Homeಕರ್ನಾಟಕಹಿಜಾಬ್‌-ಕೇಸರಿ ಶಾಲು ವಿವಾದ: ಸಾಮರಸ್ಯಕ್ಕೆ ಧರ್ಮಗುರುಗಳ ಕರೆ

ಹಿಜಾಬ್‌-ಕೇಸರಿ ಶಾಲು ವಿವಾದ: ಸಾಮರಸ್ಯಕ್ಕೆ ಧರ್ಮಗುರುಗಳ ಕರೆ

ವಿದ್ಯೆ ಇಲ್ಲವಾದರೆ ಜೀವನ ನಾಶವಾಗುತ್ತದೆ. ವಿದ್ಯೆಗೆ ಅಡಚಣೆಯಾಗದಂತಹ ವಾತಾವರಣ ನಿರ್ಮಿಸಬೇಕು: ಮುರುಘ ಶರಣರು

- Advertisement -
- Advertisement -

ಹಿಜಾಬ್‌ ಹಾಗೂ ಕೇಸರಿ ಶಾಲು ವಿವಾದ ನ್ಯಾಯಾಲಯದಲ್ಲಿ ಇದ್ದು, ಎಲ್ಲರೂ ಕೋಮು ಸಾಮರಸ್ಯ ಕಾಪಾಡಿಕೊಳ್ಳಬೇಕು ಎಂದು ಧರ್ಮಗುರುಗಳು ಕರೆ ನೀಡಿದರು.

ಶನಿವಾರ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಧರ್ಮಗುರುಗಳು, ಎಲ್ಲರೂ ಸಾಮರಸ್ಯದಿಂದ ಬಾಳಬೇಕು. ಕೋರ್ಟ್ ತೀರ್ಪು ಏನೇ ಬಂದರೂ ಅದನ್ನು ಪಾಲಿಸಬೇಕು ಎಂದು ಆಶಿಸಿದರು.

ಮುರುಘ ರಾಜೇಂದ್ರ ಮಠದ ಡಾ.ಶಿವಮೂರ್ತಿ ಮುರುಘ ಶರಣರು ಮಾತನಾಡಿ, ‘‘ಸಮಾಜ ಇಂದು ಸಂದಿಗ್ಧ ಸ್ಥಿತಿಯಲ್ಲಿದೆ. ಎಲ್ಲ ಧರ್ಮದಲ್ಲೂ ಧಾರ್ಮಿಕ ಮುಖಂಡರಿದ್ದಾರೆ. ನಾವು ಸಮಾಜಕ್ಕೆ ಶಾಂತಿ ರವಾನೆ ಸಾರಬೇಕಾಗಿದೆ. ಇವತ್ತು ಸಾಮಾಜಿಕ ಸಾಮರಸ್ಯ ಎಲ್ಲರಿಗೂ ಬೇಕಾಗಿದೆ. ಸಾಮಾಜಿಕ ಶಾಂತಿಗಾಗಿ ಎಲ್ಲರೂ ಕೈಜೋಡಿಸಬೇಕಾಗಿದೆ. ಸಮವಸ್ತ್ರ, ವಸ್ತ್ರ ಸಂಹಿತೆ ಎಲ್ಲರ ನೆಮ್ಮದಿ ಕೆಡಿಸಿದೆ. ನಾವೆಲ್ಲ ಶಾಂತಿ, ಸಾಮರಸ್ಯದ ಪರವಾಗಿದ್ದೇವೆ” ಎಂದರು.

“ಈಗ ಎದ್ದಿರುವ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕಾಗಿದೆ. ಸದ್ಯ ಕೋರ್ಟ್‌ನಲ್ಲಿ ಕೇಸ್ ನಡೆಯುತ್ತಿದೆ. ಕೋರ್ಟ್ ಹೇಳಿದಂತೆ ನಾವೆಲ್ಲ ಕೇಳಬೇಕಾಗಿದೆ. ಅದಕ್ಕೂ ಮುನ್ನ ಶಾಂತಿ ನೆಮ್ಮದಿ ಬೇಕಾದರೆ ಸದ್ಯಕ್ಕೆ ಸಾಮರಸ್ಯ ಕಾಯಬೇಕಾಗಿದೆ’’ ಎಂದು ತಿಳಿಸಿದರು.

“ವಿದ್ಯೆ ಇಲ್ಲವಾದರೆ ಜೀವನ ನಾಶವಾಗುತ್ತದೆ. ವಿದ್ಯೆಗೆ ಅಡಚಣೆಯಾಗದಂತಹ ವಾತಾವರಣ ನಿರ್ಮಿಸಬೇಕು. ನ್ಯಾಯಾಲಯದಿಂದ ಸ್ಪಷ್ಟ ಆದೇಶ ಬರುವವರೆಗೂ ನಾವು ಯಾವುದೇ ಕ್ರಮ ತೆಗೆದುಕೊಳ್ಳಲು ಸಾಧ್ಯವಿಲ್ಲ” ಎಂದರು.

ಕೊರೋನಾ ನಿರ್ಗದತ್ತ ಸಮಸ್ಯೆಯಾದರೆ, ಹಿಜಾಬ್-ಕೇಸರಿ ಶಾಲು ವಿವಾದ ಮಾನವ ನಿರ್ಮಿತ ಸಮಸ್ಯೆಯಾಗಿದೆ. ಇವರೆರಡರ ನಡುವೆಯಲ್ಲಿ ನಾವು ವೀಕ್ಷಕರಾಗಿದ್ದೇವೆ. ಈ ಪರಿಸ್ಥಿತಿಯಲ್ಲಿ ಸಾಮರಸ್ಯ ಮೂಡಿಸುವುದು ಮುಖ್ಯವಾಗಿದೆ. ಹಾಗಾಗಿ ಸಭೆಯನ್ನು ಆಯೋಜಿಸಿ ಚರ್ಚೆ ಮಾಡುತ್ತಿದ್ದೇವೆ. ಹಾಗೆಯೇ ರಾಜಕೀಯ ಪಕ್ಷಗಳು ಸಾಮಾನ್ಯ ಸಭೆಯೊಂದನ್ನು ಆಯೋಜಿಸಿ ಚರ್ಚೆ ಮಾಡಿ ಕ್ರಮ ತೆಗೆದುಕೊಳ್ಳಬೇಕು ಎಂದು ಸೂಚಿಸಿದರು.

ಆಲ್‌‌ ಇಂಡಿಯಾ ಮಿಲ್ಲಿ ಕೌನ್ಸಿಲ್‌ನ ಮೌಲಾನಾ ಸುಲೇಮಾನ್ ಖಾನ್ ಮಾತನಾಡಿ, ‘‘ಶಾಂತಿಗಿಂತ ಯಾವುದು ದೊಡ್ಡದಲ್ಲ. ವಿವಿಧತೆಯಲ್ಲಿ ಏಕತೆ ಬೇಕು ಎಂಬುದು ಎಲ್ಲರಿಗೂ ಗೊತ್ತಿದೆ. ಎಲ್ಲ ಧರ್ಮದವರು ಸೌರ್ಹಾದತೆಯಿಂದ ನಡೆದುಕೊಳ್ಳುತ್ತೇವೆ. ದರ್ಗಾಕ್ಕೆ ಹಿಂದೂಗಳು ಹೋಗಿ ಪ್ರದಕ್ಷಿಣೆ ಹಾಕುತ್ತಾರೆ. ಹಾಗೆಯೇ ಬೆಂಗಳೂರು ಕರಗದಲ್ಲಿ ಮುಸ್ಲಿಮರು ಪಾಲ್ಗೊಳ್ಳುತ್ತಾರೆ” ಎಂದು ಸ್ಮರಿಸಿದರು.

ಹಿಜಾಬ್‌ ದೊಡ್ಡ ಸಮಸ್ಯೆಯಾಗಿ ಬೆಳೆಯದಂತೆ ರಾಜಕೀಯ ವ್ಯಕ್ತಿಗಳು ನೋಡಿಕೊಳ್ಳಬೇಕು ಎಂದು ಮನವಿ ಮಾಡುತ್ತೇವೆ. ಹಿಜಾಬ್‌‌ ಸಂಬಂಧ ಅಂತಿಮವಾದ ತೀರ್ಪು ಬಂದಿಲ್ಲ. ಮಧ್ಯಂತರ ತೀರ್ಪು ಮಾತ್ರ ಬಂದಿದೆ. ಕೋರ್ಟ್ ಮಧ್ಯಂತರ ತೀರ್ಪು ಬಗ್ಗೆ ಸ್ಪಷ್ಟವಾಗಿ ತಿಳಿಯಿರಿ. ಪೋಷಕರು, ಶಿಕ್ಷಕರು, ಮಕ್ಕಳು, ಉಪನ್ಯಾಸಕರು, ಶಿಕ್ಷಣ ಸಂಸ್ಥೆಗಳ ಸಿಬ್ಬಂದಿ ತೀರ್ಪನ್ನು ಅರ್ಥ ಮಾಡಿಕೊಳ್ಳಬೇಕಾಗಿದೆ ಎಂದು ಅಭಿಪ್ರಾಯಪಟ್ಟರು.

ಸುನ್ನಿ ಜಮಾಯಾತ್ ಕರ್ನಾಟಕದ ಅಧ್ಯಕ್ಯ ಮೌಲಾನ ಶಬ್ಬೀರ್ ಹಾಶ್ಮಿಪೀಠ ಮಾತನಾಡಿ, “ಹಿಜಾಬ್‌ ಇತ್ತೀಚಿನಿಂದ ಧರಿಸುತ್ತಿರುವ ವಸ್ತ್ರವಲ್ಲ. ಇದನ್ನು ತಿಳಿಯದೆ ಕೋಮು ಸಾಮರಸ್ಯ ಕದಡಲಾಗುತ್ತಿದೆ. ಶಿಕ್ಷಣವು ಮುಖ್ಯವಾಗಿದ್ದು, ಧರ್ಮದ ಹೆಸರಿನಲ್ಲಿ ಅದನ್ನು ಹಾಳು ಮಾಡುವುದು ಸರಿಯಲ್ಲ. ಸರ್ವಧರ್ಮ ಸಾಮರಸ್ಯವನ್ನು ಸ್ಥಾಪಿಸುವುದು ಸರಕಾರದ ಮೊದಲ ಕರ್ತವ್ಯ” ಎಂದು ಹೇಳಿದರು.

ಬೆಂಗಳೂರು ಸಿಟಿ ಮಾರ್ಕೆಟ್ ಜಾಮಿಯಾ ಮಸೀದಿಯ ಮೌಲಾನ ಮಕ್ಸೂದ್ ಇಮ್ರಾನ್ ಸಾಹೇಬ್ ಮಾತನಾಡಿ, “ಕೋವಿಡ್‌ನಿಂದ ಕೆಂಗೆಟ್ಟಿದ್ದ ಶೈಕ್ಷಣಿಕ ವ್ಯವಸ್ಥೆ ಮತ್ತೊಮ್ಮೆ ಹಿಜಾಬ್-ಕೇಸರಿ ಶಾಲು ವಿವಾದದಿಂದ ಹಾಳಾಗಿದೆ. ಇಸ್ಲಾಂನಲ್ಲಿ ಯಾವುದಕ್ಕೂ ಬಲವಂತ ಎಂಬುದು ಇಲ್ಲ, ಬದಲಾಗಿ ಮಕ್ಕಳಿಗೆ ಒಳ್ಳೆಯ ದಾರಿಯನ್ನು ತೋರಿಸುತ್ತೇವೆ. ಇದನ್ನು ದಿಕ್ಕರಿಸಿದರೆ, ಅವರ ಇಷ್ಟಕ್ಕೂ ಅವಕಾಶ ನೀಡುತ್ತೇವೆ” ಎಂದರು.

“ಹೆಣ್ಣುಮಕ್ಕಳು ಹಿಜಾಬ್ ಧರಿಸಿ ಶಾಲೆಗೆ ಬರುವುದರಲ್ಲಿ ಯಾವುದೇ ರಾಜಕೀಯ ಪಕ್ಷಗಳ ಒತ್ತಡವಾಗಲೀ, ಹಿರಿಯರ ಬಲವಂತವಾಗಲೀ ಇಲ್ಲ” ಎಂದು ಸ್ಪಷ್ಟಪಡಿಸಿದ ಅವರು, “ಇಷ್ಟು ದಿನ ಇಲ್ಲದ ವಿವಾದ ಈಗ ಸೃಷ್ಟಿಯಾಗಿದೆ. ಇವೆಲ್ಲದರ ಕುರಿತು, ಶೈಕ್ಷಣಿಕ ಸಂಸ್ಥೆಗಳ ಆಡಳಿತ ಮಂಡಳಿಗಳು ನಿಷ್ಪಕ್ಷಪಾತವಾಗಿ ನಡೆದುಕೊಳ್ಳಬೇಕು. ಹೈಕೋರ್ಟ್ ಮಧ್ಯಂತರ ಆದೇಶದ ಕುರಿತು ‌ಉಂಟಾಗಿರುವ ಗೊಂದಲದ ಕುರಿತು ಸರ್ಕಾರ ಸ್ಪಷ್ಟನೆ ನೀಡಬೇಕು” ಎಂದು ಆಗ್ರಹಿಸಿದರು.

ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಮಾತನಾಡಿ, ಡಾ.ಬಿ.ಆರ್‌.ಅಂಬೇಡ್ಕರ್‌ ರವರು ರಚಿಸಿರುವ ಸಂವಿಧಾನದಲ್ಲಿ ಎಲ್ಲ ವಿಚಾರಗಳಿಗೂ ಸೂಕ್ತ ಪರಿಹಾರಗಳಿವೆ. ಸರ್ವಧರ್ಮಗಳ ದೇಶದಲ್ಲಿ ಜಾತಿ ಕಲಹ ಉಂಟಾಗಬಾರದು. ಸಂವಿಧಾನದ ಮೂಲಭೂತ ಹಕ್ಕಾದ ಶಿಕ್ಷಣಕ್ಕೆ ಯಾವುದೇ ತೊಂದರೆ ಆಗಬಾರದು” ಎಂದು ಎಚ್ಚರಿಸಿದರು.

ನಾಸೆ ಫೌಂಡೇಷನ್‌ ಅಧ್ಯಕ್ಷ ಮೌಲಾನ ಶಬ್ಬೀರ್ ನಖ್ವೀ ಮಾತನಾಡಿ, “ರಾಜ್ಯದಲ್ಲಿ ಶಾಂತಿಯನ್ನು ಕದಡಲಾಗುತ್ತಿದೆ. ವಿದ್ಯಾರ್ಥಿಗಳನ್ನು ತೊಂದರೆಗೆ ಸಿಲುಕಿಸಲಾಗಿದೆ. ಸಂವಿಧಾನದ ಅಡಿಯಲ್ಲೇ ಎಲ್ಲರೂ ನಡೆದುಕೊಳ್ಳಬೇಕು. ಆದರೆ ಅನಗತ್ಯವಾಗಿ ವಿವಾದವನ್ನು ಸೃಷ್ಟಿ ಮಾಡಲಾಗುತ್ತಿದೆ” ಎಂದು ವಿಷಾದಿಸಿದರು.

ಮಾದರ ಚೆನ್ನಯ್ಯ ಸ್ವಾಮೀಜಿ, ಫಾದರ್‌ ವಿವಿಯನ್ ಮೂನಿಸ್, ರಾಜ್ಯಸಭಾ ಸದಸ್ಯರಾದ ಸೈಯದ್ ನಾಸಿರ್ ಹುಸೇನ್ ಹಾಜರಿದ್ದರು.


ಇದನ್ನೂ ಓದಿರಿ: ‘ಅಂಬೇಡ್ಕರ್‌ರಿಗೆ ಅವಮಾನವಾದರೆ ಶೋಷಿತ ಸಮುದಾಯ ಸುಮ್ಮನಿರುವುದಿಲ್ಲ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...