ್ನು ಪೇಟ ತೆಗೆಯುವಂತೆ ಒತ್ತಾಯಿಸಿಲ್ಲ ಅಥವಾ ಪೇಟ ಧರಿಸದಂತೆ ನಿರ್ಬಂಧ ಹೇರಿಲ್ಲ. ಇತರ ಕೆಲವು ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಪೇಟದ ಬಗ್ಗೆ ಆಕ್ಷೇಪಣೆಗಳನ್ನು ವ್ಯಕ್ತಪಡಿಸಿದ್ದರು. ಹೀಗಾಗಿ ಕೆಲವು ದಿನಗಳ ಹಿಂದೆ, ಪೇಟವನ್ನು ಧರಿಸದೆ ಕಾಲೇಜಿಗೆ ಬಂದಂತೆ ಟರ್ಬನ್ ಇಲ್ಲದೆ ತರಗತಿಗೆ ಹಾಜರಾಗಲು ಸಾಧ್ಯವೇ ಎಂದು ನಾವು ವಿದ್ಯಾರ್ಥಿಯನ್ನು ಕೇಳಿದ್ದೆವು. ಪೇಟವನ್ನು ತೆಗೆಯುವಂತೆ ನಾವು ಹುಡುಗಿಗೆ ಹೇಳಿಲ್ಲ ಅಥವಾ ಒತ್ತಾಯಿಸಲಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಟರ್ಬನ್ ಆಯ್ಕೆಯಾಗಿರಬಹುದಾದರೆ, ಹಿಜಾಬ್ ಏಕೆ ಆಗಬಾರದು?: ನಟಿ ಸೋನಮ್ ಕಪೂರ್ ಪ್ರಶ್ನೆ 

ಈ ಬಗ್ಗೆ ಪ್ರತಿಕ್ರಿಯಿಸಿರುವ ವಿದ್ಯಾರ್ಥಿನಿಯ ಪೋಷಕರಾದ ಗುರುಚರಣ್ ಸಿಂಗ್, “ಕಾಲೇಜು ನಮ್ಮ ಮಗಳಿಗೆ ಪೇಟವನ್ನು ತೆಗೆಯುವಂತೆ ಒತ್ತಾಯಿಸಿಲ್ಲ. ಅವರು ಅದನ್ನು ಧರಿಸಲು ಅವಕಾಶ ಮಾಡಿಕೊಟ್ಟಿರುವುದು ನಿಜ. ಆದರೆ ಇತ್ತೀಚೆಗೆ ಆಕೆಯನ್ನು ಪ್ರತ್ಯೇಕವಾಗಿ ಕರೆದು ತರಗತಿಯಲ್ಲಿನ ಪೇಟವನ್ನು ತೆಗೆಯಬಹುದೇ ಎಂದು ಕೇಳಲಾಯಿತು”.

“ನಂತರ, ನಾನು ಪ್ರಾಂಶುಪಾಲರಿಗೆ ಇಮೇಲ್ ಬರೆದೆ. ಒಂದು ವಾರ ಕಾಲ ಕಾಲೇಜಿನಿಂದ ಯಾವುದೇ ಪ್ರತಿಕ್ರಿಯೆ ಬರಲಿಲ್ಲ. ಆದರೆ ನಂತರ, ಕಾಲೇಜು ಅಧಿಕಾರಿಗಳು ನನ್ನೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದು, ಪೇಟವನ್ನು ಧರಿಸುವುದು ನಮ್ಮ ಸಂವಿಧಾನದ ಹಕ್ಕು ಎಂದು ನಾನು ಅವರಿಗೆ ವಿವರಿಸಿದ್ದೇನೆ” ಎಂದು ಅವರು ಡೆಕ್ಕನ್‌ ಹೆರಾಲ್ಡ್‌ ತಿಳಿಸಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿರುವ ಸಾಮಾಜಿಕ ಕಾರ್ಯಕರ್ತರೊಬ್ಬರು, “ಮಧ್ಯಂತರ ಆದೇಶವನ್ನು ತಪ್ಪಾಗಿ ವ್ಯಾಖ್ಯಾನಿಸಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಮತ್ತು ಶಿಕ್ಷಕಿಯರಿಗೆ ಕಿರುಕುಳ ನೀಡಿರುವುದರಲ್ಲಿ ಸಚಿವ ಬಿಸಿ ನಾಗೇಶ್‌ ಮತ್ತು ಇಡೀ ರಾಜ್ಯ ಸರ್ಕಾರದ ಪಾಲಿದೆ. ಸಿಖ್‌ ವಿದ್ಯಾರ್ಥಿಗಳಿಗೆ ಪೇಟ ಹೇಗೆ ಧಾರ್ಮಿಕ ಆಚರಣೆಯೊ, ಹಿಜಾಬ್ ಕೂಡಾ ಮುಸ್ಲಿಮರಿಗೆ ಧಾರ್ಮಿಕ ಆಚರಣೆ. ಆದರೆ ಕೇಸರಿ ಶಾಲು ದ್ವೇಷ ಮತ್ತು ಅಸಹಿಷ್ಟುತೆಯ ಆಚರಣೆ. ಇದನ್ನು ಅರ್ಥ ಮಾಡಕೊಳ್ಳದೆ, ಸಣ್ಣ ವಿಚಾರವನ್ನು ದೇಶದ ಸಮಸ್ಯೆಯಾಗಿಸಿ, ರಾಜ್ಯದ ಮೂಲಭೂತ ಸಮಸ್ಯೆಯನ್ನು ಸರ್ಕಾರ ಅಡಗಿಸಿಡಲು ಪ್ರಯತ್ನಿಸುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮುಸ್ಲಿಂ ವಿದ್ಯಾರ್ಥಿನಿಯರ ಪರ ವಾದಿಸುತ್ತಿರುವ ವಕೀಲರನ್ನು ಟೀಕಿಸುವುದು ತಪ್ಪು: ರಾಮಕೃಷ್ಣ ಆಶ್ರಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸಿಖ್ ಜನಾಂಗಕ್ಕೆ ಇದ್ದಂತಹ ಸಂವಿಧಾನ ಮುಸ್ಲಿಂ ಜನಾಂಗಕ್ಕೆ ಅನ್ವಯಿಸುವುದಿಲ್ಲವೇ ಶ್ರೀಯುತ. ನಾಗೇಶ್ ರವರೇ….

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....