Homeಕರ್ನಾಟಕನಾರಾಯಣ ಗುರುಗಳಿಗಾದ ಅವಮಾನ ಮುಚ್ಚಿಹಾಕಲು ಹಿಜಾಬ್ ವಿವಾದ ಸೃಷ್ಟಿ: ಸಂಘ ಪರಿವಾರದ ಮಾಜಿ ನಾಯಕ ಸುನಿಲ್...

ನಾರಾಯಣ ಗುರುಗಳಿಗಾದ ಅವಮಾನ ಮುಚ್ಚಿಹಾಕಲು ಹಿಜಾಬ್ ವಿವಾದ ಸೃಷ್ಟಿ: ಸಂಘ ಪರಿವಾರದ ಮಾಜಿ ನಾಯಕ ಸುನಿಲ್ ಬಜಿಲಕೇರಿ

- Advertisement -
- Advertisement -

ಒಂದು ವರ್ಷ ಇರುವಾಗ ‘ಹಿಜಾಬ್-ಕೇಸರಿ ಶಾಲು’ ಎಂಬ ರೀತಿಯ ಅಜೆಂಡಾ ಕರಾವಳಿಯಲ್ಲಿ ಜಾರಿಯಾಗುತ್ತದೆ. ಕಾಂಗ್ರೆಸ್ ಸರ್ಕಾರ ಇದ್ದರೆ ಹಿಂದೂ ಕಾರ್ಯಕರ್ತರು ಕೊಲೆಯಾಗುತ್ತಾರೆ. ಈಗ ಬಿಜೆಪಿ ಸರ್ಕಾರವಿದೆ. ಕಾರ್ಯಕರ್ತರನ್ನು ಕೊಲೆ ಮಾಡಲು ಆಗಲ್ಲ. ಕಾಂಗ್ರೆಸ್ ಸರ್ಕಾರವಿದ್ದರೆ ಹಿಂದೂಗಳಿಗೆ ರಕ್ಷಣೆ ಇಲ್ಲ ಎಂದು ಹಬ್ಬಿಸಬಹುದಿತ್ತು. ಈಗ ಹಿಂದೂಗಳಿಗೆ ರಕ್ಷಣೆ ಇಲ್ಲ ಎಂದು ಹೇಳಲಾಗದು ಎಂದು ಸಂಘಪರಿವಾರದ ಮಾಜಿ ನಾಯಕ, ಹಿಂದುತ್ವದಿಂದ ಬಂಧುತ್ವದೆಡೆಗೆ ಅಭಿಯಾನದ ರುವಾರಿ ಸುನಿಲ್ ಬಜಿಲಕೇರಿ ಹೇಳಿದರು.

ನಾನುಗೌರಿ.ಕಾಂ ಜೊತೆ ಮಾತನಾಡಿದ ಅವರು, “ನಾರಾಯಣ ಗುರುಗಳ ವಿವಾದ ದೊಡ್ಡ ಮಟ್ಟದಲ್ಲಿ ಸಂಚಲನ ಮೂಡಿಸಿತು. ಕರಾವಳಿಯಲ್ಲಿ ಎಲ್ಲ ಕಡೆಯಲ್ಲಿ ಬಿಲ್ಲವ ಸಮುದಾಯದ ಮತಗಳೇ ನಿರ್ಣಾಯಕವಾಗಿವೆ. ಬಿಲ್ಲವರು ಬಿಜೆಪಿಯ ಪರವಾಗಿದ್ದರು. ಆದರೆ ನಾರಾಯಣ ಗುರುಗಳಿಗೆ ಆದ ಅವಮಾನದಿಂದಾಗಿ ಸಮುದಾಯಕ್ಕೆ ಇರಿಸುಮುರುಸಾಗಿತ್ತು. ಮತಬ್ಯಾಂಕಿಗೆ ದೊಡ್ಡ ಪೆಟ್ಟು ಬಿದ್ದಿತ್ತು. ಪ್ರತಿ ಕ್ಷೇತ್ರದಲ್ಲಿ ಕನಿಷ್ಠ ಹತ್ತು ಸಾವಿರ ಮತಗಳು ಬಿಜೆಪಿಯಿಂದ ಹೊರಹೋದರೆ ಬಿಜೆಪಿಗೆ ನಷ್ಟವಾಗುತ್ತದೆ. ಇಂತಹ ಸಂದರ್ಭದಲ್ಲಿ ಬಿಜೆಪಿ ಹಿಜಾಬ್‌ನಂತಹ ಪ್ರಕರಣಗಳನ್ನು ಮುಂದೆ ತರುತ್ತದೆ” ಎಂದು ಎಚ್ಚರಿಸಿದರು.

ಇದನ್ನೂ ಓದಿ: ಹಿಜಾಬ್‌‌‌: ವಿದ್ಯಾರ್ಥಿನಿಯರ ಪರವಾಗಿ ಧ್ವನಿ ಎತ್ತಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

ಮೊದಲು ನಾವೆಲ್ಲ ಶಾಲೆಗೆ ಹೋಗುವಾಗ ಹಿಜಾಬ್ ಧರಿಸಿ ಮುಸ್ಲಿಂ ಹೆಣ್ಣು ಮಕ್ಕಳು ಶಾಲೆಗೆ ಬರುತ್ತಿದ್ದರು. ಆಗ ಯಾವುದೇ ವಿವಾದ ಇರಲಿಲ್ಲ. ಈಗಿನ ವಿವಾದದ ಹಿಂದೆ ಎಸ್‌ಡಿಪಿಐ ಕೂಡ ಇದೆ. ಎಸ್‌ಡಿಪಿಐ ಬಿಜೆಪಿಯ ‘ಬಿ ಟೀಮ್’ ಥರ. ಪ್ರತಿ ಚುನಾವಣೆಯ ಸಂದರ್ಭದಲ್ಲೂ ಎಸ್‌ಡಿಪಿಐ ಬ್ಯಾನ್ ಮಾಡ್ತೀವಿ ಎಂದು ಬಿಜೆಪಿಯವರು ಹೇಳುತ್ತಾರೆ. ಆದರೆ ಬ್ಯಾನ್ ಮಾಡುವುದಿಲ್ಲ. ಯಾಕೆಂದರೆ ಮತ ಧ್ರುವೀಕರಣವಾಗುವುದು ಎಸ್‌ಡಿಪಿಐನಿಂದ. ಕಾಂಗ್ರೆಸ್ ಮತಗಳು ಒಡೆದು ಹೋಗುವುದು ಎಸ್‌ಡಿಪಿಐನಿಂದ. ಹೀಗಾಗಿ ಬಿಜೆಪಿಯವರು ಇಂಥದ್ದಕ್ಕೆಲ್ಲ ಕೈ ಹಾಕುತ್ತಾರೆ. ಕಾಂಗ್ರೆಸ್ ಕೂಡ ದೊಡ್ಡ ಮಟ್ಟದಲ್ಲಿ ವಿರೋಧ ಮಾಡುತ್ತಿಲ್ಲ. ಸುಮ್ಮನೆ ಕುಳಿತು ನೋಡುತ್ತಿದೆ ಎಂದು ತಿಳಿಸಿದರು.

ಎಂಎಲ್‌ಎ, ಎಂಪಿಗಳ ಮಕ್ಕಳು ಕಲಿಯುವ ಶಾಲೆಗಳಲ್ಲಿ ಇದೆಲ್ಲ ನಡೆಯುವುದಿಲ್ಲ. ಬಡವರ ಮಕ್ಕಳು, ಹಿಂದುಳಿದವರ ಮಕ್ಕಳು ಓದುವಂತಹ ಸರ್ಕಾರಿ ಶಾಲೆಗಳಲ್ಲಿ ಹೆಚ್ಚು ಗೊಂದಲಗಳನ್ನು ಎಬ್ಬಿಸುತ್ತಾರೆ. ಎಂಎಲ್‌ಎ ಮಕ್ಕಳು ಯಾರಾದರೂ ಕೇಸರಿ ಶಾಲು ಹಾಕಿಕೊಂಡು ಶಾಲೆಗೆ ಬಂದಿದ್ದು ನೀವು ನೋಡಿದ್ದೀರಾ? ಯಾರೂ ಬರಲ್ಲ. ಈ ಬಡವರ ಮಕ್ಕಳು ಹೊಡೆಸಿಕೊಂಡು ಸಾಯಬೇಕಷ್ಟೇ ಎಂದು ಆತಂಕ ವ್ಯಕ್ತಪಡಿಸಿದರು.

ಶಾಲೆಗೆ ಹೋಗುವುದು, ಶಿಕ್ಷಣ ಪಡೆಯುವುದು ಎಲ್ಲರ ಹಕ್ಕು. ಮೂರು ಸಾವಿರ ವರ್ಷಗಳಿಂದ ಮೇಲ್ವರ್ಗದವರ ದಬ್ಬಾಳಿಕೆ ನಡೆಯುತ್ತಾ ಬಂದಿತ್ತು. ಸ್ವಾತಂತ್ರ್ಯ ನಂತರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೀಸಲಾತಿಯನ್ನು ಜಾರಿ ಮಾಡಿತು. ಮೀಸಲಾತಿಯನ್ನು ಏಕಾಏಕಿ ತೆಗೆಯಲು ಸಾಧ್ಯವಿಲ್ಲ. ಹಿಂದುಳಿದ ವರ್ಗಗಳಲ್ಲಿ ಹಿಂದುತ್ವದ ಭಾವನೆಗಳನ್ನು ಜೋರಾಗಿ ಹಚ್ಚಿ ಮುಂದಿನ ದಿನಗಳಲ್ಲಿ ಇವರು ಮೀಸಲಾತಿ ತೆಗೆದು ಹಾಕಿದರೂ ಯಾರೂ ಮಾತನಾಡಬಾರದು ಎಂಬ ಯೋಜನೆಯನ್ನು ಹಾಕಿಕೊಂಡಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: ರಾಜ್ಯದಲ್ಲಿ ತೀವ್ರಗೊಳ್ಳುತ್ತಿರುವ ಹಿಜಾಬ್ ವಿವಾದ: ಕಠಿಣ ನಿಲುವು ತಳೆಯದ ಬೊಮ್ಮಾಯಿ ಸರ್ಕಾರ

ಕರಾವಳಿಯಲ್ಲಿ ಕಡಲ್ಕೊರೆತ ತಡೆಯಲು ಸಾವಿರಾರು ಕೋಟಿ ರೂ.ಗಳನ್ನು ನೀಡುತ್ತಿದ್ದಾರೆ. ಆದರೆ ಯೋಜನೆ ವಿಫಲವಾಗುತ್ತಿದೆ. ಅದರ ಬಗ್ಗೆ ಇವರು ಹೋರಾಟ ಮಾಡಲ್ಲ. ಕರಾವಳಿ ಜನರು ಉದ್ಯೋಗಕ್ಕಾಗಿ ಧ್ವನಿ ಎತ್ತಿದ್ದಾರೆ. ದೊಡ್ಡ ದೊಡ್ಡ ಇಂಡಸ್ಟ್ರಿಗಳು ಈ ಭಾಗದಲ್ಲಿವೆ. ಆದರೆ ಇಲ್ಲಿನ ಜನರಿಗೆ ಉದ್ಯೋಗ ಸಿಗುವುದಿಲ್ಲ. ಉತ್ತರ ಪ್ರದೇಶ, ಬಿಹಾರದವರಿಗೆ ಕೆಲಸ ಕೊಡುತ್ತಾರೆ. ಸರೋಜಿನಿ ಮಹಿಷಿ ವರದಿಯನ್ನು ಜಾರಿಗೊಳಿಸುವುದಾಗಿ ಚುನಾವಣಾ ಸಂದರ್ಭದಲ್ಲಿ ಇವರು ಹೇಳುತ್ತಾರೆ. ಅಧಿಕಾರಕ್ಕೆ ಬಂದ ಮೇಲೆ ಅದನ್ನೂ ಮಾಡಲ್ಲ. ಈ ವರದಿ ಜಾರಿಯಾದರೆ ಶೇ. ೪೦ರಷ್ಟು ಮೀಸಲಾತಿ ಕರಾವಳಿಯವರಿಗೆ ಸಿಗುತ್ತದೆ ಎಂದು ಮಾಹಿತಿ ನೀಡಿದರು.

ಕಾರ್ಯಕರ್ತರು ಸಾವಿರಾರು ಫೇಕ್ ಅಕೌಂಟ್‌ಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಮಾಡುತ್ತಾರೆ. ನಮ್ಮ ಮುಖಚರ್ಯೆಯನ್ನೇ ಹೋಲುವ ಶ್ರೀಲಂಕಾ, ಬಂಗ್ಲಾದೇಶದವರ ಫೋಟೋಗಳನ್ನು ಪ್ರೊಫೈಲ್‌ನಲ್ಲಿ ಹಾಕಿಕೊಳ್ಳುತ್ತಾರೆ. ನಾನೇನಾದರೂ ಬಿಲ್ಲವನಾಗಿದ್ದರೆ ಬಿಲ್ಲವರ ಡುಬ್ಲಿಕೇಟ್ ಅಕೌಂಟ್ ಮಾಡಿ, ಅದರಲ್ಲೇ ಕಮೆಂಟ್ ಮಾಡ್ತಾರೆ. ಜಿಎಸ್‌ಬಿಯಾಗಿದ್ದರೆ ಜಿಎಸ್‌ಬಿ ಹೆಸರಲ್ಲೇ ಫೇಕ್ ಅಕೌಂಟ್ ಮಾಡಿ ಅದರಲ್ಲೇ ಕಮೆಂಟ್ ಮಾಡುತ್ತಾರೆ. ಇನ್ನೆರಡು ತಿಂಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸೃಷ್ಟಿಯಾಗುತ್ತವೆ ಎಂದು ಎಚ್ಚರ ನೀಡಿದರು.

ಕಾಂಗ್ರೆಸ್ ಸರ್ಕಾರ ಅಧಿಕಾರವಿದ್ದಾಗ ಪ್ರಧಾನಿ ಮೋದಿಯವರೇ ಬಂದು ಶೇ. ೧೦ರಷ್ಟು ಭ್ರಷ್ಟಾಚಾರ ಕರ್ನಾಟಕದಲ್ಲಿ ಇದೆ ಎಂದಿದ್ದರು. ನಾವು ಅದನ್ನೂ ನಂಬಿದ್ದೆವು. ಆದರೆ ಬಿಜೆಪಿಯವರು ಶೇ. ೪೦ರಷ್ಟು ಭ್ರಷ್ಟಾಚಾರ ಮಾಡುತ್ತಿದ್ದಾರೆ. ಗುತ್ತಿಗೆದಾರರೇ ಮೋದಿಯವರಿಗೆ ಲಿಖಿತವಾಗಿ ದೂರು ನೀಡಿದರು. ಈ ದೂರಿನ ಬಗ್ಗೆ ಯಾವುದೇ ವಿಚಾರಣೆಯಾಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಇದನ್ನೂ ಓದಿ: ಹಿಜಾಬ್ ವಿವಾದ: ಮುಸ್ಲಿಂ ಹೆಣ್ಣು ಮಕ್ಕಳನ್ನು ಶಿಕ್ಷಣದಿಂದ ವಂಚಿಸುವ ಹುನ್ನಾರ- ಸಿದ್ದರಾಮಯ್ಯ

ಹಿಜಾಬ್ ಮತ್ತು ಕೇಸರಿ ಶಾಲು ಎರಡನ್ನೂ ಬಿಟ್ಟುಬಿಡಿ. ಮಕ್ಕಳಿಗೆ ವಿದ್ಯಾಭ್ಯಾಸ ಮುಖ್ಯ. ನೀವು ಗಲ್ಫ್ ದೇಶಗಳಿಗೆ ಹೋದರೆ ನೋಡಬಹುದು. ಒಂದು ಮಸೀದಿ ಇದ್ದರೆ ಪಕ್ಕದಲ್ಲಿ ಹತ್ತು ಲೈವ್‌ಬ್ಯಾಂಡ್‌ಗಳು ಇರುತ್ತವೆ. ಡ್ಯಾನ್ಸ್ ಮಾಡುತ್ತಾರೆ, ಕುಡಿಯುತ್ತಾರೆ. ಆ ದೇಶಗಳು ಮುಂದುವರಿದಿವೆ. ಧರ್ಮಗಳ ಗೊಂದಲಗಳ ಅಗತ್ಯ ಅವರಿಗಿಲ್ಲ ಎಂದರು.

ಕರಾವಳಿಯ ಪ್ರತಿಯೊಂದು ಮನೆಯವರು (ಹಿಂದೂ ಇರಲಿ, ಮುಸ್ಲಿಂ ಇರಲಿ) ಗಲ್ಫ್ ರಾಷ್ಟ್ರಗಳಲ್ಲಿ ಇದ್ದಾರೆ. ಆ ದೇಶಗಳಲ್ಲಿ ಇಂಥವುಗಳನ್ನೆಲ್ಲ ಮಾಡಿದರೆ ನಾವು ನಿರುದ್ಯೋಗಿಗಳಾಗಿ ಇಲ್ಲಿ ಸಾಯಬೇಕಾಗುತ್ತದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೀರುವ ಪರಿಣಾಮಗಳನ್ನು ನಾವು ಯೋಚಿಸಬೇಕಲ್ಲ. ಕರಾವಳಿಯಲ್ಲಿ ಆಗುತ್ತಿರುವ ಬೆಳವಣಿಗೆಗಳು ಗಲ್ಪ್ ರಾಷ್ಟ್ರಗಳಲ್ಲಿ ಆದರೆ ನಮ್ಮಲ್ಲಿ ನಿರುದ್ಯೋಗ ಹೆಚ್ಚಾಗುತ್ತದೆ. ಅಲ್ಲಿ ಡ್ರೈವರ್ ಆಗಿರುವವರಿಗೆ, ಸೇಲ್ಸ್‌ಮನ್ ಆಗಿರುವವರಿಗೆ ಕೆಲಸ ಇಲ್ಲದಾಗುತ್ತದೆ. ಇಲ್ಲಿ ಉದ್ಯೋಗ ಸೃಷ್ಟಿ ಮಾಡಲು ಇವರಿಂದ ಆಗುತ್ತಿಲ್ಲ. ದುಬೈನಲ್ಲಿ ಇರುವವರು ನೆಮ್ಮದಿಯಾಗಿ ಕೆಲಸ ಮಾಡದ ಹಾಗೆ ಕರಾವಳಿಯಲ್ಲಿ ಗೊಂದಲ ಸೃಷ್ಟಿಸಲಾಗುತ್ತಿದೆ ಎಂದು ಅಭಿಪ್ರಾಯಪಟ್ಟರು.

ಮಕ್ಕಳ ಹೆಸರಲ್ಲಿ ರಾಜಕಾರಣ ಮಾಡುತ್ತಿರುವುದು ನಿಲ್ಲಬೇಕಾದರೆ ಒಂದು ಸುಲಭವಾದ ಮಾರ್ಗವಿದೆ. ೨೧ ವರ್ಷಗಳ ನಂತರವೇ ಮತದಾನದ ಹಕ್ಕನ್ನು ನೀಡಬೇಕು. ಶಾಲಾ ಮಕ್ಕಳನ್ನು ಛೂ ಬಿಟ್ಟು ರಾಜಕಾರಣ ಮಾಡುವುದನ್ನು ಆಗ ನಿಲ್ಲಿಸುವ ಸಾಧ್ಯತೆ ಇದೆ.


ಇದನ್ನೂ ಓದಿರಿ:  ಹಿಜಾಬ್ ವಿವಾದ: ಕಾಲೇಜುಗಳಲ್ಲಿ ವಸ್ತ್ರಸಂಹಿತೆ ಕಡ್ಡಾಯಗೊಳಿಸಿಲ್ಲ ಎಂದ ಶಿಕ್ಷಣ ಇಲಾಖೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...