Homeಮುಖಪುಟಅತ್ಯಾಚಾರಕ್ಕೊಳಗಾದ ಬುಡಕಟ್ಟು ಯುವತಿಯ ಗರ್ಭಪಾತಕ್ಕೆ ಸರ್ಕಾರದ ಪ್ರತಿಕ್ರಿಯೆ ಕೋರಿದ ಹೈಕೋರ್ಟ್

ಅತ್ಯಾಚಾರಕ್ಕೊಳಗಾದ ಬುಡಕಟ್ಟು ಯುವತಿಯ ಗರ್ಭಪಾತಕ್ಕೆ ಸರ್ಕಾರದ ಪ್ರತಿಕ್ರಿಯೆ ಕೋರಿದ ಹೈಕೋರ್ಟ್

- Advertisement -
- Advertisement -

ಜಾರ್ಖಂಡ್‌‌ನಲ್ಲಿ ಅತ್ಯಾಚಾರ ಸಂತ್ರಸ್ತೆಯೊಬ್ಬರು ಗರ್ಭಪಾತಕ್ಕೆ ಕೋರಿ ಸಲ್ಲಿಸಿದ್ದ ಅರ್ಜಿಯ ಬಗ್ಗೆ ಹೈಕೋರ್ಟ್ ರಾಜ್ಯ ಸರ್ಕಾರದ ಪ್ರತಿಕ್ರಿಯೆಯನ್ನು ಕೇಳಿದೆ. ಅತ್ಯಾಚಾರ ಸಂತ್ರಸ್ತೆ 19 ವರ್ಷದವರಾಗಿದ್ದು 28 ವಾರಗಳ ಗರ್ಭಿಣಿಯಾಗಿದ್ದಾರೆ ಮತ್ತು ದೃಷ್ಟಿಹೀನರಾಗಿದ್ದಾರೆ ಎಂದು IANS ವರದಿ ಮಾಡಿದೆ.

ವಿಚಾರದ ಬಗ್ಗೆ ವೈದ್ಯಕೀಯ ಮಂಡಳಿ ರಚಿಸಿ ವರದಿ ಸಲ್ಲಿಸುವಂತೆ ರಾಂಚಿಯ ವೈದ್ಯಕೀಯ ಕಾಲೇಜು ರಿಮ್ಸ್‌ಗೆ ಸೆಪ್ಟೆಂಬರ್‌ 9ರಂದು ನ್ಯಾಯಾಲಯ ಸೂಚಿಸಿತ್ತು. ಅದನ್ನು ಅನುಸರಿಸಿ ಸುರಕ್ಷಿತ ಗರ್ಭಪಾತ ಸಾಧ್ಯವಿಲ್ಲ ಎಂದು RIMS ಮಂಡಳಿಯು ನ್ಯಾಯಾಲಯದ ಮುಂದೆ ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದರ ನಂತರ ನ್ಯಾಯಾಲಯವು ಈ ವಿಷಯದ ಬಗ್ಗೆ ಏನು ಮಾಡಬಹುದು ಎಂಬುದನ್ನು ತಿಳಿಸಲು ರಿಮ್ಸ್ ಮತ್ತು ಸಂತ್ರಸ್ತೆಯ ವಕೀಲರೊಂದಿಗೆ ಚರ್ಚಿಸಲು ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ಪ್ರಕರಣವನ್ನು ನ್ಯಾಯಾಲಯವು ಬುಧವಾರ ಮತ್ತೆ ವಿಚಾರಣೆ ನಡೆಸಲಿದೆ.

ಬಾಲಕಿಯನ್ನು ರಾಮಗಢದಲ್ಲಿರುವ ಮಹಿಳಾ ಆಶ್ರಯಧಾಮದಲ್ಲಿ ಇರಿಸುವಂತೆಯೂ ನ್ಯಾಯಾಲಯ ಸೂಚಿಸಿದೆ.

ಯುವತಿ ಬುಡಕಟ್ಟು ಸಮುದಾಯದವರಾಗಿದ್ದು, ರಾಂಚಿಯ ನಾಗ್ಡಿ ನಿವಾಸಿಯಾಗಿದ್ದಾರೆ. ಯುವತಿಯ ತಾಯಿ ಈ ಹಿಂದೆಯೆ ಮೃತಪಟ್ಟಿದ್ದು, ರಿಕ್ಷಾ ಚಾಲಕರಾಗಿರುವ ತನ್ನ ತಂದೆ ಕೆಲಸಕ್ಕೆ ಹೋಗಿದ್ದಾಗ ಅವರ ಮೇಲೆ ಪೈಶಾಚಿಕ ಕೃತ್ಯ ನಡೆದಿದೆ. ಯುವತಿ ಮನೆಯಲ್ಲಿ ಒಬ್ಬರೆ ಇದ್ದಾಗ ಅವರ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ನಡೆಸಿದ್ದನು.

ಇದನ್ನೂ ಓದಿ: ಬುಡಕಟ್ಟು ಯುವತಿಗೆ ಚಿತ್ರಹಿಂಸೆ ನೀಡಿದ ಬಿಜೆಪಿ ನಾಯಕಿಯ ಬಂಧನ

2018ರಲ್ಲಿಯೂ ಯುವತಿ ಅಪ್ರಾಪ್ತರಾಗಿದ್ದಾಗ ಕೂಡ ಅವರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದು, ಕೆಳ ನ್ಯಾಯಾಲಯದಲ್ಲಿ ಪ್ರಕರಣ ನಡೆಯುತ್ತಿದೆ. ಕುಟುಂಬವು ಬಡತನ ರೇಖೆಗಿಂತ ಕೆಳಗಿದ್ದು ತನ್ನ ಚಿಕಿತ್ಸೆಗೆ ಹಣವಿಲ್ಲದಿದ್ದರಿಂದ ಗರ್ಭಪಾತ ಮತ್ತು ಸರಿಯಾದ ಜೀವನ ವ್ಯವಸ್ಥೆಗಾಗಿ ಯುವತಿ ನ್ಯಾಯಾಲಯದಲ್ಲಿ ಪ್ರಕರಣವನ್ನು ದಾಖಲಿಸಲು ನಿರ್ಧರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...