Homeಕರ್ನಾಟಕನಾರಾಯಣ ಗುರುಗಳಿಗಾದ ಅವಮಾನ ಮುಚ್ಚಿಹಾಕಲು ಹಿಜಾಬ್ ವಿವಾದ ಸೃಷ್ಟಿ: ಸಂಘ ಪರಿವಾರದ ಮಾಜಿ ನಾಯಕ ಸುನಿಲ್...

ನಾರಾಯಣ ಗುರುಗಳಿಗಾದ ಅವಮಾನ ಮುಚ್ಚಿಹಾಕಲು ಹಿಜಾಬ್ ವಿವಾದ ಸೃಷ್ಟಿ: ಸಂಘ ಪರಿವಾರದ ಮಾಜಿ ನಾಯಕ ಸುನಿಲ್ ಬಜಿಲಕೇರಿ

- Advertisement -
- Advertisement -

ಒಂದು ವರ್ಷ ಇರುವಾಗ ‘ಹಿಜಾಬ್-ಕೇಸರಿ ಶಾಲು’ ಎಂಬ ರೀತಿಯ ಅಜೆಂಡಾ ಕರಾವಳಿಯಲ್ಲಿ ಜಾರಿಯಾಗುತ್ತದೆ. ಕಾಂಗ್ರೆಸ್ ಸರ್ಕಾರ ಇದ್ದರೆ ಹಿಂದೂ ಕಾರ್ಯಕರ್ತರು ಕೊಲೆಯಾಗುತ್ತಾರೆ. ಈಗ ಬಿಜೆಪಿ ಸರ್ಕಾರವಿದೆ. ಕಾರ್ಯಕರ್ತರನ್ನು ಕೊಲೆ ಮಾಡಲು ಆಗಲ್ಲ. ಕಾಂಗ್ರೆಸ್ ಸರ್ಕಾರವಿದ್ದರೆ ಹಿಂದೂಗಳಿಗೆ ರಕ್ಷಣೆ ಇಲ್ಲ ಎಂದು ಹಬ್ಬಿಸಬಹುದಿತ್ತು. ಈಗ ಹಿಂದೂಗಳಿಗೆ ರಕ್ಷಣೆ ಇಲ್ಲ ಎಂದು ಹೇಳಲಾಗದು ಎಂದು ಸಂಘಪರಿವಾರದ ಮಾಜಿ ನಾಯಕ, ಹಿಂದುತ್ವದಿಂದ ಬಂಧುತ್ವದೆಡೆಗೆ ಅಭಿಯಾನದ ರುವಾರಿ ಸುನಿಲ್ ಬಜಿಲಕೇರಿ ಹೇಳಿದರು.

ನಾನುಗೌರಿ.ಕಾಂ ಜೊತೆ ಮಾತನಾಡಿದ ಅವರು, “ನಾರಾಯಣ ಗುರುಗಳ ವಿವಾದ ದೊಡ್ಡ ಮಟ್ಟದಲ್ಲಿ ಸಂಚಲನ ಮೂಡಿಸಿತು. ಕರಾವಳಿಯಲ್ಲಿ ಎಲ್ಲ ಕಡೆಯಲ್ಲಿ ಬಿಲ್ಲವ ಸಮುದಾಯದ ಮತಗಳೇ ನಿರ್ಣಾಯಕವಾಗಿವೆ. ಬಿಲ್ಲವರು ಬಿಜೆಪಿಯ ಪರವಾಗಿದ್ದರು. ಆದರೆ ನಾರಾಯಣ ಗುರುಗಳಿಗೆ ಆದ ಅವಮಾನದಿಂದಾಗಿ ಸಮುದಾಯಕ್ಕೆ ಇರಿಸುಮುರುಸಾಗಿತ್ತು. ಮತಬ್ಯಾಂಕಿಗೆ ದೊಡ್ಡ ಪೆಟ್ಟು ಬಿದ್ದಿತ್ತು. ಪ್ರತಿ ಕ್ಷೇತ್ರದಲ್ಲಿ ಕನಿಷ್ಠ ಹತ್ತು ಸಾವಿರ ಮತಗಳು ಬಿಜೆಪಿಯಿಂದ ಹೊರಹೋದರೆ ಬಿಜೆಪಿಗೆ ನಷ್ಟವಾಗುತ್ತದೆ. ಇಂತಹ ಸಂದರ್ಭದಲ್ಲಿ ಬಿಜೆಪಿ ಹಿಜಾಬ್‌ನಂತಹ ಪ್ರಕರಣಗಳನ್ನು ಮುಂದೆ ತರುತ್ತದೆ” ಎಂದು ಎಚ್ಚರಿಸಿದರು.

ಇದನ್ನೂ ಓದಿ: ಹಿಜಾಬ್‌‌‌: ವಿದ್ಯಾರ್ಥಿನಿಯರ ಪರವಾಗಿ ಧ್ವನಿ ಎತ್ತಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

ಮೊದಲು ನಾವೆಲ್ಲ ಶಾಲೆಗೆ ಹೋಗುವಾಗ ಹಿಜಾಬ್ ಧರಿಸಿ ಮುಸ್ಲಿಂ ಹೆಣ್ಣು ಮಕ್ಕಳು ಶಾಲೆಗೆ ಬರುತ್ತಿದ್ದರು. ಆಗ ಯಾವುದೇ ವಿವಾದ ಇರಲಿಲ್ಲ. ಈಗಿನ ವಿವಾದದ ಹಿಂದೆ ಎಸ್‌ಡಿಪಿಐ ಕೂಡ ಇದೆ. ಎಸ್‌ಡಿಪಿಐ ಬಿಜೆಪಿಯ ‘ಬಿ ಟೀಮ್’ ಥರ. ಪ್ರತಿ ಚುನಾವಣೆಯ ಸಂದರ್ಭದಲ್ಲೂ ಎಸ್‌ಡಿಪಿಐ ಬ್ಯಾನ್ ಮಾಡ್ತೀವಿ ಎಂದು ಬಿಜೆಪಿಯವರು ಹೇಳುತ್ತಾರೆ. ಆದರೆ ಬ್ಯಾನ್ ಮಾಡುವುದಿಲ್ಲ. ಯಾಕೆಂದರೆ ಮತ ಧ್ರುವೀಕರಣವಾಗುವುದು ಎಸ್‌ಡಿಪಿಐನಿಂದ. ಕಾಂಗ್ರೆಸ್ ಮತಗಳು ಒಡೆದು ಹೋಗುವುದು ಎಸ್‌ಡಿಪಿಐನಿಂದ. ಹೀಗಾಗಿ ಬಿಜೆಪಿಯವರು ಇಂಥದ್ದಕ್ಕೆಲ್ಲ ಕೈ ಹಾಕುತ್ತಾರೆ. ಕಾಂಗ್ರೆಸ್ ಕೂಡ ದೊಡ್ಡ ಮಟ್ಟದಲ್ಲಿ ವಿರೋಧ ಮಾಡುತ್ತಿಲ್ಲ. ಸುಮ್ಮನೆ ಕುಳಿತು ನೋಡುತ್ತಿದೆ ಎಂದು ತಿಳಿಸಿದರು.

ಎಂಎಲ್‌ಎ, ಎಂಪಿಗಳ ಮಕ್ಕಳು ಕಲಿಯುವ ಶಾಲೆಗಳಲ್ಲಿ ಇದೆಲ್ಲ ನಡೆಯುವುದಿಲ್ಲ. ಬಡವರ ಮಕ್ಕಳು, ಹಿಂದುಳಿದವರ ಮಕ್ಕಳು ಓದುವಂತಹ ಸರ್ಕಾರಿ ಶಾಲೆಗಳಲ್ಲಿ ಹೆಚ್ಚು ಗೊಂದಲಗಳನ್ನು ಎಬ್ಬಿಸುತ್ತಾರೆ. ಎಂಎಲ್‌ಎ ಮಕ್ಕಳು ಯಾರಾದರೂ ಕೇಸರಿ ಶಾಲು ಹಾಕಿಕೊಂಡು ಶಾಲೆಗೆ ಬಂದಿದ್ದು ನೀವು ನೋಡಿದ್ದೀರಾ? ಯಾರೂ ಬರಲ್ಲ. ಈ ಬಡವರ ಮಕ್ಕಳು ಹೊಡೆಸಿಕೊಂಡು ಸಾಯಬೇಕಷ್ಟೇ ಎಂದು ಆತಂಕ ವ್ಯಕ್ತಪಡಿಸಿದರು.

ಶಾಲೆಗೆ ಹೋಗುವುದು, ಶಿಕ್ಷಣ ಪಡೆಯುವುದು ಎಲ್ಲರ ಹಕ್ಕು. ಮೂರು ಸಾವಿರ ವರ್ಷಗಳಿಂದ ಮೇಲ್ವರ್ಗದವರ ದಬ್ಬಾಳಿಕೆ ನಡೆಯುತ್ತಾ ಬಂದಿತ್ತು. ಸ್ವಾತಂತ್ರ್ಯ ನಂತರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೀಸಲಾತಿಯನ್ನು ಜಾರಿ ಮಾಡಿತು. ಮೀಸಲಾತಿಯನ್ನು ಏಕಾಏಕಿ ತೆಗೆಯಲು ಸಾಧ್ಯವಿಲ್ಲ. ಹಿಂದುಳಿದ ವರ್ಗಗಳಲ್ಲಿ ಹಿಂದುತ್ವದ ಭಾವನೆಗಳನ್ನು ಜೋರಾಗಿ ಹಚ್ಚಿ ಮುಂದಿನ ದಿನಗಳಲ್ಲಿ ಇವರು ಮೀಸಲಾತಿ ತೆಗೆದು ಹಾಕಿದರೂ ಯಾರೂ ಮಾತನಾಡಬಾರದು ಎಂಬ ಯೋಜನೆಯನ್ನು ಹಾಕಿಕೊಂಡಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: ರಾಜ್ಯದಲ್ಲಿ ತೀವ್ರಗೊಳ್ಳುತ್ತಿರುವ ಹಿಜಾಬ್ ವಿವಾದ: ಕಠಿಣ ನಿಲುವು ತಳೆಯದ ಬೊಮ್ಮಾಯಿ ಸರ್ಕಾರ

ಕರಾವಳಿಯಲ್ಲಿ ಕಡಲ್ಕೊರೆತ ತಡೆಯಲು ಸಾವಿರಾರು ಕೋಟಿ ರೂ.ಗಳನ್ನು ನೀಡುತ್ತಿದ್ದಾರೆ. ಆದರೆ ಯೋಜನೆ ವಿಫಲವಾಗುತ್ತಿದೆ. ಅದರ ಬಗ್ಗೆ ಇವರು ಹೋರಾಟ ಮಾಡಲ್ಲ. ಕರಾವಳಿ ಜನರು ಉದ್ಯೋಗಕ್ಕಾಗಿ ಧ್ವನಿ ಎತ್ತಿದ್ದಾರೆ. ದೊಡ್ಡ ದೊಡ್ಡ ಇಂಡಸ್ಟ್ರಿಗಳು ಈ ಭಾಗದಲ್ಲಿವೆ. ಆದರೆ ಇಲ್ಲಿನ ಜನರಿಗೆ ಉದ್ಯೋಗ ಸಿಗುವುದಿಲ್ಲ. ಉತ್ತರ ಪ್ರದೇಶ, ಬಿಹಾರದವರಿಗೆ ಕೆಲಸ ಕೊಡುತ್ತಾರೆ. ಸರೋಜಿನಿ ಮಹಿಷಿ ವರದಿಯನ್ನು ಜಾರಿಗೊಳಿಸುವುದಾಗಿ ಚುನಾವಣಾ ಸಂದರ್ಭದಲ್ಲಿ ಇವರು ಹೇಳುತ್ತಾರೆ. ಅಧಿಕಾರಕ್ಕೆ ಬಂದ ಮೇಲೆ ಅದನ್ನೂ ಮಾಡಲ್ಲ. ಈ ವರದಿ ಜಾರಿಯಾದರೆ ಶೇ. ೪೦ರಷ್ಟು ಮೀಸಲಾತಿ ಕರಾವಳಿಯವರಿಗೆ ಸಿಗುತ್ತದೆ ಎಂದು ಮಾಹಿತಿ ನೀಡಿದರು.

ಕಾರ್ಯಕರ್ತರು ಸಾವಿರಾರು ಫೇಕ್ ಅಕೌಂಟ್‌ಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಮಾಡುತ್ತಾರೆ. ನಮ್ಮ ಮುಖಚರ್ಯೆಯನ್ನೇ ಹೋಲುವ ಶ್ರೀಲಂಕಾ, ಬಂಗ್ಲಾದೇಶದವರ ಫೋಟೋಗಳನ್ನು ಪ್ರೊಫೈಲ್‌ನಲ್ಲಿ ಹಾಕಿಕೊಳ್ಳುತ್ತಾರೆ. ನಾನೇನಾದರೂ ಬಿಲ್ಲವನಾಗಿದ್ದರೆ ಬಿಲ್ಲವರ ಡುಬ್ಲಿಕೇಟ್ ಅಕೌಂಟ್ ಮಾಡಿ, ಅದರಲ್ಲೇ ಕಮೆಂಟ್ ಮಾಡ್ತಾರೆ. ಜಿಎಸ್‌ಬಿಯಾಗಿದ್ದರೆ ಜಿಎಸ್‌ಬಿ ಹೆಸರಲ್ಲೇ ಫೇಕ್ ಅಕೌಂಟ್ ಮಾಡಿ ಅದರಲ್ಲೇ ಕಮೆಂಟ್ ಮಾಡುತ್ತಾರೆ. ಇನ್ನೆರಡು ತಿಂಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸೃಷ್ಟಿಯಾಗುತ್ತವೆ ಎಂದು ಎಚ್ಚರ ನೀಡಿದರು.

ಕಾಂಗ್ರೆಸ್ ಸರ್ಕಾರ ಅಧಿಕಾರವಿದ್ದಾಗ ಪ್ರಧಾನಿ ಮೋದಿಯವರೇ ಬಂದು ಶೇ. ೧೦ರಷ್ಟು ಭ್ರಷ್ಟಾಚಾರ ಕರ್ನಾಟಕದಲ್ಲಿ ಇದೆ ಎಂದಿದ್ದರು. ನಾವು ಅದನ್ನೂ ನಂಬಿದ್ದೆವು. ಆದರೆ ಬಿಜೆಪಿಯವರು ಶೇ. ೪೦ರಷ್ಟು ಭ್ರಷ್ಟಾಚಾರ ಮಾಡುತ್ತಿದ್ದಾರೆ. ಗುತ್ತಿಗೆದಾರರೇ ಮೋದಿಯವರಿಗೆ ಲಿಖಿತವಾಗಿ ದೂರು ನೀಡಿದರು. ಈ ದೂರಿನ ಬಗ್ಗೆ ಯಾವುದೇ ವಿಚಾರಣೆಯಾಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಇದನ್ನೂ ಓದಿ: ಹಿಜಾಬ್ ವಿವಾದ: ಮುಸ್ಲಿಂ ಹೆಣ್ಣು ಮಕ್ಕಳನ್ನು ಶಿಕ್ಷಣದಿಂದ ವಂಚಿಸುವ ಹುನ್ನಾರ- ಸಿದ್ದರಾಮಯ್ಯ

ಹಿಜಾಬ್ ಮತ್ತು ಕೇಸರಿ ಶಾಲು ಎರಡನ್ನೂ ಬಿಟ್ಟುಬಿಡಿ. ಮಕ್ಕಳಿಗೆ ವಿದ್ಯಾಭ್ಯಾಸ ಮುಖ್ಯ. ನೀವು ಗಲ್ಫ್ ದೇಶಗಳಿಗೆ ಹೋದರೆ ನೋಡಬಹುದು. ಒಂದು ಮಸೀದಿ ಇದ್ದರೆ ಪಕ್ಕದಲ್ಲಿ ಹತ್ತು ಲೈವ್‌ಬ್ಯಾಂಡ್‌ಗಳು ಇರುತ್ತವೆ. ಡ್ಯಾನ್ಸ್ ಮಾಡುತ್ತಾರೆ, ಕುಡಿಯುತ್ತಾರೆ. ಆ ದೇಶಗಳು ಮುಂದುವರಿದಿವೆ. ಧರ್ಮಗಳ ಗೊಂದಲಗಳ ಅಗತ್ಯ ಅವರಿಗಿಲ್ಲ ಎಂದರು.

ಕರಾವಳಿಯ ಪ್ರತಿಯೊಂದು ಮನೆಯವರು (ಹಿಂದೂ ಇರಲಿ, ಮುಸ್ಲಿಂ ಇರಲಿ) ಗಲ್ಫ್ ರಾಷ್ಟ್ರಗಳಲ್ಲಿ ಇದ್ದಾರೆ. ಆ ದೇಶಗಳಲ್ಲಿ ಇಂಥವುಗಳನ್ನೆಲ್ಲ ಮಾಡಿದರೆ ನಾವು ನಿರುದ್ಯೋಗಿಗಳಾಗಿ ಇಲ್ಲಿ ಸಾಯಬೇಕಾಗುತ್ತದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೀರುವ ಪರಿಣಾಮಗಳನ್ನು ನಾವು ಯೋಚಿಸಬೇಕಲ್ಲ. ಕರಾವಳಿಯಲ್ಲಿ ಆಗುತ್ತಿರುವ ಬೆಳವಣಿಗೆಗಳು ಗಲ್ಪ್ ರಾಷ್ಟ್ರಗಳಲ್ಲಿ ಆದರೆ ನಮ್ಮಲ್ಲಿ ನಿರುದ್ಯೋಗ ಹೆಚ್ಚಾಗುತ್ತದೆ. ಅಲ್ಲಿ ಡ್ರೈವರ್ ಆಗಿರುವವರಿಗೆ, ಸೇಲ್ಸ್‌ಮನ್ ಆಗಿರುವವರಿಗೆ ಕೆಲಸ ಇಲ್ಲದಾಗುತ್ತದೆ. ಇಲ್ಲಿ ಉದ್ಯೋಗ ಸೃಷ್ಟಿ ಮಾಡಲು ಇವರಿಂದ ಆಗುತ್ತಿಲ್ಲ. ದುಬೈನಲ್ಲಿ ಇರುವವರು ನೆಮ್ಮದಿಯಾಗಿ ಕೆಲಸ ಮಾಡದ ಹಾಗೆ ಕರಾವಳಿಯಲ್ಲಿ ಗೊಂದಲ ಸೃಷ್ಟಿಸಲಾಗುತ್ತಿದೆ ಎಂದು ಅಭಿಪ್ರಾಯಪಟ್ಟರು.

ಮಕ್ಕಳ ಹೆಸರಲ್ಲಿ ರಾಜಕಾರಣ ಮಾಡುತ್ತಿರುವುದು ನಿಲ್ಲಬೇಕಾದರೆ ಒಂದು ಸುಲಭವಾದ ಮಾರ್ಗವಿದೆ. ೨೧ ವರ್ಷಗಳ ನಂತರವೇ ಮತದಾನದ ಹಕ್ಕನ್ನು ನೀಡಬೇಕು. ಶಾಲಾ ಮಕ್ಕಳನ್ನು ಛೂ ಬಿಟ್ಟು ರಾಜಕಾರಣ ಮಾಡುವುದನ್ನು ಆಗ ನಿಲ್ಲಿಸುವ ಸಾಧ್ಯತೆ ಇದೆ.


ಇದನ್ನೂ ಓದಿರಿ:  ಹಿಜಾಬ್ ವಿವಾದ: ಕಾಲೇಜುಗಳಲ್ಲಿ ವಸ್ತ್ರಸಂಹಿತೆ ಕಡ್ಡಾಯಗೊಳಿಸಿಲ್ಲ ಎಂದ ಶಿಕ್ಷಣ ಇಲಾಖೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...