Homeಮುಖಪುಟಗೌರಿಶಂಕರ್‌ ಆಯ್ಕೆ ಅಸಿಂಧು ಆದೇಶವನ್ನ ಒಂದು ತಿಂಗಳು ಅಮಾನತಿನಲ್ಲಿರಿಸಿದ ಹೈಕೋರ್ಟ್‌

ಗೌರಿಶಂಕರ್‌ ಆಯ್ಕೆ ಅಸಿಂಧು ಆದೇಶವನ್ನ ಒಂದು ತಿಂಗಳು ಅಮಾನತಿನಲ್ಲಿರಿಸಿದ ಹೈಕೋರ್ಟ್‌

- Advertisement -
- Advertisement -

ಮತದಾರರಿಗೆ ನಕಲಿ ಬಾಂಡ್ ಹಂಚಿ ಆಮಿಷವೊಡ್ಡಿದ ಪುಕರಣದಲ್ಲಿ ತುಮಕೂರು ಗ್ರಾಮಾಂತರ ಕ್ಷೇತ್ರದ ಜೆಡಿಎಸ್‌ ಶಾಸಕ ಡಿ.ಸಿ ಗೌರಿಶಂಕರ್‌ರವರನ್ನು ಕರ್ನಾಟಕ ಹೈಕೋರ್ಟ್ ಅನರ್ಹಗೊಳಿಸಿದೆ. ಆದರೆ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ತನ್ನ ಆದೇಶವನ್ನು ಒಂದು ತಿಂಗಳ ಕಾಲ ಅಮಾನತ್ತಿನಲ್ಲಿಟ್ಟಿದೆ.

ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಲು ಅವಕಾಶ ನೀಡಬೇಕು ಎಂಬ ಗೌರಿ ಶಂಕರ್‌ ಪರ ವಕೀಲರು ವಾದಿಸಿದರು. ಅವರ ಮಧ್ಯಂತರ ಮನವಿಯನ್ನು ಪುರಸ್ಕರಿಸಿದ ಹೈಕೋರ್ಟ್‌ ಆದೇಶವನ್ನು ಒಂದು ತಿಂಗಳು ಅಮಾನತಿನಲ್ಲಿರಿಸಿದೆ.

ಗೌರಿ ಶಂಕರ್‌ ಆಯ್ಕೆಯನ್ನು ಪ್ರಜಾಪ್ರತಿನಿಧಿ ಕಾಯಿದೆಯ ಸೆಕ್ಷನ್‌ 101 (ಡಿ) ಅಡಿ ಅನೂರ್ಜಿತಗೊಳಿಸಲಾಗಿದೆ” ಎಂದು ಪೀಠವು ಆದೇಶದಲ್ಲಿ ಹೇಳಿತ್ತು. ಗೌರಿಶಂಕರ್‌ ಪರ ವಕೀಲರಾದ ಹೇಮಂತ್‌ ರಾಜ್‌ ಅವರು “ಕರ್ನಾಟಕ ವಿಧಾನಸಭೆಗೆ ಚುನಾವಣೆ ಘೋಷಣೆಯಾಗಿರುವುದರಿಂದ ಹೈಕೋರ್ಟ್‌ನ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ. ಪ್ರಜಾಪ್ರತಿನಿಧಿ ಕಾಯಿದೆಯ ಸೆಕ್ಷನ್ 116 (ಬಿ) ‌ಅಡಿ ಆದೇಶಕ್ಕೆ ತಡೆ ನೀಡಲು ಹೈಕೋರ್ಟ್‌ಗೆ ಅಧಿಕಾರವಿದೆ” ಎಂದು ಕೋರಿದರು.

ರಾಜ್ಯ ವಿಧಾನಸಭೆ ಚುನಾವಣೆ ಘೋಷಣೆಯಾಗಿದ್ದು, ಪ್ರತಿವಾದಿ ಗೌರಿ ಶಂಕರ್‌ ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸಿದ್ದಾರೆ. ಹೀಗಾಗಿ, ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಉದ್ದೇಶಿಸಿರುವುದರಿಂದ ಆದೇಶವನ್ನು ಅಮಾನತಿನಲ್ಲಿರಿಸಬೇಕು ಎಂದು ಕೋರಿ ಗೌರಿ ಶಂಕರ್‌ ಪರ ವಕೀಲ ಹೇಮಂತ್‌ ರಾಜ್‌ ಅವರು ಸಲ್ಲಿಸಿದ ಮಧ್ಯಂತರ ಅರ್ಜಿಯನ್ನು ಮಾನ್ಯ ಮಾಡಿದ ನ್ಯಾಯಾಲಯ, ಆದೇಶವನ್ನು ಒಂದು ತಿಂಗಳು ಅಮಾನತಿನಲ್ಲಿರಿಸಲಾಗಿದೆ” ಎಂದು  ಆದೇಶಿಸಿತು.

2018ರ ರಾಜ್ಯ ವಿಧಾನಸಭೆ ಚುನಾವಣೆಗೆ ಮುನ್ನ ತುಮಕೂರು ಗ್ರಾಮಾಂತರ ಕ್ಷೇತ್ರದ 32 ಸಾವಿರ ವಯಸ್ಕರು ಹಾಗೂ 16 ಸಾವಿರ ಮಕ್ಕಳಿಗೆ ನಕಲಿ ವಿಮಾ ಪಾಲಿಸಿ ಬಾಂಡ್ ವಿತರಿಸಿದ್ದಾರೆ ಎಂದು ಗೌರಿಶಂಕರ್ ವಿರುದ್ಧ ಬಿಜೆಪಿಯ ಮಾಜಿ ಶಾಸಕ ಸುರೇಶ್‌ಗೌಡರವರು ದೂರು ದಾಖಲಿಸಿದ್ದರು. ಸುದೀರ್ಘ ವಿಚಾರಣೆ ನಡೆಸಿದ ಹೈಕೋರ್ಟ್‌ನ ಏಕ ಸದಸ್ಯ ಪೀಠ ಇಂದು ತೀರ್ಪು ನೀಡಿದೆ.

ಇದನ್ನೂ ಓದಿ: ಆಂಧ್ರದಲ್ಲಿಯೂ ಮುಸ್ಲಿಂ ಮೀಸಲಾತಿ ರದ್ದು ಮಾಡಲಾಗಿದೆ: ಸುಳ್ಳು ಹೇಳಿದ ಬೊಮ್ಮಾಯಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...