Homeಕರ್ನಾಟಕಪೇಟ ಧರಿಸುವ ಸಿಖ್‌ ವಿದ್ಯಾರ್ಥಿಗಳಿಗೆ ಹೈಕೋರ್ಟ್ ಮಧ್ಯಂತರ ಆದೇಶ ಅನ್ವಯಿಸುವುದಿಲ್ಲ: ಬಿ.ಸಿ.ನಾಗೇಶ್

ಪೇಟ ಧರಿಸುವ ಸಿಖ್‌ ವಿದ್ಯಾರ್ಥಿಗಳಿಗೆ ಹೈಕೋರ್ಟ್ ಮಧ್ಯಂತರ ಆದೇಶ ಅನ್ವಯಿಸುವುದಿಲ್ಲ: ಬಿ.ಸಿ.ನಾಗೇಶ್

- Advertisement -
- Advertisement -

ಹಿಜಾಬ್‌ಗೆ ಸಂಬಂಧಿಸಿದ ಅರ್ಜಿಗಳ ವಿಚಾರಣೆಯ ಸಂದರ್ಭದಲ್ಲಿ ಹೈಕೋರ್ಟ್‌ ನೀಡಿರುವ ಮಧ್ಯಂತರ ಆದೇಶವು ಸಿಖ್ ಸಮುದಾಯದ ವಿದ್ಯಾರ್ಥಿಗಳಿಗೆ ಅನ್ವಯಿಸುವುದಿಲ್ಲ ಎಂದು ರಾಜ್ಯ ಸರ್ಕಾರ ಗುರುವಾರ ಸ್ಪಷ್ಟಪಡಿಸಿದೆ. ಬೆಂಗಳೂರಿನ ಮೌಂಟ್ ಕಾರ್ಮೆಲ್ ಕಾಲೇಜ್ ಹೈಕೋರ್ಟ್‌ನ ಮಧ್ಯಂತರ ಆದೇಶವನ್ನು ಅನುಸರಿಸುವ ಸಲುವಾಗಿ ಪೇಟವನ್ನು ತೆಗೆಯುವಂತೆ ಸಿಖ್ ವಿದ್ಯಾರ್ಥಿಗೆ ಕೇಳಿಕೊಂಡಿದ್ದಾರೆ ಎಂದು ವರದಿಯಾದ ನಂತರ ಸಿಖ್ ಸಮುದಾಯದ ವಿದ್ಯಾರ್ಥಿಗಳು ಪೇಟ ಧರಿಸುವ ಬಗ್ಗೆ ಪೋಷಕರು ಮತ್ತು ಶಿಕ್ಷಣ ವಲಯಗಳಲ್ಲಿ ವಿವಾದ ಎದ್ದಿತ್ತು.

ಈ ಬಗ್ಗೆ ಸ್ಪಷ್ಟನೆ ನೀಡಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, “ಪೇಟ ಧರಿಸುವುದು ಸಿಖ್ ಸಮುದಾಯದ ಸಾಂವಿಧಾನಿಕ ಹಕ್ಕು. ಹೈಕೋರ್ಟ್‌ನ ಮಧ್ಯಂತರ ಆದೇಶವು ಹಿಜಾಬ್, ಕೇಸರಿ ಶಾಲ್ ಮತ್ತು ಧಾರ್ಮಿಕ ಧ್ವಜಗಳನ್ನು ಧರಿಸುವುದಕ್ಕೆ ಮಾತ್ರ ಅನ್ವಯಿಸುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಟರ್ಬನ್‌ಗೂ ವಿರೋಧ ಆರಂಭ: ಮೌಂಟ್ ಕಾರ್ಮೆಲ್ ಕಾಲೇಜಿನಲ್ಲಿ ಟರ್ಬನ್ ತೆಗೆಯುವಂತೆ ಸಿಖ್ ವಿದ್ಯಾರ್ಥಿನಿಗೆ ಒತ್ತಡ

“ಸಂವಿಧಾನವು ಸಿಖ್ ಸಮುದಾಯದ ಜನರಿಗೆ ಪೇಟ ಧರಿಸಲು ಹಕ್ಕನ್ನು ನೀಡಿದೆ. ಹಿಜಾಬ್ ಧರಿಸುವುದರ ಮೇಲಿನ ಅರ್ಜಿಗಳಿಗೆ ಸಂಬಂಧಿಸಿದಂತೆ ಹೈಕೋರ್ಟ್‌ ನೀಡಿರುವ ಮಧ್ಯಂತರ ಆದೇಶವು ಸಿಖ್ ಸಮುದಾಯದ ವಿದ್ಯಾರ್ಥಿಗಳಿಗೆ ಅನ್ವಯಿಸುವುದಿಲ್ಲ” ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

ಈ ಮಧ್ಯೆ, ಮೌಂಟ್ ಕಾರ್ಮೆಲ್ ಪಿಯು ಕಾಲೇಜಿನ ಆಡಳಿತ ಪ್ರತಿನಿಧಿಗಳು ಸಿಖ್ ಸಮುದಾಯದ ಹುಡುಗಿಗೆ ಪೇಟವನ್ನು ತೆಗೆಯುವಂತೆ ಕೇಳಿದ್ದಾರೆ ಎಂಬ ವರದಿಗಳನ್ನು ನಿರಾಕರಿಸಿದ್ದಾರೆ. ಒಂದು ನಿರ್ದಿಷ್ಟ ದಿನದಂದು ಪೇಟವಿಲ್ಲದೆಯೇ ಕಾಲೇಜಿಗೆ ಬಂದಿದ್ದಕ್ಕೆ, ಟರ್ಬನ್ ಇಲ್ಲದೆ ತರಗತಿಗಳಿಗೆ ಹಾಜರಾಗಲು ‘ಸಾಧ್ಯವೆ’ ಎಂದು ಹುಡುಗಿಯನ್ನು ಕೇಳಿದ್ದೇವೆ ಎಂದು ಕಾಲೇಜು ಅಧಿಕಾರಿಗಳು ಹೇಳಿದ್ದಾರೆ ಡಕ್ಕನ್‌ ಹೆರಾಲ್ಡ್‌‌ ವರದಿ ಮಾಡಿದೆ.

ಈ ಕುರಿತು ಡೆಕ್ಕನ್‌ ಹೆರಾಲ್ಡ್‌ಗೆ ಸ್ಪಷ್ಟನೆ ನೀಡಿರುವ ಕಾಲೇಜಿನ ಆಡಳಿತಾಧಿಕಾರಿ ಡಾ.ಎಸ್.ಆರ್.ಎಂ.ಜೆನೆವೀವ್, “ಬಾಲಕಿಯನ್ನು ಪೇಟ ತೆಗೆಯುವಂತೆ ಒತ್ತಾಯಿಸಿಲ್ಲ ಅಥವಾ ಪೇಟ ಧರಿಸದಂತೆ ನಿರ್ಬಂಧ ಹೇರಿಲ್ಲ. ಇತರ ಕೆಲವು ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಪೇಟದ ಬಗ್ಗೆ ಆಕ್ಷೇಪಣೆಗಳನ್ನು ವ್ಯಕ್ತಪಡಿಸಿದ್ದರು. ಹೀಗಾಗಿ ಕೆಲವು ದಿನಗಳ ಹಿಂದೆ, ಪೇಟವನ್ನು ಧರಿಸದೆ ಕಾಲೇಜಿಗೆ ಬಂದಂತೆ ಟರ್ಬನ್ ಇಲ್ಲದೆ ತರಗತಿಗೆ ಹಾಜರಾಗಲು ಸಾಧ್ಯವೇ ಎಂದು ನಾವು ವಿದ್ಯಾರ್ಥಿಯನ್ನು ಕೇಳಿದ್ದೆವು. ಪೇಟವನ್ನು ತೆಗೆಯುವಂತೆ ನಾವು ಹುಡುಗಿಗೆ ಹೇಳಿಲ್ಲ ಅಥವಾ ಒತ್ತಾಯಿಸಲಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಟರ್ಬನ್ ಆಯ್ಕೆಯಾಗಿರಬಹುದಾದರೆ, ಹಿಜಾಬ್ ಏಕೆ ಆಗಬಾರದು?: ನಟಿ ಸೋನಮ್ ಕಪೂರ್ ಪ್ರಶ್ನೆ 

ಈ ಬಗ್ಗೆ ಪ್ರತಿಕ್ರಿಯಿಸಿರುವ ವಿದ್ಯಾರ್ಥಿನಿಯ ಪೋಷಕರಾದ ಗುರುಚರಣ್ ಸಿಂಗ್, “ಕಾಲೇಜು ನಮ್ಮ ಮಗಳಿಗೆ ಪೇಟವನ್ನು ತೆಗೆಯುವಂತೆ ಒತ್ತಾಯಿಸಿಲ್ಲ. ಅವರು ಅದನ್ನು ಧರಿಸಲು ಅವಕಾಶ ಮಾಡಿಕೊಟ್ಟಿರುವುದು ನಿಜ. ಆದರೆ ಇತ್ತೀಚೆಗೆ ಆಕೆಯನ್ನು ಪ್ರತ್ಯೇಕವಾಗಿ ಕರೆದು ತರಗತಿಯಲ್ಲಿನ ಪೇಟವನ್ನು ತೆಗೆಯಬಹುದೇ ಎಂದು ಕೇಳಲಾಯಿತು”.

“ನಂತರ, ನಾನು ಪ್ರಾಂಶುಪಾಲರಿಗೆ ಇಮೇಲ್ ಬರೆದೆ. ಒಂದು ವಾರ ಕಾಲ ಕಾಲೇಜಿನಿಂದ ಯಾವುದೇ ಪ್ರತಿಕ್ರಿಯೆ ಬರಲಿಲ್ಲ. ಆದರೆ ನಂತರ, ಕಾಲೇಜು ಅಧಿಕಾರಿಗಳು ನನ್ನೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದು, ಪೇಟವನ್ನು ಧರಿಸುವುದು ನಮ್ಮ ಸಂವಿಧಾನದ ಹಕ್ಕು ಎಂದು ನಾನು ಅವರಿಗೆ ವಿವರಿಸಿದ್ದೇನೆ” ಎಂದು ಅವರು ಡೆಕ್ಕನ್‌ ಹೆರಾಲ್ಡ್‌ ತಿಳಿಸಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿರುವ ಸಾಮಾಜಿಕ ಕಾರ್ಯಕರ್ತರೊಬ್ಬರು, “ಮಧ್ಯಂತರ ಆದೇಶವನ್ನು ತಪ್ಪಾಗಿ ವ್ಯಾಖ್ಯಾನಿಸಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಮತ್ತು ಶಿಕ್ಷಕಿಯರಿಗೆ ಕಿರುಕುಳ ನೀಡಿರುವುದರಲ್ಲಿ ಸಚಿವ ಬಿಸಿ ನಾಗೇಶ್‌ ಮತ್ತು ಇಡೀ ರಾಜ್ಯ ಸರ್ಕಾರದ ಪಾಲಿದೆ. ಸಿಖ್‌ ವಿದ್ಯಾರ್ಥಿಗಳಿಗೆ ಪೇಟ ಹೇಗೆ ಧಾರ್ಮಿಕ ಆಚರಣೆಯೊ, ಹಿಜಾಬ್ ಕೂಡಾ ಮುಸ್ಲಿಮರಿಗೆ ಧಾರ್ಮಿಕ ಆಚರಣೆ. ಆದರೆ ಕೇಸರಿ ಶಾಲು ದ್ವೇಷ ಮತ್ತು ಅಸಹಿಷ್ಟುತೆಯ ಆಚರಣೆ. ಇದನ್ನು ಅರ್ಥ ಮಾಡಕೊಳ್ಳದೆ, ಸಣ್ಣ ವಿಚಾರವನ್ನು ದೇಶದ ಸಮಸ್ಯೆಯಾಗಿಸಿ, ರಾಜ್ಯದ ಮೂಲಭೂತ ಸಮಸ್ಯೆಯನ್ನು ಸರ್ಕಾರ ಅಡಗಿಸಿಡಲು ಪ್ರಯತ್ನಿಸುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮುಸ್ಲಿಂ ವಿದ್ಯಾರ್ಥಿನಿಯರ ಪರ ವಾದಿಸುತ್ತಿರುವ ವಕೀಲರನ್ನು ಟೀಕಿಸುವುದು ತಪ್ಪು: ರಾಮಕೃಷ್ಣ ಆಶ್ರಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸಿಖ್ ಜನಾಂಗಕ್ಕೆ ಇದ್ದಂತಹ ಸಂವಿಧಾನ ಮುಸ್ಲಿಂ ಜನಾಂಗಕ್ಕೆ ಅನ್ವಯಿಸುವುದಿಲ್ಲವೇ ಶ್ರೀಯುತ. ನಾಗೇಶ್ ರವರೇ….

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...