Homeಕರ್ನಾಟಕಹಿಜಾಬ್‌ ವಿವಾದ: ಮುಸ್ಲಿಂ ಹೆಣ್ಣುಮಕ್ಕಳ ಮೇಲಾದ ಪರಿಣಾಮಗಳ ಕುರಿತು ಪಿಯುಸಿಎಲ್‌ ವರದಿ

ಹಿಜಾಬ್‌ ವಿವಾದ: ಮುಸ್ಲಿಂ ಹೆಣ್ಣುಮಕ್ಕಳ ಮೇಲಾದ ಪರಿಣಾಮಗಳ ಕುರಿತು ಪಿಯುಸಿಎಲ್‌ ವರದಿ

- Advertisement -
- Advertisement -

ಸಾವಿತ್ರಿಬಾಯಿ ಫುಲೆಯವರ ನಿಕಟವರ್ತಿಯಾಗಿದ್ದ ಸಮಾಜ ಸುಧಾರಕಿ ಮತ್ತು ಶಿಕ್ಷಣತಜ್ಞೆ ಫಾತಿಮಾ ಶೇಖ್ ಅವರ ಜನ್ಮದಿನದ ಸಂದರ್ಭದಲ್ಲಿ ‘ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್‌) ಕರ್ನಾಟಕ’ ಸಂಸ್ಥೆಯು ವಿಶೇಷ ವರದಿಯನ್ನು ಬಿಡುಗಡೆ ಮಾಡಿದ್ದು, “ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್‌ನ ವಾಸ್ತವಿಕ ನಿಷೇಧದಿಂದಾಗಿ ಮುಸ್ಲಿಂ ಹೆಣ್ಣುಮಕ್ಕಳ ಶಿಕ್ಷಣ, ಘನತೆ ಮತ್ತು ಖಾಸಗಿತನದ ಹಕ್ಕುಗಳ ಮೇಲೆ ಉಂಟಾಗಿರುವ ಪರಿಣಾಮವನ್ನು ಸರಿಪಡಿಸಬೇಕು” ಎಂದು ಒತ್ತಾಯಿಸಿದೆ.

“ಕ್ಲೋಸಿಂಗ್‌ ದಿ ಗೇಟ್ಸ್‌ ಟು ಎಜುಕೇಷನ್‌: ವಯೊಲೇಶನ್ಸ್‌ ಆಫ್‌ ರೈಟ್ಸ್‌ ಆಫ್‌ ಮುಸ್ಲಿಂ ವುಮೆನ್‌ ಸ್ಟೂಡೆಂಟ್ಸ್” ಎಂಬ ವರದಿಯನ್ನು ಪಿಯುಸಿಎಲ್ ಬಿಡುಗಡೆ ಮಾಡಿದೆ. “ಹಿಜಾಬ್ ಪ್ರಕರಣದಲ್ಲಿ ನ್ಯಾಯಾಲಯದ ತೀರ್ಪುಗಳು ಶಿಕ್ಷಣ ಸಂಸ್ಥೆಗಳಿಗೆ ಹಿಜಾಬನ್ನು ನಿಷೇಧಿಸುವುದಂತೆ ಆದೇಶಿಸುವುದಿಲ್ಲವಾದರೂ, ವಾಸ್ತವವಾಗಿ ರಾಜ್ಯದ ಹಲವಾರು ಶಿಕ್ಷಣ ಸಂಸ್ಥೆಗಳು ಹಿಜಾಬನ್ನು ನಿಷೇಧಿಸಿದವು. ಈ ವರದಿಯು ಹಿಜಾಬ್‌ನ ಮೇಲೆ ಹೇರಿದ ಈ ನಿಷೇಧದ ಪರಿಣಾಮವನ್ನು ದಾಖಲಿಸುತ್ತದೆ ಮತ್ತು ಹಠಾತ್ ನಿಷೇಧವನ್ನು ರಾಜ್ಯಾದ್ಯಂತ ಹೇರಿದಾಗ ಕಿರುಕುಳ, ಅವಮಾನ ಮತ್ತು ಪ್ರತ್ಯೇಕತೆಯನ್ನು ಅನುಭವಿಸಿದ  ಮುಸ್ಲಿಂ ಮಹಿಳಾ ವಿದ್ಯಾರ್ಥಿನಿಯರ ಹೇಳಿಕೆ ಮತ್ತು  ಸಾಕ್ಷ್ಯಗಳನ್ನು ಮುನ್ನೆಲೆಗೆ ತರುತ್ತದೆ” ಎಂದು ಪಿಯುಸಿಎಲ್‌ ತಿಳಿಸಿದೆ.

“ಕರ್ನಾಟಕ ಸರ್ಕಾರವು ಮುಸ್ಲಿಂ ಯುವತಿಯರ ಮೂಲಭೂತ ಹಕ್ಕುಗಳ ನಿರಂತರ ಉಲ್ಲಂಘನೆಗಳಿಗೆ ಪ್ರತಿಕ್ರಿಯಿಸಲು ಸಾಂವಿಧಾನಿಕ ಜವಾಬ್ದಾರಿಯನ್ನು ಹೊಂದಿದೆ. ಉಡುಪಿಯ ಪದವಿಪೂರ್ವ ಕಾಲೇಜಿನಲ್ಲಿ ಒಂದು ವರ್ಷಕ್ಕೂ ಹಿಂದೆ ಹಿಜಾಬ್ ಅನ್ನು ಹಠಾತ್ತನೆ ನಿಷೇಧಿಸಿದ ನಂತರ, ಕರ್ನಾಟಕದಾದ್ಯಂತ ಮುಸ್ಲಿಂ ಮಹಿಳಾ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಮುಂದುವರಿಸಲು ಹೆಣಗಾಡುತ್ತಿದ್ದಾರೆ ಮತ್ತು ಮಾನಸಿಕ ತೊಂದರೆ ಮತ್ತು ಪ್ರತ್ಯೇಕತೆಯಂತಹ ಗಂಭೀರ ಪರಿಣಾಮಗಳನ್ನು ಎದುರಿಸುತ್ತಿದ್ದಾರೆ” ಎಂದು ಆತಂಕ ವ್ಯಕ್ತಪಡಿಸಿದೆ.

“ಅಕ್ಟೋಬರ್ 13, 2022 ರಂದು ನೀಡಲಾದ ಸುಪ್ರೀಂ ಕೋರ್ಟಿನ ವಿಭಜಿತ ತೀರ್ಪು, ವಿದ್ಯಾರ್ಥಿಗಳ ನ್ಯಾಯಕ್ಕಾಗಿ ಕಾಯುವಿಕೆಯನ್ನು ದೀರ್ಘಗೊಳಿಸಿದೆ. ಆ ದಿನಾಂಕದಂದು ಸೂಕ್ತ ಪೀಠವನ್ನು ರಚಿಸುವಂತೆ ಗೌರವಾನ್ವಿತ ಮುಖ್ಯ ನ್ಯಾಯಾಧೀಶರ ಮುಂದೆ ವಿಷಯವನ್ನು ಇರಿಸಲಾಯಿತು. ಮುಸ್ಲಿಂ ಮಹಿಳಾ ವಿದ್ಯಾರ್ಥಿಗಳಿಗೆ ಶಿಕ್ಷಣ, ಘನತೆ ಮತ್ತು ಖಾಸಗಿತನದ ಸಾಂವಿಧಾನಿಕ ಹಕ್ಕನ್ನು ನಿರಾಕರಿಸಲಾಗುತ್ತಿರುವುದರಿಂದ ಈ ವಿಷಯವನ್ನು ಸರ್ವೋಚ್ಚ ನ್ಯಾಯಾಲಯ ತ್ವರಿತವಾಗಿ ತೆಗೆದುಕೊಳ್ಳಬೇಕಾದ ತುರ್ತು ಅಗತ್ಯವಿದೆ” ಎಂದು ಅಭಿಪ್ರಾಯಪಟ್ಟಿದೆ.

“ಕರ್ನಾಟಕದಾದ್ಯಂತ ಹಾಸನ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಮತ್ತು ರಾಯಚೂರು ಜಿಲ್ಲೆಗಳಿಗೆ ತಂಡ ಭೇಟಿ ನೀಡಿ ತೀರ್ಪಿನಿಂದ ಪ್ರಭಾವಿತವಾದ ಮಹಿಳಾ ವಿದ್ಯಾರ್ಥಿಗಳಿಂದ ಸಾಕ್ಷ್ಯಗಳನ್ನು ಸಂಗ್ರಹಿಸಲಾಗಿದೆ ಎಂದಿರುವ ಪಿಯುಸಿಎಲ್‌, ಈ ವಿದ್ಯಾರ್ಥಿಗಳಿಗೆ  ತಮ್ಮ ಶಿಕ್ಷಣದ ಹಕ್ಕನ್ನು ನಿರಾಕಾರಣೆ ಹೇಗಾಯಿತು ಹಾಗೂ  ಹೇಗೆ ದ್ವೇಷ, ಹಗೆತನ ಮತ್ತು ತಪ್ಪು ಮಾಹಿತಿಯ ವಾತಾವರಣದಲ್ಲಿ ಅವರನ್ನು ಹೇಗೆ ಘಾಸಿ ಗೊಳಿಸಲಾಯಿತು ಎಂಬುದನ್ನು ವರದಿಯು ಬಹಿರಂಗಪಡಿಸುತ್ತದೆ” ಎಂದು ವಿವರಿಸಿದೆ.

ಹಿಜಾಬ್ ಧರಿಸಿದ ವಿದ್ಯಾರ್ಥಿಗಳ ವಿರುದ್ಧ ಹಿಂದುತ್ವ ಕಿಡಿಗೇಡಿ ಗುಂಪುಗಳು ಹೇಗೆ ಅಪಪ್ರಚಾರ ನಡೆಸಿವೆ. ಸರ್ಕಾರ ಮತ್ತು ಪೊಲೀಸರ ನಿಷ್ಕ್ರಿಯತೆಯು ಹೇಗೆ ಈ ಮೂಲಭೂತವಾದಿ ಶಕ್ತಿಗಳಿಗೆ ಸೂಚ್ಯವಾಗಿ ಪ್ರೋತ್ಸಾಹ ನೀಡಿತು ಎಂಬುದರ ಬಗ್ಗೆಯೂ ವರದಿ ಗಮನ ಸೆಳೆದಿದೆ.

“ತಮ್ಮ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದರ ಮೇಲೆ ನಿರ್ಬಂಧವನ್ನು ಹೇರಿದ ನಂತರ ಮುಸ್ಲಿಂ ಮಹಿಳಾ ವಿದ್ಯಾರ್ಥಿಗಳ ಮೇಲೆ ಪರಿಣಾಮ, ಮುಸ್ಲಿಂ ವಿದ್ಯಾರ್ಥಿಗಳ ಸುರಕ್ಷತೆಯನ್ನು ಖಾತ್ರಿಪಡಿಸುವಲ್ಲಿ ಕಾರ್ಯನಿರ್ವಹಿಸಬೇಕಿದ್ದ ವಿವಿಧ  ವ್ಯಕ್ತಿ ಮತ್ತು ಸಂಸ್ಥೆಗಳ ವೈಫಲ್ಯ ಮತ್ತು ಮುಸ್ಲಿಂ ಸಮುದಾಯದ ವಿರುದ್ಧ ವಿಶೇಷವಾಗಿ ಮಹಿಳೆಯರ ವಿರುದ್ಧ ಪಕ್ಷಪಾತಗಳು, ಪೂರ್ವಾಗ್ರಹಗಳು ಮತ್ತು ಸ್ಟೀರಿಯೊಟೈಪ್‌ಗಳು ಸೇರಿದಂತೆ ವಿವಿಧ ಸಾಮಾಜಿಕ-ಸಾಂಸ್ಕೃತಿಕ ಅಂಶಗಳು ದ್ವೇಷದ ವಾತಾವರಣವನ್ನು ಹೆಚ್ಚಿಸಲು ಅನುವು ಮಾಡಿಕೊಟ್ಟಿವೆ” ಎಂದು ಬೇಸರ ವ್ಯಕ್ತಪಡಿಸಲಾಗಿದೆ.

ಈ ವಿಷಯದಲ್ಲಿ ಭಾಗಿಯಾಗಿರುವ ವಿವಿಧ ವ್ಯಕ್ತಿ ಮತ್ತು ಸಂಸ್ಥೆಗಳಿಗೆ ವಿವರವಾದ  ಶಿಫಾರಸುಗಳನ್ನೂ ವರದಿ ಮಾಡಿದೆ. ಪಿಯುಸಿಎಲ್‌ ಕರ್ನಾಟಕದ ಅಧ್ಯಕ್ಷರಾದ ಅರವಿಂದ್ ನರೈನ್, ಪ್ರಧಾನ ಕಾರ್ಯದರ್ಶಿ ಶುಜಯತುಲ್ಲಾ ಅವರು ತಮ್ಮ ವರದಿಯಲ್ಲಿ ಹಲವು ವಿಷಯಗಳ ಕುರಿತು ಗಮನ ಸೆಳೆದಿದ್ದಾರೆ.

“ಮುಸ್ಲಿಂ ವಿದ್ಯಾರ್ಥಿಗಳು ಸಂಬಂಧಪಟ್ಟಂತೆ ತಾರತಮ್ಯ, ಖಾಸಗಿತನ, ಸ್ವಾಯತ್ತತೆ ಮತ್ತು ಘನತೆಯ ಸಾಂವಿಧಾನಿಕ ಮೌಲ್ಯಗಳನ್ನು ಕರ್ನಾಟಕ ಸರ್ಕಾರ  ಎತ್ತಿಹಿಡಿಯಬೇಕು. ಕರ್ನಾಟಕ ರಾಜ್ಯ ಸರ್ಕಾರ ತನ್ನ ಅಸಂವಿಧಾನಿಕ ಮತ್ತು ಅನಿಯಂತ್ರಿತ ಕ್ರಮದಿಂದಾಗಿ ಶಿಕ್ಷಣ, ಅಭಿವ್ಯಕ್ತಿ, ಘನತೆ ಮತ್ತು ತಾರತಮ್ಯದ ವಿರುದ್ದದ ಸಾಂವಿಧಾನಿಕ ಹಕ್ಕುಗಳಿಂದ ವಂಚಿತರಾದ ಮುಸ್ಲಿಂ ಹೆಣ್ಣು ವಿದ್ಯಾರ್ಥಿನಿಯರು ಅನುಭವಿಸಿದ ನಷ್ಟವನ್ನು ಭರಿಸಬೇಕು” ಎಂದು ಆಗ್ರಹಿಸಲಾಗಿದೆ.

“ಶಿಕ್ಷಣ ಇಲಾಖೆಯು ಕಡ್ಡಾಯವಾಗಿ ‘ರೇಶಮ್ ವರ್ಸಸ್ ಸ್ಟೇಟ್ ಆಫ್ ಕರ್ನಾಟಕ’ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ಆದೇಶದ ವ್ಯಾಪ್ತಿಯನ್ನು ಸ್ಪಷ್ಟಪಡಿಸುವ ನಿರ್ದೇಶನಗಳನ್ನು ನೀಡಿಬೇಕು. ಕರ್ನಾಟಕ ರಾಜ್ಯ ಸರ್ಕಾರವು ಫೆಬ್ರವರಿ – ಏಪ್ರಿಲ್ 2022 ರ ಅವಧಿಯಲ್ಲಿ ಶಾಂತಿಯುತ ಪ್ರತಿಭಟನೆಗಳನ್ನು ನಡೆಸಿದ ಮುಸ್ಲಿಂ ವಿದ್ಯಾರ್ಥಿಗಳು, ಶಿಕ್ಷಕರು ಅಥವಾ ಅಂತಹ ಯಾವುದೇ ವ್ಯಕ್ತಿಯ ವಿರುದ್ಧ ಕೈಗೊಂಡಿರುವ ಕಾನೂನು ಕ್ರಮವನ್ನು ತಕ್ಷಣವೇ  ಹಿಂಪಡೆಯಬೇಕು” ಎಂದು ಒತ್ತಾಯಿಸಲಾಗಿದೆ.

“ಮಾಧ್ಯಮಗಳು ದುರ್ಬಲ ಸಮುದಾಯಗಳು, ಅಪ್ರಾಪ್ತ ವಯಸ್ಕರು ಮತ್ತು ವಿಚಾರಣೆಯಲ್ಲಿರುವ ನ್ಯಾಯಾಲಯದ ಪ್ರಕರಣಗಳಿಗೆ ಸಂಬಂಧಿಸಿದ ವರದಿಯನ್ನು ನೀಡುವಾಗ ಆಂತರಿಕ ಮಾರ್ಗಸೂಚಿಗಳನ್ನು ಸಿದ್ಧಪಡಿಸಬೇಕು  ಮತ್ತು ಅವುಗಳ ಪ್ರಸಾರದಿಂದಾಗಿ ಅಂಚಿನಲ್ಲಿರುವ ಸಮುದಾಯಗಳು ಅನುಭವಿಸುವ ಪರಕೀಯತೆ ಮತ್ತು ಕಳಂಕವನ್ನು ಉಲ್ಬಣಗೊಳಿಸುವುದಿಲ್ಲ ಎಂದು ಖಚಿತಪಡಿಸಿಕೊಳ್ಳಬೇಕು” ಎಂದು ತಿಳಿಸಲಾಗಿದೆ.

“ಪೊಲೀಸರು ಕಡ್ಡಾಯವಾಗಿ ಈ ಪ್ರಕರಣದಲ್ಲಿ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ಗೆ ಹಾಜರಾಗಿದ್ದ ಎಲ್ಲಾ ಅರ್ಜಿದಾರರು ಮತ್ತು ಅವರ ಕುಟುಂಬಗಳಿಗೆ ರಕ್ಷಣೆಯನ್ನು ವಿಸ್ತರಿಸಿ ಅವರ ದೈಹಿಕ ಸುರಕ್ಷತೆ ಮತ್ತು ಭದ್ರತೆಯನ್ನು ಖಾತ್ರಿಪಡಿಸಿಕೊಳ್ಳಬೇಕು. ಮುಸ್ಲಿಂ ಮಹಿಳಾ ವಿದ್ಯಾರ್ಥಿಗಳಿಗೆ ಕಿರುಕುಳ ನೀಡುವ, ಈಗಾಗಲೇ ವರದಿಯಾಗಿರುವ  ವೀಡಿಯೊಗಳು ಮತ್ತು ಚಿತ್ರಗಳಲ್ಲಿ ಗೋಚರಿಸುವ ಹಿಂದುತ್ವ ಕಿಡಿಗೇಡಿ ಗುಂಪು/ಸದಸ್ಯರ ವಿರುದ್ಧ ಪ್ರಕರಣಗಳನ್ನು ದಾಖಲಿಸುವಲ್ಲಿ ತ್ವರಿತ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಲಾಗಿದೆ.

“ಮುಸ್ಲಿಂ ಮಹಿಳಾ ವಿದ್ಯಾರ್ಥಿಗಳು ಸಲ್ಲಿಸಿದ ದೂರುಗಳ ಮೇಲೆ ನಿಷ್ಪಕ್ಷಪಾತವಾಗಿ ಕ್ರಮ ಕೈಗೊಳ್ಳಬೇಕು. ಅವರು ದೂರು ನೀಡಿರುವ ಕಾಲೇಜು ಅಧಿಕಾರಿಗಳು, ಹಿಂದುತ್ವ ಗುಂಪುಗಳು ಅಥವಾ ವಿದ್ಯಾರ್ಥಿಗಳ ಮೇಲೆ ಮತ್ತು ದೂರು ನೀಡಿರುವ ಕುಟುಂಬದವರ ಘನತೆ, ಖಾಸಗಿತನ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕನ್ನು ಉಲ್ಲಂಘಿಸಿದ ಯಾವುದೇ ವ್ಯಕ್ತಿಯ ವಿರುದ್ಧ ಎಫ್‌ಐಆರ್‌ಗಳನ್ನು ದಾಖಲಿಸಬೇಕು. ಮುಸ್ಲಿಂ ವಿದ್ಯಾರ್ಥಿಗಳ ಮೂಲಭೂತ ಹಕ್ಕುಗಳ ಉಲ್ಲಂಘನೆ ಮಾಡಿದವರ ಮೇಲೆ ಇಲಾಖಾ ವಿಚಾರಣೆಯನ್ನು ಕೈಗೊಳ್ಳಬೇಕು. ತಮ್ಮ ನಿಷ್ಕ್ರಿಯತೆ ಮತ್ತು ಅನಧಿಕೃತ ಕ್ರಮದಿಂದಾಗಿ ಮುಸ್ಲಿಂ ವಿದ್ಯಾರ್ಥಿಗಳ ಮೂಲಭೂತ ಹಕ್ಕುಗಳ ಉಲ್ಲಂಘನೆಗೆ  ಕಾರಣವಾದ ತನ್ನ ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮವನ್ನು ಪ್ರಾರಂಭಿಸಬೇಕು. 01.01.2022 ಮತ್ತು 30.04.2022 ರ ನಡುವೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ CrPC ಯ ಸೆಕ್ಷನ್ 144 ಅನ್ನು ವಿಧಿಸುವ ಎಲ್ಲಾ ಆದೇಶಗಳನ್ನು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಬೇಕು” ಎಂದು ಆಗ್ರಹಿಸಲಾಗಿದೆ.

“ಮಹಿಳಾ ಮತ್ತು ಮಕ್ಕಳ ಇಲಾಖೆ, ಕರ್ನಾಟಕ ಕಡ್ಡಾಯವಾಗಿ ಹಿಜಾಬ್ ತೀರ್ಪಿನಿಂದ ಪ್ರತಿಕೂಲ ಪರಿಣಾಮ ಬೀರುವ ವಿದ್ಯಾರ್ಥಿಗಳಿಗೆ ಮಾನಸಿಕ ಆರೋಗ್ಯ ಬೆಂಬಲವನ್ನು ಒದಗಿಸುವ ಕಾರ್ಯಕ್ರಮಗಳನ್ನು ಪ್ರಾರಂಭಿಸಬೇಕು. ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ (KSHRC), ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗ (KMSC), ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (KSCPCR) ಮತ್ತು ಕರ್ನಾಟಕ ರಾಜ್ಯ ಮಹಿಳಾ ಆಯೋಗ (KSCW) ಹಕ್ಕುಗಳ ಉಲ್ಲಂಘನೆಯ ಬಗ್ಗೆ ಸ್ವಯಂ-ಪ್ರೇರಿತ ದೂರು ದಾಖಲಿಸಿಕೊಳ್ಳಬೇಕು. ಮುಸ್ಲಿಂ ಮಹಿಳೆಯರು ಮತ್ತು ಅಪ್ರಾಪ್ತ ವಯಸ್ಕರು, ಮತ್ತು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕಿರುಕುಳ, ತಾರತಮ್ಯ ಮತ್ತು ದ್ವೇಷ ಭಾಷಣದ ಪ್ರಕರಣಗಳಲ್ಲಿ ಮಧ್ಯಪ್ರವೇಶಿಸಬೇಕು” ಎಂದು ಸಲಹೆ ನೀಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...