Homeಕರ್ನಾಟಕಹಿಜಾಬ್‌ ವಿವಾದ: ಮುಸ್ಲಿಂ ಹೆಣ್ಣುಮಕ್ಕಳ ಮೇಲಾದ ಪರಿಣಾಮಗಳ ಕುರಿತು ಪಿಯುಸಿಎಲ್‌ ವರದಿ

ಹಿಜಾಬ್‌ ವಿವಾದ: ಮುಸ್ಲಿಂ ಹೆಣ್ಣುಮಕ್ಕಳ ಮೇಲಾದ ಪರಿಣಾಮಗಳ ಕುರಿತು ಪಿಯುಸಿಎಲ್‌ ವರದಿ

- Advertisement -
- Advertisement -

ಸಾವಿತ್ರಿಬಾಯಿ ಫುಲೆಯವರ ನಿಕಟವರ್ತಿಯಾಗಿದ್ದ ಸಮಾಜ ಸುಧಾರಕಿ ಮತ್ತು ಶಿಕ್ಷಣತಜ್ಞೆ ಫಾತಿಮಾ ಶೇಖ್ ಅವರ ಜನ್ಮದಿನದ ಸಂದರ್ಭದಲ್ಲಿ ‘ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್‌) ಕರ್ನಾಟಕ’ ಸಂಸ್ಥೆಯು ವಿಶೇಷ ವರದಿಯನ್ನು ಬಿಡುಗಡೆ ಮಾಡಿದ್ದು, “ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್‌ನ ವಾಸ್ತವಿಕ ನಿಷೇಧದಿಂದಾಗಿ ಮುಸ್ಲಿಂ ಹೆಣ್ಣುಮಕ್ಕಳ ಶಿಕ್ಷಣ, ಘನತೆ ಮತ್ತು ಖಾಸಗಿತನದ ಹಕ್ಕುಗಳ ಮೇಲೆ ಉಂಟಾಗಿರುವ ಪರಿಣಾಮವನ್ನು ಸರಿಪಡಿಸಬೇಕು” ಎಂದು ಒತ್ತಾಯಿಸಿದೆ.

“ಕ್ಲೋಸಿಂಗ್‌ ದಿ ಗೇಟ್ಸ್‌ ಟು ಎಜುಕೇಷನ್‌: ವಯೊಲೇಶನ್ಸ್‌ ಆಫ್‌ ರೈಟ್ಸ್‌ ಆಫ್‌ ಮುಸ್ಲಿಂ ವುಮೆನ್‌ ಸ್ಟೂಡೆಂಟ್ಸ್” ಎಂಬ ವರದಿಯನ್ನು ಪಿಯುಸಿಎಲ್ ಬಿಡುಗಡೆ ಮಾಡಿದೆ. “ಹಿಜಾಬ್ ಪ್ರಕರಣದಲ್ಲಿ ನ್ಯಾಯಾಲಯದ ತೀರ್ಪುಗಳು ಶಿಕ್ಷಣ ಸಂಸ್ಥೆಗಳಿಗೆ ಹಿಜಾಬನ್ನು ನಿಷೇಧಿಸುವುದಂತೆ ಆದೇಶಿಸುವುದಿಲ್ಲವಾದರೂ, ವಾಸ್ತವವಾಗಿ ರಾಜ್ಯದ ಹಲವಾರು ಶಿಕ್ಷಣ ಸಂಸ್ಥೆಗಳು ಹಿಜಾಬನ್ನು ನಿಷೇಧಿಸಿದವು. ಈ ವರದಿಯು ಹಿಜಾಬ್‌ನ ಮೇಲೆ ಹೇರಿದ ಈ ನಿಷೇಧದ ಪರಿಣಾಮವನ್ನು ದಾಖಲಿಸುತ್ತದೆ ಮತ್ತು ಹಠಾತ್ ನಿಷೇಧವನ್ನು ರಾಜ್ಯಾದ್ಯಂತ ಹೇರಿದಾಗ ಕಿರುಕುಳ, ಅವಮಾನ ಮತ್ತು ಪ್ರತ್ಯೇಕತೆಯನ್ನು ಅನುಭವಿಸಿದ  ಮುಸ್ಲಿಂ ಮಹಿಳಾ ವಿದ್ಯಾರ್ಥಿನಿಯರ ಹೇಳಿಕೆ ಮತ್ತು  ಸಾಕ್ಷ್ಯಗಳನ್ನು ಮುನ್ನೆಲೆಗೆ ತರುತ್ತದೆ” ಎಂದು ಪಿಯುಸಿಎಲ್‌ ತಿಳಿಸಿದೆ.

“ಕರ್ನಾಟಕ ಸರ್ಕಾರವು ಮುಸ್ಲಿಂ ಯುವತಿಯರ ಮೂಲಭೂತ ಹಕ್ಕುಗಳ ನಿರಂತರ ಉಲ್ಲಂಘನೆಗಳಿಗೆ ಪ್ರತಿಕ್ರಿಯಿಸಲು ಸಾಂವಿಧಾನಿಕ ಜವಾಬ್ದಾರಿಯನ್ನು ಹೊಂದಿದೆ. ಉಡುಪಿಯ ಪದವಿಪೂರ್ವ ಕಾಲೇಜಿನಲ್ಲಿ ಒಂದು ವರ್ಷಕ್ಕೂ ಹಿಂದೆ ಹಿಜಾಬ್ ಅನ್ನು ಹಠಾತ್ತನೆ ನಿಷೇಧಿಸಿದ ನಂತರ, ಕರ್ನಾಟಕದಾದ್ಯಂತ ಮುಸ್ಲಿಂ ಮಹಿಳಾ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಮುಂದುವರಿಸಲು ಹೆಣಗಾಡುತ್ತಿದ್ದಾರೆ ಮತ್ತು ಮಾನಸಿಕ ತೊಂದರೆ ಮತ್ತು ಪ್ರತ್ಯೇಕತೆಯಂತಹ ಗಂಭೀರ ಪರಿಣಾಮಗಳನ್ನು ಎದುರಿಸುತ್ತಿದ್ದಾರೆ” ಎಂದು ಆತಂಕ ವ್ಯಕ್ತಪಡಿಸಿದೆ.

“ಅಕ್ಟೋಬರ್ 13, 2022 ರಂದು ನೀಡಲಾದ ಸುಪ್ರೀಂ ಕೋರ್ಟಿನ ವಿಭಜಿತ ತೀರ್ಪು, ವಿದ್ಯಾರ್ಥಿಗಳ ನ್ಯಾಯಕ್ಕಾಗಿ ಕಾಯುವಿಕೆಯನ್ನು ದೀರ್ಘಗೊಳಿಸಿದೆ. ಆ ದಿನಾಂಕದಂದು ಸೂಕ್ತ ಪೀಠವನ್ನು ರಚಿಸುವಂತೆ ಗೌರವಾನ್ವಿತ ಮುಖ್ಯ ನ್ಯಾಯಾಧೀಶರ ಮುಂದೆ ವಿಷಯವನ್ನು ಇರಿಸಲಾಯಿತು. ಮುಸ್ಲಿಂ ಮಹಿಳಾ ವಿದ್ಯಾರ್ಥಿಗಳಿಗೆ ಶಿಕ್ಷಣ, ಘನತೆ ಮತ್ತು ಖಾಸಗಿತನದ ಸಾಂವಿಧಾನಿಕ ಹಕ್ಕನ್ನು ನಿರಾಕರಿಸಲಾಗುತ್ತಿರುವುದರಿಂದ ಈ ವಿಷಯವನ್ನು ಸರ್ವೋಚ್ಚ ನ್ಯಾಯಾಲಯ ತ್ವರಿತವಾಗಿ ತೆಗೆದುಕೊಳ್ಳಬೇಕಾದ ತುರ್ತು ಅಗತ್ಯವಿದೆ” ಎಂದು ಅಭಿಪ್ರಾಯಪಟ್ಟಿದೆ.

“ಕರ್ನಾಟಕದಾದ್ಯಂತ ಹಾಸನ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಮತ್ತು ರಾಯಚೂರು ಜಿಲ್ಲೆಗಳಿಗೆ ತಂಡ ಭೇಟಿ ನೀಡಿ ತೀರ್ಪಿನಿಂದ ಪ್ರಭಾವಿತವಾದ ಮಹಿಳಾ ವಿದ್ಯಾರ್ಥಿಗಳಿಂದ ಸಾಕ್ಷ್ಯಗಳನ್ನು ಸಂಗ್ರಹಿಸಲಾಗಿದೆ ಎಂದಿರುವ ಪಿಯುಸಿಎಲ್‌, ಈ ವಿದ್ಯಾರ್ಥಿಗಳಿಗೆ  ತಮ್ಮ ಶಿಕ್ಷಣದ ಹಕ್ಕನ್ನು ನಿರಾಕಾರಣೆ ಹೇಗಾಯಿತು ಹಾಗೂ  ಹೇಗೆ ದ್ವೇಷ, ಹಗೆತನ ಮತ್ತು ತಪ್ಪು ಮಾಹಿತಿಯ ವಾತಾವರಣದಲ್ಲಿ ಅವರನ್ನು ಹೇಗೆ ಘಾಸಿ ಗೊಳಿಸಲಾಯಿತು ಎಂಬುದನ್ನು ವರದಿಯು ಬಹಿರಂಗಪಡಿಸುತ್ತದೆ” ಎಂದು ವಿವರಿಸಿದೆ.

ಹಿಜಾಬ್ ಧರಿಸಿದ ವಿದ್ಯಾರ್ಥಿಗಳ ವಿರುದ್ಧ ಹಿಂದುತ್ವ ಕಿಡಿಗೇಡಿ ಗುಂಪುಗಳು ಹೇಗೆ ಅಪಪ್ರಚಾರ ನಡೆಸಿವೆ. ಸರ್ಕಾರ ಮತ್ತು ಪೊಲೀಸರ ನಿಷ್ಕ್ರಿಯತೆಯು ಹೇಗೆ ಈ ಮೂಲಭೂತವಾದಿ ಶಕ್ತಿಗಳಿಗೆ ಸೂಚ್ಯವಾಗಿ ಪ್ರೋತ್ಸಾಹ ನೀಡಿತು ಎಂಬುದರ ಬಗ್ಗೆಯೂ ವರದಿ ಗಮನ ಸೆಳೆದಿದೆ.

“ತಮ್ಮ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದರ ಮೇಲೆ ನಿರ್ಬಂಧವನ್ನು ಹೇರಿದ ನಂತರ ಮುಸ್ಲಿಂ ಮಹಿಳಾ ವಿದ್ಯಾರ್ಥಿಗಳ ಮೇಲೆ ಪರಿಣಾಮ, ಮುಸ್ಲಿಂ ವಿದ್ಯಾರ್ಥಿಗಳ ಸುರಕ್ಷತೆಯನ್ನು ಖಾತ್ರಿಪಡಿಸುವಲ್ಲಿ ಕಾರ್ಯನಿರ್ವಹಿಸಬೇಕಿದ್ದ ವಿವಿಧ  ವ್ಯಕ್ತಿ ಮತ್ತು ಸಂಸ್ಥೆಗಳ ವೈಫಲ್ಯ ಮತ್ತು ಮುಸ್ಲಿಂ ಸಮುದಾಯದ ವಿರುದ್ಧ ವಿಶೇಷವಾಗಿ ಮಹಿಳೆಯರ ವಿರುದ್ಧ ಪಕ್ಷಪಾತಗಳು, ಪೂರ್ವಾಗ್ರಹಗಳು ಮತ್ತು ಸ್ಟೀರಿಯೊಟೈಪ್‌ಗಳು ಸೇರಿದಂತೆ ವಿವಿಧ ಸಾಮಾಜಿಕ-ಸಾಂಸ್ಕೃತಿಕ ಅಂಶಗಳು ದ್ವೇಷದ ವಾತಾವರಣವನ್ನು ಹೆಚ್ಚಿಸಲು ಅನುವು ಮಾಡಿಕೊಟ್ಟಿವೆ” ಎಂದು ಬೇಸರ ವ್ಯಕ್ತಪಡಿಸಲಾಗಿದೆ.

ಈ ವಿಷಯದಲ್ಲಿ ಭಾಗಿಯಾಗಿರುವ ವಿವಿಧ ವ್ಯಕ್ತಿ ಮತ್ತು ಸಂಸ್ಥೆಗಳಿಗೆ ವಿವರವಾದ  ಶಿಫಾರಸುಗಳನ್ನೂ ವರದಿ ಮಾಡಿದೆ. ಪಿಯುಸಿಎಲ್‌ ಕರ್ನಾಟಕದ ಅಧ್ಯಕ್ಷರಾದ ಅರವಿಂದ್ ನರೈನ್, ಪ್ರಧಾನ ಕಾರ್ಯದರ್ಶಿ ಶುಜಯತುಲ್ಲಾ ಅವರು ತಮ್ಮ ವರದಿಯಲ್ಲಿ ಹಲವು ವಿಷಯಗಳ ಕುರಿತು ಗಮನ ಸೆಳೆದಿದ್ದಾರೆ.

“ಮುಸ್ಲಿಂ ವಿದ್ಯಾರ್ಥಿಗಳು ಸಂಬಂಧಪಟ್ಟಂತೆ ತಾರತಮ್ಯ, ಖಾಸಗಿತನ, ಸ್ವಾಯತ್ತತೆ ಮತ್ತು ಘನತೆಯ ಸಾಂವಿಧಾನಿಕ ಮೌಲ್ಯಗಳನ್ನು ಕರ್ನಾಟಕ ಸರ್ಕಾರ  ಎತ್ತಿಹಿಡಿಯಬೇಕು. ಕರ್ನಾಟಕ ರಾಜ್ಯ ಸರ್ಕಾರ ತನ್ನ ಅಸಂವಿಧಾನಿಕ ಮತ್ತು ಅನಿಯಂತ್ರಿತ ಕ್ರಮದಿಂದಾಗಿ ಶಿಕ್ಷಣ, ಅಭಿವ್ಯಕ್ತಿ, ಘನತೆ ಮತ್ತು ತಾರತಮ್ಯದ ವಿರುದ್ದದ ಸಾಂವಿಧಾನಿಕ ಹಕ್ಕುಗಳಿಂದ ವಂಚಿತರಾದ ಮುಸ್ಲಿಂ ಹೆಣ್ಣು ವಿದ್ಯಾರ್ಥಿನಿಯರು ಅನುಭವಿಸಿದ ನಷ್ಟವನ್ನು ಭರಿಸಬೇಕು” ಎಂದು ಆಗ್ರಹಿಸಲಾಗಿದೆ.

“ಶಿಕ್ಷಣ ಇಲಾಖೆಯು ಕಡ್ಡಾಯವಾಗಿ ‘ರೇಶಮ್ ವರ್ಸಸ್ ಸ್ಟೇಟ್ ಆಫ್ ಕರ್ನಾಟಕ’ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ಆದೇಶದ ವ್ಯಾಪ್ತಿಯನ್ನು ಸ್ಪಷ್ಟಪಡಿಸುವ ನಿರ್ದೇಶನಗಳನ್ನು ನೀಡಿಬೇಕು. ಕರ್ನಾಟಕ ರಾಜ್ಯ ಸರ್ಕಾರವು ಫೆಬ್ರವರಿ – ಏಪ್ರಿಲ್ 2022 ರ ಅವಧಿಯಲ್ಲಿ ಶಾಂತಿಯುತ ಪ್ರತಿಭಟನೆಗಳನ್ನು ನಡೆಸಿದ ಮುಸ್ಲಿಂ ವಿದ್ಯಾರ್ಥಿಗಳು, ಶಿಕ್ಷಕರು ಅಥವಾ ಅಂತಹ ಯಾವುದೇ ವ್ಯಕ್ತಿಯ ವಿರುದ್ಧ ಕೈಗೊಂಡಿರುವ ಕಾನೂನು ಕ್ರಮವನ್ನು ತಕ್ಷಣವೇ  ಹಿಂಪಡೆಯಬೇಕು” ಎಂದು ಒತ್ತಾಯಿಸಲಾಗಿದೆ.

“ಮಾಧ್ಯಮಗಳು ದುರ್ಬಲ ಸಮುದಾಯಗಳು, ಅಪ್ರಾಪ್ತ ವಯಸ್ಕರು ಮತ್ತು ವಿಚಾರಣೆಯಲ್ಲಿರುವ ನ್ಯಾಯಾಲಯದ ಪ್ರಕರಣಗಳಿಗೆ ಸಂಬಂಧಿಸಿದ ವರದಿಯನ್ನು ನೀಡುವಾಗ ಆಂತರಿಕ ಮಾರ್ಗಸೂಚಿಗಳನ್ನು ಸಿದ್ಧಪಡಿಸಬೇಕು  ಮತ್ತು ಅವುಗಳ ಪ್ರಸಾರದಿಂದಾಗಿ ಅಂಚಿನಲ್ಲಿರುವ ಸಮುದಾಯಗಳು ಅನುಭವಿಸುವ ಪರಕೀಯತೆ ಮತ್ತು ಕಳಂಕವನ್ನು ಉಲ್ಬಣಗೊಳಿಸುವುದಿಲ್ಲ ಎಂದು ಖಚಿತಪಡಿಸಿಕೊಳ್ಳಬೇಕು” ಎಂದು ತಿಳಿಸಲಾಗಿದೆ.

“ಪೊಲೀಸರು ಕಡ್ಡಾಯವಾಗಿ ಈ ಪ್ರಕರಣದಲ್ಲಿ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ಗೆ ಹಾಜರಾಗಿದ್ದ ಎಲ್ಲಾ ಅರ್ಜಿದಾರರು ಮತ್ತು ಅವರ ಕುಟುಂಬಗಳಿಗೆ ರಕ್ಷಣೆಯನ್ನು ವಿಸ್ತರಿಸಿ ಅವರ ದೈಹಿಕ ಸುರಕ್ಷತೆ ಮತ್ತು ಭದ್ರತೆಯನ್ನು ಖಾತ್ರಿಪಡಿಸಿಕೊಳ್ಳಬೇಕು. ಮುಸ್ಲಿಂ ಮಹಿಳಾ ವಿದ್ಯಾರ್ಥಿಗಳಿಗೆ ಕಿರುಕುಳ ನೀಡುವ, ಈಗಾಗಲೇ ವರದಿಯಾಗಿರುವ  ವೀಡಿಯೊಗಳು ಮತ್ತು ಚಿತ್ರಗಳಲ್ಲಿ ಗೋಚರಿಸುವ ಹಿಂದುತ್ವ ಕಿಡಿಗೇಡಿ ಗುಂಪು/ಸದಸ್ಯರ ವಿರುದ್ಧ ಪ್ರಕರಣಗಳನ್ನು ದಾಖಲಿಸುವಲ್ಲಿ ತ್ವರಿತ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಲಾಗಿದೆ.

“ಮುಸ್ಲಿಂ ಮಹಿಳಾ ವಿದ್ಯಾರ್ಥಿಗಳು ಸಲ್ಲಿಸಿದ ದೂರುಗಳ ಮೇಲೆ ನಿಷ್ಪಕ್ಷಪಾತವಾಗಿ ಕ್ರಮ ಕೈಗೊಳ್ಳಬೇಕು. ಅವರು ದೂರು ನೀಡಿರುವ ಕಾಲೇಜು ಅಧಿಕಾರಿಗಳು, ಹಿಂದುತ್ವ ಗುಂಪುಗಳು ಅಥವಾ ವಿದ್ಯಾರ್ಥಿಗಳ ಮೇಲೆ ಮತ್ತು ದೂರು ನೀಡಿರುವ ಕುಟುಂಬದವರ ಘನತೆ, ಖಾಸಗಿತನ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕನ್ನು ಉಲ್ಲಂಘಿಸಿದ ಯಾವುದೇ ವ್ಯಕ್ತಿಯ ವಿರುದ್ಧ ಎಫ್‌ಐಆರ್‌ಗಳನ್ನು ದಾಖಲಿಸಬೇಕು. ಮುಸ್ಲಿಂ ವಿದ್ಯಾರ್ಥಿಗಳ ಮೂಲಭೂತ ಹಕ್ಕುಗಳ ಉಲ್ಲಂಘನೆ ಮಾಡಿದವರ ಮೇಲೆ ಇಲಾಖಾ ವಿಚಾರಣೆಯನ್ನು ಕೈಗೊಳ್ಳಬೇಕು. ತಮ್ಮ ನಿಷ್ಕ್ರಿಯತೆ ಮತ್ತು ಅನಧಿಕೃತ ಕ್ರಮದಿಂದಾಗಿ ಮುಸ್ಲಿಂ ವಿದ್ಯಾರ್ಥಿಗಳ ಮೂಲಭೂತ ಹಕ್ಕುಗಳ ಉಲ್ಲಂಘನೆಗೆ  ಕಾರಣವಾದ ತನ್ನ ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮವನ್ನು ಪ್ರಾರಂಭಿಸಬೇಕು. 01.01.2022 ಮತ್ತು 30.04.2022 ರ ನಡುವೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ CrPC ಯ ಸೆಕ್ಷನ್ 144 ಅನ್ನು ವಿಧಿಸುವ ಎಲ್ಲಾ ಆದೇಶಗಳನ್ನು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಬೇಕು” ಎಂದು ಆಗ್ರಹಿಸಲಾಗಿದೆ.

“ಮಹಿಳಾ ಮತ್ತು ಮಕ್ಕಳ ಇಲಾಖೆ, ಕರ್ನಾಟಕ ಕಡ್ಡಾಯವಾಗಿ ಹಿಜಾಬ್ ತೀರ್ಪಿನಿಂದ ಪ್ರತಿಕೂಲ ಪರಿಣಾಮ ಬೀರುವ ವಿದ್ಯಾರ್ಥಿಗಳಿಗೆ ಮಾನಸಿಕ ಆರೋಗ್ಯ ಬೆಂಬಲವನ್ನು ಒದಗಿಸುವ ಕಾರ್ಯಕ್ರಮಗಳನ್ನು ಪ್ರಾರಂಭಿಸಬೇಕು. ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ (KSHRC), ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗ (KMSC), ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (KSCPCR) ಮತ್ತು ಕರ್ನಾಟಕ ರಾಜ್ಯ ಮಹಿಳಾ ಆಯೋಗ (KSCW) ಹಕ್ಕುಗಳ ಉಲ್ಲಂಘನೆಯ ಬಗ್ಗೆ ಸ್ವಯಂ-ಪ್ರೇರಿತ ದೂರು ದಾಖಲಿಸಿಕೊಳ್ಳಬೇಕು. ಮುಸ್ಲಿಂ ಮಹಿಳೆಯರು ಮತ್ತು ಅಪ್ರಾಪ್ತ ವಯಸ್ಕರು, ಮತ್ತು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕಿರುಕುಳ, ತಾರತಮ್ಯ ಮತ್ತು ದ್ವೇಷ ಭಾಷಣದ ಪ್ರಕರಣಗಳಲ್ಲಿ ಮಧ್ಯಪ್ರವೇಶಿಸಬೇಕು” ಎಂದು ಸಲಹೆ ನೀಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...