Homeಕರ್ನಾಟಕನಾರಾಯಣ ಗುರುಗಳಿಗಾದ ಅವಮಾನ ಮುಚ್ಚಿಹಾಕಲು ಹಿಜಾಬ್ ವಿವಾದ ಸೃಷ್ಟಿ: ಸಂಘ ಪರಿವಾರದ ಮಾಜಿ ನಾಯಕ ಸುನಿಲ್...

ನಾರಾಯಣ ಗುರುಗಳಿಗಾದ ಅವಮಾನ ಮುಚ್ಚಿಹಾಕಲು ಹಿಜಾಬ್ ವಿವಾದ ಸೃಷ್ಟಿ: ಸಂಘ ಪರಿವಾರದ ಮಾಜಿ ನಾಯಕ ಸುನಿಲ್ ಬಜಿಲಕೇರಿ

- Advertisement -
- Advertisement -

ಒಂದು ವರ್ಷ ಇರುವಾಗ ‘ಹಿಜಾಬ್-ಕೇಸರಿ ಶಾಲು’ ಎಂಬ ರೀತಿಯ ಅಜೆಂಡಾ ಕರಾವಳಿಯಲ್ಲಿ ಜಾರಿಯಾಗುತ್ತದೆ. ಕಾಂಗ್ರೆಸ್ ಸರ್ಕಾರ ಇದ್ದರೆ ಹಿಂದೂ ಕಾರ್ಯಕರ್ತರು ಕೊಲೆಯಾಗುತ್ತಾರೆ. ಈಗ ಬಿಜೆಪಿ ಸರ್ಕಾರವಿದೆ. ಕಾರ್ಯಕರ್ತರನ್ನು ಕೊಲೆ ಮಾಡಲು ಆಗಲ್ಲ. ಕಾಂಗ್ರೆಸ್ ಸರ್ಕಾರವಿದ್ದರೆ ಹಿಂದೂಗಳಿಗೆ ರಕ್ಷಣೆ ಇಲ್ಲ ಎಂದು ಹಬ್ಬಿಸಬಹುದಿತ್ತು. ಈಗ ಹಿಂದೂಗಳಿಗೆ ರಕ್ಷಣೆ ಇಲ್ಲ ಎಂದು ಹೇಳಲಾಗದು ಎಂದು ಸಂಘಪರಿವಾರದ ಮಾಜಿ ನಾಯಕ, ಹಿಂದುತ್ವದಿಂದ ಬಂಧುತ್ವದೆಡೆಗೆ ಅಭಿಯಾನದ ರುವಾರಿ ಸುನಿಲ್ ಬಜಿಲಕೇರಿ ಹೇಳಿದರು.

ನಾನುಗೌರಿ.ಕಾಂ ಜೊತೆ ಮಾತನಾಡಿದ ಅವರು, “ನಾರಾಯಣ ಗುರುಗಳ ವಿವಾದ ದೊಡ್ಡ ಮಟ್ಟದಲ್ಲಿ ಸಂಚಲನ ಮೂಡಿಸಿತು. ಕರಾವಳಿಯಲ್ಲಿ ಎಲ್ಲ ಕಡೆಯಲ್ಲಿ ಬಿಲ್ಲವ ಸಮುದಾಯದ ಮತಗಳೇ ನಿರ್ಣಾಯಕವಾಗಿವೆ. ಬಿಲ್ಲವರು ಬಿಜೆಪಿಯ ಪರವಾಗಿದ್ದರು. ಆದರೆ ನಾರಾಯಣ ಗುರುಗಳಿಗೆ ಆದ ಅವಮಾನದಿಂದಾಗಿ ಸಮುದಾಯಕ್ಕೆ ಇರಿಸುಮುರುಸಾಗಿತ್ತು. ಮತಬ್ಯಾಂಕಿಗೆ ದೊಡ್ಡ ಪೆಟ್ಟು ಬಿದ್ದಿತ್ತು. ಪ್ರತಿ ಕ್ಷೇತ್ರದಲ್ಲಿ ಕನಿಷ್ಠ ಹತ್ತು ಸಾವಿರ ಮತಗಳು ಬಿಜೆಪಿಯಿಂದ ಹೊರಹೋದರೆ ಬಿಜೆಪಿಗೆ ನಷ್ಟವಾಗುತ್ತದೆ. ಇಂತಹ ಸಂದರ್ಭದಲ್ಲಿ ಬಿಜೆಪಿ ಹಿಜಾಬ್‌ನಂತಹ ಪ್ರಕರಣಗಳನ್ನು ಮುಂದೆ ತರುತ್ತದೆ” ಎಂದು ಎಚ್ಚರಿಸಿದರು.

ಇದನ್ನೂ ಓದಿ: ಹಿಜಾಬ್‌‌‌: ವಿದ್ಯಾರ್ಥಿನಿಯರ ಪರವಾಗಿ ಧ್ವನಿ ಎತ್ತಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

ಮೊದಲು ನಾವೆಲ್ಲ ಶಾಲೆಗೆ ಹೋಗುವಾಗ ಹಿಜಾಬ್ ಧರಿಸಿ ಮುಸ್ಲಿಂ ಹೆಣ್ಣು ಮಕ್ಕಳು ಶಾಲೆಗೆ ಬರುತ್ತಿದ್ದರು. ಆಗ ಯಾವುದೇ ವಿವಾದ ಇರಲಿಲ್ಲ. ಈಗಿನ ವಿವಾದದ ಹಿಂದೆ ಎಸ್‌ಡಿಪಿಐ ಕೂಡ ಇದೆ. ಎಸ್‌ಡಿಪಿಐ ಬಿಜೆಪಿಯ ‘ಬಿ ಟೀಮ್’ ಥರ. ಪ್ರತಿ ಚುನಾವಣೆಯ ಸಂದರ್ಭದಲ್ಲೂ ಎಸ್‌ಡಿಪಿಐ ಬ್ಯಾನ್ ಮಾಡ್ತೀವಿ ಎಂದು ಬಿಜೆಪಿಯವರು ಹೇಳುತ್ತಾರೆ. ಆದರೆ ಬ್ಯಾನ್ ಮಾಡುವುದಿಲ್ಲ. ಯಾಕೆಂದರೆ ಮತ ಧ್ರುವೀಕರಣವಾಗುವುದು ಎಸ್‌ಡಿಪಿಐನಿಂದ. ಕಾಂಗ್ರೆಸ್ ಮತಗಳು ಒಡೆದು ಹೋಗುವುದು ಎಸ್‌ಡಿಪಿಐನಿಂದ. ಹೀಗಾಗಿ ಬಿಜೆಪಿಯವರು ಇಂಥದ್ದಕ್ಕೆಲ್ಲ ಕೈ ಹಾಕುತ್ತಾರೆ. ಕಾಂಗ್ರೆಸ್ ಕೂಡ ದೊಡ್ಡ ಮಟ್ಟದಲ್ಲಿ ವಿರೋಧ ಮಾಡುತ್ತಿಲ್ಲ. ಸುಮ್ಮನೆ ಕುಳಿತು ನೋಡುತ್ತಿದೆ ಎಂದು ತಿಳಿಸಿದರು.

ಎಂಎಲ್‌ಎ, ಎಂಪಿಗಳ ಮಕ್ಕಳು ಕಲಿಯುವ ಶಾಲೆಗಳಲ್ಲಿ ಇದೆಲ್ಲ ನಡೆಯುವುದಿಲ್ಲ. ಬಡವರ ಮಕ್ಕಳು, ಹಿಂದುಳಿದವರ ಮಕ್ಕಳು ಓದುವಂತಹ ಸರ್ಕಾರಿ ಶಾಲೆಗಳಲ್ಲಿ ಹೆಚ್ಚು ಗೊಂದಲಗಳನ್ನು ಎಬ್ಬಿಸುತ್ತಾರೆ. ಎಂಎಲ್‌ಎ ಮಕ್ಕಳು ಯಾರಾದರೂ ಕೇಸರಿ ಶಾಲು ಹಾಕಿಕೊಂಡು ಶಾಲೆಗೆ ಬಂದಿದ್ದು ನೀವು ನೋಡಿದ್ದೀರಾ? ಯಾರೂ ಬರಲ್ಲ. ಈ ಬಡವರ ಮಕ್ಕಳು ಹೊಡೆಸಿಕೊಂಡು ಸಾಯಬೇಕಷ್ಟೇ ಎಂದು ಆತಂಕ ವ್ಯಕ್ತಪಡಿಸಿದರು.

ಶಾಲೆಗೆ ಹೋಗುವುದು, ಶಿಕ್ಷಣ ಪಡೆಯುವುದು ಎಲ್ಲರ ಹಕ್ಕು. ಮೂರು ಸಾವಿರ ವರ್ಷಗಳಿಂದ ಮೇಲ್ವರ್ಗದವರ ದಬ್ಬಾಳಿಕೆ ನಡೆಯುತ್ತಾ ಬಂದಿತ್ತು. ಸ್ವಾತಂತ್ರ್ಯ ನಂತರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೀಸಲಾತಿಯನ್ನು ಜಾರಿ ಮಾಡಿತು. ಮೀಸಲಾತಿಯನ್ನು ಏಕಾಏಕಿ ತೆಗೆಯಲು ಸಾಧ್ಯವಿಲ್ಲ. ಹಿಂದುಳಿದ ವರ್ಗಗಳಲ್ಲಿ ಹಿಂದುತ್ವದ ಭಾವನೆಗಳನ್ನು ಜೋರಾಗಿ ಹಚ್ಚಿ ಮುಂದಿನ ದಿನಗಳಲ್ಲಿ ಇವರು ಮೀಸಲಾತಿ ತೆಗೆದು ಹಾಕಿದರೂ ಯಾರೂ ಮಾತನಾಡಬಾರದು ಎಂಬ ಯೋಜನೆಯನ್ನು ಹಾಕಿಕೊಂಡಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: ರಾಜ್ಯದಲ್ಲಿ ತೀವ್ರಗೊಳ್ಳುತ್ತಿರುವ ಹಿಜಾಬ್ ವಿವಾದ: ಕಠಿಣ ನಿಲುವು ತಳೆಯದ ಬೊಮ್ಮಾಯಿ ಸರ್ಕಾರ

ಕರಾವಳಿಯಲ್ಲಿ ಕಡಲ್ಕೊರೆತ ತಡೆಯಲು ಸಾವಿರಾರು ಕೋಟಿ ರೂ.ಗಳನ್ನು ನೀಡುತ್ತಿದ್ದಾರೆ. ಆದರೆ ಯೋಜನೆ ವಿಫಲವಾಗುತ್ತಿದೆ. ಅದರ ಬಗ್ಗೆ ಇವರು ಹೋರಾಟ ಮಾಡಲ್ಲ. ಕರಾವಳಿ ಜನರು ಉದ್ಯೋಗಕ್ಕಾಗಿ ಧ್ವನಿ ಎತ್ತಿದ್ದಾರೆ. ದೊಡ್ಡ ದೊಡ್ಡ ಇಂಡಸ್ಟ್ರಿಗಳು ಈ ಭಾಗದಲ್ಲಿವೆ. ಆದರೆ ಇಲ್ಲಿನ ಜನರಿಗೆ ಉದ್ಯೋಗ ಸಿಗುವುದಿಲ್ಲ. ಉತ್ತರ ಪ್ರದೇಶ, ಬಿಹಾರದವರಿಗೆ ಕೆಲಸ ಕೊಡುತ್ತಾರೆ. ಸರೋಜಿನಿ ಮಹಿಷಿ ವರದಿಯನ್ನು ಜಾರಿಗೊಳಿಸುವುದಾಗಿ ಚುನಾವಣಾ ಸಂದರ್ಭದಲ್ಲಿ ಇವರು ಹೇಳುತ್ತಾರೆ. ಅಧಿಕಾರಕ್ಕೆ ಬಂದ ಮೇಲೆ ಅದನ್ನೂ ಮಾಡಲ್ಲ. ಈ ವರದಿ ಜಾರಿಯಾದರೆ ಶೇ. ೪೦ರಷ್ಟು ಮೀಸಲಾತಿ ಕರಾವಳಿಯವರಿಗೆ ಸಿಗುತ್ತದೆ ಎಂದು ಮಾಹಿತಿ ನೀಡಿದರು.

ಕಾರ್ಯಕರ್ತರು ಸಾವಿರಾರು ಫೇಕ್ ಅಕೌಂಟ್‌ಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಮಾಡುತ್ತಾರೆ. ನಮ್ಮ ಮುಖಚರ್ಯೆಯನ್ನೇ ಹೋಲುವ ಶ್ರೀಲಂಕಾ, ಬಂಗ್ಲಾದೇಶದವರ ಫೋಟೋಗಳನ್ನು ಪ್ರೊಫೈಲ್‌ನಲ್ಲಿ ಹಾಕಿಕೊಳ್ಳುತ್ತಾರೆ. ನಾನೇನಾದರೂ ಬಿಲ್ಲವನಾಗಿದ್ದರೆ ಬಿಲ್ಲವರ ಡುಬ್ಲಿಕೇಟ್ ಅಕೌಂಟ್ ಮಾಡಿ, ಅದರಲ್ಲೇ ಕಮೆಂಟ್ ಮಾಡ್ತಾರೆ. ಜಿಎಸ್‌ಬಿಯಾಗಿದ್ದರೆ ಜಿಎಸ್‌ಬಿ ಹೆಸರಲ್ಲೇ ಫೇಕ್ ಅಕೌಂಟ್ ಮಾಡಿ ಅದರಲ್ಲೇ ಕಮೆಂಟ್ ಮಾಡುತ್ತಾರೆ. ಇನ್ನೆರಡು ತಿಂಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸೃಷ್ಟಿಯಾಗುತ್ತವೆ ಎಂದು ಎಚ್ಚರ ನೀಡಿದರು.

ಕಾಂಗ್ರೆಸ್ ಸರ್ಕಾರ ಅಧಿಕಾರವಿದ್ದಾಗ ಪ್ರಧಾನಿ ಮೋದಿಯವರೇ ಬಂದು ಶೇ. ೧೦ರಷ್ಟು ಭ್ರಷ್ಟಾಚಾರ ಕರ್ನಾಟಕದಲ್ಲಿ ಇದೆ ಎಂದಿದ್ದರು. ನಾವು ಅದನ್ನೂ ನಂಬಿದ್ದೆವು. ಆದರೆ ಬಿಜೆಪಿಯವರು ಶೇ. ೪೦ರಷ್ಟು ಭ್ರಷ್ಟಾಚಾರ ಮಾಡುತ್ತಿದ್ದಾರೆ. ಗುತ್ತಿಗೆದಾರರೇ ಮೋದಿಯವರಿಗೆ ಲಿಖಿತವಾಗಿ ದೂರು ನೀಡಿದರು. ಈ ದೂರಿನ ಬಗ್ಗೆ ಯಾವುದೇ ವಿಚಾರಣೆಯಾಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಇದನ್ನೂ ಓದಿ: ಹಿಜಾಬ್ ವಿವಾದ: ಮುಸ್ಲಿಂ ಹೆಣ್ಣು ಮಕ್ಕಳನ್ನು ಶಿಕ್ಷಣದಿಂದ ವಂಚಿಸುವ ಹುನ್ನಾರ- ಸಿದ್ದರಾಮಯ್ಯ

ಹಿಜಾಬ್ ಮತ್ತು ಕೇಸರಿ ಶಾಲು ಎರಡನ್ನೂ ಬಿಟ್ಟುಬಿಡಿ. ಮಕ್ಕಳಿಗೆ ವಿದ್ಯಾಭ್ಯಾಸ ಮುಖ್ಯ. ನೀವು ಗಲ್ಫ್ ದೇಶಗಳಿಗೆ ಹೋದರೆ ನೋಡಬಹುದು. ಒಂದು ಮಸೀದಿ ಇದ್ದರೆ ಪಕ್ಕದಲ್ಲಿ ಹತ್ತು ಲೈವ್‌ಬ್ಯಾಂಡ್‌ಗಳು ಇರುತ್ತವೆ. ಡ್ಯಾನ್ಸ್ ಮಾಡುತ್ತಾರೆ, ಕುಡಿಯುತ್ತಾರೆ. ಆ ದೇಶಗಳು ಮುಂದುವರಿದಿವೆ. ಧರ್ಮಗಳ ಗೊಂದಲಗಳ ಅಗತ್ಯ ಅವರಿಗಿಲ್ಲ ಎಂದರು.

ಕರಾವಳಿಯ ಪ್ರತಿಯೊಂದು ಮನೆಯವರು (ಹಿಂದೂ ಇರಲಿ, ಮುಸ್ಲಿಂ ಇರಲಿ) ಗಲ್ಫ್ ರಾಷ್ಟ್ರಗಳಲ್ಲಿ ಇದ್ದಾರೆ. ಆ ದೇಶಗಳಲ್ಲಿ ಇಂಥವುಗಳನ್ನೆಲ್ಲ ಮಾಡಿದರೆ ನಾವು ನಿರುದ್ಯೋಗಿಗಳಾಗಿ ಇಲ್ಲಿ ಸಾಯಬೇಕಾಗುತ್ತದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೀರುವ ಪರಿಣಾಮಗಳನ್ನು ನಾವು ಯೋಚಿಸಬೇಕಲ್ಲ. ಕರಾವಳಿಯಲ್ಲಿ ಆಗುತ್ತಿರುವ ಬೆಳವಣಿಗೆಗಳು ಗಲ್ಪ್ ರಾಷ್ಟ್ರಗಳಲ್ಲಿ ಆದರೆ ನಮ್ಮಲ್ಲಿ ನಿರುದ್ಯೋಗ ಹೆಚ್ಚಾಗುತ್ತದೆ. ಅಲ್ಲಿ ಡ್ರೈವರ್ ಆಗಿರುವವರಿಗೆ, ಸೇಲ್ಸ್‌ಮನ್ ಆಗಿರುವವರಿಗೆ ಕೆಲಸ ಇಲ್ಲದಾಗುತ್ತದೆ. ಇಲ್ಲಿ ಉದ್ಯೋಗ ಸೃಷ್ಟಿ ಮಾಡಲು ಇವರಿಂದ ಆಗುತ್ತಿಲ್ಲ. ದುಬೈನಲ್ಲಿ ಇರುವವರು ನೆಮ್ಮದಿಯಾಗಿ ಕೆಲಸ ಮಾಡದ ಹಾಗೆ ಕರಾವಳಿಯಲ್ಲಿ ಗೊಂದಲ ಸೃಷ್ಟಿಸಲಾಗುತ್ತಿದೆ ಎಂದು ಅಭಿಪ್ರಾಯಪಟ್ಟರು.

ಮಕ್ಕಳ ಹೆಸರಲ್ಲಿ ರಾಜಕಾರಣ ಮಾಡುತ್ತಿರುವುದು ನಿಲ್ಲಬೇಕಾದರೆ ಒಂದು ಸುಲಭವಾದ ಮಾರ್ಗವಿದೆ. ೨೧ ವರ್ಷಗಳ ನಂತರವೇ ಮತದಾನದ ಹಕ್ಕನ್ನು ನೀಡಬೇಕು. ಶಾಲಾ ಮಕ್ಕಳನ್ನು ಛೂ ಬಿಟ್ಟು ರಾಜಕಾರಣ ಮಾಡುವುದನ್ನು ಆಗ ನಿಲ್ಲಿಸುವ ಸಾಧ್ಯತೆ ಇದೆ.


ಇದನ್ನೂ ಓದಿರಿ:  ಹಿಜಾಬ್ ವಿವಾದ: ಕಾಲೇಜುಗಳಲ್ಲಿ ವಸ್ತ್ರಸಂಹಿತೆ ಕಡ್ಡಾಯಗೊಳಿಸಿಲ್ಲ ಎಂದ ಶಿಕ್ಷಣ ಇಲಾಖೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...

ಬುರ್ಖಾ ಧರಿಸದ ಕಾರಣಕ್ಕೆ ಪತ್ನಿ-ಮಕ್ಕಳ ಕೊಲೆ; ಮನೆಯೊಳಗೆ ಹೂತುಹಾಕಿದ ವ್ಯಕ್ತಿ

ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ ಘೋರ ಘಟನೆಯಿಂದು ವರದಿಯಾಗಿದೆ, ತನ್ನ ಪತ್ನಿ ಮತ್ತು ಇಬ್ಬರು ಅಪ್ರಾಪ್ತ ಹೆಣ್ಣುಮಕ್ಕಳನ್ನು ತ್ರಿವಳಿ ಕೊಲೆ ಮಾಡಿದ ಆರೋಪದ ಮೇಲೆ ಪೊಲೀಸರು ವ್ಯಕ್ತಿಯನ್ನು ಬಂಧಿಸಿದ್ದಾರೆ. ಆರೋಪಿ ಫಾರೂಕ್ ಎಂದು...

ರಾಜ್ಯದ ವಿವಿಧ ಕಾರಾಗೃಹಗಳಲ್ಲಿ ವಿಶೇಷ ಕಾರ್ಯಾಚರಣೆ: ಮೊಬೈಲ್ ಫೋನ್, ಗಾಂಜಾ ವಶ: ಡಿಜಿಪಿ ಅಲೋಕ್ ಕುಮಾರ್

ಕರ್ನಾಟಕದ ಕಾರಾಗೃಹಗಳಲ್ಲಿ 36 ಗಂಟೆಗಳ ಕಾಲ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಮೊಬೈಲ್ ಫೋನ್‌ಗಳು, ಸಿಮ್ ಕಾರ್ಡ್‌ಗಳು, ಚಾಕುಗಳು ಮತ್ತು ಗಾಂಜಾ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತಿದ್ದುಪಡಿ ಸೌಲಭ್ಯಗಳಲ್ಲಿ ಕಾನೂನುಬಾಹಿರ ಚಟುವಟಿಕೆಗಳನ್ನು ತಡೆಯಲು...